AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡನ ಅಶ್ಲೀಲ ಸಿನಿಮಾ ಕೇಸ್ ಬಯಲಾದ ಬಳಿಕ ರಿಯಾಲಿಟಿ ಶೋಗೆ ಕೈ ಎತ್ತಿದ ಶಿಲ್ಪಾ ಶೆಟ್ಟಿ

ಜನಪ್ರಿಯ ‘ಸೂಪರ್​ ಡ್ಯಾನ್ಸರ್​ 4’ ರಿಯಾಲಿಟಿ ಶೋಗೆ ಜಡ್ಜ್​ ಆಗಿ ಶಿಲ್ಪಾ ಶೆಟ್ಟಿ ಕೆಲಸ ಮಾಡುತ್ತಿದ್ದರು. ಆದರೆ ಪತಿ ರಾಜ್​ ಕುಂದ್ರಾ ಅಶ್ಲೀಲ ಸಿನಿಮಾ ಕೇಸ್​ನಲ್ಲಿ ಸಿಕ್ಕಿಹಾಕಿಕೊಂಡ ಬಳಿಕ ಶಿಲ್ಪಾ ಶೆಟ್ಟಿ ಈ ರಿಯಾಲಿಟಿ ಶೋ ಸೆಟ್​ಗೆ ಕಾಲಿಟ್ಟಿಲ್ಲ.

ಗಂಡನ ಅಶ್ಲೀಲ ಸಿನಿಮಾ ಕೇಸ್ ಬಯಲಾದ ಬಳಿಕ ರಿಯಾಲಿಟಿ ಶೋಗೆ ಕೈ ಎತ್ತಿದ ಶಿಲ್ಪಾ ಶೆಟ್ಟಿ
ಶಿಲ್ಪಾ ಶೆಟ್ಟಿ
Follow us
TV9 Web
| Updated By: ಮದನ್​ ಕುಮಾರ್​

Updated on: Jul 27, 2021 | 4:25 PM

ನಟಿ ಶಿಲ್ಪಾ ಶೆಟ್ಟಿ (Shilpa Shetty) ಅವರಿಗೆ ಕಷ್ಟ ಕಾಲ ಶುರುವಾಗಿದೆ. ಇಷ್ಟು ದಿನ ತಲೆ ಎತ್ತಿಕೊಂಡು ಜೀವನ ನಡೆಸುತ್ತಿದ್ದ ಅವರು ಈಗ ಸಮಾಜದಲ್ಲಿ ತೀವ್ರ ಮುಜುಗರ ಎದುರಿಸುವಂತಾಗಿದೆ. ಅವರ ಪತಿ, ಉದ್ಯಮಿ ರಾಜ್​ ಕುಂದ್ರಾ (Raj Kundra) ಅಶ್ಲೀಲ ಸಿನಿಮಾ ನಿರ್ಮಾಣದ ಕೇಸ್​ನಲ್ಲಿ ಪ್ರಮುಖ ಆರೋಪಿ ಆಗಿದ್ದಾರೆ. ರಾಜ್​ ಕುಂದ್ರಾ ಪೊಲೀಸರ ಅತಿಥಿ ಆದಾಗಿನಿಂದಲೂ ಶಿಲ್ಪಾ ಶೆಟ್ಟಿಯ ದಿನಚರಿ ಬುಡಮೇಲಾಗಿದೆ. ಇಷ್ಟು ದಿನ ಆರಾಮಾಗಿ ನಡೆದುಕೊಂಡು ಬರುತ್ತಿದ್ದ ಅವರ ಕೆಲಸಗಳಿಗೆಲ್ಲ ಬ್ರೇಕ್​ ಬಿದ್ದಿದೆ. ‘ಸೂಪರ್​ ಡ್ಯಾನ್ಸರ್​ 4’ ರಿಯಾಲಿಟಿ ಶೋನಿಂದ ಅವರು ಕಾಣೆ ಆಗಿಬಿಟ್ಟಿದ್ದಾರೆ. 

ಸೋನಿ ಟಿವಿಯ ಜನಪ್ರಿಯ ‘ಸೂಪರ್​ ಡ್ಯಾನ್ಸರ್​ 4’ ರಿಯಾಲಿಟಿ ಶೋಗೆ ದೊಡ್ಡ ಪ್ರೇಕ್ಷಕವರ್ಗ ಇದೆ. ಆ ಕಾರ್ಯಕ್ರಮದಲ್ಲಿ ಜಡ್ಜ್​ ಆಗಿ ಶಿಲ್ಪಾ ಶೆಟ್ಟಿ ಕೆಲಸ ಮಾಡುತ್ತಿದ್ದರು. ಅವರು ತುಂಬ ಲವಲವಿಕೆಯಿಂದ ನಿರ್ಣಾಯಕರಾಗಿ ಕೆಲಸ ಮಾಡುತ್ತಿದ್ದನ್ನು ನೋಡಲು ಪ್ರೇಕ್ಷಕರು ಇಷ್ಟಪಡುತ್ತಿದ್ದರು. ಆದರೆ ಪತಿ ರಾಜ್​ ಕುಂದ್ರಾ ಅಶ್ಲೀಲ ಸಿನಿಮಾ ಕೇಸ್​ನಲ್ಲಿ ಸಿಕ್ಕಿಹಾಕಿಕೊಂಡ ನಂತರದಿಂದ ಶಿಲ್ಪಾ ಶೆಟ್ಟಿ ‘ಸೂಪರ್​ ಡ್ಯಾನ್ಸರ್​ 4’ ರಿಯಾಲಿಟಿ ಶೋ ಸೆಟ್​ಗೆ ಕಾಲಿಟ್ಟಿಲ್ಲ.

ರಾಜ್​ ಕುಂದ್ರಾ ಕೇಸ್​ ದಿನದಿಂದ ದಿನಕ್ಕೆ ಜಟಿಲ ಆಗುತ್ತಿದೆ. ಶಿಲ್ಪಾ ಶೆಟ್ಟಿ ಕೂಡ ಹಲವು ಬಾರಿ ಪೊಲೀಸರ ತನಿಖೆಗೆ ಒಳಪಡಬೇಕಾಗುತ್ತಿದೆ. ಅವರ ಮನೆ ಮೇಲೆ ಇತ್ತೀಚೆಗೆ ಪೊಲೀಸರು ದಾಳಿ ಮಾಡಿದ್ದರು. ಈ ಎಲ್ಲ ಘಟನೆಗಳಿಂದಾಗಿ ಶಿಲ್ಪಾ ಶೆಟ್ಟಿ ಮನೆ ಬಿಟ್ಟು ಹೊರಬರುತ್ತಿಲ್ಲ. ‘ಸೂಪರ್​ ಡ್ಯಾನ್ಸರ್​ 4’ ಕಾರ್ಯಕ್ರಮದ ಆಯೋಜಕರು ಹಲವು ಬಾರಿ ಸಂಪರ್ಕಿಸುವ ಪ್ರಯತ್ನ ಮಾಡಿದರೂ ಕೂಡ ಶಿಲ್ಪಾ ಶೆಟ್ಟಿ ಕಡೆಯಿಂದ ಪ್ರತಿಕ್ರಿಯೆ ಸಿಕ್ಕಿಲ್ಲ. ಹಾಗಾಗಿ ಜಡ್ಜ್​ ಸ್ಥಾನಕ್ಕೆ ಶಿಲ್ಪಾ ಬದಲು ಬೇರೆ ಸೆಲೆಬ್ರಿಟಿಗಳನ್ನು ಕರೆತರುವುದು ಅನಿವಾರ್ಯ ಆಗಿದೆ.

ಕಳೆದ ವಾರ ನಟಿ ಕರೀಷ್ಮಾ ಕಪೂರ್​ ಅವರು ಜಡ್ಜ್​ ಆಗಿ ಬಂದಿದ್ದರು. ಈ ವಾರ ಸ್ಟಾರ್​ ದಂಪತಿಗಳಾದ ರಿತೇಶ್​ ದೇಶಮುಖ್​ ಮತ್ತು ಜೆನಿಲಿಯಾ ಡಿಸೋಜಾ ಅವರು ಜಡ್ಜ್​ ಸ್ಥಾನ ತುಂಬಲಿದ್ದಾರೆ ಎಂಬ ಮಾಹಿತಿ ಕೇಳಿಬರುತ್ತಿದೆ.

ಜು.27ರವರೆಗೆ ನ್ಯಾಯಾಲಯವು ರಾಜ್​ ಕುಂದ್ರಾ ಅವರನ್ನು ಪೊಲೀಸ್​ ಕಸ್ಟಡಿಗೆ ಒಪ್ಪಿಸಿತ್ತು. ಮಂಗಳವಾರ (ಜು.27) ವಿಚಾರಣೆ ನಡೆಸಿ, ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಲ್ಲಿ ಇರಿಸಲು ಆದೇಶಿಸಲಾಗಿದೆ. ಜಾಮೀನು ಪಡೆಯಲು ಅವರು ಮಾಡುತ್ತಿರುವ ಎಲ್ಲ ಪ್ರಯತ್ನಗಳು ವಿಫಲ ಆಗುತ್ತಿವೆ.

ಇದನ್ನೂ ಓದಿ:

‘ರಾಜ್ ಕುಂದ್ರಾ ರಾತ್ರಿಯ ಯೋಗ ಪೋಸ್​ ಕಲಿಸುತ್ತಾರೆ’; ಶಿಲ್ಪಾ ಶೆಟ್ಟಿ ತಂಗಿಗೆ ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್​

‘ನನ್ನ ಗಂಡ ನಿರಪರಾಧಿ; ಅಶ್ಲೀಲ ಸಿನಿಮಾ ಮಾಡಿಲ್ಲ’; ರಾಜ್​ ಕುಂದ್ರಾ ಪರ ಶಿಲ್ಪಾ ಶೆಟ್ಟಿ ಬ್ಯಾಟಿಂಗ್

30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
30 ವರ್ಷಗಳ ಬಳಿಕ ಭಾರತದ ಪ್ರಧಾನಿಯಿಂದ ಘಾನಾ ಭೇಟಿ;  ಮೋದಿಗೆ ಆತ್ಮೀಯ ಸ್ವಾಗತ
ಗ್ರಾಮೀಣ ಪ್ರದೇಶಗಳ ಸರ್ಕಾರೀ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
ಗ್ರಾಮೀಣ ಪ್ರದೇಶಗಳ ಸರ್ಕಾರೀ ಶಾಲೆಗಳಿಗೆ ಬೇಕಿದೆ ಕಾಯಕಲ್ಪ
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ಸರ್ಕಾರದ ಕೆಲಸಗಳನ್ನು ಮಾಧ್ಯಮಗಳಿಗೆ ತೋರಿಸುತ್ತೇನೆ ಎಂದ ಶಿವಕುಮಾರ್
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
ನಾಳೆಯ ಅಮರನಾಥ ಯಾತ್ರೆಗೆ ತೆರಳಲು ಬಂದ ಭಕ್ತರಿಗೆ ಹೂವಿನ ಹಾರ ಹಾಕಿ ಸ್ವಾಗತ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಸಂಪುಟ ಸಭೆ ನಂತರ ಹೆಚ್​ಕೆ ಪಾಟೀಲ್ ಬದಲು ಸಿದ್ದರಾಮಯ್ಯರಿಂದ ಸುದ್ದಿಗೋಷ್ಠಿ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಕಂಡಕ್ಟರ್ ಟಿಕೆಟ್ ಹಿಂದೆ ಚಿಲ್ಲರೆ ಹಣದ ಬಗ್ಗೆ ಬರೆಯದಿರುವುದು ಜಗಳದ ಮೂಲ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಅಧಿಕಾರಾವಧಿಗೆ ಗ್ರಹಣ ಹಿಡಿಯುತ್ತಿರುವುದು ಸಿಎಂಗೆ ಗೊತ್ತಾಗಿದೆ: ಅಶೋಕ
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಗೋಲ್ಡನ್ ಅವರ್ ಯಾವ ಕಾರಣಕ್ಕೂ ಮಿಸ್ ಆಗಬಾರದು: ಡಾ ಮಂಜುನಾಥ್
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ
ಕಾರವಾರ: ರಸ್ತೆ ಇಲ್ಲವೆಂದು ಈ ಗ್ರಾಮದ ಯುವಕರಿಗೆ ಕನ್ಯೆ ಕೊಡ್ತಿಲ್ಲ
ಏಸ್ ಪ್ರೋ, ಭವಿಷ್ಯಕ್ಕೆ ಹಣಕಾಸು ಬಲ: ರಾಘವೇಂದ್ರ ಪ್ರಭು
ಏಸ್ ಪ್ರೋ, ಭವಿಷ್ಯಕ್ಕೆ ಹಣಕಾಸು ಬಲ: ರಾಘವೇಂದ್ರ ಪ್ರಭು