Salman Khan: ಸಲ್ಮಾನ್ ಖಾನ್ ಜೊತೆ ಹೊಸ ಸಿನಿಮಾ ಮಾಡ್ತಾರೆ ಸನ್ನಿ ಡಿಯೋಲ್?

ಸನ್ನಿ ಡಿಯೋಲ್ ಅವರು ಈ ವರ್ಷ ‘ಗದರ್ 2’ ಚಿತ್ರದ ಮೂಲಕ ಗೆದ್ದು ಬೀಗಿದ್ದಾರೆ. ಈ ಚಿತ್ರ ಭಾರತದ ಬಾಕ್ಸ್ ಆಫೀಸ್​ನಲ್ಲಿ 500 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಅವರು ಸಲ್ಮಾನ್​ ಖಾನ್​ಗೆ ವಿಶ್ ಮಾಡಿದ್ದಾರೆ.

Salman Khan: ಸಲ್ಮಾನ್ ಖಾನ್ ಜೊತೆ ಹೊಸ ಸಿನಿಮಾ ಮಾಡ್ತಾರೆ ಸನ್ನಿ ಡಿಯೋಲ್?
ಸನ್ನಿ ಡಿಯೋಲ್
Follow us
|

Updated on: Nov 21, 2023 | 2:32 PM

ಬಾಲಿವುಡ್​ನಲ್ಲಿ ಹಲವು ಚಿತ್ರಗಳು ಸೂಪರ್ ಹಿಟ್ ಆಗುತ್ತಿವೆ. ಸಿನಿಮಾಗಳು ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡುತ್ತಿವೆ. ಈಗ ಸಲ್ಮಾನ್ ಖಾನ್ ನಟನೆಯ ‘ಟೈಗರ್ 3’ ಸಿನಿಮಾ (Tiger 3 Movie) ಯಶಸ್ಸು ಕಂಡಿದೆ. ಈ ಚಿತ್ರ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 400 ಕೋಟಿ ರೂಪಾಯಿ ಗಳಿಕೆ ಮಾಡುವ ಸನಿಹದಲ್ಲಿದೆ. ಈಗ ಯಶಸ್ಸನ್ನು ತಂಡ ಎಂಜಾಯ್ ಮಾಡುತ್ತಿದೆ. ಸಲ್ಮಾನ್ ಖಾನ್ ಅವರು ‘ಟೈಗರ್ 4’ ಮಾಡಲು ಉತ್ಸುಕರಾಗಿದ್ದಾರೆ. ಈಗ ಸಲ್ಮಾನ್ ಖಾನ್​ಗೆ ಸನ್ನಿ ಡಿಯೋಲ್ ಅವರು ಶುಭಾಶಯ ತಿಳಿಸಿದ್ದಾರೆ.

ಸನ್ನಿ ಡಿಯೋಲ್ ಅವರು ಈ ವರ್ಷ ‘ಗದರ್ 2’ ಚಿತ್ರದ ಮೂಲಕ ಗೆದ್ದು ಬೀಗಿದ್ದಾರೆ. ಈ ಚಿತ್ರ ಭಾರತದ ಬಾಕ್ಸ್ ಆಫೀಸ್​ನಲ್ಲಿ 500 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಅವರು ಸಲ್ಮಾನ್​ ಖಾನ್​ಗೆ ವಿಶ್ ಮಾಡಿದ್ದಾರೆ. ಸಲ್ಮಾನ್ ಖಾನ್ ಜೊತೆ ಇರುವ ಫೋಟೋ ಪೋಸ್ಟ್ ಮಾಡಿರುವ ಅವರು ‘ಜೀತ್​ ಗಯೇ (ನೀವು ಗೆದ್ದಿರಿ)’ ಎಂದು ಸನ್ನಿ ಡಿಯೋಲ್ ಪೋಸ್ಟ್ ಮಾಡಿದ್ದಾರೆ.

ಸನ್ನಿ ಡಿಯೋಲ್, ಸಲ್ಮಾನ್ ಖಾನ್, ಕರೀಷ್ಮಾ ಕಪೂರ್ ಅವರು ‘ಜೀತ್’ ಸಿನಿಮಾದಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಈ ಚಿತ್ರವನ್ನು ರಾಜ್ ಕನ್ವರ್ ನಿರ್ದೇಶನ ಮಾಡಿದ್ದರು. ಈಗ ಕ್ಯಾಪ್ಶನ್​ನಲ್ಲಿ ‘ಜೀತ್’ ಶಬ್ದ ಬಳಕೆ ಮಾಡಿರುವುದರಿಂದ ಅನೇಕರು ‘ಜೀತ್ 2’ ಸಿನಿಮಾ ಬರಬಹುದು ಎಂದು ಊಹಿಸಿದ್ದಾರೆ. ‘ಜೀತ್ ಸಿನಿಮಾಗೆ ಸೀಕ್ವೆಲ್ ಬರುತ್ತಿದೆ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ‘ಜೀತ್ 2 ಲೋಡಿಂಗ್’ ಎಂದು ಬರೆದಿದ್ದಾರೆ.

View this post on Instagram

A post shared by Sunny Deol (@iamsunnydeol)

ಇದನ್ನೂ ಓದಿ: ವಿಶ್ವಕಪ್​ನಿಂದ ‘ಟೈಗರ್ 3’ ಕಲೆಕ್ಷನ್​ಗೆ ಹೊಡೆತ ಬಿತ್ತೆ? ಸಲ್ಮಾನ್ ಹೇಳಿದ್ದು ಹೀಗೆ

‘ಟೈಗರ್ 3’ ಸಿನಿಮಾ ಭಾರತದಲ್ಲಿ 236 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಸಲ್ಮಾನ್ ಖಾನ್ ಅವರು ಇನ್ನೂ ಹೆಚ್ಚಿನ ನಿರೀಕ್ಷೆ ಮಾಡಿದ್ದರು. ಆದರೆ, ಅಂದುಕೊಂಡಂತೆ ಆಗಲೇ ಇಲ್ಲ. ಸಲ್ಮಾನ್ ಖಾನ್ ಅವರಿಗೆ ಇರೋ ಖ್ಯಾತಿಗೆ ‘ಟೈಗರ್ 3’ ಸಿನಿಮಾ ಕನಿಷ್ಠ 300ರಿಂದ 400 ಕೋಟಿ ರೂಪಾಯಿ ಗಳಿಕೆ ಮಾಡಬೇಕಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್