AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಚಿಕ್ಕ ವಿಚಾರಕ್ಕೂ ಕಿರಿಕ್; ರೂಪೇಶ್-ಸಾನ್ಯಾ ಓಟಕ್ಕೆ ಹಿನ್ನಡೆ ಆಗುತ್ತಾ ಅಸಮಾಧಾನ?

ಒಬ್ಬರನ್ನು ಬಿಟ್ಟು ಒಬ್ಬರು ತಿಂಡಿ ತಿಂದ ವಿಚಾರಕ್ಕೆ, ಊಟ ಮಾಡಿದ ವಿಚಾರಕ್ಕೆ ಕಿತ್ತಾಟ ಆಗುತ್ತಿದೆ. ಈ ವೇಳೆ ಇಬ್ಬರೂ ಅಸಮಾಧಾನ ಹೊರಹಾಕಿದ್ದಾರೆ. ಈಗ ಸೆಪ್ಟೆಂಬರ್ 24ರ ಎಪಿಸೋಡ್​ನಲ್ಲೂ ಇದು ಮುಂದುವರಿದಿದೆ.

ಚಿಕ್ಕಚಿಕ್ಕ ವಿಚಾರಕ್ಕೂ ಕಿರಿಕ್; ರೂಪೇಶ್-ಸಾನ್ಯಾ ಓಟಕ್ಕೆ ಹಿನ್ನಡೆ ಆಗುತ್ತಾ ಅಸಮಾಧಾನ?
ರೂಪೇಶ್​-ಸಾನ್ಯಾ
TV9 Web
| Edited By: |

Updated on: Oct 24, 2022 | 9:13 PM

Share

ಸಾನ್ಯಾ ಐಯ್ಯರ್ (Sanya Iyer) ಹಾಗೂ ರೂಪೇಶ್ ಶೆಟ್ಟಿ ಇಬ್ಬರೂ ‘ಬಿಗ್ ಬಾಸ್​ ಒಟಿಟಿ’ಯಿಂದ (Bigg Boss OTT) ಎಲ್ಲರ ಗಮನ ಸೆಳೆಯುತ್ತಾ ಬರುತ್ತಿದ್ದಾರೆ. ಇವರ ಪ್ರಯಾಣ ಟಿವಿ ಸೀಸನ್​ನಲ್ಲೂ ಮುಂದುವರಿದಿದೆ. ಇಬ್ಬರ ಕೆಮಿಸ್ಟ್ರಿ ಅನೇಕರಿಗೆ ಇಷ್ಟವಾಗಿದೆ. ಇವರ ಹೆಸರಲ್ಲಿ ಅನೇಕ ಅಭಿಮಾನಿ ಬಳಗ ಕೂಡ ಹುಟ್ಟಿಕೊಂಡಿದೆ. ಆದರೆ, ಇತ್ತೀಚೆಗೆ ಇವರು ನಡೆದುಕೊಳ್ಳುತ್ತಿರುವ ರೀತಿ ಅನೇಕರಿಗೆ ಇಷ್ಟವಾಗುತ್ತಿಲ್ಲ. ಇವರ ಓಟಕ್ಕೆ ಅಸಮಾಧಾನವೇ ಹಿನ್ನಡೆ ಉಂಟು ಮಾಡಬಹುದು ಎಂದು ವೀಕ್ಷಕರು ಮಾತನಾಡಿಕೊಳ್ಳುತ್ತಿದ್ದಾರೆ.

ಬಿಗ್ ಬಾಸ್​ನಲ್ಲಿ ರೂಪೇಶ್ ಹಾಗೂ ಸಾನ್ಯಾ ನಡುವೆ ಯೋಚನೆಗಳು ಹೊಂದಿಕೆ ಆದವು. ಹೀಗಾಗಿ ಇಬ್ಬರೂ ಕ್ಲೋಸ್ ಆದರು. ಇಬ್ಬರ ನಡುವಿನ ರಿಲೇಶನ್​ಶಿಪ್ ಬಗ್ಗೆ ಬಿಗ್ ಬಾಸ್ ಮನೆಯಲ್ಲಿ ಸಾಕಷ್ಟು ವದಂತಿ ಹಬ್ಬಿದ್ದೂ ಇದೆ. ಆದರೆ, ಈ ವಿಚಾರದಲ್ಲಿ ಈ ಜೋಡಿ ಅನೇಕ ಬಾರಿ ಸ್ಪಷ್ಟನೆ ನೀಡಿದೆ. ‘ನಾವಿಬ್ಬರೂ ಫ್ರೆಂಡ್ಸ್ ಅಷ್ಟೇ. ಇದನ್ನು ಹೊರತುಪಡಿಸಿ ಬೇರೇನು ಇಲ್ಲ’ ಎಂಬ ಹೇಳಿಕೆಯನ್ನು ಇವರು ಸಾಕಷ್ಟು ಬಾರಿ ನೀಡಿದ್ದಾರೆ. ರೂಪೇಶ್ ಅವರಂತೂ ಈ ಬಗ್ಗೆ ಪದೇಪದೇ ಒತ್ತಿ ಹೇಳಿದ್ದಾರೆ. ಇತ್ತೀಚೆಗೆ ಇವರ ಮಧ್ಯೆ ಆಗಾಗ ಜಗಳ ಹುಟ್ಟಿಕೊಳ್ಳುತ್ತಲೇ ಇದೆ.

ಒಬ್ಬರನ್ನು ಬಿಟ್ಟು ಒಬ್ಬರು ತಿಂಡಿ ತಿಂದ ವಿಚಾರಕ್ಕೆ, ಊಟ ಮಾಡಿದ ವಿಚಾರಕ್ಕೆ ಕಿತ್ತಾಟ ಆಗುತ್ತಿದೆ. ಈ ವೇಳೆ ಇಬ್ಬರೂ ಅಸಮಾಧಾನ ಹೊರಹಾಕಿದ್ದಾರೆ. ಈಗ ಸೆಪ್ಟೆಂಬರ್ 24ರ ಎಪಿಸೋಡ್​ನಲ್ಲೂ ಇದು ಮುಂದುವರಿದಿದೆ. ಇದು ಪದೇಪದೇ ಮರುಕಳಿಸುತ್ತಿರುವುದು ಅನೇಕರಿಗೆ ಬೇಸರ ಮೂಡಿಸಿದೆ. ಈ ರೀತಿ ಆಗಬಾರದು ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇತ್ತೀಚೆಗೆ ರೂಪೇಶ್ ಹಾಗೂ ಸಾನ್ಯಾ ತುಂಬಾನೇ ಆಪ್ತವಾಗಿದ್ದರು. ಈ ವಿಚಾರದಲ್ಲಿ ಸುದೀಪ್ ಅವರು ಇಬ್ಬರಿಗೂ ಕ್ಲಾಸ್ ತೆಗೆದುಕೊಂಡಿದ್ದರು. ಈ ಘಟನೆ ರೂಪೇಶ್ ಶೆಟ್ಟಿ ಮೇಲೆ ಸಾಕಷ್ಟು ಪ್ರಭಾವ ಬೀರಿದೆ. ಕೆಲವೊಂದು ವಿಚಾರದಲ್ಲಿ ಸಾನ್ಯಾ ಇಂದ ಅಂತರ ಕಾಯ್ದುಕೊಳ್ಳಲು ಅವರು ಪ್ರಯತ್ನಿಸಿದ್ದಿದೆ. ಆದರೆ, ಅದು ಸಾಧ್ಯವಾಗುತ್ತಿಲ್ಲ. ಚಿಕ್ಕಚಿಕ್ಕ ವಿಚಾರಕ್ಕೂ ಅಸಮಾಧಾನ ತೋಡಿಕೊಳ್ಳುವುದನ್ನು ಇವರು ತಿದ್ದುಕೊಳ್ಳುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ‘ರೂಪೇಶ್​ ರಾಜಣ್ಣಗೆ ನಿಯತ್ತಿದೆ, ಮೌಲ್ಯಗಳಿವೆ’; ಕೊನೆಗೂ ಒಪ್ಪಿಕೊಂಡ ಪ್ರಶಾಂತ್ ಸಂಬರ್ಗಿ

ರೂಪೇಶ್ ಹಾಗೂ ಸಾನ್ಯಾಗೆ ದೊಡ್ಡ ಅಭಿಮಾನಿ ಬಳಗ ಇದೆ. ಅವರಿಗೆ ಈಗ ಸಿಗುತ್ತಿರುವ ಬೆಂಬಲ ಹೀಗೆಯೇ ಮುಂದುವರಿದರೆ ಈ ಜೋಡಿ ಫಿನಾಲೆ ತಲುಪೋದು ಪಕ್ಕಾ ಎಂಬ ಅಭಿಪ್ರಾಯವೂ ಇದೆ. ಆದರೆ, ಈಗ ಇವರ ಓಟಕ್ಕೆ ಇವರೇ ಬ್ರೇಕ್ ಹಾಕಿಕೊಳ್ಳುತ್ತಿದ್ದಾರೆ.

ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!