AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಿಣಿರಾಮ’ ಸೀರಿಯಲ್​ ನಟ ರಿತ್ವಿಕ್​ಗೆ ಜಿಮ್​ನಲ್ಲಿ ಎದುರಾಗಿತ್ತು ವಿಚಿತ್ರ ಪ್ರಶ್ನೆ

ರಿತ್ವಿಕ್ ನಿಜಜೀವನದಲ್ಲಿ ಆ ರೀತಿ ಅಲ್ಲ. ಅವರು ಮುಖವನ್ನು ಒಂದೇ ತೆರನಾಗಿ ಇಟ್ಟುಕೊಳ್ಳುತ್ತಾರೆ. ಭಾವನೆಗಳನ್ನು ಅವರು ಹೆಚ್ಚು ಹೊರ ಹಾಕುವುದಿಲ್ಲ.

‘ಗಿಣಿರಾಮ’ ಸೀರಿಯಲ್​ ನಟ ರಿತ್ವಿಕ್​ಗೆ ಜಿಮ್​ನಲ್ಲಿ ಎದುರಾಗಿತ್ತು ವಿಚಿತ್ರ ಪ್ರಶ್ನೆ
‘ಗಿಣಿರಾಮ’ ಸೀರಿಯಲ್​ ನಟ ರಿತ್ವಿಕ್​ಗೆ ಜಿಮ್​ನಲ್ಲಿ ಎದುರಾಗಿತ್ತು ವಿಚಿತ್ರ ಪ್ರಶ್ನೆ
TV9 Web
| Edited By: |

Updated on: Aug 17, 2021 | 7:18 AM

Share

ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಗಿಣಿರಾಮ’ ಧಾರಾವಾಹಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡವರು ರಿತ್ವಿಕ್​ ಮಠದ್​. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈಗ ಅವರು ಬಿಗ್​ ಬಾಸ್​ ಮಿನಿ ಸೀಸನ್​ಗೆ ಎಂಟ್ರಿ ಕೊಟ್ಟಿದ್ದಾರೆ. ಮನೆಯಲ್ಲಿ ಎಲ್ಲರ ಜತೆ ಹಾಯಾಗಿ ಸಮಯ ಕಳೆಯುತ್ತಿದ್ದಾರೆ ಅವರು. ಈ ಮಧ್ಯೆ ಅವರು ಅಚ್ಚರಿಯ ವಿಚಾರವೊಂದನ್ನು ಹೇಳಿಕೊಂಡಿದ್ದಾರೆ.

ಧಾರಾವಾಹಿಯಲ್ಲಿ ತಾವು ನಿರ್ವಹಿಸುತ್ತಿರುವ ಪಾತ್ರಕ್ಕೆ ರಿತ್ವಿಕ್​ ಅವರು ಸೂಕ್ತ ನ್ಯಾಯ ಒದಗಿಸುತ್ತಿದ್ದಾರೆ. ಖಡಕ್​ ಆಗಿ ಕಾಣಿಸಿಕೊಳ್ಳುವಲ್ಲಿ ಖಡಕ್​, ನಗುವ ಕಡೆಯಲ್ಲಿ ನಗು ಹೀಗೆ, ಎಲ್ಲೆಲ್ಲಿ ಯಾವ ಮುಖಭಾವನೆ ತೋರಬೇಕೋ ಅದನ್ನು ತೋರುತ್ತಿದ್ದಾರೆ. ಆದರೆ, ಅವರು ನಿಜಜೀವನದಲ್ಲಿ ಆ ರೀತಿ ಅಲ್ಲ. ಅವರು ಮುಖವನ್ನು ಒಂದೇ ತೆರನಾಗಿ ಇಟ್ಟುಕೊಳ್ಳುತ್ತಾರೆ. ಭಾವನೆಗಳನ್ನು ಅವರು ಹೆಚ್ಚು ಹೊರ ಹಾಕುವುದಿಲ್ಲ. ಇದನ್ನು ಅವರು ಬಿಗ್​ ಬಾಸ್​ ಮನೆಯಲ್ಲಿ ಹೇಳಿಕೊಂಡಿದ್ದಾರೆ. ಈ ವಿಚಾರ ಮನೆ ಮಂದಿಗೆ ಹಾಗೂ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ.

ಬಿಗ್​ ಬಾಸ್​ ಮನೆಯಲ್ಲಿ ಈ ಬಗ್ಗೆ ಉದಾಹರಣೆ ಸಮೇತವಾಗಿ ವಿವರಿಸಿದ್ದಾರೆ ರಿತ್ವಿಕ್. ನಿಮ್ಮ ಮುಖ ನೋಡಿದರೆ ಸ್ಯಾಡ್​ ಲೈಫ್​ ರೀತಿಯಲ್ಲಿ ಕಾಣುತ್ತದೆ ಎಂದು ರಿತ್ವಿಕ್​ಗೆ ಮನೆಯ ಸ್ಪರ್ಧಿಯೊಬ್ಬರು ಹೇಳಿದರು. ಇದಕ್ಕೆ ಉತ್ತರಿಸಿದ ರಿತ್ವಿಕ್​, ಒಂದು ಹಳೇ ಘಟನೆಯನ್ನು ಮೆಲುಕು ಹಾಕಿದ್ದಾರೆ.

‘ಇಬ್ಬರು ಹುಡುಗಿಯರು ಜಿಮ್​ನಲ್ಲಿ ಎರಡು ತಿಂಗಳು ನನ್ನನ್ನು ಗಮನಿಸಿದ್ದರು. ನಾನು ಆ ಬಗ್ಗೆ ಗಮನ ಹರಿಸಿರಲಿಲ್ಲ. ಹೋಗಿ ವರ್ಕೌಟ್​ ಮಾಡಿ ಬರುತ್ತಿದ್ದೆ. ನಾನು ಅಷ್ಟಾಗಿ ರಿಯಾಕ್ಟ್​ ಕೂಡ ಮಾಡಲ್ಲ. ಒಂದು ದಿನ ಆ ಹುಡುಗಿ ಬಂದು ಹಾಯ್​ ಸರ್​ ಅಂದ್ಲು. ನಾನೊಂದುಕೊಂಡೆ ಈಗ ಸೆಲ್ಫಿ ಕೇಳ್ತಾಳೆ ಅಂತ. ಆದ್ರೆ ಅಲ್ಲಾಗಿದ್ದೇ ಬೇರೆ. ನಿಮ್ಮನ್ನು ಏನೋ ಕೇಳಬೇಕು ಎಂದಳು. ಕೇಳಿ ಅಂದೆ. ನಿಮ್ಮ ಜೀವನದಲ್ಲಿ ಆಗಬಾರದ ಘಟನೆ ಏನಾದರೂ ನಡೆದಿದೆಯಾ? ಅದಕ್ಕೆ ಈ ರೀತಿ ಮುಖ ಮಾಡಿಕೊಂಡಿದೀರಾ? ಎಂದು ಪ್ರಶ್ನಿಸಿದಳು. ನನ್ನ ಮುಖ ಇರೋದೇ ಹೀಗೆ. ನಾನು ತುಂಬಾನೇ ಆರಾಮಾಗಿದೀನಿ ಅಂತ ಅವರಿಗೆ ಹೇಳಿದೆ’ ಎಂದಿದ್ದಾರೆ ರಿತ್ವಿಕ್​.

ಇದನ್ನೂ ಓದಿ:

ಬಿಗ್​ ಬಾಸ್​ ಬಗ್ಗೆ ಕಿರಣ್​ ರಾಜ್​ಗಿದೆ ಒಂದು ಭಯ; ದೊಡ್ಮನೆ ಆಫರ್​ ತಿರಸ್ಕರಿಸೋಕೆ ಕಾರಣವಾಯ್ತು ಈ ಅಂಶ

Follow Us
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ
ಮಕ್ಕಳಿಂದ ಗೊಂಬೆಯ ಶವ ಯಾತ್ರೆ