Salman Khan: ಸಲ್ಮಾನ್ ಖಾನ್ ಜೊತೆ ಹೊಸ ಸಿನಿಮಾ ಮಾಡ್ತಾರೆ ಸನ್ನಿ ಡಿಯೋಲ್?

ಸನ್ನಿ ಡಿಯೋಲ್ ಅವರು ಈ ವರ್ಷ ‘ಗದರ್ 2’ ಚಿತ್ರದ ಮೂಲಕ ಗೆದ್ದು ಬೀಗಿದ್ದಾರೆ. ಈ ಚಿತ್ರ ಭಾರತದ ಬಾಕ್ಸ್ ಆಫೀಸ್​ನಲ್ಲಿ 500 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಅವರು ಸಲ್ಮಾನ್​ ಖಾನ್​ಗೆ ವಿಶ್ ಮಾಡಿದ್ದಾರೆ.

Salman Khan: ಸಲ್ಮಾನ್ ಖಾನ್ ಜೊತೆ ಹೊಸ ಸಿನಿಮಾ ಮಾಡ್ತಾರೆ ಸನ್ನಿ ಡಿಯೋಲ್?
ಸನ್ನಿ ಡಿಯೋಲ್
Follow us
|

Updated on: Nov 21, 2023 | 2:32 PM

ಬಾಲಿವುಡ್​ನಲ್ಲಿ ಹಲವು ಚಿತ್ರಗಳು ಸೂಪರ್ ಹಿಟ್ ಆಗುತ್ತಿವೆ. ಸಿನಿಮಾಗಳು ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡುತ್ತಿವೆ. ಈಗ ಸಲ್ಮಾನ್ ಖಾನ್ ನಟನೆಯ ‘ಟೈಗರ್ 3’ ಸಿನಿಮಾ (Tiger 3 Movie) ಯಶಸ್ಸು ಕಂಡಿದೆ. ಈ ಚಿತ್ರ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 400 ಕೋಟಿ ರೂಪಾಯಿ ಗಳಿಕೆ ಮಾಡುವ ಸನಿಹದಲ್ಲಿದೆ. ಈಗ ಯಶಸ್ಸನ್ನು ತಂಡ ಎಂಜಾಯ್ ಮಾಡುತ್ತಿದೆ. ಸಲ್ಮಾನ್ ಖಾನ್ ಅವರು ‘ಟೈಗರ್ 4’ ಮಾಡಲು ಉತ್ಸುಕರಾಗಿದ್ದಾರೆ. ಈಗ ಸಲ್ಮಾನ್ ಖಾನ್​ಗೆ ಸನ್ನಿ ಡಿಯೋಲ್ ಅವರು ಶುಭಾಶಯ ತಿಳಿಸಿದ್ದಾರೆ.

ಸನ್ನಿ ಡಿಯೋಲ್ ಅವರು ಈ ವರ್ಷ ‘ಗದರ್ 2’ ಚಿತ್ರದ ಮೂಲಕ ಗೆದ್ದು ಬೀಗಿದ್ದಾರೆ. ಈ ಚಿತ್ರ ಭಾರತದ ಬಾಕ್ಸ್ ಆಫೀಸ್​ನಲ್ಲಿ 500 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಅವರು ಸಲ್ಮಾನ್​ ಖಾನ್​ಗೆ ವಿಶ್ ಮಾಡಿದ್ದಾರೆ. ಸಲ್ಮಾನ್ ಖಾನ್ ಜೊತೆ ಇರುವ ಫೋಟೋ ಪೋಸ್ಟ್ ಮಾಡಿರುವ ಅವರು ‘ಜೀತ್​ ಗಯೇ (ನೀವು ಗೆದ್ದಿರಿ)’ ಎಂದು ಸನ್ನಿ ಡಿಯೋಲ್ ಪೋಸ್ಟ್ ಮಾಡಿದ್ದಾರೆ.

ಸನ್ನಿ ಡಿಯೋಲ್, ಸಲ್ಮಾನ್ ಖಾನ್, ಕರೀಷ್ಮಾ ಕಪೂರ್ ಅವರು ‘ಜೀತ್’ ಸಿನಿಮಾದಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಈ ಚಿತ್ರವನ್ನು ರಾಜ್ ಕನ್ವರ್ ನಿರ್ದೇಶನ ಮಾಡಿದ್ದರು. ಈಗ ಕ್ಯಾಪ್ಶನ್​ನಲ್ಲಿ ‘ಜೀತ್’ ಶಬ್ದ ಬಳಕೆ ಮಾಡಿರುವುದರಿಂದ ಅನೇಕರು ‘ಜೀತ್ 2’ ಸಿನಿಮಾ ಬರಬಹುದು ಎಂದು ಊಹಿಸಿದ್ದಾರೆ. ‘ಜೀತ್ ಸಿನಿಮಾಗೆ ಸೀಕ್ವೆಲ್ ಬರುತ್ತಿದೆ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ‘ಜೀತ್ 2 ಲೋಡಿಂಗ್’ ಎಂದು ಬರೆದಿದ್ದಾರೆ.

View this post on Instagram

A post shared by Sunny Deol (@iamsunnydeol)

ಇದನ್ನೂ ಓದಿ: ವಿಶ್ವಕಪ್​ನಿಂದ ‘ಟೈಗರ್ 3’ ಕಲೆಕ್ಷನ್​ಗೆ ಹೊಡೆತ ಬಿತ್ತೆ? ಸಲ್ಮಾನ್ ಹೇಳಿದ್ದು ಹೀಗೆ

‘ಟೈಗರ್ 3’ ಸಿನಿಮಾ ಭಾರತದಲ್ಲಿ 236 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಸಲ್ಮಾನ್ ಖಾನ್ ಅವರು ಇನ್ನೂ ಹೆಚ್ಚಿನ ನಿರೀಕ್ಷೆ ಮಾಡಿದ್ದರು. ಆದರೆ, ಅಂದುಕೊಂಡಂತೆ ಆಗಲೇ ಇಲ್ಲ. ಸಲ್ಮಾನ್ ಖಾನ್ ಅವರಿಗೆ ಇರೋ ಖ್ಯಾತಿಗೆ ‘ಟೈಗರ್ 3’ ಸಿನಿಮಾ ಕನಿಷ್ಠ 300ರಿಂದ 400 ಕೋಟಿ ರೂಪಾಯಿ ಗಳಿಕೆ ಮಾಡಬೇಕಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಕನ್ನಡ ಚಿತ್ರರಂಗದ ಬಗ್ಗೆ, ಶಿವಣ್ಣನ ಬಗ್ಗೆ ನಾನಿ ಮೆಚ್ಚುಗೆಯ ಮಾತು
ಕನ್ನಡ ಚಿತ್ರರಂಗದ ಬಗ್ಗೆ, ಶಿವಣ್ಣನ ಬಗ್ಗೆ ನಾನಿ ಮೆಚ್ಚುಗೆಯ ಮಾತು
ಸದನದಲ್ಲಿ ರೇವಣ್ಣ ಕಾರ್ನರ್ ಆದಾಗ ಅಣ್ಣನ ನೆರವಿಗೆ ಧಾವಿಸಿದ ಕುಮಾರಣ್ಣ
ಸದನದಲ್ಲಿ ರೇವಣ್ಣ ಕಾರ್ನರ್ ಆದಾಗ ಅಣ್ಣನ ನೆರವಿಗೆ ಧಾವಿಸಿದ ಕುಮಾರಣ್ಣ
‘ರಾಕ್ಷಸ’ ವಿನಯ್ ಅಟ್ಟಹಾಸ, ತಲೆ ತಗ್ಗಿಸಿದ ಕಾರ್ತಿಕ್
‘ರಾಕ್ಷಸ’ ವಿನಯ್ ಅಟ್ಟಹಾಸ, ತಲೆ ತಗ್ಗಿಸಿದ ಕಾರ್ತಿಕ್
ರಾಜಕೀಯ ಭವಿಷ್ಯ ಕುರಿತು ವಿ ಸೋಮಣ್ಣ ಗೊಂದಲದಲ್ಲಿರುವುದು ಮಾತುಗಳಿಂದ ಸ್ಪಷ್ಟ
ರಾಜಕೀಯ ಭವಿಷ್ಯ ಕುರಿತು ವಿ ಸೋಮಣ್ಣ ಗೊಂದಲದಲ್ಲಿರುವುದು ಮಾತುಗಳಿಂದ ಸ್ಪಷ್ಟ
ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್
ಐಸಿಸ್ ಸಂಪರ್ಕ ಹೊಂದಿರುವ ವ್ಯಕ್ತಿ ವಿಜಯಪುರದಲ್ಲಿದ್ದಾನೆ: ಬಸನಗೌಡ ಯತ್ನಾಳ್
ವಿಪಕ್ಷ ಸದಸ್ಯರಿಂದ ಸದನದ ಸಮಯ ಹಾಳು ಮತ್ತು ಜನಕ್ಕೆ ವಂಚನೆ: ಸಿದ್ದರಾಮಯ್ಯ
ವಿಪಕ್ಷ ಸದಸ್ಯರಿಂದ ಸದನದ ಸಮಯ ಹಾಳು ಮತ್ತು ಜನಕ್ಕೆ ವಂಚನೆ: ಸಿದ್ದರಾಮಯ್ಯ
ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ
ಸೋಮಣ್ಣ ಎಲ್ಲೂ ಹೋಗಲ್ಲ, ಅವರೊಂದಿಗೆ ಮಾತಾಡುತ್ತೇನೆ: ಬಿಎಸ್ ಯಡಿಯೂರಪ್ಪ
ನಾನು ಮೊದಲು ಸ್ಟ್ರಾಂಗ್ ಆಗಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ: ಸಿದ್ದರಾಮಯ್ಯ
ನಾನು ಮೊದಲು ಸ್ಟ್ರಾಂಗ್ ಆಗಿದ್ದನ್ನು ಬಿಜೆಪಿ ಒಪ್ಪಿಕೊಂಡಿದೆ: ಸಿದ್ದರಾಮಯ್ಯ
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಬೆಳಗಾವಿ ಅಧಿವೇಶನ: ಉತ್ತರ ಕರ್ನಾಟಕದ ಕಡೆಗಣನೆಯಿಂದ ರೊಚ್ಚಿಗೆದ್ದ ಸವದಿ
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!
ಡಿಸೆಂಬರ್ 6ರಂದು ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದ ಸೋಮಣ್ಣ ಮಾತು ಬದಲು!