Sign In

By signing in or creating an account, you agree with Associated Broadcasting Company's Terms & Conditions and Privacy Policy.

Sudha Murthy: ನಟ ಸಲ್ಮಾನ್ ಖಾನ್ ಬಗ್ಗೆ ಪ್ರೀತಿಯ ಮಾತುಗಳನ್ನಾಡಿದ ಸುಧಾ ಮೂರ್ತಿ

‘ದಿ ಕಪಿಲ್​ ಶರ್ಮಾ ಶೋ’ಗೆ ಸಾಕಷ್ಟು ಜನಪ್ರಿಯತೆ ಇದೆ. ಅನೇಕ ಸೆಲೆಬ್ರಿಟಿಗಳು ಈ ಶೋಗೆ ಬಂದು ಹೋಗಿದ್ದಾರೆ. ಸುಧಾ ಮೂರ್ತಿ ಕೂಡ ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

Sudha Murthy: ನಟ ಸಲ್ಮಾನ್ ಖಾನ್ ಬಗ್ಗೆ ಪ್ರೀತಿಯ ಮಾತುಗಳನ್ನಾಡಿದ ಸುಧಾ ಮೂರ್ತಿ
ಸಲ್ಮಾನ್ ಖಾನ್-ಸುಧಾ ಮೂರ್ತಿ
Follow us
ರಾಜೇಶ್ ದುಗ್ಗುಮನೆ
|

Updated on: May 16, 2023 | 9:30 AM

ಇನ್ಫೋಸಿಸ್ ಸಂಸ್ಥಾಪಕ ಎನ್​.ಆರ್​. ನಾರಾಯಣ್ ಮೂರ್ತಿ (NR Narayana Murthy) ಪತ್ನಿ ಸುಧಾ ಮೂರ್ತಿ ಪರಿಚಯ ಬಹುತೇಕರಿಗೆ ಇದೆ. ಅವರು ತುಂಬಾನೇ ಸಿಂಪಲ್​. ಅಷ್ಟೊಂದು ಹಣ ಇದ್ದರೂ ಅವರು ಎಂದಿಗೂ ಬೀಗಿದವರಲ್ಲ. ಒಂದೇ ಒಂದು ದಿನ ಜಂಬ ತೋರಿಸಿದವರಲ್ಲ. ಅವರು ಎಲ್ಲೇ ತೆರಳಿದರೂ ಸೀರೆ ಉಟ್ಟೇ ತೆರಳುತ್ತಾರೆ. ಸುಧಾ ಮೂರ್ತಿ ಅವರು ಇತ್ತೀಚೆಗೆ ಕಪಿಲ್ ಶರ್ಮಾ ಶೋಗೆ ಆಗಮಿಸಿದ್ದರು. ಈ ವೇಳೆ ಅವರು ಅನೇಕ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. ಸಲ್ಮಾನ್ ಖಾನ್ (Salman Khan) ಬಗ್ಗೆ ಅವರು ಬಾಯ್ತುಂಬ ಹೊಗಳಿದ್ದಾರೆ.

‘ದಿ ಕಪಿಲ್​ ಶರ್ಮಾ ಶೋ’ಗೆ ಸಾಕಷ್ಟು ಜನಪ್ರಿಯತೆ ಇದೆ. ಅನೇಕ ಸೆಲೆಬ್ರಿಟಿಗಳು ಈ ಶೋಗೆ ಬಂದು ಹೋಗಿದ್ದಾರೆ. ಸುಧಾ ಮೂರ್ತಿ ಕೂಡ ಈ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ವೇದಿಕೆ ಏರುವಾಗ ಅವರು ಸೀರೆ ಧರಿಸಿ ಸಿಂಪಲ್ ಆಗಿ ಬಂದಿದ್ದರು ಅನ್ನೋದು ವಿಶೇಷ. ಅವರ ಸರಳತೆ ಎಲ್ಲರಿಗೂ ಇಷ್ಟ ಆಗಿದೆ. ಅವರನ್ನು ಎಲ್ಲರೂ ಮೆಚ್ಚಿಕೊಂಡಿದ್ದಾರೆ. ‘ದಿ ಕಪಿಲ್ ಶರ್ಮಾ’ ಕಾರ್ಯಕ್ರಮದಲ್ಲಿ ಸಲ್ಮಾನ್ ಖಾನ್ ಬಗ್ಗೆ ಸುಧಾ ಮೂರ್ತಿ ಮಾತನಾಡಿದ್ದಾರೆ.

2015ರಲ್ಲಿ ತೆರೆಗೆ ಬಂದ ‘ಬಜರಂಗಿ ಭಾಯಿಜಾನ್’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಲ್ಲಿ ಸಲ್ಮಾನ್ ಖಾನ್ ಬಜರಂಗಿ ಭಕ್ತನಾಗಿ ಕಾಣಿಸಿಕೊಂಡರೆ ಹರ್ಷಾಲಿ ಮಲ್ಹೋತ್ರಾ ಅವರು ಮುನ್ನಿ ಆಗಿ ಗಮನ ಸೆಳೆದರು. ಈ ಸಿನಿಮಾ ಒಳ್ಳೆಯ ಕಲೆಕ್ಷನ್ ಮಾಡಿತು. ಈ ಸಿನಿಮಾಗೆ ಸಲ್ಮಾನ್ ಖಾನ್ ಮಾತ್ರ ಸೂಕ್ತ ಎಂದು ಸುಧಾಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.

‘ಮಗುವಿನ ಮುಗ್ಧತೆಯನ್ನು ಸಲ್ಮಾನ್ ಖಾನ್ ಮಾತ್ರ ತೆರೆಯ ಮೇಲೆ ತರಬಲ್ಲರು. ಅವರು ಬಜರಂಗಿ ಭಾಯಿಜಾನ್ ಸಿನಿಮಾ ಮಾಡಲು ಯೋಗ್ಯ ಹೀರೋ’ ಎಂದಿದ್ದಾರೆ ಸುಧಾ ಮೂರ್ತಿ. ಈ ವಿಡಿಯೋ ಸಲ್ಮಾನ್ ಖಾನ್ ಅಭಿಮಾನಿಗಳ ಫ್ಯಾನ್ ಪೇಜ್​ಗಳಲ್ಲಿ ವೈರಲ್ ಆಗಿದೆ. ಈ ಬಗ್ಗೆ ಸಲ್ಮಾನ್ ಖಾನ್ ಯಾವ ರೀತಿಯಲ್ಲಿ ಪ್ರತಿಕ್ರಿಯಿಸುತ್ತಾರೆ ಅನ್ನೋದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ಮೊದಲ ಭೇಟಿಯಲ್ಲಿ ಭಾವಿ ಗಂಡ ಇನ್ಫೋಸಿಸ್ ನಾರಾಯಣ ಮೂರ್ತಿಯನ್ನು ನೋಡಿ ಯಾರಪ್ಪಾ ಇವ ಬಸ್​ ಕಂಡಕ್ಟರ್​ ಅಂದುಕೊಂಡ​ ಸುಧಾ ಮೂರ್ತಿ!

‘ಬಜರಂಗಿ ಭಾಯಿಜಾನ್ 2’ ಸಿನಿಮಾ ಬರಲಿದೆ ಎನ್ನುವ ಸುದ್ದಿ ಚರ್ಚೆಯಲ್ಲಿದೆ. ಆದರೆ, ಈ ಸಿನಿಮಾ ಯಾವಾಗ ಬರುತ್ತದೆ ಎಂಬಿತ್ಯಾದಿ ವಿಚಾರಗಳ ಬಗ್ಗೆ ಇನ್ನೂ ಅಪ್​ಡೇಟ್ ಸಿಕ್ಕಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
ನಂಜನಗೂಡು ನಂಜುಂಡೇಶ್ವರ ದೇವಾಲಯದಲ್ಲಿ ಓಕುಳಿ ಉತ್ಸವ ಸಂಭ್ರಮ
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?
Devotional: ಮಹಿಳೆಯರಿಗೆ ಕೈ ಕೆರೆತವಾದ್ರೆ ಏನೆಲ್ಲಾ ಆಗುತ್ತೆ ಗೊತ್ತಾ?