AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಗೌಡ; ಅರ್ಧದಲ್ಲೇ ಮನೆಯಿಂದ ಎಲಿಮಿನೇಟ್?

ಬಿಗ್ ಬಾಸ್ ಕನ್ನಡ ಮನೆಯಲ್ಲಿ ರಿಷಾ ಅವರು ಗಿಲ್ಲಿ ಮೇಲೆ ಹಲ್ಲೆ ಮಾಡಿ ನಿಯಮಗಳನ್ನು ಉಲ್ಲಂಘಿಸಿದ್ದಾರೆ. ದೈಹಿಕ ಹಲ್ಲೆ ಮಾಡಿದವರನ್ನು ತಕ್ಷಣವೇ ಹೊರಹಾಕುವ ನಿಯಮವಿರುವುದರಿಂದ, ರಿಷಾ ಅವರು ಎಲಿಮಿನೇಟ್ ಆಗುತ್ತಾರೆಯೇ ಎಂಬ ಪ್ರಶ್ನೆ ಮೂಡಿದೆ. ಹಿಂದಿನ ಸೀಸನ್‌ಗಳಲ್ಲಿ ಇದೇ ರೀತಿ ಘಟನೆಗಳು ನಡೆದಿವೆ.

ಗಿಲ್ಲಿ ಮೇಲೆ ಹಲ್ಲೆ ಮಾಡಿದ ರಿಷಾ ಗೌಡ; ಅರ್ಧದಲ್ಲೇ ಮನೆಯಿಂದ ಎಲಿಮಿನೇಟ್?
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on: Nov 03, 2025 | 8:38 AM

Share

‘ಯಾರ ಮೇಲೆ ಯಾರೂ ಹಲ್ಲೆ ಮಾಡಬಾರದು’ ಎಂಬುದು ಬಿಗ್ ಬಾಸ್​ನ (Bigg Boss) ಮೂಲ ನಿಯಮಗಳಲ್ಲಿ ಒಂದು. ಈ ರೀತಿ ಮಾಡಿದರೆ ಆ ಕ್ಷಣವೇ ಅವರನ್ನು ಮನೆಯಿಂದ ಹೊರಕ್ಕೆ ಕಳುಹಿಸಲಾಗುತ್ತದೆ. ಈ ಮೊದಲು ಬಿಗ್ ಬಾಸ್​ನಲ್ಲಿ ಈ ರೀತಿ ಆದ ಸಾಕಷ್ಟು ಉದಾಹರಣೆ ಇದೆ. ಕಳೆದ ಸೀಸನ್​ನಲ್ಲಿ ರಂಜಿತ್ ಅವರು ಇದೇ ರೀತಿ ಮಾಡಿ ಮನೆಯಿಂದ ಹೊರ ಹೋಗಿದ್ದರು. ಈಗ ಗಿಲ್ಲಿ ಮೇಲೆ ರಿಷಾ ಅವರು ಕೈ ಮಾಡಿದ್ದಾರೆ. ಈ ವಿಚಾರ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ಅವರನ್ನು ಎಲಿಮಿನೇಟ್ ಮಾಡಬೇಕು ಎಂಬ ಕೂಗು ಕೇಳಿ ಬಂದಿದೆ.

ರಿಷಾ ಅವರ ಬಳಿ ಬಕೆಟ್ ಕೊಡುವಂತೆ ಗಿಲ್ಲಿ ಅವರು ಬಾತ್​ರೂಂನಲ್ಲಿ ಮನವಿ ಮಾಡಿದ್ದಾರೆ. ಆದರೆ, ರಿಷಾ ಇದಕ್ಕೆ ಬಗ್ಗಲಿಲ್ಲ. ಏನು ಮಾಡಬೇಕು ಎಂಬುದು ನನಗೆ ಗೊತ್ತಿದೆ ಎಂದು ಹೊರಟ ಗಿಲ್ಲಿ ಅವರು, ರಿಷಾ ಅವರ ಬಟ್ಟೆಯನ್ನು ತಂದು ಬಾತ್​ರೂಂ ಹೊರ ಭಾಗದಲ್ಲಿರುವ ನೆಲದ ಮೇಲೆ ಹಾಕಿದ್ದಾರೆ. ಇದು ರಿಷಾ ಕೋಪಕ್ಕೆ ಕಾರಣ ಆಗಿದೆ. ‘ಗಿಲ್ಲಿ’ ಎಂದು ಕೂಗುತ್ತಾ ಬಂದ ಅವರು, ಗಿಲ್ಲಿಗೆ ಹೊಡೆದಿದ್ದಾರೆ.

ಇಷ್ಟಕ್ಕೆ ರಿಷಾ ನಿಲ್ಲಲಿಲ್ಲ. ರಿಷಾ ಅವರು ಗಿಲ್ಲಿ ಮೇಲೆ ಕೂಗಾಡಿದ್ದಾರೆ. ಗಿಲ್ಲಿ ಬಟ್ಟೆಗಳನ್ನೆಲ್ಲ ಎತ್ತಿ ಬೀಸಾಕಿದ್ದಾರೆ. ಸೂಟ್​ಕೇಸ್​ನ ಒದ್ದಿದ್ದಾರೆ ಆ ಬಳಿಕ ಗಿಲ್ಲಿಯನ್ನು ತಳ್ಳಿದ್ದಾರೆ. ರಿಷಾ ಮಾಡಿದ್ದು ಬಿಗ್ ಬಾಸ್ ಮೂಲ ನಿಯಮಗಳಿಗೆ ವಿರುದ್ಧವಾಗಿದೆ. ಕಳೆದ ಸೀಸನ್​ಗಳಲ್ಲಿ ಈ ರೀತಿ ಮಾಡಿದಾಗ ತಕ್ಷಣವೇ ಅವರನ್ನು ದೊಡ್ಮನೆಯಿಂದ ಹೊರಕ್ಕೆ ಹಾಕಲಾಗಿತ್ತು. ಈ ಬಾರಿಯೂ ಅದೇ ರೀತಿ ಮಾಡಲಾಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ.

ಇದನ್ನೂ ಓದಿ
Image
ಹೊರಗಿನ ವಿಚಾರ ತಿಳಿದುಕೊಳ್ಳಲು ಬಟ್ಟೆಯಲ್ಲಿ ಕೋಡ್​ವರ್ಡ್​; ಶಾಕಿಂಗ್ ವಿಚಾರ
Image
‘ಹೀಗೆ ಮುಂದುವರಿದ್ರೆ ಜನ ಬಿಗ್ ಬಾಸ್ ನೋಡೋದು ಬಿಡ್ತಾರೆ’; ಸುದೀಪ್
Image
ಬಿಗ್ ಬಾಸ್ ಮನೆಯಿಂದ ಮಲ್ಲಮ್ಮ ಹೊರ ಹೋಗಲು ಕಾರಣವಾಯ್ತು ಆ ಒಂದು ವಂದಂತಿ?
Image
ಸುದೀಪ್ ಹೇಳಿದ ‘ಗೌರವ’ದ ಪಾಠ ಮರೆತು ಮತ್ತೆ ಕಿತ್ತಾಟಕ್ಕೆ ಇಳಿದ ಅಶ್ವಿನಿ

ಇದನ್ನೂ ಓದಿ: ಹೊರಗಿನ ವಿಚಾರ ತಿಳಿದುಕೊಳ್ಳಲು ಬಟ್ಟೆಯಲ್ಲಿ ಕೋಡ್​ವರ್ಡ್​; ಶಾಕಿಂಗ್ ವಿಚಾರ ಹೇಳಿದ ಸುದೀಪ್

ತೆಲುಗು ಬಿಗ್ ಬಾಸ್​ನಲ್ಲಿ ಇದೇ ರೀತಿಯ ಘಟನೆ ನಡೆದಿದೆ. ಮಹಿಳಾ ಸ್ಪರ್ಧಿ ಮೇಲೆ ಪುರುಷ ಸ್ಪರ್ಧಿ ಕಠಿಣವಾಗಿ ನಡೆದುಕೊಂಡಿದ್ದ. ಈ ವಿಚಾರದಲ್ಲಿ ಸಾಕಷ್ಟು ಚರ್ಚೆಗಳು ನಡೆದವು. ವೀಕೆಂಡ್ ಎಪಿಸೋಡ್​ನಲ್ಲಿ ಅಕ್ಕಿನೇನಿ ನಾಗಾರರ್ಜುನ ಬರುತ್ತಿದ್ದಂತೆ ಆ ಸ್ಪರ್ಧಿಯನ್ನು ಹೊರಕ್ಕೆ ಕಳುಹಿಸಲಾಯಿತು. ಕನ್ನಡದಲ್ಲೂ ಇದೇ ರೀತಿ ಮಾಡಲಾಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ. ಇಲ್ಲವೇ, ಬಿಗ್ ಬಾಸ್ ಈ ಬಗ್ಗೆ ಯಾವ ರೀತಿಯ ಆದೇಶ ನೀಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ