AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಹೆಚ್ಚಾಯ್ತು ಕಳ್ಳರ ಕಾಟ; ರೂಪೇಶ್ ಶೆಟ್ಟಿ ಬಳಿ ಇದ್ದ ಚಿನ್ನ ಕದ್ದವರು ಯಾರು?

ರೂಪೇಶ್ ಶೆಟ್ಟಿ ಅವರು ಒಟಿಟಿಯಲ್ಲಿ ಗಮನ ಸೆಳೆದಿದ್ದರು. ಅವರು ಅಲ್ಲಿ ಟಾಪ್ ಒನ್ ಆಗಿದ್ದರು. ಈಗ ಅವರು ಟಿವಿ ಸೀಸನ್​ಗೆ ಬಂದು ಅಷ್ಟೇ ಜನಪ್ರಿಯತೆ ಉಳಿಸಿಕೊಂಡಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ಹೆಚ್ಚಾಯ್ತು ಕಳ್ಳರ ಕಾಟ; ರೂಪೇಶ್ ಶೆಟ್ಟಿ ಬಳಿ ಇದ್ದ ಚಿನ್ನ ಕದ್ದವರು ಯಾರು?
ರೂಪೇಶ್ ಶೆಟ್ಟಿ
TV9 Web
| Edited By: |

Updated on:Oct 12, 2022 | 10:22 PM

Share

ಬಿಗ್ ಬಾಸ್ (Bigg Boss) ಮನೆಯ ರಂಗು ದಿನ ಕಳೆದಂತೆ ಹೆಚ್ಚುತ್ತಿದೆ. ಈಗಾಗಲೇ ಎರಡು ವಾರ ಪೂರ್ಣಗೊಂಡು ಮೂರನೇ ವಾರಕ್ಕೆ ದೊಡ್ಮನೆ ಆಟ ಕಾಲಿಟ್ಟಿದೆ. ಈ ವಾರ ಹಲವರ ಮೇಲೆ ನಾಮಿನೇಷನ್​ ತೂಗುಗತ್ತಿ ಇದೆ. ಈ ಕಾರಣಕ್ಕೆ ಎಲ್ಲರೂ ಟಾಸ್ಕ್ ಬಗ್ಗೆ ಹೆಚ್ಚು ಗಮನ ನೀಡುತ್ತಿದ್ದಾರೆ. ಮೂರನೇ ವಾರದ ಕ್ಯಾಪ್ಟನ್ಸಿ ಟಾಸ್ಕ್​ಗೆ ಸ್ಪರ್ಧಿಗಳನ್ನು ಆಯ್ಕೆ ಮಾಡಲು ಬಿಗ್ ಬಾಸ್ ಕಡೆಯಿಂದ ಟಾಸ್ಕ್ ಒಂದು ಸಿಕ್ಕಿದೆ. ಈ ಟಾಸ್ಕ್​ ಪ್ರಕಾರ ಗಣಿ ಮಾದರಿಯ ಸೆಟ್ ಒಳಗೆ ತೆರಳಿ ಚಿನ್ನ ಹುಡುಕಿ ತರಬೇಕು. ಈ ರೀತಿ ತಂದ ಚಿನ್ನವನ್ನು ರೂಪೇಶ್​ ಬಳಿಯಿಂದ ಕಳುವಾಗಿದೆ. ರೂಪೇಶ್ ಶೆಟ್ಟಿ (Roopesh Shetty) ಎಲ್ಲರ ಬಳಿ ಹೋಗಿ ‘ಚಿನ್ನ ಕದ್ದಿದ್ದು ಯಾರು ಹೇಳಿ’ ಎಂದು ಗೋಗರೆದಿದ್ದಾರೆ.

ರೂಪೇಶ್ ಶೆಟ್ಟಿ ಅವರು ಒಟಿಟಿಯಲ್ಲಿ ಗಮನ ಸೆಳೆದಿದ್ದರು. ಅವರು ಅಲ್ಲಿ ಟಾಪ್ ಒನ್ ಆಗಿದ್ದರು. ಈಗ ಅವರು ಟಿವಿ ಸೀಸನ್​ಗೆ ಬಂದು ಅಷ್ಟೇ ಜನಪ್ರಿಯತೆ ಉಳಿಸಿಕೊಂಡಿದ್ದಾರೆ. ಚಿನ್ನದ ಗಣಿ ಟಾಸ್ಕ್​ನಲ್ಲಿ ರೂಪೇಶ್ ಶೆಟ್ಟಿ ಅವರು ಒಳ್ಳೆಯ ಪರ್ಫಾರ್ಮೆನ್ಸ್ ನೀಡುತ್ತಿದ್ದಾರೆ. ಈ ಟಾಸ್ಕ್ ಆರಂಭವಾದ ನಂತರದಲ್ಲಿ ದೊಡ್ಮನೆಯಲ್ಲಿ ಕಳ್ಳರ ಕಾಟ ಹೆಚ್ಚಾಗಿದೆ.

ರೂಪೇಶ್ ಶೆಟ್ಟಿ ಬಳಿ ಒಂದೂವರೆ ಕೆ.ಜಿ.ಗೂ ಅಧಿಕ ಚಿನ್ನ ಇತ್ತು. ಇದನ್ನು ಅಮೂಲ್ಯ ಗೌಡ ಹಾಗೂ ನೇಹಾ ಗೌಡ ಕದ್ದು ತಂದಿದ್ದರು. ರೂಪೇಶ್ ಶೆಟ್ಟಿ ಹೋಗಿ ನೋಡಿದಾಗ ಅಲ್ಲಿ ಚಿನ್ನವೇ ಇರಲಿಲ್ಲ. ಇದನ್ನು ಕಂಡು ರೂಪೇಶ್​ಗೆ ಶಾಕ್ ಆಗಿದೆ. ಮೊದಲು ಅರುಣ್ ಸಾಗರ್ ಬಳಿ ಹೋಗಿ ‘ನನ್ನ ಚಿನ್ನವನ್ನು ನೀವು ಕದ್ದಿದ್ದೀರಾ’ ಎಂದು ಪ್ರಶ್ನೆ ಮಾಡಿದ್ದಾರೆ ರೂಪೇಶ್. ಈ ರೀತಿ ಅವರು ಎಲ್ಲರಿಗೂ ಪ್ರಶ್ನೆ ಮಾಡುತ್ತಾ ಬಂದಿದ್ದಾರೆ. ಆದರೆ, ನಿಜವಾದ ಕಳ್ಳ ಯಾರು ಎಂಬುದು ಮಾತ್ರ ಗೊತ್ತಾಗಿಲ್ಲ.

ಇದನ್ನೂ ಓದಿ
Image
ಬಿಗ್ ಬಾಸ್ ಮನೆಯಲ್ಲಿ ಸ್ವಿಮ್ ಸ್ಯೂಟ್​ನಲ್ಲಿ ಕಾಣಿಸಿಕೊಂಡ ಅನುಪಮಾ ಗೌಡ
Image
ಕ್ಯೂಟ್ ಅವತಾರದಲ್ಲಿ ಕಾಣಿಸಿಕೊಂಡ ಸಾನ್ಯಾ ಐಯ್ಯರ್; ಅಭಿಮಾನಿಗಳು ಏನ್​ ಅಂದ್ರು?
Image
ಬಿಗ್ ಬಾಸ್​ನಿಂದ ಹೊರ ನಡೆಯಲು ನಿರ್ಧರಿಸಿದ ಆರ್ಯವರ್ಧನ್ ಗುರೂಜಿ; ಈ ವೀಕೆಂಡ್​ನಲ್ಲೇ ಎಲಿಮಿನೇಷನ್​?
Image
ರೂಪೇಶ್ ಶೆಟ್ಟಿ-ಸಾನ್ಯಾ ಮಧ್ಯೆ ಬಂದ ಕಾವ್ಯಶ್ರೀ ಗೌಡ; ಐಯ್ಯರ್ ಕಣ್ಣಲ್ಲಿ ತುಂಬಿತು ನೀರು

ಇದನ್ನೂ ಓದಿ: ಮಹಿಳಾ ಸ್ಪರ್ಧಿಗಳ ಜೊತೆ ಮಿಂಗಲ್ ಆಗುವ ರೂಪೇಶ್ ಶೆಟ್ಟಿಯ ಕಾಲೆಳೆದ ಸುದೀಪ್

ಮರುದಿನ ನೇಹಾ ಗೌಡ ಹಾಗೂ ಅಮೂಲ್ಯ ಗೌಡ ಬಂದು ಚಿನ್ನ ಕದ್ದಿದ್ದು ನಾವೇ ಎಂದು ಒಪ್ಪಿಕೊಂಡಿದ್ದಾರೆ. ಜತೆಗೆ ಆ ಚಿನ್ನವನ್ನು ಮರಳಿ ರೂಪೇಶ್​ ಶೆಟ್ಟಿಗೆ ನೀಡಿದ್ದಾರೆ. ಕಳೆದುಕೊಂಡ ಚಿನ್ನ ಸಿಕ್ಕ ಖುಷಿಯಲ್ಲಿ ರೂಪೇಶ್ ನಿಟ್ಟುಸಿರು ಬಿಟ್ಟಿದ್ದಾರೆ.

Published On - 9:55 pm, Wed, 12 October 22

Follow Us
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಆ ಶಾಸಕರಿಂದಲೇ ಅಡ್ಡಮತದಾನ? ಸಿಟಿ ರವಿ ಏನಂದ್ರು ನೋಡಿ
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಮರದ ಕೊಂಬೆ ಬಿದ್ದು ಖಾಸಗಿ ಬಸ್ ಜಖಂ; ಚಾಲಕ, ಕ್ಲೀನರ್ ಜಸ್ಟ್ ಮಿಸ್!
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕನ್ನಡ ಬಾವುಟಕ್ಕೆ ಅಪಮಾನ: ನಮ್ಮ ಮೆಟ್ರೋ ಸಿಬ್ಬಂದಿ ವಿರುದ್ಧ ಆಕ್ರೋಶ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಕೊಳ್ಳೇಗಾಲದಲ್ಲಿ ಪ್ರಿಂಟಿಂಗ್ ಪ್ರೆಸ್‌ಗೆ ನುಗ್ಗಿದ ಬೃಹತ್ ಗಾತ್ರದ ಉಡ
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ