AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇದು ನನ್ನ ಕೆಲಸವಲ್ಲ’; ಬಿಗ್ ಬಾಸ್ ಸೆಟ್​​ನಲ್ಲೇ ಸಲ್ಮಾನ್ ಖಾನ್ ಗರಂ

ಬಿಗ್ ಬಾಸ್ ಸೀಸನ್ 20ರ ಶೂಟಿಂಗ್ ವೇಳೆ ಬಾಲಿವುಡ್ ನಟ ಸಲ್ಮಾನ್ ಖಾನ್ ಫೋಟೋಗ್ರಾಫರ್‌ಗಳ ನಡೆಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೌಬಾಯ್ ಲುಕ್‌ನಲ್ಲಿ ಕಾಣಿಸಿಕೊಂಡ ಸಲ್ಲು ತಮ್ಮಿಂದ ಸೂಕ್ತ ಅಂತರ ಕಾಯ್ದುಕೊಳ್ಳುವಂತೆ ಕ್ಯಾಮೆರಾಮೆನ್‌ಗಳಿಗೆ ಎಚ್ಚರಿಕೆ ನೀಡಿದ್ದಾರೆ. ಸೆಪ್ಟೆಂಬರ್ 6ರಿಂದ ಬಿಗ್ ಬಾಸ್ ಪ್ರಸಾರ ಆರಂಭವಾಗಲಿದೆ.

‘ಇದು ನನ್ನ ಕೆಲಸವಲ್ಲ’; ಬಿಗ್ ಬಾಸ್ ಸೆಟ್​​ನಲ್ಲೇ ಸಲ್ಮಾನ್ ಖಾನ್ ಗರಂ
ಸಲ್ಮಾನ್
ರಾಜೇಶ್ ದುಗ್ಗುಮನೆ
|

Updated on:Sep 05, 2026 | 8:46 AM

Share

ಮುಖ್ಯಾಂಶಗಳು

  • ಸೆಪ್ಟೆಂಬರ್ 6ರಿಂದ ಬಿಗ್ ಬಾಸ್ ಹಬ್ಬ
  • ಪ್ರಾಪರ್ ಡಿಸ್ಟೆನ್ಸ್ ಇಡದ ಪಪಾರಾಜಿಗಳ ವಿರುದ್ಧ ಸಲ್ಲು ಗರಂ!
  • ಕೌಬಾಯ್ ಗೆಟಪ್‌ನಲ್ಲಿ ಸಲ್ಮಾನ್ ಧಮಾಕಾ

ಬಾಲಿವುಡ್ ನಟ ಸಲ್ಮಾನ್ ಖಾನ್ ಮತ್ತೊಮ್ಮೆ ಕಿರುತೆರೆಯ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ‘ಬಿಗ್ ಬಾಸ್’ (Bigg Boss) ಮೂಲಕ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದ್ದಾರೆ. ಈ ವಾರಾಂತ್ಯದಲ್ಲಿ ಆರಂಭವಾಗಲಿರುವ ಬಿಗ್ ಬಾಸ್ ಸೀಸನ್ 20ರ ಶೂಟಿಂಗ್ ಹಂತದಲ್ಲೇ ಸಲ್ಲು ಭಾರಿ ಸುದ್ದಿಯಾಗಿದ್ದಾರೆ. ತಮ್ಮ ವಿಶಿಷ್ಟ ಕೌಬಾಯ್ ಲುಕ್ ಮೂಲಕ ಅವರು ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದ್ದಾರೆ. ಅವರ ಕೋಪವೂ ಈಗ ಚರ್ಚೆಯ ಕೇಂದ್ರಬಿಂದು ಆಗಿದೆ.

ಗ್ರ್ಯಾಂಡ್ ಪ್ರಿಮಿಯರ್ ಆರಂಭಕ್ಕೂ ಮುನ್ನ ಮಾಧ್ಯಮದವರನ್ನು ಬಿಗ್ ಬಾಸ್ ಸೆಟ್​ ಒಳಗೆ ಬಿಟ್ಟುಕೊಳ್ಳಲಾಯಿತು. ಕ್ಯಾಮೆರಾಮೆನ್‌ಗಳು ವೇದಿಕೆಯ ಹತ್ತಿರಕ್ಕೆ ಬಂದು ಗೊಂದಲ ಸೃಷ್ಟಿಸಿದರು. ಈ ವೇಳೆ ಸಲ್ಲು ಫೋಟೋಗ್ರಾಫರ್‌ಗಳ ವಿರುದ್ಧ ತುಸು ಅಸಮಾಧಾನಗೊಂಡರು. ಬಳಿಕ ಕೆರಳಿದ ಸಲ್ಮಾನ್ ಖಾನ್, ಅಂತರ ಕಾಯ್ದುಕೊಳ್ಳುವಂತೆ ಅವರಿಗೆ ಸೂಚನೆ ನೀಡಿದರು.

‘ಇದು ನನ್ನ ಕೆಲಸವಲ್ಲ. ಕ್ಯಾಮೆರಾ ಮುಂದೆ ಬಂದು ನಿಲ್ಲುವ ಅಗತ್ಯ ನನಗೆ ಖಂಡಿತ ಇಲ್ಲ’ ಎಂದು ಅವರು ಗರಂ ಆದರು. ನಂತರ ಮತ್ತೆ ಫೋಟೋ ನೀಡುವಂತೆ ಕೇಳಿದಾಗ ಸಲ್ಲು ಕಿರಿಕಿರಿಗೊಳಗಾದರು. ಪ್ರಾಪರ್ ಡಿಸ್ಟೆನ್ಸ್ ಕಾಯ್ದುಕೊಳ್ಳುವಂತೆ ಅವರು ಕಟ್ಟುನಿಟ್ಟಾಗಿ ಹೇಳಿದರು.

ಸಲ್ಮಾನ್ ಕೌಬಾಯ್ ಗೆಟಪ್‌ನಲ್ಲಿ ಮಿಂಚಿದ್ದಾರೆ. ಡಾರ್ಕ್ ಬ್ರೌನ್ ಲೆದರ್ ಹ್ಯಾಟ್ ಧರಿಸಿದ್ದ ಅವರು, ಅದಕ್ಕೆ ಮ್ಯಾಚ್ ಆಗುವಂತೆ ಬೆಳ್ಳಿ ಬಕಲ್ ಇರುವ ಬೆಲ್ಟ್ ಹಾಕಿದ್ದಾರೆ. ಕೈಯಲ್ಲಿ ಅವರ ಸಿಗ್ನೇಚರ್ ಟರ್ಕೋಯಿಶ್ ಬ್ರೇಸ್‌ಲೆಟ್ ಇತ್ತು. ಈ ಬಾರಿ ಹಿಂದಿ ಬಿಗ್ ಬಾಸ್​​ನಲ್ಲಿ ಯಾವ ಥೀಮ್ ಇರಲಿದೆ ಎನ್ನುವ ಕುತೂಹಲ ಮೂಡಿದೆ.

ಇದನ್ನೂ ಓದಿ: ಬಿಗ್ ಬಾಸ್​ಗೆ ಎಂಟ್ರಿ ಕೊಡೋ ಸ್ಪರ್ಧಿಗಳು ಇವರೇ ನೋಡಿ; ವಿಡಿಯೋದಲ್ಲೇ ರಿವೀಲ್

ಬಿಗ್ ಬಾಸ್ ಸೀಸನ್ 20 ಸೆಪ್ಟೆಂಬರ್ 6ರಂದು ಕಲರ್ಸ್ ಟಿವಿ ಹಾಗೂ ಜಿಯೋ ಹಾಟ್‌ಸ್ಟಾರ್‌ನಲ್ಲಿ ಪ್ರಸಾರವಾಗಲಿದೆ. ಇದರೊಂದಿಗೆ ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಆವೃತ್ತಿಗಳು ಒಂದೇ ದಿನ ಆರಂಭವಾಗಲಿವೆ. ಕನ್ನಡದಲ್ಲಿ ಸುದೀಪ್, ತಮಿಳಿನಲ್ಲಿ ವಿಜಯ್ ಸೇತುಪತಿ, ತೆಲುಗಿನಲ್ಲಿ ಅಕ್ಕಿನೇನಿ ನಾಗಾರ್ಜುನ ಹಾಗೂ ಮಲಯಾಳಂನಲ್ಲಿ ಮೋಹನ್​ಲಾಲ್ ಅವರು ಶೋನ ನಡೆಸಿಕೊಡಲಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:46 am, Sat, 5 September 26

Follow Us
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಕೃಷ್ಣ ಜನ್ಮಾಷ್ಟಮಿ 2026: ಉಡುಪಿ ಶ್ರೀಕೃಷ್ಣ ಮಠದಲ್ಲಿ ಅರ್ಘ್ಯ ಪ್ರದಾನ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ ಭಾರಿ ಪ್ರಮಾಣದ ಸ್ಫೋಟಕ ಜಪ್ತಿ
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಇಂದು ಈ ರಾಶಿಯವರಿಗಿದೆ ಐದು ಗ್ರಹಗಳ ಶುಭಫಲ!
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಕಣ್ಣೀರಿಡುತ್ತಾ ಕೆಎಸ್‌ಆರ್‌ಟಿಸಿ ಬಸ್​​ಗೆ ಮುತ್ತನ್ನಿಟ್ಟ ಕೇರಳದ ಚಾಲಕ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ದಕ್ಷಿಣದ ಗೋವರ್ಧನಗಿರಿ ಎಂದು ಕರೆಯುವುದೇಕೆ
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಟಿವಿ9 ಇಂಪ್ಯಾಕ್ಟ್: 8 ವರ್ಷದಿಂದ ಆಗದ ಕೆಲಸ ಕೇವಲ ಹತ್ತು ದಿನದಲ್ಲೇ ಆಯ್ತು!
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ಬಿಗ್ ಬಾಸ್ ಸ್ಪರ್ಧಿಗಳ ವಿಡಿಯೋ ಹಂಚಿಕೊಂಡ ಕಲರ್ಸ್ ಕನ್ನಡ; ಯಾರು ಗೊತ್ತಾಯ್ತಾ
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಧಾರಾಕಾರ ಮಳೆ; ರಸ್ತೆಯಲ್ಲಿ ನಿಂತ ನೀರಿನಲ್ಲಿ ಈಜಾಡಿದ ಮಕ್ಕಳು
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ವಿಚ್ಛೇದನದ ಬಗ್ಗೆ ಕೇಳಿದ್ದಕ್ಕೆ ದುನಿಯಾ ವಿಜಯ್ ನೀಡಿದ ಪ್ರತಿಕ್ರಿಯೆ ಏನು?
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್
ಉದ್ಯಾನವನಗಳ ಸಂರಕ್ಷಣಾ ತಿದ್ದುಪಡಿ ವಿಧೇಯಕ ಸರ್ಕಾರಕ್ಕೆ ವಾಪಸ್