AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಾಲಿಟಿ ಶೋ ವಿವಾದ: ಚಾಮುಂಡೇಶ್ವರಿ ಭಕ್ತರಿಗೆ ಕ್ಷಮೆ ಕೇಳಿದ ರಕ್ಷಕ್ ಬುಲೆಟ್

Rakshak Bullet: ರಿಯಾಲಿಟಿ ಶೋನಲ್ಲಿ ಚಾಮುಂಡೇಶ್ವರಿ ದೇವಿಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಕ್ಕಾಗಿ ಮಾಜಿ ಬಿಗ್ ಬಾಸ್ ಸ್ಪರ್ಧಿ ರಕ್ಷಕ್ ಬುಲೆಟ್ ಕ್ಷಮೆ ಕೇಳಿದ್ದಾರೆ. ಅಷ್ಟಕ್ಕೂ ರಕ್ಷಕ್ ಬುಲೆಟ್, ಚಾಮುಂಡೇಶ್ವರಿ ದೇವಿಯ ಬಗ್ಗೆ ಆಡಿದ್ದ ಮಾತೇನು? ಅದು ವಿವಾದ ಏಕಾಯ್ತು? ಇಲ್ಲಿದೆ ಪೂರ್ಣ ಮಾಹಿತಿ...

ರಿಯಾಲಿಟಿ ಶೋ ವಿವಾದ: ಚಾಮುಂಡೇಶ್ವರಿ ಭಕ್ತರಿಗೆ ಕ್ಷಮೆ ಕೇಳಿದ ರಕ್ಷಕ್ ಬುಲೆಟ್
Chamundeshwari Temple
ಮಂಜುನಾಥ ಸಿ.
|

Updated on: Mar 27, 2025 | 2:20 PM

Share

ಮಾಜಿ ಬಿಗ್​ಬಾಸ್ ಸ್ಪರ್ಧಿ, ನಟ ರಕ್ಷಕ್ ಬುಲೆಟ್, ಚಾಮುಂಡಿ ತಾಯಿ ಭಕ್ತರಿಗೆ ಕ್ಷಮೆ ಕೇಳಿದ್ದಾರೆ. ಸದಾ ಒಂದಿಲ್ಲೊಂದು ಮಾತನಾಡಿ ವಿವಾದ ಮೈಮೇಲೆ ಎಳೆದುಕೊಳ್ಳುವ ರಕ್ಷಕ್, ಇತ್ತೀಚೆಗೆ ರಿಯಾಲಿಟಿ ಶೋ ಒಂದರಲ್ಲಿ ಭಾಗವಹಿಸಿದ್ದಾಗ ಚಾಮುಂಡೇಶ್ವರಿ ತಾಯಿ ಬಗ್ಗೆ ಆಡಿದ್ದ ಮಾತೊಂದು ವಿವಾದಕ್ಕೆ ಕಾರಣವಾಗಿತ್ತು. ದೇವರ ಬಗ್ಗೆ ರಕ್ಷಕ್ ಆಡಿದ್ದ ಮಾತಿನ ಬಗ್ಗೆ ಚಾಮುಂಡೇಶ್ವರಿ ಭಕ್ತರು ಅಸಮಾಧಾನ ವ್ಯಕ್ತಪಡಿಸಿದ್ದರು. ಇದೀಗ ರಕ್ಷಿತ್, ಚಾಮುಂಡಿತಾಯಿ ಭಕ್ತರಿಗೆ ಕ್ಷಮೆ ಕೋರಿದ್ದಾರೆ.

‘ಭರ್ಜರಿ ಬ್ಯಾಚುಲರ್ಸ್’ ಸೀಸನ್ 2ರ ಸ್ಪರ್ಧಿಯಾಗಿರುವ ರಕ್ಷಕ್, ಯುವತಿಯನ್ನು ಇಂಪ್ರೆಸ್ ಮಾಡಲು ಡೈಲಾಗ್ ಹೇಳುತ್ತಾ, ಚಾಮುಂಡಿತಾಯಿಯ ಬಗ್ಗೆ ಆಕ್ಷೇಪಾರ್ಹವಾಗಿ ಮಾತನಾಡಿದ್ದರು. ಚಾಮುಂಡಿದೇವಿ ಜೀನ್ಸ್ ಹಾಕಿ ಗೋವಾ ಟ್ರಿಪ್​ಗೆ ಹೋದಂತಿದೆ ಎಂದೆಲ್ಲ ಮಾತನಾಡಿದ್ದರು. ಇದು ಹಿಂದೂಪರ ಸಂಘಟನೆಗಳು, ಚಾಮುಂಡೇಶ್ವರಿ ದೇವಾಲಯ ಭಕ್ತರನ್ನು ಕೆರಳಿಸಿತ್ತು. ರಕ್ಷಕ್, ಡೈಲಾಗ್​ಗೆ ನೆಟ್ಟಿಗರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು.

ಇದೀಗ ವಿವಾದ ಉಲ್ಬಣವಾದಂತೆ ಸಾಮಾಜಿಕ ಜಾಲತಾಣದ ಮೂಲಕ ಚಾಮುಂಡೇಶ್ವರಿ ಭಕ್ತರಿಗೆ ಕ್ಷಮೆ ಕೇಳಿದ್ದಾರೆ ರಕ್ಷಕ್, ‘ನಾನು ನಿಮ್ಮ ರಕ್ಷಕ್ ಬುಲೆಟ್, ಇತ್ತೀಚಿಗೆ ಒಂದು ರಿಯಾಲಿಟಿ ಶೋನಲ್ಲಿ ನಾನು ಒಂದು ಹೆಸರಾಂತ ಚಿತ್ರದ ಡೈಲಾಗನ್ನು ಒಂದು ಸ್ಕಿಟ್ ನಲ್ಲಿ ಹೇಳಿದ್ದೆ, ಅದು ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ನನ್ನ ತಂದೆಯವರಾದ ದಿವಂಗತ ಬುಲೆಟ್ ಪ್ರಕಾಶ್ ಅವರು, ನನ್ನ ತಾಯಿಯವರು ಹಾಗೂ ಎಲ್ಲಾ ನಮ್ಮ ಕುಟುಂಬದವರು ಪರಮ ದೈವ ಭಕ್ತರು, ನಮ್ಮ ತಂದೆಯವರಿದ್ದಾಗನಿಂದಲೂ ನಾವು ತಾಯಿ ಚಾಮುಂಡೇಶ್ವರಿಗೆ ಪೂಜೆ ಮಾಡುತ್ತಾ ನಡೆದುಕೊಂಡು ಬಂದಿದ್ದೇವೆ, ನಾನು ಉದ್ದೇಶಪೂರ್ವಕವಾಗಿ ತಾಯಿ ಚಾಮುಂಡೇಶ್ವರಿಯ ಕುರಿತು ಹೇಳುವಷ್ಟು ದೊಡ್ಡವನಲ್ಲ, ತಾಯಿಯ ಆಶೀರ್ವಾದದಿಂದ ನಾನು ಬೆಳೆಯುತ್ತಿದ್ದೇನೆ. ನಾನು ಯಾವುದೇ ಕಾರ್ಯ ಪ್ರಾರಂಭಿಸಬೇಕಾದರೆ ಮೊದಲು ತಾಯಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ನಂತರ ಕೆಲಸವನ್ನು ಪ್ರಾರಂಭ ಮಾಡುತ್ತೇನೆ. ನಾನು ಭಕ್ತಾದಿಗಳ ಭಾವನೆಗಳಿಗಾಗಲಿ ಮನಸ್ಸಿಗಾಗಲಿ ನೋವನ್ನು ಉಂಟು ಮಾಡುವ ಕೆಲಸ ಮಾಡುವುದಿಲ್ಲ. ಯಾರಿಗಾದರೂ ಬೇಸರವಾಗಿದ್ದಲ್ಲಿ ನಾನು ಕ್ಷಮೆಯಾಚಿಸುತ್ತೇನೆ. ಮುಂದೆ ಇಂತಹ ಅಚಾತುರ್ಯ ನಡೆಯುವುದಿಲ್ಲ’ ಎಂದಿದ್ದಾರೆ.

ಇದನ್ನೂ ಓದಿ:‘ಬರ್ಮ’ ಚಿತ್ರದಿಂದ ಪ್ಯಾನ್​ ಇಂಡಿಯಾ ಹೀರೋ ಆದ ರಕ್ಷ್

ಈ ಹಿಂದೆ ಒಮ್ಮೆ ಸುದೀಪ್​ ಬಗ್ಗೆ ಸಂದರ್ಶನವೊಂದರಲ್ಲಿ ಮಾತನಾಡಿದ್ದು ವಿವಾದ ಸೃಷ್ಟಿಸಿತ್ತು. ಬಳಿಕ ಸುದೀಪ್ ಮುಂದೆಯೇ ಕ್ಷಮೆ ಸಹ ಕೇಳಿದರು ರಕ್ಷಕ್. ಅದಕ್ಕೂ ಹಿಂದೆ ಮತ್ತೊಂದು ಸಂದರ್ಶನದಲ್ಲಿ ‘ಕರ್ನಾಟಕವನ್ನೇ ಕೊಂಡುಕೊಳ್ಳಬಹುದು’ ಎಂದು ಹೇಳಿದ್ದ ಮಾತು ಸಹ ಸಖತ್ ಟ್ರೋಲ್ ಆಗಿತ್ತು. ಈಗ ರಿಯಾಲಿಟಿ ಶೋನಲ್ಲಿ ಯಾರನ್ನೋ ಮೆಚ್ಚಿಸಲು ದೇವಿಯ ಹೆಸರು ಹೇಳಿ ವಿವಾದ ಮೈಮೇಲೆ ಎಳೆದುಕೊಂಡಿದ್ದರು. ಆದರೆ ಕ್ಷಮೆ ಕೋರುವ ಮೂಲಕ ವಿವಾದಕ್ಕೆ ತೆರೆ ಎಳೆದಿದ್ದಾರೆ ರಕ್ಷಕ್.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!