AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅತ್ಯಾಚಾರ ದೃಶ್ಯಗಳಲ್ಲಿ ನಟಿಸೋಕೆ ಆಫರ್​ ಕೊಡ್ತಾರೆ’; ಬೇಸರ ಹೊರ ಹಾಕಿದ ಹಿರಿಯ ನಟಿ

ಸಿನಿಮಾ ಮಾತ್ರವಲ್ಲದೆ, ಕಿರುತೆರೆಯಲ್ಲೂ ರೇಣುಕಾ ಗುರುತಿಸಿಕೊಂಡಿದ್ದಾರೆ. ಅವರು ಹಲವು ಧಾರಾವಾಹಿಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಹಿಂದಿ ಹಾಗೂ ಮರಾಠಿ ಕಿರುತೆರೆಯಲ್ಲಿ ಅವರು ಮನೆ ಮಾತಾಗಿದ್ದಾರೆ.

‘ಅತ್ಯಾಚಾರ ದೃಶ್ಯಗಳಲ್ಲಿ ನಟಿಸೋಕೆ ಆಫರ್​ ಕೊಡ್ತಾರೆ’; ಬೇಸರ ಹೊರ ಹಾಕಿದ ಹಿರಿಯ ನಟಿ
ರೇಣುಕಾ
TV9 Web
| Edited By: |

Updated on: Dec 31, 2021 | 9:47 PM

Share

ಚಿತ್ರರಂಗದಲ್ಲಿ ನಟಿಯರಿಗೆ ಇರುವ ಬೇಡಿಕೆ ಬಹುಬೇಗ ಕಡಿಮೆ ಆಗಿ ಬಿಡುತ್ತದೆ. ಕೆಲ ಹೀರೋಯಿನ್​ಗಳಿಗೆ ವಯಸ್ಸಾಗುತ್ತಾ ಬಂದಂತೆ ಪ್ರಾಮುಖ್ಯತೆ ಇಲ್ಲದ ಪೋಷಕ ಪಾತ್ರಗಳಲ್ಲಿ ನಟಿಸೋಕೆ ಆಹ್ವಾನ ಕೊಡುತ್ತಾರೆ. ಈಗ ಹಿರಿಯ ನಟಿ ರೇಣುಕಾ ಶಹಾನೆಗೂ ಇದೇ ರೀತಿ ಆಗಿದೆ. ಹಿಂದಿ, ತೆಲುಗು, ಮರಾಠಿ ಚಿತ್ರರಂಗದಲ್ಲಿ ಗುರುತಿಸಿಕೊಂಡ ಅವರಿಗೆ ಇತ್ತೀಚೆಗೆ ಇದೇ ರೀತಿಯ ಪ್ರಾಜೆಕ್ಟ್​ಗಳು ಬರೋಕೆ ಆರಂಭವಾಗಿದೆ. ‘ನಿಮ್ಮ ಪಾತ್ರಕ್ಕೆ ಒಂದು ಅತ್ಯಾಚಾರ ದೃಶ್ಯ ಕೂಡ ಇದೆ. ಅದರಿಂದ ಸಿನಿಮಾ ಪ್ರಮುಖ ತಿರುವು ಪಡೆದುಕೊಳ್ಳಲಿದೆ’ ಎಂದು ಕೆಲ ನಿರ್ದೇಶಕರು ರೇಣುಕಾಗೆ ಹೇಳಿದ್ದಾರೆ. ಇದು ಅವರಿಗೆ ಬೇಸರ ಮೂಡಿಸಿದೆ.

‘ನೀವು ಅತ್ತಿಗೆ ಪಾತ್ರಕ್ಕೆ ಒಪ್ಪುತ್ತೀರಿ ಎಂದು ಕೆಲವರು ಹೇಳುತ್ತಾರೆ. ಇದು ತಪ್ಪಲ್ಲ. ಆದರೆ, ಹೀರೋನ ತಂಗಿ ಪಾತ್ರ ನಿಮ್ಮದು ಎಂದಾಗ ಬೇಸರವಾಗುತ್ತದೆ. ‘ಹೀರೋನ ಸಹೋದರಿಯಾದರೂ ನಿಮ್ಮ ಪಾತ್ರಕ್ಕೆ ತುಂಬಾನೇ ಪ್ರಾಮುಖ್ಯತೆ ಇದೆ. ಸಿನಿಮಾದಲ್ಲಿ ನೀವು ಅತ್ಯಾಚಾರಕ್ಕೆ ಒಳಗಾಗುತ್ತೀರಿ. ಆಗ ಹೀರೋ ವಿಲನ್​ಗಳಿಗೆ ಹೊಡೆಯುತ್ತಾನೆ’ ಎಂದು ನಿರ್ದೇಶಕರು ಹೇಳುತ್ತಾರೆ’ ಎಂದು ತಮಗೆ ಬರುತ್ತಿರುವ ಪಾತ್ರಗಳ ಬಗ್ಗೆ ಬೇಸರ ಹೊರ ಹಾಕಿದ್ದಾರೆ ರೇಣುಕಾ.

‘ಅತ್ಯಾಚಾರಕ್ಕೆ ಒಳಗಾಗುವಂತಹ ಪಾತ್ರಗಳಲ್ಲಿ ನಟಿಸೋಕೆ ನನಗೆ ಇಷ್ಟವಿಲ್ಲ. ಆ ರೀತಿಯ ಪರಿಸ್ಥಿತಿಯನ್ನು ಸೆಟ್​ನಲ್ಲಿ ಕಲ್ಪಿಸಿಕೊಳ್ಳೋಕೂ ನನಗೆ ಇಷ್ಟವಿಲ್ಲ. ಒಳ್ಳೆಯ ಪಾತ್ರ ಸಿಕ್ಕರೆ ಮಾತ್ರ ನಟಿಸುತ್ತೇನೆ’ ಎಂದಿದ್ದಾರೆ ಅವರು.

ಸಿನಿಮಾ ಮಾತ್ರವಲ್ಲದೆ, ಕಿರುತೆರೆಯಲ್ಲೂ ರೇಣುಕಾ ಗುರುತಿಸಿಕೊಂಡಿದ್ದಾರೆ. ಅವರು ಹಲವು ಧಾರಾವಾಹಿಗಳಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದಾರೆ. ಹಿಂದಿ ಹಾಗೂ ಮರಾಠಿ ಕಿರುತೆರೆಯಲ್ಲಿ ಅವರು ಮನೆ ಮಾತಾಗಿದ್ದಾರೆ. ಚಿತ್ರರಂಗ ಹಾಗೂ ಧಾರಾವಾಹಿ ಕೆಲಸಗಳನ್ನು ಒಟ್ಟೊಟ್ಟಿಗೆ ನಿರ್ವಹಿಸಿಕೊಂಡು ಹೋದ ಖ್ಯಾತಿ ಅವರಿಗೆ ಇದೆ. 2020ರಲ್ಲಿ ರೇಣುಕಾ ‘ದಿ ಕಪಿಲ್ ಶರ್ಮಾ ಶೋ’ಗೆ ಅತಿಥಿಯಾಗಿ ಆಗಮಿಸಿದ್ದರು. 2019ರಲ್ಲಿ ನಡೆದ ‘ಕೌನ್​ ಬನೇಗಾ ಕರೋಡ್​ಪತಿ 12’ಗೂ ಅವರು ಅತಿಥಿಯಾಗಿ ಬಂದಿದ್ದರು. ಕಾಜೋಲ್​ ನಟನೆಯ ‘ತ್ರಿಭಂಗ’ ಚಿತ್ರವನ್ನು ಅವರು ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್​ ದೇವರಾಜ್​-ಪ್ರಿಯಾಂಕಾ ತಿಮ್ಮೇಶ್​ ಅಭಿನಯದ ‘ಅರ್ಜುನ್​ ಗೌಡ’ ಸಿನಿಮಾ ಹೇಗಿದೆ?

‘ನಾನು ತಪ್ಪು ಆಯ್ಕೆಗಳನ್ನು ಮಾಡುತ್ತಲೇ ಇದ್ದೆ’; ಸಮಂತಾ ಹೀಗೆ ಮರುಗಿದ್ದೇಕೆ?

Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ