AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಂಡನ ಅಶ್ಲೀಲ ಸಿನಿಮಾ ಕೇಸ್ ಬಯಲಾದ ಬಳಿಕ ರಿಯಾಲಿಟಿ ಶೋಗೆ ಕೈ ಎತ್ತಿದ ಶಿಲ್ಪಾ ಶೆಟ್ಟಿ

ಜನಪ್ರಿಯ ‘ಸೂಪರ್​ ಡ್ಯಾನ್ಸರ್​ 4’ ರಿಯಾಲಿಟಿ ಶೋಗೆ ಜಡ್ಜ್​ ಆಗಿ ಶಿಲ್ಪಾ ಶೆಟ್ಟಿ ಕೆಲಸ ಮಾಡುತ್ತಿದ್ದರು. ಆದರೆ ಪತಿ ರಾಜ್​ ಕುಂದ್ರಾ ಅಶ್ಲೀಲ ಸಿನಿಮಾ ಕೇಸ್​ನಲ್ಲಿ ಸಿಕ್ಕಿಹಾಕಿಕೊಂಡ ಬಳಿಕ ಶಿಲ್ಪಾ ಶೆಟ್ಟಿ ಈ ರಿಯಾಲಿಟಿ ಶೋ ಸೆಟ್​ಗೆ ಕಾಲಿಟ್ಟಿಲ್ಲ.

ಗಂಡನ ಅಶ್ಲೀಲ ಸಿನಿಮಾ ಕೇಸ್ ಬಯಲಾದ ಬಳಿಕ ರಿಯಾಲಿಟಿ ಶೋಗೆ ಕೈ ಎತ್ತಿದ ಶಿಲ್ಪಾ ಶೆಟ್ಟಿ
ಶಿಲ್ಪಾ ಶೆಟ್ಟಿ
TV9 Web
| Edited By: |

Updated on: Jul 27, 2021 | 4:25 PM

Share

ನಟಿ ಶಿಲ್ಪಾ ಶೆಟ್ಟಿ (Shilpa Shetty) ಅವರಿಗೆ ಕಷ್ಟ ಕಾಲ ಶುರುವಾಗಿದೆ. ಇಷ್ಟು ದಿನ ತಲೆ ಎತ್ತಿಕೊಂಡು ಜೀವನ ನಡೆಸುತ್ತಿದ್ದ ಅವರು ಈಗ ಸಮಾಜದಲ್ಲಿ ತೀವ್ರ ಮುಜುಗರ ಎದುರಿಸುವಂತಾಗಿದೆ. ಅವರ ಪತಿ, ಉದ್ಯಮಿ ರಾಜ್​ ಕುಂದ್ರಾ (Raj Kundra) ಅಶ್ಲೀಲ ಸಿನಿಮಾ ನಿರ್ಮಾಣದ ಕೇಸ್​ನಲ್ಲಿ ಪ್ರಮುಖ ಆರೋಪಿ ಆಗಿದ್ದಾರೆ. ರಾಜ್​ ಕುಂದ್ರಾ ಪೊಲೀಸರ ಅತಿಥಿ ಆದಾಗಿನಿಂದಲೂ ಶಿಲ್ಪಾ ಶೆಟ್ಟಿಯ ದಿನಚರಿ ಬುಡಮೇಲಾಗಿದೆ. ಇಷ್ಟು ದಿನ ಆರಾಮಾಗಿ ನಡೆದುಕೊಂಡು ಬರುತ್ತಿದ್ದ ಅವರ ಕೆಲಸಗಳಿಗೆಲ್ಲ ಬ್ರೇಕ್​ ಬಿದ್ದಿದೆ. ‘ಸೂಪರ್​ ಡ್ಯಾನ್ಸರ್​ 4’ ರಿಯಾಲಿಟಿ ಶೋನಿಂದ ಅವರು ಕಾಣೆ ಆಗಿಬಿಟ್ಟಿದ್ದಾರೆ. 

ಸೋನಿ ಟಿವಿಯ ಜನಪ್ರಿಯ ‘ಸೂಪರ್​ ಡ್ಯಾನ್ಸರ್​ 4’ ರಿಯಾಲಿಟಿ ಶೋಗೆ ದೊಡ್ಡ ಪ್ರೇಕ್ಷಕವರ್ಗ ಇದೆ. ಆ ಕಾರ್ಯಕ್ರಮದಲ್ಲಿ ಜಡ್ಜ್​ ಆಗಿ ಶಿಲ್ಪಾ ಶೆಟ್ಟಿ ಕೆಲಸ ಮಾಡುತ್ತಿದ್ದರು. ಅವರು ತುಂಬ ಲವಲವಿಕೆಯಿಂದ ನಿರ್ಣಾಯಕರಾಗಿ ಕೆಲಸ ಮಾಡುತ್ತಿದ್ದನ್ನು ನೋಡಲು ಪ್ರೇಕ್ಷಕರು ಇಷ್ಟಪಡುತ್ತಿದ್ದರು. ಆದರೆ ಪತಿ ರಾಜ್​ ಕುಂದ್ರಾ ಅಶ್ಲೀಲ ಸಿನಿಮಾ ಕೇಸ್​ನಲ್ಲಿ ಸಿಕ್ಕಿಹಾಕಿಕೊಂಡ ನಂತರದಿಂದ ಶಿಲ್ಪಾ ಶೆಟ್ಟಿ ‘ಸೂಪರ್​ ಡ್ಯಾನ್ಸರ್​ 4’ ರಿಯಾಲಿಟಿ ಶೋ ಸೆಟ್​ಗೆ ಕಾಲಿಟ್ಟಿಲ್ಲ.

ರಾಜ್​ ಕುಂದ್ರಾ ಕೇಸ್​ ದಿನದಿಂದ ದಿನಕ್ಕೆ ಜಟಿಲ ಆಗುತ್ತಿದೆ. ಶಿಲ್ಪಾ ಶೆಟ್ಟಿ ಕೂಡ ಹಲವು ಬಾರಿ ಪೊಲೀಸರ ತನಿಖೆಗೆ ಒಳಪಡಬೇಕಾಗುತ್ತಿದೆ. ಅವರ ಮನೆ ಮೇಲೆ ಇತ್ತೀಚೆಗೆ ಪೊಲೀಸರು ದಾಳಿ ಮಾಡಿದ್ದರು. ಈ ಎಲ್ಲ ಘಟನೆಗಳಿಂದಾಗಿ ಶಿಲ್ಪಾ ಶೆಟ್ಟಿ ಮನೆ ಬಿಟ್ಟು ಹೊರಬರುತ್ತಿಲ್ಲ. ‘ಸೂಪರ್​ ಡ್ಯಾನ್ಸರ್​ 4’ ಕಾರ್ಯಕ್ರಮದ ಆಯೋಜಕರು ಹಲವು ಬಾರಿ ಸಂಪರ್ಕಿಸುವ ಪ್ರಯತ್ನ ಮಾಡಿದರೂ ಕೂಡ ಶಿಲ್ಪಾ ಶೆಟ್ಟಿ ಕಡೆಯಿಂದ ಪ್ರತಿಕ್ರಿಯೆ ಸಿಕ್ಕಿಲ್ಲ. ಹಾಗಾಗಿ ಜಡ್ಜ್​ ಸ್ಥಾನಕ್ಕೆ ಶಿಲ್ಪಾ ಬದಲು ಬೇರೆ ಸೆಲೆಬ್ರಿಟಿಗಳನ್ನು ಕರೆತರುವುದು ಅನಿವಾರ್ಯ ಆಗಿದೆ.

ಕಳೆದ ವಾರ ನಟಿ ಕರೀಷ್ಮಾ ಕಪೂರ್​ ಅವರು ಜಡ್ಜ್​ ಆಗಿ ಬಂದಿದ್ದರು. ಈ ವಾರ ಸ್ಟಾರ್​ ದಂಪತಿಗಳಾದ ರಿತೇಶ್​ ದೇಶಮುಖ್​ ಮತ್ತು ಜೆನಿಲಿಯಾ ಡಿಸೋಜಾ ಅವರು ಜಡ್ಜ್​ ಸ್ಥಾನ ತುಂಬಲಿದ್ದಾರೆ ಎಂಬ ಮಾಹಿತಿ ಕೇಳಿಬರುತ್ತಿದೆ.

ಜು.27ರವರೆಗೆ ನ್ಯಾಯಾಲಯವು ರಾಜ್​ ಕುಂದ್ರಾ ಅವರನ್ನು ಪೊಲೀಸ್​ ಕಸ್ಟಡಿಗೆ ಒಪ್ಪಿಸಿತ್ತು. ಮಂಗಳವಾರ (ಜು.27) ವಿಚಾರಣೆ ನಡೆಸಿ, ಅವರನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಲ್ಲಿ ಇರಿಸಲು ಆದೇಶಿಸಲಾಗಿದೆ. ಜಾಮೀನು ಪಡೆಯಲು ಅವರು ಮಾಡುತ್ತಿರುವ ಎಲ್ಲ ಪ್ರಯತ್ನಗಳು ವಿಫಲ ಆಗುತ್ತಿವೆ.

ಇದನ್ನೂ ಓದಿ:

‘ರಾಜ್ ಕುಂದ್ರಾ ರಾತ್ರಿಯ ಯೋಗ ಪೋಸ್​ ಕಲಿಸುತ್ತಾರೆ’; ಶಿಲ್ಪಾ ಶೆಟ್ಟಿ ತಂಗಿಗೆ ನೆಟ್ಟಿಗರಿಂದ ಹಿಗ್ಗಾಮುಗ್ಗಾ ಟ್ರೋಲ್​

‘ನನ್ನ ಗಂಡ ನಿರಪರಾಧಿ; ಅಶ್ಲೀಲ ಸಿನಿಮಾ ಮಾಡಿಲ್ಲ’; ರಾಜ್​ ಕುಂದ್ರಾ ಪರ ಶಿಲ್ಪಾ ಶೆಟ್ಟಿ ಬ್ಯಾಟಿಂಗ್

Follow Us
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!