AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುತೆರೆ ನಟ, ರಂಗಭೂಮಿ ಕಲಾವಿದ ವಿಜಯಕುಮಾರ್ ಜಿತೂರಿ ನಿಧನ

ಕಿರುತೆರೆ ಹಾಗೂ ರಂಗಭೂಮಿಯ ಹಿರಿಯ ನಟ ವಿಜಯಕುಮಾರ್ ಜಿತೂರಿ ಅವರು ಗದಗದಲ್ಲಿ ನಿಧನರಾಗಿದ್ದಾರೆ. 'ಮಂಗಳ ಗೌರಿ ಮದುವೆ' ಧಾರಾವಾಹಿ ಮೂಲಕ ಹೆಸರು ಮಾಡಿದ್ದ ಇವರು, ಕೊನೆಯ ದಿನಗಳಲ್ಲಿ ಸರಿಯಾದ ನಟನೆಯ ಅವಕಾಶಗಳಿಲ್ಲದೆ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರು. ಇವರ ನಿಧನಕ್ಕೆ ಕಲಾ ಲೋಕ ಕಂಬನಿ ಮಿಡಿದಿದೆ.

ಕಿರುತೆರೆ ನಟ, ರಂಗಭೂಮಿ ಕಲಾವಿದ ವಿಜಯಕುಮಾರ್ ಜಿತೂರಿ ನಿಧನ
ವಿಜಯಕುಮಾರ್ ಜಿತೂರಿ
ಮಂಗಳ ರಾಜಗೋಪಾಲ್​
| Edited By: |

Updated on:Aug 11, 2026 | 11:20 AM

Share

ಮುಖ್ಯಾಂಶಗಳು

  • ಗದಗದಲ್ಲಿ ನಟ ವಿಜಯಕುಮಾರ್ ಜಿತೂರಿ ನಿಧನ
  • 'ಮಂಗಳ ಗೌರಿ ಮದುವೆ'ಯಲ್ಲಿ ಕಾನ್‌ಸ್ಟೇಬಲ್ ಪಾತ್ರ
  • ಕೊನೆ ದಿನಗಳಲ್ಲಿ ಕಾಡಿದ ಆರ್ಥಿಕ ಸಂಕಷ್ಟ

ಕಿರುತೆರೆಯಲ್ಲಿ ಸಾಕಷ್ಟು ಹೆಸರು ಮಾಡಿದ್ದ ಖ್ಯಾತ ಹಿರಿಯ ಕಲಾವಿದ ವಿಜಯಕುಮಾರ್ ಜಿತೂರಿ (Vijay Kumar) ನಿಧನ ಹೊಂದಿದ್ದಾರೆ. ಸೋಮವಾರ (ಆಗಸ್ಟ್ 10) ಸಂಜೆ ಹುಟ್ಟೂರಾದ ಗದಗದಲ್ಲಿ ಅವರು ನಿಧನ ಹೊಂದಿದ್ದಾರೆ. ಕಿರುತೆರೆ ಜೊತೆಗೆ ಹಿರಿತೆರೆ, ರಂಗಭೂಮಿಯಲ್ಲಿ ಅವರು ನಟಿಸಿ ಗಮನ ಸೆಳೆದಿದ್ದರು. ಅವರ ಸಾವಿಗೆ ಅನೇಕರು ಕಂಬನಿ ಮಿಡಿದಿದ್ದಾರೆ.

ವಿಜಯಕುಮಾರ್ ಜಿತೂರಿ ಅವರು ಕೇವಲ ನಟ ಮಾತ್ರ ಅಲ್ಲ ಗಾಯಕ ಕೂಡ ಹೌದು. ಅವರು ಕಲಾ ಕ್ಷೇತ್ರಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಈಗ ಗದಗದ ಬೆಟಗೇರಿಯಲ್ಲಿ ಅವರು ಕೊನೆಯುಸಿರು ಎಳೆದಿದ್ದಾರೆ. ಅವರಿಗೆ ಸೋಮವಾರ ಉಸಿರಾಟದ ತೊಂದರೆ ಕಾಣಸಿಕೊಂಡಿತ್ತು.

ವಿಜಯಕುಮಾರ್ ಜಿತೂರಿ ಅವರು ಹಲವು ವರ್ಷಗಳಿಂದ ಬಣ್ಣದ ಲೋಕದ ಜೊತೆ ಒಡನಾಟ ಹೊಂದಿದ್ದರು. ಅವರು ಗಗನ್ ಚಿನ್ನಪ್ಪ ಅಭಿನಯದ ‘ಮಂಗಳ ಗೌರಿ ಮದುವೆ’ ಧಾರಾವಾಹಿಯಲ್ಲಿ ಕಾನ್​​ಸ್ಟೇಬಲ್ ಪಾತ್ರ ಮಾಡಿದ್ದರು. ಗಗನ್ ಚಿನ್ನಪ್ಪ ಜೊತೆ ಅವರು ಆ ಧಾರಾವಾಹಿಯಲ್ಲಿ ಸಾಕಷ್ಟು ಕಾಣಿಸಿಕೊಂಡಿದ್ದರು.

ಇದನ್ನೂ ಓದಿ: ಕಲಾವಿದರಿಗೆ ಎಚ್ಚರಿಕೆ ನೀಡಿದ ಕಿರುತೆರೆ ನಿರ್ಮಾಪಕ ಸಂಘ, ಹೇಳಿರುವುದೇನು?

ಅವರು ಇಷ್ಟೆಲ್ಲ ಧಾರಾವಾಹಿಗಳಲ್ಲಿ ನಟಿಸಿದ ಹೊರತಾಗಿಯೂ ಆರ್ಥಿಕ ಸಂಕಷ್ಟ ಬಹುವಾಗಿ ಕಾಡುತ್ತಾ ಇತ್ತು. ಅವರಿಗೆ ಇತ್ತೀಚೆಗೆ ಹೆಚ್ಚಿನ ಅವಕಾಶಗಳು ಬಂದಿರಲಿಲ್ಲ. ಈ ಕಾರಣದಿಂದ ಮನೆ ಬಾಡಿಗೆ ಕಟ್ಟಲೂ ಸಾಧ್ಯವಾಗದೇ ಹುಟ್ಟೂರಿಗೆ ತೆರಳಿದ್ದರು. ಈಗ ಅವರು ಇಹಲೋಕ ತ್ಯಜಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 11:10 am, Tue, 11 August 26

Follow Us
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?