AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಡಿಮೆ ಟಿಆರ್​ಪಿ ಪಡೆದ ‘ಸಲಾರ್​’ ಸಿನಿಮಾ; ಪ್ರಭಾಸ್​ ಅಭಿಮಾನಿಗಳಿಗೆ ನಿರಾಸೆ

‘ಕೆಜಿಎಫ್​: ಚಾಪ್ಟರ್​ 1’ ಹಾಗೂ ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾಗಳ ರೀತಿ ಉತ್ತಮ ಟಿಆರ್​ಪಿ ಪಡೆಯಲು ‘ಸಲಾರ್’ ಚಿತ್ರಕ್ಕೆ ಸಾಧ್ಯವಾಗಿಲ್ಲ. ತೆಲುಗಿನ ಕೆಲವು ಫ್ಲಾಪ್​ ಸಿನಿಮಾಗಳಿಗಿಂತಲೂ ಕಡಿಮೆ ಟಿಆರ್​ಪಿ ‘ಸಲಾರ್​’ ಚಿತ್ರಕ್ಕೆ ಬಂದಿದೆ. ಇದು ಎಲ್ಲರಿಗೂ ಅಚ್ಚರಿ ಮೂಡಿಸಿದೆ. ಪ್ರಭಾಸ್​ ನಟನೆಯ ಸಿನಿಮಾಗೆ ಇಷ್ಟು ನೀರಸ ಪ್ರತಿಕ್ರಿಯೆ ಬರಲು ಕಾರಣ ಏನು ಎಂದು ಫ್ಯಾನ್ಸ್​ ಚರ್ಚೆ ಮಾಡುತ್ತಿದ್ದಾರೆ.

ಕಡಿಮೆ ಟಿಆರ್​ಪಿ ಪಡೆದ ‘ಸಲಾರ್​’ ಸಿನಿಮಾ; ಪ್ರಭಾಸ್​ ಅಭಿಮಾನಿಗಳಿಗೆ ನಿರಾಸೆ
ಪ್ರಭಾಸ್​
ಮದನ್​ ಕುಮಾರ್​
|

Updated on: May 03, 2024 | 9:12 PM

Share

ನಟ ಪ್ರಭಾಸ್​ ಅವರು ‘ಸಲಾರ್​’ (Salaar) ಸಿನಿಮಾದ ಮೂಲಕ ಗೆಲುವಿನ ಟ್ರ್ಯಾಕ್​ಗೆ ಮರಳಿದರು. ಈ ಸಿನಿಮಾದ ತೆರೆ ಹಿಂದೆ ಘಟಾನುಘಟಿ ತಂತ್ರಜ್ಞರು ಕೆಲಸ ಮಾಡಿದ್ದಾರೆ. 2023ರ ಡಿಸೆಂಬರ್​ 22ರಂದು ಬಿಡುಗಡೆ ಆದ ಈ ಚಿತ್ರಕ್ಕೆ ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಕಮಾಯಿ ಆಗಿತ್ತು. ಬಳಿಕ ಒಟಿಟಿಗೆ ಕಾಲಿಟ್ಟಿತು. ಇತ್ತೀಚೆಗೆ ‘ಸಲಾರ್​’ ಸಿನಿಮಾ ಮೊದಲ ಬಾರಿಗೆ ಕಿರುತೆರೆಯಲ್ಲಿ ಪ್ರಸಾರ ಆಯಿತು. ಪ್ರಶಾಂತ್​ ನೀಲ್​ ನಿರ್ದೇಶನದ ಈ ಚಿತ್ರಕ್ಕೆ ಕಿರುತೆರೆಯಲ್ಲಿ ಕಳಪೆ ಟಿಆರ್​ಪಿ (Salaar TRP) ಸಿಕ್ಕಿದೆ. ಇದರಿಂದ ಪ್ರಭಾಸ್​ (Prabhas) ಅಭಿಮಾನಿಗಳಿಗೆ ನಿರಾಸೆ ಆಗಿದೆ.

‘ಸ್ಟಾರ್​ ಮಾ’ ವಾಹಿನಿಯಲ್ಲಿ ‘ಸಲಾರ್​’ ಸಿನಿಮಾದ ಟೆಲಿವಿಷನ್​ ಪ್ರೀಮಿಯರ್​ ಆಯಿತು. ಭಾರಿ ಟಿಆರ್​ಪಿ ಬರಬಹುದು ಎಂದು ಅನೇಕರು ಊಹಿಸಿದ್ದರು. ಆದರೆ ನಿರೀಕ್ಷಿತ ಪ್ರಮಾಣದಲ್ಲಿ ಟಿಆರ್​ಪಿ ಬಂದಿಲ್ಲ. ಟಿವಿಯಲ್ಲಿ ಮೊದಲ ಬಾರಿ ಪ್ರಸಾರ ಆದಾಗ ‘ಸಲಾರ್’ ಗಳಿಸಿದ್ದು ಕೇವಲ 6.52 ಟಿಆರ್​ಪಿ ಮಾತ್ರ! ಬೇರೆ ಸಿನಿಮಾಗಳಿಗೆ ಹೋಲಿಸಿದರೆ ಇದು ತುಂಬ ಕಡಿಮೆ.

ಬಾಕ್ಸ್​ ಆಫೀಸ್​ನಲ್ಲಿ ಫ್ಲಾಪ್​ ಆದ ‘ಆದಿಕೇಶವ’ ಸಿನಿಮಾಗೆ 10.47 ಟಿಆರ್​ಪಿ ಸಿಕ್ಕಿತ್ತು. ‘ನಾ ಸಾಮಿ ರಂಗ’, ‘ಸ್ಕಂದ’ ಚಿತ್ರಗಳಿಗೆ 8 ಟಿಆರ್​ಪಿ ಬಂದಿತ್ತು. ಅವುಗಳಿಗೆ ಹೋಲಿಸಿದರೆ ‘ಸಲಾರ್​’ ಸಿನಿಮಾಗೆ ಪ್ರೇಕ್ಷಕರಿಂದ ವ್ಯಕ್ತವಾದ ಪ್ರತಿಕ್ರಿಯೆ ತುಂಬ ನೀರಸವಾಗಿದೆ. ಯಾಕೆ ಈ ರೀತಿ ಆಯ್ತು ಎಂದು ಅಭಿಮಾನಿಗಳು ಚರ್ಚೆ ಮಾಡುತ್ತಿದ್ದಾರೆ. ಐಪಿಎಲ್​ ಪಂದ್ಯಗಳು ನಡೆಯುತ್ತಿರುವುದರಿಂದ, ಅದಕ್ಕೆ ಪೈಪೋಟಿ ನೀಡಲಾಗದೇ ‘ಸಲಾರ್​’ ಸಿನಿಮಾಗೆ ಕಡಿಮೆ ಟಿಆರ್​ಪಿ ಬಂದಿರಬಹುದು ಎಂದು ನೆಟ್ಟಿಗರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಯಾವಾಗ ಶುರು ಆಗಲಿದೆ ‘ಸಲಾರ್​ 2’ ಶೂಟಿಂಗ್​? ಪ್ರಭಾಸ್​ ಫ್ಯಾನ್ಸ್​ಗೆ ಇಲ್ಲಿದೆ ಸಿಹಿ ಸುದ್ದಿ

ಪ್ರಶಾಂತ್​ ನೀಲ್​ ನಿರ್ದೇಶನದ ‘ಕೆಜಿಎಫ್​: ಚಾಪ್ಟರ್​ 1’ ಚಿತ್ರಕ್ಕೆ ಬರೋಬ್ಬರಿ 11.90 ಟಿಆರ್​ಪಿ ಬಂದಿತ್ತು. ‘ಕೆಜಿಎಫ್​: ಚಾಪ್ಟರ್ 2’ ಸಿನಿಮಾ 9.15 ಟಿಆರ್​ಪಿ ಪಡೆದುಕೊಂಡಿತ್ತು. ಆದರೆ ಟಿವಿಯಲ್ಲಿ ‘ಸಲಾರ್​’ ಚಿತ್ರಕ್ಕೆ ಅಷ್ಟು ಕ್ರೇಜ್​ ಕಾಣಿಸಿಲ್ಲ. ಈ ಸಿನಿಮಾದಲ್ಲಿ ಪ್ರಭಾಸ್ ಜೊತೆ ಶ್ರುತಿ ಹಾಸನ್​, ಪೃಥ್ವಿರಾಜ್​ ಸುಕುಮಾರನ್​ ಮುಂತಾದವರು ಅಭಿನಯಿಸಿದ್ದಾರೆ. ಇದರ ಸೀಕ್ವೆಲ್​ ಕೂಡ ಸಿದ್ಧವಾಗುತ್ತಿದೆ. ಶೀಘ್ರದಲ್ಲೇ ‘ಸಲಾರ್​ 2’ ಶೂಟಿಂಗ್​ ಆರಂಭ ಆಗಲಿದೆ. ‘ಹೊಂಬಾಳೆ ಫಿಲ್ಮ್ಸ್’ ಸಂಸ್ಥೆಯು ಬಂಡವಾಳ ಹೂಡುತ್ತಿದೆ. ಸೀಕ್ವೆಲ್​ ಕೆಲಸಗಳಲ್ಲಿ ಪ್ರಶಾಂತ್​ ನೀಲ್​ ಬ್ಯುಸಿ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ