AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸುದೀಪ್ ಸರ್​ ಯಾಕೆ ಹೀಗೆ ಮಾಡಿದ್ರಿ?’; ಕಿಚ್ಚನಿಗೆ ಪ್ರಶ್ನೆ ಮಾಡಿದ ಅನುಪಮಾ ಗೌಡ

ಕಳೆದ ವಾರ ರೂಪೇಶ್ ರಾಜಣ್ಣ ಅವರಿಗೆ ಕಿಚ್ಚ ಸುದೀಪ್ ಅವರು ಒಂದು ಟಾಸ್ಕ್ ನೀಡಿದ್ದರು. ಟಾಸ್ಕ್​​ನ ಅನುಸಾರ ಪೂರ್ತಿ ಒಂದು ದಿನ ರೂಪೇಶ್ ರಾಜಣ್ಣ ಅವರು ಅಡುಗೆ ಮಾಡಬೇಕು.

‘ಸುದೀಪ್ ಸರ್​ ಯಾಕೆ ಹೀಗೆ ಮಾಡಿದ್ರಿ?’; ಕಿಚ್ಚನಿಗೆ ಪ್ರಶ್ನೆ ಮಾಡಿದ ಅನುಪಮಾ ಗೌಡ
ಅನುಪಮಾ ಗೌಡ-ಕಿಚ್ಚ ಸುದೀಪ್
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Nov 21, 2022 | 10:10 PM

Share

‘ಕನ್ನಡ ಬಿಗ್ ಬಾಸ್ ಸೀಸನ್ 9’ (BBK 9) 9ನೇ ವಾರಕ್ಕೆ ಕಾಲಿಟ್ಟಿದೆ. ಎಲ್ಲಾ ಸ್ಪರ್ಧಿಗಳ ಮಧ್ಯೆ ಟಫ್ ಕಾಂಪಿಟೇಷನ್ ನಡೆಯುತ್ತಿದೆ. ಮನೆಯಲ್ಲಿ ಈಗ 11 ಸ್ಪರ್ಧಿಗಳು ಮಾತ್ರ ಉಳಿದುಕೊಂಡಿದ್ದಾರೆ. ಬಾಕಿ ಉಳಿದಿರುವುದು ಕೆಲವೇ ವಾರಗಳು ಮಾತ್ರ. ಈ ಕಾರಣಕ್ಕೆ ಸ್ಪರ್ಧಿಗಳು ಹೆಚ್ಚು ಅಲರ್ಟ್ ಆಗಿ ಆಡುತ್ತಿದ್ದಾರೆ. ಈ ವಾರ ಎಲ್ಲಾ ಸ್ಪರ್ಧಿಗಳು ನೇರವಾಗಿ ನಾಮಿನೇಟ್ ಆಗಿದ್ದಾರೆ. ಈ ಮಧ್ಯೆ ಸುದೀಪ್ ಅವರು ಕೊಟ್ಟ ಟಾಸ್ಕ್​​ಗೆ ಅನುಪಮಾ ಗೌಡ (Anupama Gowda) ಬೇಸರ ಮಾಡಿಕೊಂಡಿದ್ದಾರೆ.

ಕಳೆದ ವಾರ ರೂಪೇಶ್ ರಾಜಣ್ಣ ಅವರಿಗೆ ಕಿಚ್ಚ ಸುದೀಪ್ ಅವರು ಒಂದು ಟಾಸ್ಕ್ ನೀಡಿದ್ದರು. ಟಾಸ್ಕ್​​ನ ಅನುಸಾರ ಪೂರ್ತಿ ಒಂದು ದಿನ ರೂಪೇಶ್ ರಾಜಣ್ಣ ಅವರು ಅಡುಗೆ ಮಾಡಬೇಕು. ಅಡುಗೆ ಮಾಡುವ ವೇಳೆ ಅವರು ಯಾರನ್ನೂ ಕೇಳುವಂತಿಲ್ಲ. ಹಾಗೆ ಕೇಳಿದರೆ ಕೊಟ್ಟ ವಸ್ತುಗಳನ್ನು ಬಿಗ್ ಬಾಸ್ ಮರಳಿ ಪಡೆಯುತ್ತಾರೆ.

ಮುಂಜಾನೆ ಎದ್ದ ಕೂಡಲೇ ರೂಪೇಶ್ ರಾಜಣ್ಣ ಅವರು ಟೀ ಮಾಡಿದ್ದಾರೆ. ಅವರು ನೀರಿಗೆ ಸಕ್ಕರೆ ಹಾಕುವ ಪರಿ ನೋಡಿ ಮನೆ ಮಂದಿ ಕಂಗಾಲಾಗಿದ್ದಾರೆ. ಇನ್ನು, ರೂಪೇಶ್ ರಾಜಣ್ಣ ಅವರು ಚಪಾತಿ ಮಾಡುವುದನ್ನು ನೋಡಿಯೂ ಕೆಲವರು ಕಂಗಾಲಾಗಿದ್ದಾರೆ. ಅನುಪಮಾ ಗೌಡ ಅವರಂತೂ ಶಾಕ್ ಆಗಿದ್ದಾರೆ. ಸರಿಯಾಗಿ ಊಟ ಸಿಗುವುದಿಲ್ಲ ಎಂದು ಅವರು ಭಾವಿಸಿದ್ದರು.

ಇದನ್ನೂ ಓದಿ
Image
Bigg Boss Elimination: ಬಿಗ್​ ಬಾಸ್​ನಲ್ಲಿ ದರ್ಶ್​ ಆಟ ಅಂತ್ಯ; 3ನೇ ವಾರದ ಎಲಿಮಿನೇಷನ್​ನಲ್ಲಿ ಮಯೂರಿ ಸೇಫ್​
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

ಇದನ್ನೂ ಓದಿ: ಪ್ರಶಾಂತ್ ಸಂಬರ್ಗಿಗೆ ಹೊಸ ಬಿರುದು ಕೊಟ್ಟ ಕಿಚ್ಚ ಸುದೀಪ್​; ಮನೆಯವರಿಗೆ ನಗುವೋ ನಗು

‘ಕಿಚ್ಚ ಸುದೀಪ್ ಸರ್ ನೀವು ಯಾಕೆ ಈ ರೀತಿ ಮಾಡಿದ್ರಿ? ನೋಡಿ ನಾವಿಲ್ಲಿ ಒದ್ದಾಡುತ್ತಿದ್ದೇವೆ’ ಎಂದು ಅನುಪಮಾ ಗೌಡ ಹೇಳಿದ್ದಾರೆ. ಅನುಪಮಾ ಮಾತನ್ನು ಕೇಳಿ ಕೆಲವರು ನಕ್ಕಿದ್ದಾರೆ. ಅಡುಗೆ ಬರದೆ ಇದ್ದರೂ ರೂಪೇಶ್ ರಾಜಣ್ಣ ಉತ್ತಮವಾಗಿ ಅಡುಗೆ ಮಾಡಿದರು ಎಂಬ ಅಭಿಪ್ರಾಯ ದೊಡ್ಮನೆಯವರಿಂದ ಬಂದಿದೆ. ಈ ಮೊದಲು ಬಿಗ್​ ಬಾಸ್​ ಒಟಿಟಿಯಲ್ಲಿ ಇದೇ ರೀತಿಯ ಟಾಸ್ಕ್ ಇತ್ತು. ವೀಕ್ಷಕರು ಯಾರನ್ನು ಆಯ್ಕೆ ಮಾಡುತ್ತಾರೋ ಅವರು ಅಡುಗೆ ಮಾಡಬೇಕಿತ್ತು. ಈ ವೇಳೆ ಅನೇಕ ಸ್ಪರ್ಧಿಗಳು ಅಡುಗೆ ಮಾಡಲು ಒದ್ದಾಟ ನಡೆಸಿದ್ದರು.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ