AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಲ್ಲಿ ಈ ವಾರವೂ ಇಲ್ಲ ಎಲಿಮಿನೇಷನ್; ಮತ್ತೊಂದು ಹೈಡ್ರಾಮಾಗೆ ರೆಡಿ ಆಗಿ

‘ಬಿಗ್ ಬಾಸ್ ಕನ್ನಡ ಸೀಸನ್ 11’ ರಲ್ಲಿ ಈ ವಾರ ಯಾವುದೇ ಎಲಿಮಿನೇಷನ್ ಇಲ್ಲ ಎಂಬ ಸುದ್ದಿ ಹಬ್ಬಿದೆ. ಗೋಲ್ಡ್ ಸುರೇಶ್ ಅವರ ನಿರ್ಗಮನದ ಕಾರಣಕ್ಕೆ ಈ ರೀತಿ ಮಾಡಲಾಗಿದೆ. ಮೋಕ್ಷಿತಾ, ಹನುಮಂತ, ರಜತ್ ಮತ್ತು ತ್ರಿವಿಕ್ರಂ ಈ ವಾರ ನಾಮಿನೇಟ್ ಆಗಿದ್ದಾರೆ. ಆದರೆ, ಈ ವಾರ ಯಾರೂ ಹೊರಗೆ ಹೋಗುವುದಿಲ್ಲ ಎನ್ನಲಾಗಿದೆ.

ಬಿಗ್ ಬಾಸ್​ನಲ್ಲಿ ಈ ವಾರವೂ ಇಲ್ಲ ಎಲಿಮಿನೇಷನ್; ಮತ್ತೊಂದು ಹೈಡ್ರಾಮಾಗೆ ರೆಡಿ ಆಗಿ
ಈ ವಾರ ನಾಮಿನೇಟ್ ಆದವರು
ರಾಜೇಶ್ ದುಗ್ಗುಮನೆ
|

Updated on: Dec 20, 2024 | 6:55 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ನಡೆದ ಹೈಡ್ರಮಾಗಳು ಒಂದೆರಡಲ್ಲ. ಅದರಲ್ಲೂ ಎಲಿಮಿನೇಷನ್ ವಿಚಾರದಲ್ಲಿ ಸಾಕಷ್ಟು ನಾಟಕಗಳು ನಡೆದೇ ಹೋಗಿವೆ. ಈ ಸೀಸನ್​ನಲ್ಲಿ ಮೂರು ಬಾರಿ ಎಲಿಮಿನೇಷನ್ ಮಾಡದೆ ವಾರ ಪೂರ್ಣಗೊಳಿಸಲಾಗಿದೆ. ಈಗ ಅದಕ್ಕೆ ಮತ್ತೊಂದು ಹೊಸ ಸೇರ್ಪಡೆ ಆಗುವ ಸೂಚನೆ ಸಿಕ್ಕಿದೆ. ಈ ವಾರ ಯಾವುದೇ ಎಲಿಮಿನೇಷನ್ ಇರೋದಿಲ್ಲ ಎನ್ನಲಾಗಿದೆ. ಅಲ್ಲದೆ, ಈ ವಾರ ಘಟಾನುಘಟಿಗಳೇ ನಾಮಿನೇಟ್ ಆಗಿದ್ದು, ಯಾರೂ ಹೊರ ಹೋಗುವುದು ಅನುಮಾನ ಎಂದು ಹೇಳಲಾಗುತ್ತಿದೆ.

ಪ್ರತಿಬಾರಿ ಸೋಮವಾರ ಅಥವಾ ಮಂಗಳವಾರ ನಾಮಿನೇಷನ್ ಪ್ರಕ್ರಿಯೆಯ ಎಪಿಸೋಡ್ ಪ್ರಸಾರ ಕಾಣುತ್ತಿದ್ದವು. ಮಂಗಳವಾರದ ಬಳಿಕ ವೋಟಿಂಗ್ ಲೈನ್ ತೆರೆಯಲಾಗುತ್ತಿತ್ತು. ಶನಿವಾರದವರೆಗೆ ವೋಟ್ ಮಾಡಲು ಅವಕಾಶ ಇರುತ್ತಿತ್ತು. ಆದರೆ, ಈ ವಾರ ಗುರುವಾರ ನಾಮಿನೇಷ್ ಪ್ರಕ್ರಿಯೆ ಪೂರ್ಣಗೊಳಿಸಿರೋ ಎಪಿಸೋಡ್ ಪ್ರಸಾರ ಕಂಡಿದೆ. ಅಲ್ಲದೆ, ನಾಮಿನೇಟ್ ಆದವರಿಗೆ ವೋಟ್ ಮಾಡಿ ಎನ್ನುವ ಯಾವುದೇ ಪೋಸ್ಟ್ ಕೂಡ ತೋರಿಸಿಲ್ಲ.

ಕಲರ್ಸ್ ಕನ್ನಡ ಇನ್​ಸ್ಟಾಗ್ರಾಮ್ ಪೇಜ್​ನಲ್ಲಿ ಪ್ರತಿ ವಾರ ನಾಮಿನೇಟ್ ಆದವರ ಫೋಟೋಗಳನ್ನು ಹಾಕಲಾಗುತ್ತದೆ. ಆದರೆ, ಈ ವಾರ ಯಾವುದೇ ಪೋಸ್ಟ್ ಹಾಕಿಲ್ಲ. ಅಲ್ಲದೆ, ವೋಟಿಂಗ್ ಲೈನ್ ಕೂಡ ತೆರೆದಿಲ್ಲ. ಹೀಗಾಗಿ, ಈ ವಾರ ‘ನೋ ಎಲಿಮಿನೇಷನ್ ವೀಕ್’ ಆಗಿರಲಿದೆ.

ಈ ವಾರ ಎಲಿಮಿನೇಷನ್ ಮಾಡದೆ ಇರಲು ಒಂದು ಕಾರಣವೂ ಇದೆ. ಕಳೆದ ವಾರಾಂತ್ಯದಲ್ಲಿ ಶಿಶಿರ್ ಅವರು ದೊಡ್ಮನೆಯಿಂದ ಹೊರ ಬಂದರು. ಇದಾದ ಬೆನ್ನಲ್ಲೇ ತುರ್ತುಪರಿಸ್ಥಿತಿಯ ಕಾರಣಕ್ಕೆ ಗೋಲ್ಡ್ ಸುರೇಶ್ ಬಿಗ್ ಬಾಸ್​ನ ಅರ್ಧಕ್ಕೆ ಬಿಟ್ಟರು. ಇದು ಅನಿರೀಕ್ಷಿತವಾಗಿತ್ತು. ಈ ಕಾರಣಕ್ಕೆ ಈ ವಾರ ಯಾವುದೇ ಎಲಿಮಿನೇಷನ್ ಮಾಡದಿರಲು ನಿರ್ಧರಿಸಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಬಿಗ್ ಬಾಸ್​ಗೆ ಈ ವಾರ ಸಿಕ್ಕ ಟಿಆರ್​ಪಿ ಎಷ್ಟು? ಯಾವ ಧಾರಾವಾಹಿಗೆ ಟಾಪ್ ಸ್ಥಾನ?

ಈ ವಾರ ಮೋಕ್ಷಿತಾ, ಹನುಮಂತ, ರಜತ್ ಹಾಗೂ ತ್ರಿವಿಕ್ರಂ ನಾಮಿನೇಟ್ ಆಗಿದ್ದಾರೆ. ಸ್ಪರ್ಧಿಗಳ ಸಂಖ್ಯೆ ಕಡಿಮೆ ಇರುವುದರಿಂದ ನಾಮಿನೇಟ್ ಆದವರ ಸಂಖ್ಯೆಯೂ ಕಡಿಮೆ ಇದೆ. ಈ ವಾರ ಎಲಿಮಿನೇಷನ್ ವಿಚಾರದಲ್ಲಿ ಮತ್ತೊಂದು ಹೈಡ್ರಾಮಾ ನಡೆಯೋದು ಪಕ್ಕಾ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಚರ್ಚೆಗೆ ಗ್ರಾಸವಾಯ್ತು ಬಿಜೆಪಿ ಎಂಎಲ್​​ಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಒಂದೇ ಗೋರಿಗೆ ಹಿಂದೂ-ಮುಸ್ಲಿಂ ಪೂಜೆ: ಬೀದರ್​​ನಲ್ಲೊಂದು ಭಾವೈಕ್ಯತೆಯ ಜಾತ್ರೆ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಚಾಮರಾಜನಗರದಲ್ಲಿ ಕಾಡುಗಳ್ಳರು ಮತ್ತೆ ಆ್ಯಕ್ಟಿವ್: ವಾರದಲ್ಲೇ ಎರಡು ಶಿಕಾರಿ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸಿಎಂ ಡಿಕೆ ಶಿವಕುಮಾರ್​ ನಡೆಗೆ ಹೈಕೋರ್ಟ್‌ನಿಂದ ಪ್ರಶಂಸೆ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಸೌತ್ ರುಚೀಸ್ ಹೋಟೆಲ್ ಮೇಲೆ ಎಫ್​ಡಿಎ ದಾಳಿ
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಇಡಿ ದಾಳಿ: ಬೆಂಗಳೂರಿನಲ್ಲಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಹೈಡ್ರಾಮಾ!
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕುಡುಕರ ಆಶ್ರಯತಾಣವಾಯ್ತು ಕೋಟೆನಾಡಿನ ಗುರುಭವನ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಕೆಪಿಎಸ್‌ಸಿ ಅಕ್ರಮ: ಕಲಬುರ್ಗಿಯ ಅಭ್ಯರ್ಥಿಗೆ ಶಾಕ್​​ ಕೊಟ್ಟ ಸಿಐಡಿ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಸಿಡಬ್ಲ್ಯೂಆರ್‌ಸಿ ಆದೇಶ ಪ್ರಶ್ನಿಸಿ ಸುಪ್ರೀಂಗೆ ಹೋಗಲು ಸಿಎಂ ಸೂಚನೆ
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್
ಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಗೆ ಜಿಲ್ಲಾಡಳಿತದಿಂದ ಟಫ್ ರೂಲ್ಸ್