AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡನ ಅಶ್ಲೀಲ ಸಿನಿಮಾ ಕೇಸ್ ಬಯಲಾದ ಬಳಿಕ ರಿಯಾಲಿಟಿ ಶೋಗೆ ಕೈ ಎತ್ತಿದ ಶಿಲ್ಪಾ ಶೆಟ್ಟಿ

ಜನಪ್ರಿಯ ‘ಸೂಪರ್​ ಡ್ಯಾನ್ಸರ್​ 4’ ರಿಯಾಲಿಟಿ ಶೋಗೆ ಜಡ್ಜ್​ ಆಗಿ ಶಿಲ್ಪಾ ಶೆಟ್ಟಿ ಕೆಲಸ ಮಾಡುತ್ತಿದ್ದರು. ಆದರೆ ಪತಿ ರಾಜ್​ ಕುಂದ್ರಾ ಅಶ್ಲೀಲ ಸಿನಿಮಾ ಕೇಸ್​ನಲ್ಲಿ ಸಿಕ್ಕಿಹಾಕಿಕೊಂಡ ಬಳಿಕ ಶಿಲ್ಪಾ ಶೆಟ್ಟಿ ಈ ರಿಯಾಲಿಟಿ ಶೋ ಸೆಟ್​ಗೆ ಕಾಲಿಟ್ಟಿಲ್ಲ.

ಗಂಡನ ಅಶ್ಲೀಲ ಸಿನಿಮಾ ಕೇಸ್ ಬಯಲಾದ ಬಳಿಕ ರಿಯಾಲಿಟಿ ಶೋಗೆ ಕೈ ಎತ್ತಿದ ಶಿಲ್ಪಾ ಶೆಟ್ಟಿ
ಶಿಲ್ಪಾ ಶೆಟ್ಟಿ
TV9 Web
| Edited By: |

Updated on: Jul 27, 2021 | 4:25 PM

Share

ನಟಿ ಶಿಲ್ಪಾ ಶೆಟ್ಟಿ (Shilpa Shetty) ಅವರಿಗೆ ಕಷ್ಟ ಕಾಲ ಶುರುವಾಗಿದೆ. ಇಷ್ಟು ದಿನ ತಲೆ ಎತ್ತಿಕೊಂಡು ಜೀವನ ನಡೆಸುತ್ತಿದ್ದ ಅವರು ಈಗ ಸಮಾಜದಲ್ಲಿ ತೀವ್ರ ಮುಜುಗರ ಎದುರಿಸುವಂತಾಗಿದೆ. ಅವರ ಪತಿ, ಉದ್ಯಮಿ ರಾಜ್​ ಕುಂದ್ರಾ (Raj Kundra) ಅಶ್ಲೀಲ ಸಿನಿಮಾ ನಿರ್ಮಾಣದ ಕೇಸ್​ನಲ್ಲಿ ಪ್ರಮುಖ ಆರೋಪಿ ಆಗಿದ್ದಾರೆ. ರಾಜ್​ ಕುಂದ್ರಾ ಪೊಲೀಸರ ಅತಿಥಿ ಆದಾಗಿನಿಂದಲೂ ಶಿಲ್ಪಾ ಶೆಟ್ಟಿಯ ದಿನಚರಿ ಬುಡಮೇಲಾಗಿದೆ. ಇಷ್ಟು ದಿನ ಆರಾಮಾಗಿ ನಡೆದುಕೊಂಡು ಬರುತ್ತಿದ್ದ ಅವರ ಕೆಲಸಗಳಿಗೆಲ್ಲ ಬ್ರೇಕ್​ ಬಿದ್ದಿದೆ. ‘ಸೂಪರ್​ ಡ್ಯಾನ್ಸರ್​ 4’ ರಿಯಾಲಿಟಿ ಶೋನಿಂದ ಅವರು ಕಾಣೆ ಆಗಿಬಿಟ್ಟಿದ್ದಾರೆ. 

ಸೋನಿ ಟಿವಿಯ ಜನಪ್ರಿಯ ‘ಸೂಪರ್​ ಡ್ಯಾನ್ಸರ್​ 4’ ರಿಯಾಲಿಟಿ ಶೋಗೆ ದೊಡ್ಡ ಪ್ರೇಕ್ಷಕವರ್ಗ ಇದೆ. ಆ ಕಾರ್ಯಕ್ರಮದಲ್ಲಿ ಜಡ್ಜ್​ ಆಗಿ ಶಿಲ್ಪಾ ಶೆಟ್ಟಿ ಕೆಲಸ ಮಾಡುತ್ತಿದ್ದರು. ಅವರು ತುಂಬ ಲವಲವಿಕೆಯಿಂದ ನಿರ್ಣಾಯಕರಾಗಿ ಕೆಲಸ ಮಾಡುತ್ತಿದ್ದನ್ನು ನೋಡಲು ಪ್ರೇಕ್ಷಕರು ಇಷ್ಟಪಡುತ್ತಿದ್ದರು. ಆದರೆ ಪತಿ ರಾಜ್​ ಕುಂದ್ರಾ ಅಶ್ಲೀಲ ಸಿನಿಮಾ ಕೇಸ್​ನಲ್ಲಿ ಸಿಕ್ಕಿಹಾಕಿಕೊಂಡ ನಂತರದಿಂದ ಶಿಲ್ಪಾ ಶೆಟ್ಟಿ ‘ಸೂಪರ್​ ಡ್ಯಾನ್ಸರ್​ 4’ ರಿಯಾಲಿಟಿ ಶೋ ಸೆಟ್​ಗೆ ಕಾಲಿಟ್ಟಿಲ್ಲ.

ರಾಜ್​ ಕುಂದ್ರಾ ಕೇಸ್​ ದಿನದಿಂದ ದಿನಕ್ಕೆ ಜಟಿಲ ಆಗುತ್ತಿದೆ. ಶಿಲ್ಪಾ ಶೆಟ್ಟಿ ಕೂಡ ಹಲವು ಬಾರಿ ಪೊಲೀಸರ ತನಿಖೆಗೆ ಒಳಪಡಬೇಕಾಗುತ್ತಿದೆ. ಅವರ ಮನೆ ಮೇಲೆ ಇತ್ತೀಚೆಗೆ ಪೊಲೀಸರು ದಾಳಿ ಮಾಡಿದ್ದರು. ಈ ಎಲ್ಲ ಘಟನೆಗಳಿಂದಾಗಿ ಶಿಲ್ಪಾ ಶೆಟ್ಟಿ ಮನೆ ಬಿಟ್ಟು ಹೊರಬರುತ್ತಿಲ್ಲ. ‘ಸೂಪರ್​ ಡ್ಯಾನ್ಸರ್​ 4’ ಕಾರ್ಯಕ್ರಮದ ಆಯೋಜಕರು ಹಲವು ಬಾರಿ ಸಂಪರ್ಕಿಸುವ ಪ್ರಯತ್ನ ಮಾಡಿದರೂ ಕೂಡ ಶಿಲ್ಪಾ ಶೆಟ್ಟಿ ಕಡೆಯಿಂದ ಪ್ರತಿಕ್ರಿಯೆ ಸಿಕ್ಕಿಲ್ಲ. ಹಾಗಾಗಿ ಜಡ್ಜ್​ ಸ್ಥಾನಕ್ಕೆ ಶಿಲ್ಪಾ ಬದಲು ಬೇರೆ ಸೆಲೆಬ್ರಿಟಿಗಳನ್ನು ಕರೆತರುವುದು ಅನಿವಾರ್ಯ ಆಗಿದೆ.

ಕಳೆದ ವಾರ ನಟಿ ಕರೀಷ್ಮಾ ಕಪೂರ್​ ಅವರು ಜಡ್ಜ್​ ಆಗಿ ಬಂದಿದ್ದರು. ಈ ವಾರ ಸ್ಟಾರ್​ ದಂಪತಿಗಳಾದ ರಿತೇಶ್​ ದೇಶಮುಖ್​ ಮತ್ತು ಜೆನಿಲಿಯಾ ಡಿಸೋಜಾ ಅವರು ಜಡ್ಜ್​ ಸ್ಥಾನ ತುಂಬಲಿದ್ದಾರೆ ಎಂಬ ಮಾಹಿತಿ ಕೇಳಿಬರುತ್ತಿದೆ.

ಜು.27ರವರೆಗೆ ನ್ಯಾಯಾಲಯವು ರಾಜ್​ ಕುಂದ್ರಾ ಅವರನ್ನು ಪೊಲೀಸ್​ ಕಸ್ಟಡಿಗೆ ಒಪ್ಪಿಸಿತ್ತು. ಮಂಗಳವಾರ (ಜು.27) ವಿಚಾರಣೆ ನಡೆಸಿ, ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಲ್ಲಿ ಇರಿಸಲು ಆದೇಶಿಸಲಾಗಿದೆ. ಜಾಮೀನು ಪಡೆಯಲು ಅವರು ಮಾಡುತ್ತಿರುವ ಎಲ್ಲ ಪ್ರಯತ್ನಗಳು ವಿಫಲ ಆಗುತ್ತಿವೆ.

ಇದನ್ನೂ ಓದಿ:

‘ರಾಜ್ ಕುಂದ್ರಾ ರಾತ್ರಿಯ ಯೋಗ ಪೋಸ್​ ಕಲಿಸುತ್ತಾರೆ’; ಶಿಲ್ಪಾ ಶೆಟ್ಟಿ ತಂಗಿಗೆ ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್​

‘ನನ್ನ ಗಂಡ ನಿರಪರಾಧಿ; ಅಶ್ಲೀಲ ಸಿನಿಮಾ ಮಾಡಿಲ್ಲ’; ರಾಜ್​ ಕುಂದ್ರಾ ಪರ ಶಿಲ್ಪಾ ಶೆಟ್ಟಿ ಬ್ಯಾಟಿಂಗ್

Follow Us
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ಮೋದಿ ನೇತೃತ್ವದಲ್ಲಿ ಮಹತ್ವದ ಸಭೆ:ನಾಗರಿಕರ ಹಿತರಕ್ಷಣೆ ಮೊದಲ ಆದ್ಯತೆ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ದಾವಣಗೆರೆ ದಕ್ಷಿಣ ಉಪಚುನಾವಣೆ: ಆರಂಭದಲ್ಲೇ ಕಾಂಗ್ರೆಸ್​​​ಗೆ ಮರ್ಮಾಘಾತ
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
ಹಬ್ಬಕ್ಕೆ ಹೋಗಿದ್ದ ಜನ ಬೆಂಗಳೂರಿಗೆ ವಾಪಸ್: ನೆಲಮಂಗಲ ಬಳಿ ಫುಲ್ ಟ್ರಾಫಿಕ್
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
3ನೇ ವ್ಯಕ್ತಿಯ ಹಸ್ತಕ್ಷೇಪದ ಬಗ್ಗೆ ಉಮೇಶ್‌ ಮೇಟಿ ತಂಗಿ ಮಹಾದೇವಿ ಹೇಳಿದ್ದೇನು
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ಸಲ್ಮಾನ್ ಖಾನ್ ಮನೆ ಎದುರು ಅಭಿಮಾನಿಗಳ ದಂಡು: ಶುಭ ಕೋರಿದ ಸಲೀಂ ಖಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ದಾವಣಗೆರೆ ಬೈ ಎಲೆಕ್ಷನ್: ಕಾಂಗ್ರೆಸ್​​ ವಿರುದ್ಧವೇ ತೊಡೆತಟ್ಟಿದ ಪೈಲ್ವಾನ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾದ ಖ್ಯಾತ ನಟ ಅನಿರುದ್ಧ ಜತ್ಕರ್
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
Video: ಹಿಮಾಚಲ ಪ್ರದೇಶದಲ್ಲಿ ಭಾರಿ ಮಳೆ, ಭೂಕುಸಿತ
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?
ಲ್ಯಾಂಬೋರ್ಗಿನಿ ಡ್ರಿಫ್ಟಿಂಗ್: ಹುಚ್ಚಾಟ ಮೆರೆದಿದ್ದು ಮುತ್ತಪ್ಪ ರೈ ಪುತ್ರ?