AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Koffee With Karan 8: ‘ಕಾಫಿ ವಿತ್​ ಕರಣ್​’ ಶೋನಲ್ಲಿ ರಿಷಬ್​ ಶೆಟ್ಟಿ, ಯಶ್​? ಬಾಲಿವುಡ್​ ಅಂಗಳದಲ್ಲಿ ಕನ್ನಡಿಗರ ಹವಾ

Karan Johar | Rishab Shetty: ‘ಕಾಫಿ ವಿತ್​ ಕರಣ್​’ ಕಾರ್ಯಕ್ರಮದ ಜೊತೆ ಒಂದಷ್ಟು ವಿವಾದಗಳು ಅಂಟಿಕೊಂಡಿವೆ. ಹಾಗಾಗಿ ಕೆಲವು ಸೆಲೆಬ್ರಿಟಿಗಳು ಈ ಶೋಗೆ ಬರಲು ಹಿಂದೇಟು ಹಾಕಿದ್ದು ಕೂಡ ಉಂಟು.

Koffee With Karan 8: ‘ಕಾಫಿ ವಿತ್​ ಕರಣ್​’ ಶೋನಲ್ಲಿ ರಿಷಬ್​ ಶೆಟ್ಟಿ, ಯಶ್​? ಬಾಲಿವುಡ್​ ಅಂಗಳದಲ್ಲಿ ಕನ್ನಡಿಗರ ಹವಾ
ಕರಣ್ ಜೋಹರ್, ಯಶ್, ರಿಷಬ್ ಶೆಟ್ಟಿ
ಮದನ್​ ಕುಮಾರ್​
|

Updated on: Mar 30, 2023 | 5:39 PM

Share

ನಿರ್ಮಾಪಕ, ನಿರ್ದೇಶಕ ಕರಣ್​ ಜೋಹರ್​ (Karan Johar) ಅವರು ನಿರೂಪಕನಾಗಿಯೂ ಫೇಮಸ್​. ಅನೇಕ ಕಾರ್ಯಕ್ರಮಗಳನ್ನು ನಡೆಸಿಕೊಟ್ಟ ಖ್ಯಾತಿ ಅವರಿಗೆ ಸಲ್ಲುತ್ತದೆ. ಅದರಲ್ಲೂ ಅವರ ನಿರೂಪಣೆಯಲ್ಲಿ ಮೂಡಿಬಂದ ‘ಕಾಫಿ ವಿತ್​ ಕರಣ್​’ (Koffee With Karan) ಶೋಗೆ ಬೇರೆಯದ್ದೇ ತೂಕ ಇದೆ. ಬಾಲಿವುಡ್​ನ ಅನೇಕ ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಬಂದುಹೋಗಿದ್ದಾರೆ. ಈವರೆಗೂ 7 ಸೀಸನ್​ಗಳನ್ನು ಯಶಸ್ವಿಯಾಗಿ ಪೂರೈಸಲಾಗಿದ್ದು, ‘ಕಾಫಿ ವಿತ್​ ಕರಣ್​’ 8ನೇ ಸೀಸನ್​ಗೆ ಸಕಲ ಸಿದ್ಧತೆ ನಡೆಯುತ್ತಿದೆ. ಈ ಬಾರಿ ‘ರಾಕಿಂಗ್​ ಸ್ಟಾರ್​’ ಯಶ್ ಹಾಗೂ ‘ಡಿವೈನ್​ ಸ್ಟಾರ್​’ ರಿಷಬ್​ ಶೆಟ್ಟಿ (Rishab Shetty) ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ‘ಬಾಲಿವುಡ್​ ಹಂಗಾಮ’ ವರದಿ ಮಾಡಿದೆ.

‘ಕಾಫಿ ವಿತ್​ ಕರಣ್​’ ಕಾರ್ಯಕ್ರಮದ ಈವರೆಗಿನ ಸೀಸನ್​ಗಳಲ್ಲಿ ಬಾಲಿವುಡ್​ ಸೆಲೆಬ್ರಿಟಿಗಳಿಗೆ ಮಣೆ ಹಾಕಿದ್ದೇ ಹೆಚ್ಚು. ಆದರೆ ಇತ್ತೀಚಿನ ವರ್ಷಗಳಲ್ಲಿ ದಕ್ಷಿಣ ಭಾರತದ ನಟ-ನಟಿಯರು ಕೂಡ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿರುವುದರಿಂದ ಕರಣ್​ ಜೋಹರ್ ಅವರು ಸೌತ್​ ಸ್ಟಾರ್​ಗಳ ಕಡೆಗೂ ಗಮನ ಹರಿಸಲು ಆರಂಭಿಸಿದ್ದಾರೆ. 8ನೇ ಸೀಸನ್​ನಲ್ಲಿ ಯಶ್​, ರಿಷಬ್​ ಶೆಟ್ಟಿ ಹಾಗೂ ಅಲ್ಲು ಅರ್ಜುನ್​ ಅವರು ಪತ್ನಿ ಸಮೇತರಾಗಿ ಈ ಶೋನಲ್ಲಿ ಹಾಜರಿ ಹಾಕಲಿದ್ದಾರೆ ಎಂದು ಸುದ್ದಿ ಪ್ರಕಟ ಆಗಿದೆ. ಈ ಬಗ್ಗೆ ಕರಣ್​ ಜೋಹರ್​ ಅವರ ಕಡೆಯಿಂದ ಯಾವುದೇ ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ. ಯಶ್​, ರಿಷಬ್​ ಶೆಟ್ಟಿ, ಅಲ್ಲು ಅರ್ಜುನ್​ ಕೂಡ ಸುದ್ದಿ ಬಿಟ್ಟುಕೊಟ್ಟಿಲ್ಲ. ಸದ್ಯಕ್ಕೆ ಇದು ಅಂತೆ-ಕಂತೆ ಹಂತದಲ್ಲಿದೆ ಅಷ್ಟೇ.

ಇದನ್ನೂ ಓದಿ: ನೆಪೋಟಿಸಂ ಅಂದ್ರೆ ನೆನಪಾಗೋದೇ ಕರಣ್​ ಜೋಹರ್​

ಇದನ್ನೂ ಓದಿ
Image
Nayanthara: ಸಮಂತಾ ಎದುರು ನಯನತಾರಾಗೆ ಅವಮಾನ ಮಾಡಿದ ಕರಣ್​ ಜೋಹರ್​; ಸಿಡಿದೆದ್ದ ಫ್ಯಾನ್ಸ್​
Image
Alia Bhatt: ಪ್ರೆಗ್ನೆಂಟ್​ ಆಗಿದ್ದು ಆಲಿಯಾ ಭಟ್​, ಆದರೆ ಸುದ್ದಿ ಕೇಳಿ ಕಣ್ಣೀರು ಹಾಕಿದ್ದು ಕರಣ್​ ಜೋಹರ್​
Image
‘ಬಾಡಿಗಾರ್ಡ್ಸ್​ ಇಲ್ಲದೇ ಬನ್ನಿ’​ ಎಂದು ರಶ್ಮಿಕಾಗೆ ಕರಣ್​ ಜೋಹರ್​ ಆಹ್ವಾನ: ನಂತರ ಏನಾಯ್ತು?
Image
‘ಇಂಥ ಕೆಲಸ ಮಾಡ್ಬೇಡಿ’: ಎಲ್ಲರ ಎದುರು ಕರಣ್​ ಜೋಹರ್​ಗೆ ಅನಿಲ್​ ಕಪೂರ್ ವಾರ್ನಿಂಗ್​; ವಿಡಿಯೋ ವೈರಲ್​​

ಕನ್ನಡದ ಸಿನಿಮಾಗಳು ಜಾಗತಿಕ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾ ಮೂಲಕ ಯಶ್​ ಅವರು ಪ್ಯಾನ್​ ಇಂಡಿಯಾ ಸ್ಟಾರ್​ ಆಗಿ ಮಿಂಚಿದ್ದಾರೆ. ‘ಕಾಂತಾರ’ ಸಿನಿಮಾದಿಂದ ರಿಷಬ್​ ಶೆಟ್ಟಿ ಕೂಡ ದೇಶಾದ್ಯಂತ ಖ್ಯಾತಿ ಗಳಿಸಿದ್ದಾರೆ. ಅವರನ್ನು ಅನೇಕರು ತಮ್ಮ ಕಾರ್ಯಕ್ರಮಗಳಿಗೆ ಆಹ್ವಾನಿಸುತ್ತಿದ್ದಾರೆ. ಒಂದು ವೇಳೆ ಈ ಸ್ಟಾರ್​ ನಟರು ‘ಕಾಫಿ ವಿತ್​ ಕರಣ್​’ ಶೋನಲ್ಲಿ ಭಾಗಿಯಾದರೆ ಅಲ್ಲಿ ಯಾವೆಲ್ಲ ವಿಚಾರಗಳ ಬಗ್ಗೆ ಚರ್ಚೆ ಆಗಬಹುದು ಎಂಬ ಕೌತುಕ ಮೂಡಿದೆ.

ಇದನ್ನೂ ಓದಿ: Karan Johar: ಐಡಿ ಕಾರ್ಡ್​ ತೋರಿಸದೇ ಏರ್​ಪೋರ್ಟ್​ ಒಳಗೆ ನುಗ್ಗಲು ಯತ್ನಿಸಿದ ಕರಣ್​ ಜೋಹರ್​; ವಿಡಿಯೋ ವೈರಲ್​

‘ಕಾಫಿ ವಿತ್​ ಕರಣ್​’ ಕಾರ್ಯಕ್ರಮದ ಜೊತೆ ಒಂದಷ್ಟು ವಿವಾದಗಳು ಕೂಡ ಅಂಟಿಕೊಂಡಿವೆ. ಇದರಲ್ಲಿ ಬರೀ ವಿವಾದಾತ್ಮಕ ಪ್ರಶ್ನೆ ಕೇಳಲಾಗುತ್ತದೆ ಹಾಗೂ ಲೈಂಗಿಕತೆ ಬಗ್ಗೆಯೇ ಹೆಚ್ಚು ಚರ್ಚೆ ಆಗುತ್ತದೆ ಎಂಬ ಕಳಂಕ ಇದೆ. ಹಾಗಾಗಿ ಕೆಲವು ಸೆಲೆಬ್ರಿಟಿಗಳು ಈ ಶೋಗೆ ಬರಲು ಹಿಂದೇಟು ಹಾಕಿದ್ದು ಕೂಡ ಉಂಟು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!