AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕೇಶ್ ನಿಧನದ ಬಳಿಕ ನಟ ರವಿಚಂದ್ರನ್​ಗೆ ಕಡಿಮೆ ಆಯಿತು ಜೀವನದ ಮೇಲಿನ ನಂಬಿಕೆ

ರಾಕೇಶ್ ಪೂಜಾರಿ ಅವರ ಅಕಾಲಿಕ ನಿಧನಕ್ಕೆ ಜೀ ಕನ್ನಡ ವೇದಿಕೆ ಗೌರವ ಸೂಚಿಸಿದೆ. ಕಾಮಿಡಿ ಕಿಲಾಡಿಗಳು ಖ್ಯಾತಿಯ ರಾಕೇಶ್ ಅವರನ್ನು ನೆನೆದು ನಟ ರವಿಚಂದ್ರನ್ ಮತ್ತು ಯೋಗರಾಜ್ ಭಟ್ ಅವರು ತಮ್ಮ ಭಾವನೆಗಳನ್ನು ಹಂಚಿಕೊಂಡರು. ಅವರ ನಗು ಮತ್ತು ಹಾಸ್ಯ ಪ್ರಜ್ಞೆಯನ್ನು ಎಂದಿಗೂ ಮರೆಯಲಾಗದು ಎಂದು ಅವರು ಹೇಳಿದರು.

ರಾಕೇಶ್ ನಿಧನದ ಬಳಿಕ ನಟ ರವಿಚಂದ್ರನ್​ಗೆ ಕಡಿಮೆ ಆಯಿತು ಜೀವನದ ಮೇಲಿನ ನಂಬಿಕೆ
ರವಿಚಂದ್ರನ್
ರಾಜೇಶ್ ದುಗ್ಗುಮನೆ
|

Updated on:May 24, 2025 | 7:35 AM

Share

ರಾಕೇಶ್ ಪೂಜಾರಿ (Rakesh Poojary) ಅಕಾಲಿಕ ಮರಣಕ್ಕೆ ಕೆಲವು ವಾರಗಳು ಕಳೆದಿದ್ದರೂ ಅವರ ನೆನಪು, ಅವರ ನಗು ಹಾಗೂ ಅವರ ಬಗೆಗಿನ ಚರ್ಚೆ ಇನ್ನೂ ನಿಂತಿಲ್ಲ. ಅವರ ನಗುಮುಖದ ಫೋಟೋಗಳನ್ನು ನೋಡಿ ಎಲ್ಲರೂ ಬೇಸರ ಮಾಡಿಕೊಳ್ಳುತ್ತಿದ್ದಾರೆ. ಅವರು ಇಷ್ಟು ಬೇಗ ಸಾಯಬಾರದಿತ್ತು ಎಂದು ಕೆಲವರು ಹೇಳಿದರೆ ಇನ್ನೂ ಕೆಲವರು ಅವರು ಇನ್ನಷ್ಟು ಸಮಯ ನಮ್ಮ ಜೊತೆ ಇದ್ದು ನಮ್ಮ ನಗಿಸಬೇಕಿತ್ತು ಎನ್ನುತ್ತಿದ್ದಾರೆ. ಹೀಗಿರುವಾಗಲೇ ರಾಕೇಶ್ ಪೂಜಾರಿ ಅವರಿಗೆ ಜೀ ಕನ್ನಡ ವೇದಿಕೆ ಮೇಲೆ ವಿಶೇಷ ಗೌರವ ಸೂಚಿಸಲಾಗಿದೆ.

ರಾಕೇಶ್ ಪೂಜಾರಿ ಅವರು ಜೀ ಕನ್ನಡ ವೇದಿಕೆ ಮೇಲೆ ಗಮನ ಸೆಳೆದವರು. ‘ಕಾಮಿಡಿ ಕಿಲಾಡಿಗಳು ಸೀಸನ್ 3’ ವಿನ್ನರ್ ಕೂಡ ಹೌದು. ರಾಕೇಶ್ ಪೂಜಾರಿಯನ್ನು ಅಲ್ಲಿ ಮಿಸ್ ಮಾಡಿಕೊಳ್ಳದವರೇ ಇಲ್ಲ ಎಂದರೂ ತಪ್ಪಾಗಲಾರದು. ಎಲ್ಲವೂ ಸರಿ ಇದ್ದಿದ್ದರೆ ಈ ವಾರ ವೇದಿಕೆ ಮೇಲೆ ಅವರು ಕೂಡ ಇರಬೇಕಿತ್ತು. ಆದರೆ, ಈ ರೀ ಯೂನಿಯನ್​ಗೆ ಅವರು ಇಲ್ಲದೆ ಎಲ್ಲರಿಗೂ ದುಃಖ ಆವರಿಸಿದೆ.

View this post on Instagram

A post shared by Zee Kannada (@zeekannada)

ವೇದಿಕೆ ಮೇಲೆ ಕಾರ್ಯಕ್ರಮ ಆರಂಭಕ್ಕೂ ಮೊದಲು ಒಂದು ನಿಮಿಷ ಮೌನಾಚರಣೆ ಮಾಡಲಾಯಿತು. ಆ ಬಳಿಕ ನಟ ರವಿಚಂದ್ರನ್ ಅವರು ಮಾತನಾಡಿದರು. ‘ಒಂದು ನಿಮಿಷ ಮೌನಾಚರಣೆ ಮಾಡುವಾಗ ರಾಕೇಶ್​​ನ ನಗು ಕಾಣಿಸಿತು. ಈಗ ಅವನು ನಗಿಸುತ್ತಿದ್ದಾನೆ. ಆದರೆ ನಮಗೆ ನಗೋಕೆ ಆಗ್ತಿಲ್ಲ. ವಯಸ್ಸಿಗೂ ಆಯಸ್ಸಿಗೂ ನಂಟು ಮುಗಿದು ಹೋಗಿದೆ. ಮೊದಲು ವಯಸ್ಸು ಮುಗಿದರೇ ಸಾವು ಎನ್ನುತ್ತಿದ್ದರು. ಆದರೆ, ಈಗ ಹಾಗಿಲ್ಲ. ದೇವರ ಲೆಕ್ಕಾಚಾರ ತಪ್ಪಿದೆ. ಗ್ರಹಚಾರ ಆಡ್ತಿದೆ. ನಂಬಿಕೆ ದೂರ ಆಗುತ್ತಿದೆ. ಬದುಕಿರಿ, ಇದ್ದಾಗ ನಗಬೇಕು’ ಎಂದು ಹೇಳಿದರು.

ಇದನ್ನೂ ಓದಿ: ‘ಅವನ ನಟನೆ ನೋಡೋದೇ ಆನಂದ’; ಜೀ ಕನ್ನಡ ವೇದಿಕೆ ಮೇಲೆ ರಾಕೇಶ್ ಪೂಜಾರಿಗೆ ವಿಶೇಷ ಗೌರವ

‘ಯಾರಾದರೂ ಸತ್ತ ಎಂದಾಗ ಅವರ ಮಾಡಿದ ಕೆಲಸ, ನಗುವಿನ ಮೂಲಕ ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಎಲ್ಲರನ್ನೂ ನಗಿಸಿದವನು. ಪ್ರಕೃತಿ ಕರೆಯಿತು. ಅವನು ಹೋದ. ಅದನ್ನು ಹಾಸ್ಯವಾಗಿ ತೆಗೆದುಕೊಂಡ. ಅಕಾಲಿಕವಾಗಿ ಹೋದವರು ಹೋದರು ಎನ್ನಬಾರದು. ಅವರನ್ನು ಬೇರೆ ಬೇರೆ ರೀತಿಯಲ್ಲಿ ನಾವು ಮತ್ತೆ ಕಾಣಬೇಕು’ ಎಂದು ಯೋಗರಾಜ್ ಭಟ್ ಅವರು ಅಭಿಪ್ರಾಯ ಹೊರಹಾಕಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:33 am, Sat, 24 May 25

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ