AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಗಿಣಿರಾಮ’ ಸೀರಿಯಲ್​ ನಟ ರಿತ್ವಿಕ್​ಗೆ ಜಿಮ್​ನಲ್ಲಿ ಎದುರಾಗಿತ್ತು ವಿಚಿತ್ರ ಪ್ರಶ್ನೆ

ರಿತ್ವಿಕ್ ನಿಜಜೀವನದಲ್ಲಿ ಆ ರೀತಿ ಅಲ್ಲ. ಅವರು ಮುಖವನ್ನು ಒಂದೇ ತೆರನಾಗಿ ಇಟ್ಟುಕೊಳ್ಳುತ್ತಾರೆ. ಭಾವನೆಗಳನ್ನು ಅವರು ಹೆಚ್ಚು ಹೊರ ಹಾಕುವುದಿಲ್ಲ.

‘ಗಿಣಿರಾಮ’ ಸೀರಿಯಲ್​ ನಟ ರಿತ್ವಿಕ್​ಗೆ ಜಿಮ್​ನಲ್ಲಿ ಎದುರಾಗಿತ್ತು ವಿಚಿತ್ರ ಪ್ರಶ್ನೆ
‘ಗಿಣಿರಾಮ’ ಸೀರಿಯಲ್​ ನಟ ರಿತ್ವಿಕ್​ಗೆ ಜಿಮ್​ನಲ್ಲಿ ಎದುರಾಗಿತ್ತು ವಿಚಿತ್ರ ಪ್ರಶ್ನೆ
TV9 Web
| Edited By: |

Updated on: Aug 17, 2021 | 7:18 AM

Share

ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಗಿಣಿರಾಮ’ ಧಾರಾವಾಹಿ ಮೂಲಕ ಖ್ಯಾತಿ ಹೆಚ್ಚಿಸಿಕೊಂಡವರು ರಿತ್ವಿಕ್​ ಮಠದ್​. ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಈಗ ಅವರು ಬಿಗ್​ ಬಾಸ್​ ಮಿನಿ ಸೀಸನ್​ಗೆ ಎಂಟ್ರಿ ಕೊಟ್ಟಿದ್ದಾರೆ. ಮನೆಯಲ್ಲಿ ಎಲ್ಲರ ಜತೆ ಹಾಯಾಗಿ ಸಮಯ ಕಳೆಯುತ್ತಿದ್ದಾರೆ ಅವರು. ಈ ಮಧ್ಯೆ ಅವರು ಅಚ್ಚರಿಯ ವಿಚಾರವೊಂದನ್ನು ಹೇಳಿಕೊಂಡಿದ್ದಾರೆ.

ಧಾರಾವಾಹಿಯಲ್ಲಿ ತಾವು ನಿರ್ವಹಿಸುತ್ತಿರುವ ಪಾತ್ರಕ್ಕೆ ರಿತ್ವಿಕ್​ ಅವರು ಸೂಕ್ತ ನ್ಯಾಯ ಒದಗಿಸುತ್ತಿದ್ದಾರೆ. ಖಡಕ್​ ಆಗಿ ಕಾಣಿಸಿಕೊಳ್ಳುವಲ್ಲಿ ಖಡಕ್​, ನಗುವ ಕಡೆಯಲ್ಲಿ ನಗು ಹೀಗೆ, ಎಲ್ಲೆಲ್ಲಿ ಯಾವ ಮುಖಭಾವನೆ ತೋರಬೇಕೋ ಅದನ್ನು ತೋರುತ್ತಿದ್ದಾರೆ. ಆದರೆ, ಅವರು ನಿಜಜೀವನದಲ್ಲಿ ಆ ರೀತಿ ಅಲ್ಲ. ಅವರು ಮುಖವನ್ನು ಒಂದೇ ತೆರನಾಗಿ ಇಟ್ಟುಕೊಳ್ಳುತ್ತಾರೆ. ಭಾವನೆಗಳನ್ನು ಅವರು ಹೆಚ್ಚು ಹೊರ ಹಾಕುವುದಿಲ್ಲ. ಇದನ್ನು ಅವರು ಬಿಗ್​ ಬಾಸ್​ ಮನೆಯಲ್ಲಿ ಹೇಳಿಕೊಂಡಿದ್ದಾರೆ. ಈ ವಿಚಾರ ಮನೆ ಮಂದಿಗೆ ಹಾಗೂ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದೆ.

ಬಿಗ್​ ಬಾಸ್​ ಮನೆಯಲ್ಲಿ ಈ ಬಗ್ಗೆ ಉದಾಹರಣೆ ಸಮೇತವಾಗಿ ವಿವರಿಸಿದ್ದಾರೆ ರಿತ್ವಿಕ್. ನಿಮ್ಮ ಮುಖ ನೋಡಿದರೆ ಸ್ಯಾಡ್​ ಲೈಫ್​ ರೀತಿಯಲ್ಲಿ ಕಾಣುತ್ತದೆ ಎಂದು ರಿತ್ವಿಕ್​ಗೆ ಮನೆಯ ಸ್ಪರ್ಧಿಯೊಬ್ಬರು ಹೇಳಿದರು. ಇದಕ್ಕೆ ಉತ್ತರಿಸಿದ ರಿತ್ವಿಕ್​, ಒಂದು ಹಳೇ ಘಟನೆಯನ್ನು ಮೆಲುಕು ಹಾಕಿದ್ದಾರೆ.

‘ಇಬ್ಬರು ಹುಡುಗಿಯರು ಜಿಮ್​ನಲ್ಲಿ ಎರಡು ತಿಂಗಳು ನನ್ನನ್ನು ಗಮನಿಸಿದ್ದರು. ನಾನು ಆ ಬಗ್ಗೆ ಗಮನ ಹರಿಸಿರಲಿಲ್ಲ. ಹೋಗಿ ವರ್ಕೌಟ್​ ಮಾಡಿ ಬರುತ್ತಿದ್ದೆ. ನಾನು ಅಷ್ಟಾಗಿ ರಿಯಾಕ್ಟ್​ ಕೂಡ ಮಾಡಲ್ಲ. ಒಂದು ದಿನ ಆ ಹುಡುಗಿ ಬಂದು ಹಾಯ್​ ಸರ್​ ಅಂದ್ಲು. ನಾನೊಂದುಕೊಂಡೆ ಈಗ ಸೆಲ್ಫಿ ಕೇಳ್ತಾಳೆ ಅಂತ. ಆದ್ರೆ ಅಲ್ಲಾಗಿದ್ದೇ ಬೇರೆ. ನಿಮ್ಮನ್ನು ಏನೋ ಕೇಳಬೇಕು ಎಂದಳು. ಕೇಳಿ ಅಂದೆ. ನಿಮ್ಮ ಜೀವನದಲ್ಲಿ ಆಗಬಾರದ ಘಟನೆ ಏನಾದರೂ ನಡೆದಿದೆಯಾ? ಅದಕ್ಕೆ ಈ ರೀತಿ ಮುಖ ಮಾಡಿಕೊಂಡಿದೀರಾ? ಎಂದು ಪ್ರಶ್ನಿಸಿದಳು. ನನ್ನ ಮುಖ ಇರೋದೇ ಹೀಗೆ. ನಾನು ತುಂಬಾನೇ ಆರಾಮಾಗಿದೀನಿ ಅಂತ ಅವರಿಗೆ ಹೇಳಿದೆ’ ಎಂದಿದ್ದಾರೆ ರಿತ್ವಿಕ್​.

ಇದನ್ನೂ ಓದಿ:

ಬಿಗ್​ ಬಾಸ್​ ಬಗ್ಗೆ ಕಿರಣ್​ ರಾಜ್​ಗಿದೆ ಒಂದು ಭಯ; ದೊಡ್ಮನೆ ಆಫರ್​ ತಿರಸ್ಕರಿಸೋಕೆ ಕಾರಣವಾಯ್ತು ಈ ಅಂಶ

Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ