Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan: ಸಲ್ಮಾನ್ ಖಾನ್ ಜೊತೆ ಹೊಸ ಸಿನಿಮಾ ಮಾಡ್ತಾರೆ ಸನ್ನಿ ಡಿಯೋಲ್?

ಸನ್ನಿ ಡಿಯೋಲ್ ಅವರು ಈ ವರ್ಷ ‘ಗದರ್ 2’ ಚಿತ್ರದ ಮೂಲಕ ಗೆದ್ದು ಬೀಗಿದ್ದಾರೆ. ಈ ಚಿತ್ರ ಭಾರತದ ಬಾಕ್ಸ್ ಆಫೀಸ್​ನಲ್ಲಿ 500 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಅವರು ಸಲ್ಮಾನ್​ ಖಾನ್​ಗೆ ವಿಶ್ ಮಾಡಿದ್ದಾರೆ.

Salman Khan: ಸಲ್ಮಾನ್ ಖಾನ್ ಜೊತೆ ಹೊಸ ಸಿನಿಮಾ ಮಾಡ್ತಾರೆ ಸನ್ನಿ ಡಿಯೋಲ್?
ಸನ್ನಿ ಡಿಯೋಲ್
Follow us
ರಾಜೇಶ್ ದುಗ್ಗುಮನೆ
|

Updated on: Nov 21, 2023 | 2:32 PM

ಬಾಲಿವುಡ್​ನಲ್ಲಿ ಹಲವು ಚಿತ್ರಗಳು ಸೂಪರ್ ಹಿಟ್ ಆಗುತ್ತಿವೆ. ಸಿನಿಮಾಗಳು ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡುತ್ತಿವೆ. ಈಗ ಸಲ್ಮಾನ್ ಖಾನ್ ನಟನೆಯ ‘ಟೈಗರ್ 3’ ಸಿನಿಮಾ (Tiger 3 Movie) ಯಶಸ್ಸು ಕಂಡಿದೆ. ಈ ಚಿತ್ರ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 400 ಕೋಟಿ ರೂಪಾಯಿ ಗಳಿಕೆ ಮಾಡುವ ಸನಿಹದಲ್ಲಿದೆ. ಈಗ ಯಶಸ್ಸನ್ನು ತಂಡ ಎಂಜಾಯ್ ಮಾಡುತ್ತಿದೆ. ಸಲ್ಮಾನ್ ಖಾನ್ ಅವರು ‘ಟೈಗರ್ 4’ ಮಾಡಲು ಉತ್ಸುಕರಾಗಿದ್ದಾರೆ. ಈಗ ಸಲ್ಮಾನ್ ಖಾನ್​ಗೆ ಸನ್ನಿ ಡಿಯೋಲ್ ಅವರು ಶುಭಾಶಯ ತಿಳಿಸಿದ್ದಾರೆ.

ಸನ್ನಿ ಡಿಯೋಲ್ ಅವರು ಈ ವರ್ಷ ‘ಗದರ್ 2’ ಚಿತ್ರದ ಮೂಲಕ ಗೆದ್ದು ಬೀಗಿದ್ದಾರೆ. ಈ ಚಿತ್ರ ಭಾರತದ ಬಾಕ್ಸ್ ಆಫೀಸ್​ನಲ್ಲಿ 500 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಅವರು ಸಲ್ಮಾನ್​ ಖಾನ್​ಗೆ ವಿಶ್ ಮಾಡಿದ್ದಾರೆ. ಸಲ್ಮಾನ್ ಖಾನ್ ಜೊತೆ ಇರುವ ಫೋಟೋ ಪೋಸ್ಟ್ ಮಾಡಿರುವ ಅವರು ‘ಜೀತ್​ ಗಯೇ (ನೀವು ಗೆದ್ದಿರಿ)’ ಎಂದು ಸನ್ನಿ ಡಿಯೋಲ್ ಪೋಸ್ಟ್ ಮಾಡಿದ್ದಾರೆ.

ಸನ್ನಿ ಡಿಯೋಲ್, ಸಲ್ಮಾನ್ ಖಾನ್, ಕರೀಷ್ಮಾ ಕಪೂರ್ ಅವರು ‘ಜೀತ್’ ಸಿನಿಮಾದಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಈ ಚಿತ್ರವನ್ನು ರಾಜ್ ಕನ್ವರ್ ನಿರ್ದೇಶನ ಮಾಡಿದ್ದರು. ಈಗ ಕ್ಯಾಪ್ಶನ್​ನಲ್ಲಿ ‘ಜೀತ್’ ಶಬ್ದ ಬಳಕೆ ಮಾಡಿರುವುದರಿಂದ ಅನೇಕರು ‘ಜೀತ್ 2’ ಸಿನಿಮಾ ಬರಬಹುದು ಎಂದು ಊಹಿಸಿದ್ದಾರೆ. ‘ಜೀತ್ ಸಿನಿಮಾಗೆ ಸೀಕ್ವೆಲ್ ಬರುತ್ತಿದೆ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ‘ಜೀತ್ 2 ಲೋಡಿಂಗ್’ ಎಂದು ಬರೆದಿದ್ದಾರೆ.

View this post on Instagram

A post shared by Sunny Deol (@iamsunnydeol)

ಇದನ್ನೂ ಓದಿ: ವಿಶ್ವಕಪ್​ನಿಂದ ‘ಟೈಗರ್ 3’ ಕಲೆಕ್ಷನ್​ಗೆ ಹೊಡೆತ ಬಿತ್ತೆ? ಸಲ್ಮಾನ್ ಹೇಳಿದ್ದು ಹೀಗೆ

‘ಟೈಗರ್ 3’ ಸಿನಿಮಾ ಭಾರತದಲ್ಲಿ 236 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಸಲ್ಮಾನ್ ಖಾನ್ ಅವರು ಇನ್ನೂ ಹೆಚ್ಚಿನ ನಿರೀಕ್ಷೆ ಮಾಡಿದ್ದರು. ಆದರೆ, ಅಂದುಕೊಂಡಂತೆ ಆಗಲೇ ಇಲ್ಲ. ಸಲ್ಮಾನ್ ಖಾನ್ ಅವರಿಗೆ ಇರೋ ಖ್ಯಾತಿಗೆ ‘ಟೈಗರ್ 3’ ಸಿನಿಮಾ ಕನಿಷ್ಠ 300ರಿಂದ 400 ಕೋಟಿ ರೂಪಾಯಿ ಗಳಿಕೆ ಮಾಡಬೇಕಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಸ್ಟಾರ್ಕ್​ ಓವರ್​ನಲ್ಲಿ ಬೌಂಡರಿ ಸಿಕ್ಸರ್‌ಗಳ ಮಳೆಗರೆದ ಸಾಲ್ಟ್
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಭಯೋತ್ಪಾದನೆ ವಿರುದ್ಧ ದೊಡ್ಡ ಹೆಜ್ಜೆ; ರಾಣಾ ಹಸ್ತಾಂತರಕ್ಕೆ ಪ್ರಲ್ಹಾದ್ ಜೋಶಿ
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ಬೇಗ ಸೆಟ್ಲ್ ಮಾಡದಿದ್ದರೆ ಎಲ್ಲರ ಬಣ್ಣ ಬಯಲು ಮಾಡ್ತೀವಿ: ಮಂಜುನಾಥ್
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ವಜೀರಾಬಾದ್ ಬ್ಯಾರೇಜ್‌ನಲ್ಲಿ ಯಮುನಾ ದಂಡೆ ಪರಿಶೀಲಿಸಿದ ಸಿಎಂ ರೇಖಾ ಗುಪ್ತಾ
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ರಂಗಾಯಣ ರಘು ಮಾತು ಕೇಳಿ ತಬ್ಬಿಕೊಂಡ ಡಾಲಿ ಧನಂಜಯ್
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿಗೆ ಸಿಎಂ ಯೋಗಿ ಆದಿತ್ಯನಾಥ್ ಧನ್ಯವಾದ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ
ರಾಷ್ಟ್ರೀಯ ಭೂಮಾಪನ ದಿನಾಚರಣೆಯನ್ನು ಪ್ರತಿವರ್ಷ ಆಚರಿಸಬೇಕು: ಸಿದ್ದರಾಮಯ್ಯ