AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌನ್ ಬನೇಗಾ ಕರೋಡ್ಪತಿಯಲ್ಲಿ ರಿಷಬ್ ಶೆಟ್ಟಿ ಗೆದ್ದ ಹಣ ಎಷ್ಟು? ಸಿಕ್ಕ ಉಡುಗೊರೆಗಳೇನು?

ರಿಷಬ್ ಶೆಟ್ಟಿ ಅವರು ಅಮಿತಾಭ್ ಬಚ್ಚನ್ ನಡೆಸಿಕೊಡುವ ಕೌನ್ ಬನೇಗಾ ಕರೋಡ್ಪತಿಯಲ್ಲಿ ವಿಶೇಷ ಅತಿಥಿಯಾಗಿ ಭಾಗವಹಿಸಿದ್ದರು. ಅವರು ‘ರಿಷಬ್ ಫೌಂಡೇಶನ್‌’ ಪರವಾಗಿ ಆಡಿದ್ದಾರೆ. ಈ ಹಣವನ್ನು ಸರ್ಕಾರಿ ಶಾಲೆ ಹಾಗೂ ದೈವ ನರ್ತಕರಿಗೆ ಸಹಾಯ ಮಾಡುವುದಾಗಿ ಹೇಳಿದರು. ಇದರ ಜೊತೆಗೆ ಕೆಲವು ಉಡುಗೊರೆ ಕೂಡ ಸಿಕ್ಕಿದೆ.

ಕೌನ್ ಬನೇಗಾ ಕರೋಡ್ಪತಿಯಲ್ಲಿ ರಿಷಬ್ ಶೆಟ್ಟಿ ಗೆದ್ದ ಹಣ ಎಷ್ಟು? ಸಿಕ್ಕ ಉಡುಗೊರೆಗಳೇನು?
ರಿಷಬ್-ಅಮಿತಾಭ್
ರಾಜೇಶ್ ದುಗ್ಗುಮನೆ
|

Updated on:Oct 18, 2025 | 10:34 AM

Share

ರಿಷಬ್ ಶೆಟ್ಟಿ ಅವರು ‘ಕಾಂತಾರ: ಚಾಪ್ಟರ್ 1’ ಚಿತ್ರದಲ್ಲಿ ಮುಖ್ಯ ಭೂಮಿಕೆ ನಿರ್ವಹಿಸಿದ್ದಾರೆ. ಇದರ ಜೊತೆಗೆ ಈ ಸಿನಿಮಾ ನಿರ್ದೇಶನ ಕೂಡ ಮಾಡಿದ್ದಾರೆ. ಈ ಚಿತ್ರ ಕನ್ನಡ ಮಾತ್ರವಲ್ಲದೆ, ಪರಭಾಷೆಗಳಲ್ಲೂ  ಬಿಡುಗಡೆ ಆಗಿ ಜನಪ್ರಿಯತೆ ಪಡೆದಿದೆ. ಈಗ ರಿಷಬ್ ಅವರು ಅಮಿತಾಭ್ ಬಚ್ಚನ್ ನಡೆಸಿಕೊಡುವ ‘ಕೌನ್ ಬನೇಗಾ ಕರೋಡ್ಪತಿ’ (KBC) ಶೋನ ಭಾಗ ಆಗಿದ್ದಾರೆ. ಈ ಶೋನಲ್ಲಿ ಅವರು ಎಷ್ಟು ಲಕ್ಷ ರೂಪಾಯಿ ಗೆದ್ದಿದ್ದಾರೆ ಎಂಬ ವಿಚಾರದ ಬಗ್ಗೆ ಇಲ್ಲಿದೆ ಮಾಹಿತಿ.

ರಿಷಬ್ ಶೆಟ್ಟಿ ಅವರು ವಿಶೇಷ ಅತಿಥಿಯಾಗಿ ‘ಕೌನ್ ಬನೇಗಾ ಕರೋಡ್ಪತಿ’ ಶೋಗೆ ಬಂದಿದ್ದರು. ಅಮಿತಾಭ್ ಬಚ್ಚನ್ ಅವರನ್ನು ಕಂಡು ರಿಷಬ್ ಎಗ್ಸೈಟ್ ಆದರು. ‘ನನ್ನ ಒಂದು ಫೌಂಡೇಷನ್ ಇದೆ. ರಿಷಬ್ ಫೌಂಡೇಷನ್. ಇದರ ಮೂಲಕ ಸರ್ಕಾರಿ ಶಾಲೆ ಹಾಗೂ ದೈವ ನರ್ತಕರಿಗೆ ಸಹಾಯ ಮಾಡಲು ಬಯಸುತ್ತೇನೆ’ ಎಂದು ರಿಷಬ್ ಹೇಳಿದರು. ಇದಕ್ಕೆ ಅಮಿತಾಭ್ ಖುಷಿ ಹೊರಹಾಕಿದರು.

ರಿಷಬ್ ಶೆಟ್ಟಿ ಅವರಿಗೆ ಮೊದಲ ಪ್ರಶ್ನೆ 50 ಸಾವಿರ ರೂಪಾಯಿಗೆ ಕೇಳಲಾಯಿತು. ‘ಲಾಫಿಂಗ್ ಬುದ್ಧ’ಗೆ ಸಂಬಂಧಿಸಿದಂತೆ ಪ್ರಶ್ನೆ ಇದಾಗಿತ್ತು. ಇದಕ್ಕೆ ಅವರು ಸರಿಯಾದ ಉತ್ತರ ಕೊಟ್ಟರು. ರಿಷಬ್ ಅವರು 12 ಪ್ರಶ್ನೆಗಳನ್ನು ಎದುರಿಸಿದರು. ‘ಇಂಡೋನೇಷ್ಯಾದಲ್ಲಿರುವ ಜೀವಂತ ಜ್ವಾಲಾಮುಖಿ ಕೆಳಗೆ ಹಿಂದೂ ದೇವರು ಇದೆ. ಅದು ಯಾವ ದೇವರು’ ಎಂದು ಕೇಳಲಾಯಿತು. ಇದಕ್ಕೆ ರಿಷಬ್ ಅವರು ಲೈಫ್​​ಲೈನ್ ತೆಗೆದುಕೊಂಡು, ‘ಗಣಪತಿ’ ಎಂದು ಸರಿಯಾದ ಉತ್ತರ ಕೊಟ್ಟರು. ಈ ಮೂಲಕ 12,50,000 ಸಾವಿರ ರೂಪಾಯಿ ಗೆದ್ದರು. ನಿಮ್ಮ ಫೌಂಡೇಷನ್​ಗೆ ‘ಹಿರೋ ಎಕ್ಸ್​ಟ್ರೀಮ್ 125’ ಬೈಕ್ ಕೂಡ ಸಿಗಲಿದೆ ಎಂದು ಅಮಿತಾಭ್ ಹೇಳಿದರು.

ಇದನ್ನೂ ಓದಿ: ರಜನಿಕಾಂತ್, ಮೋಹನ್​ಲಾಲ್ ಸ್ಟೈಲ್ ಅನುಕರಿಸಿದ ರಿಷಬ್ ಶೆಟ್ಟಿ; ದಂಗಾದ ಅಮಿತಾಭ್

ಆ ಬಳಿಕ ಸಮಯ ಪೂರ್ಣಗೊಂಡಿತು. ಹೀಗಾಗಿ, ಶೋನ ನಿಲ್ಲಿಸಿ, ರಿಷಬ್ ಖಾತೆಗೆ ಅಮಿತಾಭ್ ಬಚ್ಚನ್ ಅವರು 12.5 ಲಕ್ಷ ಹಣವನ್ನು ರಿಷಬ್ ಫೌಂಡೇಷನ್ ಖಾತೆಗೆ ವರ್ಗಾವಣೆ ಮಾಡಿದರು. ಇದಲ್ಲದೆ, 1500 ಕೆಜಿ ಅಕ್ಕಿ, 1,500 ಕೆಜಿ ಗೋಧಿ, 1500 ಕೆಜಿ ತುಪ್ಪವನ್ನು ಫೌಂಡೇಷನ್​ಗೆ ಸ್ಪಾನ್ಸರ್ ಕಡೆಯಿಂದ ನೀಡೋದಾಗಿ ಅಮಿತಾಭ್ ಘೋಷಿಸಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:26 am, Sat, 18 October 25

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ