AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Salman Khan: ಸಲ್ಮಾನ್ ಖಾನ್ ಜೊತೆ ಹೊಸ ಸಿನಿಮಾ ಮಾಡ್ತಾರೆ ಸನ್ನಿ ಡಿಯೋಲ್?

ಸನ್ನಿ ಡಿಯೋಲ್ ಅವರು ಈ ವರ್ಷ ‘ಗದರ್ 2’ ಚಿತ್ರದ ಮೂಲಕ ಗೆದ್ದು ಬೀಗಿದ್ದಾರೆ. ಈ ಚಿತ್ರ ಭಾರತದ ಬಾಕ್ಸ್ ಆಫೀಸ್​ನಲ್ಲಿ 500 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಅವರು ಸಲ್ಮಾನ್​ ಖಾನ್​ಗೆ ವಿಶ್ ಮಾಡಿದ್ದಾರೆ.

Salman Khan: ಸಲ್ಮಾನ್ ಖಾನ್ ಜೊತೆ ಹೊಸ ಸಿನಿಮಾ ಮಾಡ್ತಾರೆ ಸನ್ನಿ ಡಿಯೋಲ್?
ಸನ್ನಿ ಡಿಯೋಲ್
ರಾಜೇಶ್ ದುಗ್ಗುಮನೆ
|

Updated on: Nov 21, 2023 | 2:32 PM

Share

ಬಾಲಿವುಡ್​ನಲ್ಲಿ ಹಲವು ಚಿತ್ರಗಳು ಸೂಪರ್ ಹಿಟ್ ಆಗುತ್ತಿವೆ. ಸಿನಿಮಾಗಳು ಸಾವಿರಾರು ಕೋಟಿ ರೂಪಾಯಿ ಬಿಸ್ನೆಸ್ ಮಾಡುತ್ತಿವೆ. ಈಗ ಸಲ್ಮಾನ್ ಖಾನ್ ನಟನೆಯ ‘ಟೈಗರ್ 3’ ಸಿನಿಮಾ (Tiger 3 Movie) ಯಶಸ್ಸು ಕಂಡಿದೆ. ಈ ಚಿತ್ರ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 400 ಕೋಟಿ ರೂಪಾಯಿ ಗಳಿಕೆ ಮಾಡುವ ಸನಿಹದಲ್ಲಿದೆ. ಈಗ ಯಶಸ್ಸನ್ನು ತಂಡ ಎಂಜಾಯ್ ಮಾಡುತ್ತಿದೆ. ಸಲ್ಮಾನ್ ಖಾನ್ ಅವರು ‘ಟೈಗರ್ 4’ ಮಾಡಲು ಉತ್ಸುಕರಾಗಿದ್ದಾರೆ. ಈಗ ಸಲ್ಮಾನ್ ಖಾನ್​ಗೆ ಸನ್ನಿ ಡಿಯೋಲ್ ಅವರು ಶುಭಾಶಯ ತಿಳಿಸಿದ್ದಾರೆ.

ಸನ್ನಿ ಡಿಯೋಲ್ ಅವರು ಈ ವರ್ಷ ‘ಗದರ್ 2’ ಚಿತ್ರದ ಮೂಲಕ ಗೆದ್ದು ಬೀಗಿದ್ದಾರೆ. ಈ ಚಿತ್ರ ಭಾರತದ ಬಾಕ್ಸ್ ಆಫೀಸ್​ನಲ್ಲಿ 500 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದೆ. ಅವರು ಸಲ್ಮಾನ್​ ಖಾನ್​ಗೆ ವಿಶ್ ಮಾಡಿದ್ದಾರೆ. ಸಲ್ಮಾನ್ ಖಾನ್ ಜೊತೆ ಇರುವ ಫೋಟೋ ಪೋಸ್ಟ್ ಮಾಡಿರುವ ಅವರು ‘ಜೀತ್​ ಗಯೇ (ನೀವು ಗೆದ್ದಿರಿ)’ ಎಂದು ಸನ್ನಿ ಡಿಯೋಲ್ ಪೋಸ್ಟ್ ಮಾಡಿದ್ದಾರೆ.

ಸನ್ನಿ ಡಿಯೋಲ್, ಸಲ್ಮಾನ್ ಖಾನ್, ಕರೀಷ್ಮಾ ಕಪೂರ್ ಅವರು ‘ಜೀತ್’ ಸಿನಿಮಾದಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದರು. ಈ ಚಿತ್ರವನ್ನು ರಾಜ್ ಕನ್ವರ್ ನಿರ್ದೇಶನ ಮಾಡಿದ್ದರು. ಈಗ ಕ್ಯಾಪ್ಶನ್​ನಲ್ಲಿ ‘ಜೀತ್’ ಶಬ್ದ ಬಳಕೆ ಮಾಡಿರುವುದರಿಂದ ಅನೇಕರು ‘ಜೀತ್ 2’ ಸಿನಿಮಾ ಬರಬಹುದು ಎಂದು ಊಹಿಸಿದ್ದಾರೆ. ‘ಜೀತ್ ಸಿನಿಮಾಗೆ ಸೀಕ್ವೆಲ್ ಬರುತ್ತಿದೆ’ ಎಂದು ಕೆಲವರು ಬರೆದುಕೊಂಡಿದ್ದಾರೆ. ಇನ್ನೂ ಕೆಲವರು ‘ಜೀತ್ 2 ಲೋಡಿಂಗ್’ ಎಂದು ಬರೆದಿದ್ದಾರೆ.

View this post on Instagram

A post shared by Sunny Deol (@iamsunnydeol)

ಇದನ್ನೂ ಓದಿ: ವಿಶ್ವಕಪ್​ನಿಂದ ‘ಟೈಗರ್ 3’ ಕಲೆಕ್ಷನ್​ಗೆ ಹೊಡೆತ ಬಿತ್ತೆ? ಸಲ್ಮಾನ್ ಹೇಳಿದ್ದು ಹೀಗೆ

‘ಟೈಗರ್ 3’ ಸಿನಿಮಾ ಭಾರತದಲ್ಲಿ 236 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಸಲ್ಮಾನ್ ಖಾನ್ ಅವರು ಇನ್ನೂ ಹೆಚ್ಚಿನ ನಿರೀಕ್ಷೆ ಮಾಡಿದ್ದರು. ಆದರೆ, ಅಂದುಕೊಂಡಂತೆ ಆಗಲೇ ಇಲ್ಲ. ಸಲ್ಮಾನ್ ಖಾನ್ ಅವರಿಗೆ ಇರೋ ಖ್ಯಾತಿಗೆ ‘ಟೈಗರ್ 3’ ಸಿನಿಮಾ ಕನಿಷ್ಠ 300ರಿಂದ 400 ಕೋಟಿ ರೂಪಾಯಿ ಗಳಿಕೆ ಮಾಡಬೇಕಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?