AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್​ನಲ್ಲಿ ಈ ವಾರವೂ ಇಲ್ಲ ಎಲಿಮಿನೇಷನ್; ಮತ್ತೊಂದು ಹೈಡ್ರಾಮಾಗೆ ರೆಡಿ ಆಗಿ

‘ಬಿಗ್ ಬಾಸ್ ಕನ್ನಡ ಸೀಸನ್ 11’ ರಲ್ಲಿ ಈ ವಾರ ಯಾವುದೇ ಎಲಿಮಿನೇಷನ್ ಇಲ್ಲ ಎಂಬ ಸುದ್ದಿ ಹಬ್ಬಿದೆ. ಗೋಲ್ಡ್ ಸುರೇಶ್ ಅವರ ನಿರ್ಗಮನದ ಕಾರಣಕ್ಕೆ ಈ ರೀತಿ ಮಾಡಲಾಗಿದೆ. ಮೋಕ್ಷಿತಾ, ಹನುಮಂತ, ರಜತ್ ಮತ್ತು ತ್ರಿವಿಕ್ರಂ ಈ ವಾರ ನಾಮಿನೇಟ್ ಆಗಿದ್ದಾರೆ. ಆದರೆ, ಈ ವಾರ ಯಾರೂ ಹೊರಗೆ ಹೋಗುವುದಿಲ್ಲ ಎನ್ನಲಾಗಿದೆ.

ಬಿಗ್ ಬಾಸ್​ನಲ್ಲಿ ಈ ವಾರವೂ ಇಲ್ಲ ಎಲಿಮಿನೇಷನ್; ಮತ್ತೊಂದು ಹೈಡ್ರಾಮಾಗೆ ರೆಡಿ ಆಗಿ
ಈ ವಾರ ನಾಮಿನೇಟ್ ಆದವರು
ರಾಜೇಶ್ ದುಗ್ಗುಮನೆ
|

Updated on: Dec 20, 2024 | 6:55 AM

Share

‘ಬಿಗ್ ಬಾಸ್ ಕನ್ನಡ ಸೀಸನ್ 11’ರಲ್ಲಿ ನಡೆದ ಹೈಡ್ರಮಾಗಳು ಒಂದೆರಡಲ್ಲ. ಅದರಲ್ಲೂ ಎಲಿಮಿನೇಷನ್ ವಿಚಾರದಲ್ಲಿ ಸಾಕಷ್ಟು ನಾಟಕಗಳು ನಡೆದೇ ಹೋಗಿವೆ. ಈ ಸೀಸನ್​ನಲ್ಲಿ ಮೂರು ಬಾರಿ ಎಲಿಮಿನೇಷನ್ ಮಾಡದೆ ವಾರ ಪೂರ್ಣಗೊಳಿಸಲಾಗಿದೆ. ಈಗ ಅದಕ್ಕೆ ಮತ್ತೊಂದು ಹೊಸ ಸೇರ್ಪಡೆ ಆಗುವ ಸೂಚನೆ ಸಿಕ್ಕಿದೆ. ಈ ವಾರ ಯಾವುದೇ ಎಲಿಮಿನೇಷನ್ ಇರೋದಿಲ್ಲ ಎನ್ನಲಾಗಿದೆ. ಅಲ್ಲದೆ, ಈ ವಾರ ಘಟಾನುಘಟಿಗಳೇ ನಾಮಿನೇಟ್ ಆಗಿದ್ದು, ಯಾರೂ ಹೊರ ಹೋಗುವುದು ಅನುಮಾನ ಎಂದು ಹೇಳಲಾಗುತ್ತಿದೆ.

ಪ್ರತಿಬಾರಿ ಸೋಮವಾರ ಅಥವಾ ಮಂಗಳವಾರ ನಾಮಿನೇಷನ್ ಪ್ರಕ್ರಿಯೆಯ ಎಪಿಸೋಡ್ ಪ್ರಸಾರ ಕಾಣುತ್ತಿದ್ದವು. ಮಂಗಳವಾರದ ಬಳಿಕ ವೋಟಿಂಗ್ ಲೈನ್ ತೆರೆಯಲಾಗುತ್ತಿತ್ತು. ಶನಿವಾರದವರೆಗೆ ವೋಟ್ ಮಾಡಲು ಅವಕಾಶ ಇರುತ್ತಿತ್ತು. ಆದರೆ, ಈ ವಾರ ಗುರುವಾರ ನಾಮಿನೇಷ್ ಪ್ರಕ್ರಿಯೆ ಪೂರ್ಣಗೊಳಿಸಿರೋ ಎಪಿಸೋಡ್ ಪ್ರಸಾರ ಕಂಡಿದೆ. ಅಲ್ಲದೆ, ನಾಮಿನೇಟ್ ಆದವರಿಗೆ ವೋಟ್ ಮಾಡಿ ಎನ್ನುವ ಯಾವುದೇ ಪೋಸ್ಟ್ ಕೂಡ ತೋರಿಸಿಲ್ಲ.

ಕಲರ್ಸ್ ಕನ್ನಡ ಇನ್​ಸ್ಟಾಗ್ರಾಮ್ ಪೇಜ್​ನಲ್ಲಿ ಪ್ರತಿ ವಾರ ನಾಮಿನೇಟ್ ಆದವರ ಫೋಟೋಗಳನ್ನು ಹಾಕಲಾಗುತ್ತದೆ. ಆದರೆ, ಈ ವಾರ ಯಾವುದೇ ಪೋಸ್ಟ್ ಹಾಕಿಲ್ಲ. ಅಲ್ಲದೆ, ವೋಟಿಂಗ್ ಲೈನ್ ಕೂಡ ತೆರೆದಿಲ್ಲ. ಹೀಗಾಗಿ, ಈ ವಾರ ‘ನೋ ಎಲಿಮಿನೇಷನ್ ವೀಕ್’ ಆಗಿರಲಿದೆ.

ಈ ವಾರ ಎಲಿಮಿನೇಷನ್ ಮಾಡದೆ ಇರಲು ಒಂದು ಕಾರಣವೂ ಇದೆ. ಕಳೆದ ವಾರಾಂತ್ಯದಲ್ಲಿ ಶಿಶಿರ್ ಅವರು ದೊಡ್ಮನೆಯಿಂದ ಹೊರ ಬಂದರು. ಇದಾದ ಬೆನ್ನಲ್ಲೇ ತುರ್ತುಪರಿಸ್ಥಿತಿಯ ಕಾರಣಕ್ಕೆ ಗೋಲ್ಡ್ ಸುರೇಶ್ ಬಿಗ್ ಬಾಸ್​ನ ಅರ್ಧಕ್ಕೆ ಬಿಟ್ಟರು. ಇದು ಅನಿರೀಕ್ಷಿತವಾಗಿತ್ತು. ಈ ಕಾರಣಕ್ಕೆ ಈ ವಾರ ಯಾವುದೇ ಎಲಿಮಿನೇಷನ್ ಮಾಡದಿರಲು ನಿರ್ಧರಿಸಲಾಗಿದೆ ಎನ್ನಲಾಗಿದೆ.

ಇದನ್ನೂ ಓದಿ: ಬಿಗ್ ಬಾಸ್​ಗೆ ಈ ವಾರ ಸಿಕ್ಕ ಟಿಆರ್​ಪಿ ಎಷ್ಟು? ಯಾವ ಧಾರಾವಾಹಿಗೆ ಟಾಪ್ ಸ್ಥಾನ?

ಈ ವಾರ ಮೋಕ್ಷಿತಾ, ಹನುಮಂತ, ರಜತ್ ಹಾಗೂ ತ್ರಿವಿಕ್ರಂ ನಾಮಿನೇಟ್ ಆಗಿದ್ದಾರೆ. ಸ್ಪರ್ಧಿಗಳ ಸಂಖ್ಯೆ ಕಡಿಮೆ ಇರುವುದರಿಂದ ನಾಮಿನೇಟ್ ಆದವರ ಸಂಖ್ಯೆಯೂ ಕಡಿಮೆ ಇದೆ. ಈ ವಾರ ಎಲಿಮಿನೇಷನ್ ವಿಚಾರದಲ್ಲಿ ಮತ್ತೊಂದು ಹೈಡ್ರಾಮಾ ನಡೆಯೋದು ಪಕ್ಕಾ ಎನ್ನಲಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
Video: ಬೈಕ್​ನಲ್ಲಿ ಹೋಗುತ್ತಿದ್ದ ವ್ಯಕ್ತಿ ಮೇಲೆ ಗೂಳಿ ದಾಳಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಗದಗ: ಮುಸುಕುಧಾರಿಗಳ ಅಟ್ಟಹಾಸ: ಮಾರಕಾಸ್ತ್ರ ಹಿಡಿದು ನಡುರಾತ್ರಿ ಎಂಟ್ರಿ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಬಿಸಿಲಲ್ಲಿ ಕುಸಿದುಬಿದ್ದ ತಾಯಿ, ಯಾರ್ಯಾರನ್ನೋ ಬೇಡಿ ನೀರು ತಂದ ಮಗ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಇರಾನ್​​ ಮೇಲೆ ಅಮೆರಿಕ-ಇಸ್ರೇಲ್ ದಾಳಿ, ಪ್ರಮುಖ ಸೇತುವೆ ಧ್ವಂಸ
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಮನೆ ಕಟ್ಟಬೇಕು ಎಂದುಕೊಂಡಿದ್ದೀರಾ? ಯಾವಾಗ ಅಡಿಪಾಯ ಹಾಕಿದರೆ ಉತ್ತಮ?
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ
ಇಂದು ಈ ರಾಶಿಯವರ ಉದ್ಯೋಗದಲ್ಲಿ ಪ್ರಗತಿ