AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸುದೀಪ್ ಸರ್​ ಯಾಕೆ ಹೀಗೆ ಮಾಡಿದ್ರಿ?’; ಕಿಚ್ಚನಿಗೆ ಪ್ರಶ್ನೆ ಮಾಡಿದ ಅನುಪಮಾ ಗೌಡ

ಕಳೆದ ವಾರ ರೂಪೇಶ್ ರಾಜಣ್ಣ ಅವರಿಗೆ ಕಿಚ್ಚ ಸುದೀಪ್ ಅವರು ಒಂದು ಟಾಸ್ಕ್ ನೀಡಿದ್ದರು. ಟಾಸ್ಕ್​​ನ ಅನುಸಾರ ಪೂರ್ತಿ ಒಂದು ದಿನ ರೂಪೇಶ್ ರಾಜಣ್ಣ ಅವರು ಅಡುಗೆ ಮಾಡಬೇಕು.

‘ಸುದೀಪ್ ಸರ್​ ಯಾಕೆ ಹೀಗೆ ಮಾಡಿದ್ರಿ?’; ಕಿಚ್ಚನಿಗೆ ಪ್ರಶ್ನೆ ಮಾಡಿದ ಅನುಪಮಾ ಗೌಡ
ಅನುಪಮಾ ಗೌಡ-ಕಿಚ್ಚ ಸುದೀಪ್
TV9 Web
| Edited By: |

Updated on: Nov 21, 2022 | 10:10 PM

Share

‘ಕನ್ನಡ ಬಿಗ್ ಬಾಸ್ ಸೀಸನ್ 9’ (BBK 9) 9ನೇ ವಾರಕ್ಕೆ ಕಾಲಿಟ್ಟಿದೆ. ಎಲ್ಲಾ ಸ್ಪರ್ಧಿಗಳ ಮಧ್ಯೆ ಟಫ್ ಕಾಂಪಿಟೇಷನ್ ನಡೆಯುತ್ತಿದೆ. ಮನೆಯಲ್ಲಿ ಈಗ 11 ಸ್ಪರ್ಧಿಗಳು ಮಾತ್ರ ಉಳಿದುಕೊಂಡಿದ್ದಾರೆ. ಬಾಕಿ ಉಳಿದಿರುವುದು ಕೆಲವೇ ವಾರಗಳು ಮಾತ್ರ. ಈ ಕಾರಣಕ್ಕೆ ಸ್ಪರ್ಧಿಗಳು ಹೆಚ್ಚು ಅಲರ್ಟ್ ಆಗಿ ಆಡುತ್ತಿದ್ದಾರೆ. ಈ ವಾರ ಎಲ್ಲಾ ಸ್ಪರ್ಧಿಗಳು ನೇರವಾಗಿ ನಾಮಿನೇಟ್ ಆಗಿದ್ದಾರೆ. ಈ ಮಧ್ಯೆ ಸುದೀಪ್ ಅವರು ಕೊಟ್ಟ ಟಾಸ್ಕ್​​ಗೆ ಅನುಪಮಾ ಗೌಡ (Anupama Gowda) ಬೇಸರ ಮಾಡಿಕೊಂಡಿದ್ದಾರೆ.

ಕಳೆದ ವಾರ ರೂಪೇಶ್ ರಾಜಣ್ಣ ಅವರಿಗೆ ಕಿಚ್ಚ ಸುದೀಪ್ ಅವರು ಒಂದು ಟಾಸ್ಕ್ ನೀಡಿದ್ದರು. ಟಾಸ್ಕ್​​ನ ಅನುಸಾರ ಪೂರ್ತಿ ಒಂದು ದಿನ ರೂಪೇಶ್ ರಾಜಣ್ಣ ಅವರು ಅಡುಗೆ ಮಾಡಬೇಕು. ಅಡುಗೆ ಮಾಡುವ ವೇಳೆ ಅವರು ಯಾರನ್ನೂ ಕೇಳುವಂತಿಲ್ಲ. ಹಾಗೆ ಕೇಳಿದರೆ ಕೊಟ್ಟ ವಸ್ತುಗಳನ್ನು ಬಿಗ್ ಬಾಸ್ ಮರಳಿ ಪಡೆಯುತ್ತಾರೆ.

ಮುಂಜಾನೆ ಎದ್ದ ಕೂಡಲೇ ರೂಪೇಶ್ ರಾಜಣ್ಣ ಅವರು ಟೀ ಮಾಡಿದ್ದಾರೆ. ಅವರು ನೀರಿಗೆ ಸಕ್ಕರೆ ಹಾಕುವ ಪರಿ ನೋಡಿ ಮನೆ ಮಂದಿ ಕಂಗಾಲಾಗಿದ್ದಾರೆ. ಇನ್ನು, ರೂಪೇಶ್ ರಾಜಣ್ಣ ಅವರು ಚಪಾತಿ ಮಾಡುವುದನ್ನು ನೋಡಿಯೂ ಕೆಲವರು ಕಂಗಾಲಾಗಿದ್ದಾರೆ. ಅನುಪಮಾ ಗೌಡ ಅವರಂತೂ ಶಾಕ್ ಆಗಿದ್ದಾರೆ. ಸರಿಯಾಗಿ ಊಟ ಸಿಗುವುದಿಲ್ಲ ಎಂದು ಅವರು ಭಾವಿಸಿದ್ದರು.

ಇದನ್ನೂ ಓದಿ
Image
Bigg Boss Elimination: ಬಿಗ್​ ಬಾಸ್​ನಲ್ಲಿ ದರ್ಶ್​ ಆಟ ಅಂತ್ಯ; 3ನೇ ವಾರದ ಎಲಿಮಿನೇಷನ್​ನಲ್ಲಿ ಮಯೂರಿ ಸೇಫ್​
Image
BBK9: ಬಿಗ್​ ಬಾಸ್​ ಮೇಲೆ ಮ್ಯಾಚ್​ ಫಿಕ್ಸಿಂಗ್​ ಆರೋಪ; ಗುರೂಜಿ ವಿರುದ್ಧ ಗುಡುಗಿದ ಸುದೀಪ್​
Image
BBK9: ಬಿಗ್​ ಬಾಸ್​ 2ನೇ ವಾರ ನವಾಜ್​ ಎಲಿಮಿನೇಟ್​; ದೊಡ್ಮನೆಯಲ್ಲಿ ನಡೆಯಲಿಲ್ಲ ಪ್ರಾಸದ ಆಟ
Image
BBK9: ಬಿಗ್​ ಬಾಸ್​ನಿಂದ ಐಶ್ವರ್ಯಾ ಪಿಸ್ಸೆ ಎಲಿಮಿನೇಟ್​; ಒಂದೇ ವಾರಕ್ಕೆ ಮುಗಿಯಿತು ದೊಡ್ಮನೆ ಆಟ

ಇದನ್ನೂ ಓದಿ: ಪ್ರಶಾಂತ್ ಸಂಬರ್ಗಿಗೆ ಹೊಸ ಬಿರುದು ಕೊಟ್ಟ ಕಿಚ್ಚ ಸುದೀಪ್​; ಮನೆಯವರಿಗೆ ನಗುವೋ ನಗು

‘ಕಿಚ್ಚ ಸುದೀಪ್ ಸರ್ ನೀವು ಯಾಕೆ ಈ ರೀತಿ ಮಾಡಿದ್ರಿ? ನೋಡಿ ನಾವಿಲ್ಲಿ ಒದ್ದಾಡುತ್ತಿದ್ದೇವೆ’ ಎಂದು ಅನುಪಮಾ ಗೌಡ ಹೇಳಿದ್ದಾರೆ. ಅನುಪಮಾ ಮಾತನ್ನು ಕೇಳಿ ಕೆಲವರು ನಕ್ಕಿದ್ದಾರೆ. ಅಡುಗೆ ಬರದೆ ಇದ್ದರೂ ರೂಪೇಶ್ ರಾಜಣ್ಣ ಉತ್ತಮವಾಗಿ ಅಡುಗೆ ಮಾಡಿದರು ಎಂಬ ಅಭಿಪ್ರಾಯ ದೊಡ್ಮನೆಯವರಿಂದ ಬಂದಿದೆ. ಈ ಮೊದಲು ಬಿಗ್​ ಬಾಸ್​ ಒಟಿಟಿಯಲ್ಲಿ ಇದೇ ರೀತಿಯ ಟಾಸ್ಕ್ ಇತ್ತು. ವೀಕ್ಷಕರು ಯಾರನ್ನು ಆಯ್ಕೆ ಮಾಡುತ್ತಾರೋ ಅವರು ಅಡುಗೆ ಮಾಡಬೇಕಿತ್ತು. ಈ ವೇಳೆ ಅನೇಕ ಸ್ಪರ್ಧಿಗಳು ಅಡುಗೆ ಮಾಡಲು ಒದ್ದಾಟ ನಡೆಸಿದ್ದರು.

Follow Us
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ