AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೀಕೆಂಡ್ ವಿತ್ ರಮೇಶ್ ಸಾಧಕರ ಸೀಟ್​​ನಲ್ಲಿ ರಿಷಬ್ ಶೆಟ್ಟಿ: ಇದು ವಿಶೇಷ ಸಂಚಿಕೆ

‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದ 101ನೇ ಸಾಧಕರಾಗಿ ರಿಷಬ್ ಶೆಟ್ಟಿ ಅವರು ಬಂದಿದ್ದಾರೆ. ಸಾಧಕರ ಸೀಟ್​​ನಲ್ಲಿ ಕುಳಿತು ಅವರು ತಮ್ಮ ಬದುಕಿನ ಪಯಣವನ್ನು ಮೆಲುಕು ಹಾಕಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಗೆಲುವಿನ ಬಳಿಕ ಅವರಿಗೆ ಈ ಗೌರವ ಸಿಕ್ಕಿರುವುದು ವಿಶೇಷ.

ವೀಕೆಂಡ್ ವಿತ್ ರಮೇಶ್ ಸಾಧಕರ ಸೀಟ್​​ನಲ್ಲಿ ರಿಷಬ್ ಶೆಟ್ಟಿ: ಇದು ವಿಶೇಷ ಸಂಚಿಕೆ
Ramesh, Rishab Shetty
ಮದನ್​ ಕುಮಾರ್​
|

Updated on: Oct 19, 2025 | 1:23 PM

Share

ನಟ, ನಿರ್ದೇಶಕ ರಿಷಬ್ ಶೆಟ್ಟಿ (Rishab Shetty) ಅವರು ರಾಷ್ಟ್ರ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಯಾವುದೇ ಹಿನ್ನೆಲೆ ಇಲ್ಲದೇ ಚಿತ್ರರಂಗಕ್ಕೆ ಬಂದ ಅವರು ಈಗ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಈ ಸಾಧನೆ ಮಾಡಿದ ಅವರಿಗೆ ‘ಜೀ ಕನ್ನಡ’ ವಾಹಿನಿ ಕಡೆಯಿಂದ ಗೌರವ ಸಲ್ಲಿಸಲಾಗಿದೆ. ಜನಪ್ರಿಯ ‘ವೀಕೆಂಡ್ ವಿತ್ ರಮೇಶ್’ (Weekend With Ramesh) ಕಾರ್ಯಕ್ರಮಕ್ಕೆ ರಿಷಬ್ ಶೆಟ್ಟಿ ಅವರು ಅತಿಥಿ ಆಗಿದ್ದಾರೆ. ಅಂದಹಾಗೆ, ಇದು ಒಂದು ವಿಶೇಷ ಸಂಚಿಕೆ. ಜೀ ಕನ್ನಡದ ಅವಾರ್ಡ್ ಶೋನಲ್ಲಿ ರಿಷಬ್ ಶೆಟ್ಟಿ ಅವರು ಭಾಗವಹಿಸಿದ್ದಾರೆ. ಈ ವೇಳೆ ರಮೇಶ್ ಅವರು ‘ವೀಕೆಂಡ್ ವಿತ್ ರಮೇಶ್’ ಶೋ ನಡೆಸಿಕೊಟ್ಟಿದ್ದಾರೆ.

ರಿಷಬ್ ಶೆಟ್ಟಿ ಅವರನ್ನು ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮಕ್ಕೆ ಕರೆತರಲು ಈ ಮೊದಲು ಕೂಡ ಪ್ರಯತ್ನ ನಡೆದಿತ್ತು. ಆದರೆ ಅವರು ಒಪ್ಪಿಕೊಂಡಿರಲಿಲ್ಲ. ‘ಕಾಂತಾರ’ ಸಿನಿಮಾದ ಕೆಲಸಗಳಲ್ಲಿ ಬ್ಯುಸಿ ಇದ್ದ ಕಾರಣ ಅವರು ಬರಲು ಸಾಧ್ಯವಾಗಿರಲಿಲ್ಲ. ಈಗ ‘ಕಾಂತಾರ: ಚಾಪ್ಟರ್ 1’ ಸಿನಿಮಾ ಬಿಡುಗಡೆ ಆಗಿ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ಬಿಡುವು ಮಾಡಿಕೊಂಡು ರಿಷಬ್ ಶೆಟ್ಟಿ ಅವರು ಸಾಧಕರ ಸೀಟ್​​ನಲ್ಲಿ ಬಂದು ಕುಳಿತಿದ್ದಾರೆ.

ಎಂದಿನಂತೆ ರಿಷಬ್ ಶೆಟ್ಟಿ ಅವರ ಬದುಕಿನ ಪಯಣವನ್ನು ಮೆಲುಕು ಹಾಕಲಾಗಿದೆ. ಬಾಲ್ಯದಿಂದ ಇಲ್ಲಿಯ ತನಕ ಅವರು ಸಾಗಿ ಬಂದ ಹಾದಿಯನ್ನು ವೀಕೆಂಡ್​ ಟೆಂಟ್​​ನಲ್ಲಿ ತೋರಿಸಲಾಗಿದೆ. ಅದನ್ನು ನೋಡಿ ಅಭಿಮಾನಿಗಳಿಗೆ ಸ್ಪೂರ್ತಿ ಬಂದಿದೆ. ವಾಟರ್ ಕ್ಯಾನ್ ಬಿಸ್ನೆಸ್ ಮಾಡಿದ್ದು, ಚಹಾ ಪುಡಿ ಮಾರಿದ್ದು ಸೇರಿದಂತೆ ತಮ್ಮ ಬದುಕಿನ ಹಲವು ಘಟನೆಗಳನ್ನು ರಿಷಬ್ ಶೆಟ್ಟಿ ಅವರು ಮೆಲುಕು ಹಾಕಿದ್ದಾರೆ.

View this post on Instagram

A post shared by Zee Kannada (@zeekannada)

ಈವರೆಗೂ ‘ವೀಕೆಂಡ್ ವಿತ್ ರಮೇಶ್’ ಸೀಟ್​​ನಲ್ಲಿ ನೂರು ಸಾಧಕರು ಕೂತಿದ್ದಾರೆ. 101ನೇ ಸಾಧಕರಾಗಿ ರಿಷಬ್ ಶೆಟ್ಟಿ ಅವರು ಹಾಟ್ ಸೀಟ್ ಏರಿದ್ದಾರೆ. ‘ಕಾಂತಾರ: ಚಾಪ್ಟರ್ 1’ ಸಿನಿಮಾದ ಅಭೂತಪೂರ್ವ ಯಶಸ್ಸಿನ ಬೆನ್ನಲ್ಲೇ ರಿಷಬ್ ಶೆಟ್ಟಿ ಅವರಿಗೆ ಈ ಗೌರವ ಸಿಕ್ಕಿರುವುದು ವಿಶೇಷ. ಸಿನಿಮಾದ ಗೆಲುವಿಗಾಗಿ ರಮೇಶ್ ಅವರು ರಿಷಬ್ ಶೆಟ್ಟಿಗೆ ಅಭಿನಂದನೆ ತಿಳಿಸಿದ್ದಾರೆ.

ಇದನ್ನೂ ಓದಿ: ಕಾಂತಾರ ಚಾಪ್ಟರ್ 1: ರಿಷಬ್ ಶೆಟ್ಟಿ ಕಂಡು ರೊಚ್ಚಿಗೆದ್ದ ಮೈಸೂರಿನ ಅಭಿಮಾನಿಗಳು

ರಿಷಬ್ ಶೆಟ್ಟಿ ಅವರು ಸಾಗಿ ಬಂದ ಹಾದಿ ಸುಲಭದ್ದಾಗಿರಲಿಲ್ಲ. ಅವರು ಕೂಡ ಸಾಕಷ್ಟು ಏಳು-ಬೀಳುಗಳನ್ನು ಕಂಡು ಈ ಹಂತಕ್ಕೆ ಬಂದಿದ್ದಾರೆ. ಮೊದಲು ಅವರ ಹೆಸರು ಪ್ರಶಾಂತ್ ಶೆಟ್ಟಿ ಆಗಿತ್ತು. ತಂದೆಯ ಮಾರ್ಗದರ್ಶನದ ಮೇಲೆ ಅವರು ರಿಷಬ್ ಶೆಟ್ಟಿ ಎಂದು ಹೆಸರು ಬದಲಾಯಿಸಿಕೊಂಡರು. ಆ ಘಟನೆಯನ್ನು ಸಹ ಮೆಲುಕು ಹಾಕಲಾಗಿದೆ. ‘ಜೀವನದಲ್ಲಿ ಯಾವುದೇ ಕಾರಣಕ್ಕೂ ನಂಬಿಕೆ ಕಳೆದುಕೊಳ್ಳಬಾರದು’ ಎಂದು ರಿಷಬ್ ಶೆಟ್ಟಿ ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ವಿಮಾನ ನಿಲ್ದಾಣದಲ್ಲಿ ಶಾಸ್ತ್ರೀಯ ನೃತ್ಯಕ್ಕೆ ಮನಸೋತ ರಷ್ಯಾ ಅಧ್ಯಕ್ಷ ಪುಟಿನ್
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ
ಭಾರತಕ್ಕೆ ಬಂದ ಗೆಳೆಯ ಪುಟಿನ್​ಗೆ ಪ್ರಧಾನಿ ಮೋದಿಯ ಅಪ್ಪುಗೆಯ ಸ್ವಾಗತ