AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಣ್ಣ ವಯಸ್ಸಲ್ಲೇ ರಿತೂ ಸಿಂಗ್​ಗೆ ಅದೆಂಥಾ ಜವಾಬ್ದಾರಿ; ಓದಿನ ಜೊತೆ ಮನೆ ನಡೆಸ್ತಾಳೆ

ರಿತೂ ಸಿಂಗ್, 'ಸೀತಾ ರಾಮ' ಧಾರಾವಾಹಿಯಲ್ಲಿ ಸಿಹಿ ಪಾತ್ರದ ಮೂಲಕ ಜನಪ್ರಿಯಳಾಗಿದ್ದಾಳೆ. 'ಡ್ರಾಮಾ ಜೂನಿಯರ್ಸ್'ನಿಂದ ತಮ್ಮ ವೃತ್ತಿಜೀವನ ಆರಂಭಿಸಿದ ಅವಳು, ಸಣ್ಣ ವಯಸ್ಸಿನಲ್ಲೇ ನಟನೆಯ ಜೊತೆಗೆ ಕುಟುಂಬದ ಜವಾಬ್ದಾರಿಯನ್ನೂ ನಿಭಾಯಿಸುತ್ತಿದ್ದಾಳೆ.

ಸಣ್ಣ ವಯಸ್ಸಲ್ಲೇ ರಿತೂ ಸಿಂಗ್​ಗೆ ಅದೆಂಥಾ ಜವಾಬ್ದಾರಿ; ಓದಿನ ಜೊತೆ ಮನೆ ನಡೆಸ್ತಾಳೆ
ರಿತೂ ಸಿಂಗ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 27, 2024 | 6:30 AM

Share

ರಿತೂ ಸಿಂಗ್ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಸೀತಾ ರಾಮ’ ಧಾರಾವಾಹಿಯಲ್ಲಿ ಸಿಹಿ ಪಾತ್ರ ಮಾಡಿ ಅದರ ಮೂಲಕ ಗಮನ ಸೆಳೆಯುತ್ತಿದ್ದಾಳೆ. ಅವಳು ಸಣ್ಣ ವಯಸ್ಸಿನಲ್ಲೇ ಸಾಕಷ್ಟು ಪ್ರಬುದ್ಧವಾಗಿ ನಟಿಸುತ್ತಿದ್ದಾಳೆ. ಅವಳ ನಟನೆಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಸಿಕ್ಕಿದೆ. ಆಕೆ ಎಲ್ಲರಿಗೂ ಮಾದರಿ. ರಿತೂ ಸಿಂಗ್ ಬೇರೆ ಕಡೆಯಿಂದ ಬಂದು ಕರ್ನಾಟಕದಲ್ಲಿ ನೆಲೆ ಕಂಡುಕೊಂಡವಳು. ಅವಳು ಮಾಡಿದ ಸಾಧನೆ ತುಂಬಾ ದೊಡ್ಡದು. ಏನು ಇಲ್ಲದೆ ಸಾಧನೆ ಮಾಡಿದ ಅವಳ ಹಿನ್ನೆಲೆ ಬಗ್ಗೆ ಇಲ್ಲಿದೆ ವಿವರ.

‘ಸಿಹಿ ಮೊದಲು ಬೆಂಗಳೂರಿಗೆ ಬಂದಾಗ ಮನೆ ಇರಲಿಲ್ಲ, ಕೈಯಲ್ಲಿ ದುಡ್ಡು ಇರಲಿಲ್ಲ. ಜೀವನ ಹೇಗಪ್ಪ ಎನ್ನುವ ಪ್ರಶ್ನೆ ಎದುರಾಗುತ್ತಾರೆ. ಮೆಜೆಸ್ಟಿಕ್​ನಲ್ಲಿ ಕುಟುಂಬದ ಜೊತೆ ಸುತ್ತಾಡುತ್ತಾರೆ. ಈ ಮನೆಯಲ್ಲಿ ಬೆಳಕು ಬರುತ್ತದೆ. ಅದುವೇ ಸಿಹಿ’ ಎಂದು ಅಕುಲ್ ಬಾಲಾಜಿ ಅವರು ರಿತೂ ಸಿಂಗ್ ಬಗ್ಗೆ ಹೇಳಿದ್ದರು.

‘ರಿತೂಗೆ ಅವಕಾಶ ಸಿಕ್ಕಮೇಲೆ ಅವರ ಜೀವನ ಬದಲಾಗುತ್ತದೆ. ಅವರಿಗೆ ಧೈರ್ಯ ಸಿಗುತ್ತದೆ. ಅವಳೇ ಸಿಹಿ. ಈ ಧೈರ್ಯ ಮನೆ ನೋಡಿಕೊಳ್ಳುತ್ತದೆ. ನಾನು ಹೃದಯದಿಂದ ಹೇಳುತ್ತಿದ್ದೇನೆ. ಇವರು ಆ ಮನೆಯ ತಾಯಿ’ ಎಂದು ಹೇಳುತ್ತಿದ್ದಂತೆ ಸಿಹಿ ಹಾಗೂ ಸಿಹಿ ತಾಯಿ ಇಬ್ಬರೂ ಕಣ್ಣೀರು ಹಾಕಲು ಆರಂಭಿಸಿದರು.

‘ಡ್ರಾಮಾ ಜೂನಿಯರ್ಸ್’ ಮೂಲಕ ಕಿರುತೆರೆಗೆ ಪಾದಾರ್ಪಣೆ ಮಾಡಿದಳು ಸಿಹಿ. ಅವಳ ನಟನೆಯನ್ನು ಎಲ್ಲರೂ ಮೆಚ್ಚಿಕೊಂಡರು. ‘ಡ್ರಾಮಾ ಜೂನಿಯರ್ಸ್​’ ನಟನೆ ನೋಡಿ ಅವರಿಗೆ ‘ಸೀತಾ ರಾಮ’ ಧಾರಾವಾಹಿಯಲ್ಲಿ ಅವಕಾಶ ಸಿಕ್ಕಿತ್ತು. ಈ ಅವಕಾಶವನ್ನು ಅವರು ಸರಿಯಾಗಿ ಬಳಕೆ ಮಾಡಿಕೊಂಡಳು. ಇದರಿಂದ ಅವರ ಖ್ಯಾತಿ ಹೆಚ್ಚಾಗಿದೆ. ಈಗ ಸಿಹಿ ಎಂದೇ ಅವಳು ಫೇಮಸ್ ಆಗಿದ್ದಾಳೆ ಎನ್ನಬಹುದು.

ಇದನ್ನೂ ಓದಿ: ಐಫಾ ವೇದಿಕೆಯಲ್ಲಿ ವಿಕ್ಕಿ ಕೌಶಲ್ ಜತೆ ಅಕುಲ್ ಬಾಲಾಜಿ ‘ತೋಬಾ ತೋಬಾ’ ಡ್ಯಾನ್ಸ್

ಸದ್ಯ ಸಿಹಿ ಪಾತ್ರವೇನಾದರೂ ಕೊನೆ ಆಯಿತೇ ಎನ್ನುವ ಪ್ರಶ್ನೆಯೂ ಮೂಡುವಂತೆ ಆಗಿದೆ. ಸಿಹಿಗೆ ಅಪಘಾತ ಆದ ರೀತಿಯಲ್ಲಿ ತೋರಿಸಲಾಗಿದೆ. ಮುಂದೇನು ಎನ್ನುವ ಪ್ರಶ್ನೆ ಮೂಡುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?