AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಹೆಚ್ಚಾಯ್ತು ಕಳ್ಳರ ಕಾಟ; ರೂಪೇಶ್ ಶೆಟ್ಟಿ ಬಳಿ ಇದ್ದ ಚಿನ್ನ ಕದ್ದವರು ಯಾರು?

ರೂಪೇಶ್ ಶೆಟ್ಟಿ ಅವರು ಒಟಿಟಿಯಲ್ಲಿ ಗಮನ ಸೆಳೆದಿದ್ದರು. ಅವರು ಅಲ್ಲಿ ಟಾಪ್ ಒನ್ ಆಗಿದ್ದರು. ಈಗ ಅವರು ಟಿವಿ ಸೀಸನ್​ಗೆ ಬಂದು ಅಷ್ಟೇ ಜನಪ್ರಿಯತೆ ಉಳಿಸಿಕೊಂಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಹೆಚ್ಚಾಯ್ತು ಕಳ್ಳರ ಕಾಟ; ರೂಪೇಶ್ ಶೆಟ್ಟಿ ಬಳಿ ಇದ್ದ ಚಿನ್ನ ಕದ್ದವರು ಯಾರು?
ರೂಪೇಶ್ ಶೆಟ್ಟಿ
TV9 Web
| Edited By: |

Updated on:Oct 12, 2022 | 10:22 PM

Share

ಬಿಗ್ ಬಾಸ್ (Bigg Boss) ಮನೆಯ ರಂಗು ದಿನ ಕಳೆದಂತೆ ಹೆಚ್ಚುತ್ತಿದೆ. ಈಗಾಗಲೇ ಎರಡು ವಾರ ಪೂರ್ಣಗೊಂಡು ಮೂರನೇ ವಾರಕ್ಕೆ ದೊಡ್ಮನೆ ಆಟ ಕಾಲಿಟ್ಟಿದೆ. ಈ ವಾರ ಹಲವರ ಮೇಲೆ ನಾಮಿನೇಷನ್​ ತೂಗುಗತ್ತಿ ಇದೆ. ಈ ಕಾರಣಕ್ಕೆ ಎಲ್ಲರೂ ಟಾಸ್ಕ್ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದಾರೆ. ಮೂರನೇ ವಾರದ ಕ್ಯಾಪ್ಟನ್ಸಿ ಟಾಸ್ಕ್​ಗೆ ಸ್ಪರ್ಧಿಗಳನ್ನು ಆಯ್ಕೆ ಮಾಡಲು ಬಿಗ್ ಬಾಸ್ ಕಡೆಯಿಂದ ಟಾಸ್ಕ್ ಒಂದು ಸಿಕ್ಕಿದೆ. ಈ ಟಾಸ್ಕ್​ ಪ್ರಕಾರ ಗಣಿ ಮಾದರಿಯ ಸೆಟ್ ಒಳಗೆ ತೆರಳಿ ಚಿನ್ನ ಹುಡುಕಿ ತರಬೇಕು. ಈ ರೀತಿ ತಂದ ಚಿನ್ನವನ್ನು ರೂಪೇಶ್​ ಬಳಿಯಿಂದ ಕಳುವಾಗಿದೆ. ರೂಪೇಶ್ ಶೆಟ್ಟಿ (Roopesh Shetty) ಎಲ್ಲರ ಬಳಿ ಹೋಗಿ ‘ಚಿನ್ನ ಕದ್ದಿದ್ದು ಯಾರು ಹೇಳಿ’ ಎಂದು ಗೋಗರೆದಿದ್ದಾರೆ.

ರೂಪೇಶ್ ಶೆಟ್ಟಿ ಅವರು ಒಟಿಟಿಯಲ್ಲಿ ಗಮನ ಸೆಳೆದಿದ್ದರು. ಅವರು ಅಲ್ಲಿ ಟಾಪ್ ಒನ್ ಆಗಿದ್ದರು. ಈಗ ಅವರು ಟಿವಿ ಸೀಸನ್​ಗೆ ಬಂದು ಅಷ್ಟೇ ಜನಪ್ರಿಯತೆ ಉಳಿಸಿಕೊಂಡಿದ್ದಾರೆ. ಚಿನ್ನದ ಗಣಿ ಟಾಸ್ಕ್​ನಲ್ಲಿ ರೂಪೇಶ್ ಶೆಟ್ಟಿ ಅವರು ಒಳ್ಳೆಯ ಪರ್ಫಾರ್ಮೆನ್ಸ್ ನೀಡುತ್ತಿದ್ದಾರೆ. ಈ ಟಾಸ್ಕ್ ಆರಂಭವಾದ ನಂತರದಲ್ಲಿ ದೊಡ್ಮನೆಯಲ್ಲಿ ಕಳ್ಳರ ಕಾಟ ಹೆಚ್ಚಾಗಿದೆ.

ರೂಪೇಶ್ ಶೆಟ್ಟಿ ಬಳಿ ಒಂದೂವರೆ ಕೆ.ಜಿ.ಗೂ ಅಧಿಕ ಚಿನ್ನ ಇತ್ತು. ಇದನ್ನು ಅಮೂಲ್ಯ ಗೌಡ ಹಾಗೂ ನೇಹಾ ಗೌಡ ಕದ್ದು ತಂದಿದ್ದರು. ರೂಪೇಶ್ ಶೆಟ್ಟಿ ಹೋಗಿ ನೋಡಿದಾಗ ಅಲ್ಲಿ ಚಿನ್ನವೇ ಇರಲಿಲ್ಲ. ಇದನ್ನು ಕಂಡು ರೂಪೇಶ್​ಗೆ ಶಾಕ್ ಆಗಿದೆ. ಮೊದಲು ಅರುಣ್ ಸಾಗರ್ ಬಳಿ ಹೋಗಿ ‘ನನ್ನ ಚಿನ್ನವನ್ನು ನೀವು ಕದ್ದಿದ್ದೀರಾ’ ಎಂದು ಪ್ರಶ್ನೆ ಮಾಡಿದ್ದಾರೆ ರೂಪೇಶ್. ಈ ರೀತಿ ಅವರು ಎಲ್ಲರಿಗೂ ಪ್ರಶ್ನೆ ಮಾಡುತ್ತಾ ಬಂದಿದ್ದಾರೆ. ಆದರೆ, ನಿಜವಾದ ಕಳ್ಳ ಯಾರು ಎಂಬುದು ಮಾತ್ರ ಗೊತ್ತಾಗಿಲ್ಲ.

ಇದನ್ನೂ ಓದಿ
Image
ಬಿಗ್ ಬಾಸ್ ಮನೆಯಲ್ಲಿ ಸ್ವಿಮ್ ಸ್ಯೂಟ್​ನಲ್ಲಿ ಕಾಣಿಸಿಕೊಂಡ ಅನುಪಮಾ ಗೌಡ
Image
ಕ್ಯೂಟ್ ಅವತಾರದಲ್ಲಿ ಕಾಣಿಸಿಕೊಂಡ ಸಾನ್ಯಾ ಐಯ್ಯರ್; ಅಭಿಮಾನಿಗಳು ಏನ್​ ಅಂದ್ರು?
Image
ಬಿಗ್ ಬಾಸ್​ನಿಂದ ಹೊರ ನಡೆಯಲು ನಿರ್ಧರಿಸಿದ ಆರ್ಯವರ್ಧನ್ ಗುರೂಜಿ; ಈ ವೀಕೆಂಡ್​ನಲ್ಲೇ ಎಲಿಮಿನೇಷನ್​?
Image
ರೂಪೇಶ್ ಶೆಟ್ಟಿ-ಸಾನ್ಯಾ ಮಧ್ಯೆ ಬಂದ ಕಾವ್ಯಶ್ರೀ ಗೌಡ; ಐಯ್ಯರ್ ಕಣ್ಣಲ್ಲಿ ತುಂಬಿತು ನೀರು

ಇದನ್ನೂ ಓದಿ: ಮಹಿಳಾ ಸ್ಪರ್ಧಿಗಳ ಜೊತೆ ಮಿಂಗಲ್ ಆಗುವ ರೂಪೇಶ್ ಶೆಟ್ಟಿಯ ಕಾಲೆಳೆದ ಸುದೀಪ್

ಮರುದಿನ ನೇಹಾ ಗೌಡ ಹಾಗೂ ಅಮೂಲ್ಯ ಗೌಡ ಬಂದು ಚಿನ್ನ ಕದ್ದಿದ್ದು ನಾವೇ ಎಂದು ಒಪ್ಪಿಕೊಂಡಿದ್ದಾರೆ. ಜತೆಗೆ ಆ ಚಿನ್ನವನ್ನು ಮರಳಿ ರೂಪೇಶ್​ ಶೆಟ್ಟಿಗೆ ನೀಡಿದ್ದಾರೆ. ಕಳೆದುಕೊಂಡ ಚಿನ್ನ ಸಿಕ್ಕ ಖುಷಿಯಲ್ಲಿ ರೂಪೇಶ್ ನಿಟ್ಟುಸಿರು ಬಿಟ್ಟಿದ್ದಾರೆ.

Published On - 9:55 pm, Wed, 12 October 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ