ಬಿಗ್​ ಬಾಸ್​​​ನಲ್ಲಿ ರಾಜ್​ ಕುಂದ್ರಾ ಬಗ್ಗೆ ಜೋಕ್​ ಮಾಡಿದ ಸಲ್ಮಾನ್​; ಮುಜುಗರಕ್ಕೊಳಗಾದ ಶಮಿತಾ ಶೆಟ್ಟಿ

 ವಿಧಿ ಪಾಂಡ್ಯ ಅವರು ಬಾತ್​ರೂಮ್​ನಲ್ಲಿದ್ದಂತೆ ಪ್ರತಿಕ್​ ಸೆಹಜ್​ಪಾಲ್​ ಅವರು ಬಾತ್​​ರೂಮ್​ ಲಾಕ್​ ತೆಗೆದಿದ್ದರು. ಈ ವಿಚಾರದಲ್ಲಿ ಸಲ್ಮಾನ್​ ಖಾನ್​ ಕ್ಲಾಸ್​ ತೆಗೆದುಕೊಳ್ಳುತ್ತಿದ್ದರು.

ಬಿಗ್​ ಬಾಸ್​​​ನಲ್ಲಿ ರಾಜ್​ ಕುಂದ್ರಾ ಬಗ್ಗೆ ಜೋಕ್​ ಮಾಡಿದ ಸಲ್ಮಾನ್​; ಮುಜುಗರಕ್ಕೊಳಗಾದ ಶಮಿತಾ ಶೆಟ್ಟಿ
ಸಲ್ಮಾನ್​ ಖಾನ್​-ಶಮಿತಾ ಶೆಟ್ಟಿ
Follow us
| Updated By: ರಾಜೇಶ್ ದುಗ್ಗುಮನೆ

Updated on:Oct 10, 2021 | 2:59 PM

‘ಬಿಗ್​ ಬಾಸ್​ ಸೀಸನ್​ 15’ ಆರಂಭಗೊಂಡು ವಾರ ಕಳೆದಿದೆ. ಸಾಕಷ್ಟು ಸ್ಪರ್ಧಿಗಳು ಬಿಗ್​ ಬಾಸ್​ ಮನೆ ಸೇರಿದ್ದಾರೆ. ಸಲ್ಮಾನ್​ ಖಾನ್​ ವೀಕೆಂಡ್​ನಲ್ಲಿ ಬಿಗ್​ ಬಾಸ್​ ವೇದಿಕೆ ಏರಿ ಸ್ಪರ್ಧಿಗಳ ಜತೆ ಸಂವಾದ ನಡೆಸಿದ್ದಾರೆ. ಆಗ ಅವರು ಸಾಕಷ್ಟು ಜೋಕ್​ಗಳನ್ನು ಹೇಳಿದ್ದಾರೆ. ತಪ್ಪು ಮಾಡಿದವರಿಗೆ ಅವರು ಸರಿಯಾಗಿ ಕ್ಲಾಸ್ ತೆಗದುಕೊಂಡಿದ್ದಾರೆ. ಈ ವಾರ ಬಿಗ್​ ಬಾಸ್​ ವೇದಿಕೆ ಮೇಲೆ ಸಲ್ಮಾನ್​ ಖಾನ್​ ಅವರು ರಾಜ್​ ಕುಂದ್ರಾ ಹೆಸರನ್ನು ತೆಗೆದುಕೊಂಡರು. ಈ ವೇಳೆ ರಾಜ್​ ಕುಂದ್ರಾ ಪತ್ನಿ ಶಿಲ್ಪಾ ಶೆಟ್ಟಿ ತಂಗಿ ಶಮಿತಾ ಶೆಟ್ಟಿ ಕೊಂಚ ಮುಜುಗರಕ್ಕೆ ಒಳಗಾದರು.  

ವಿಧಿ ಪಾಂಡ್ಯ ಅವರು ಬಾತ್​ರೂಮ್​ನಲ್ಲಿದ್ದಾಗಲೇ ಪ್ರತೀಕ್​ ಸೆಹಜ್​ಪಾಲ್​ ಅವರು ಬಾತ್​​ರೂಮ್​ ಲಾಕ್​ ತೆಗೆದಿದ್ದರು. ಈ ವಿಚಾರದಲ್ಲಿ ಸಲ್ಮಾನ್​ ಖಾನ್​ ಕ್ಲಾಸ್​ ತೆಗೆದುಕೊಳ್ಳುತ್ತಿದ್ದರು. ಈ ವಿಚಾರದಲ್ಲಿ ಪ್ರತಿಕ್​ಗೆ ಎಚ್ಚರಿಕೆ ನೀಡಿದ ಅವರು, ನಿಶಾಂತ್ ಭಟ್​ ಕಡೆ ತಿರುಗಿ ಪ್ರತಿಕ್​ ಅವರನ್ನು ಏಕೆ ಬೆಂಬಲಿಸಿದಿರಿ ಎಂದು ಪ್ರಶ್ನೆ ಮಾಡಿದರು. ಆ ನಂತರ ಕರಣ್​ ಕುಂದ್ರಾ ಜತೆ ಮಾತನಾಡೋಕೆ ಸಲ್ಮಾನ್​ ತಿರುಗಿದರು. ಈ ವೇಳೆ ಕರಣ್​ ಕುಂದ್ರಾ ಅವರನ್ನು ರಾಜ್​ ಕುಂದ್ರಾ ಎಂದು ಸಂಬೋಧಿಸಿ ನಕ್ಕರು ಸಲ್ಮಾನ್​. ಈ ವೇಳೆ ಶಮಿತಾ ಶೆಟ್ಟಿಗೆ ಅಚ್ಚರಿ ಹಾಗೂ ಮುಜುಗರ ಎರಡೂ ಒಟ್ಟಿಗೇ ಆಯಿತು. ಉಳಿದವರೆಲ್ಲರೂ ಕರಣ್​ ಕುಂದ್ರಾಗೆ ರಾಜ್​ ಕುಂದ್ರಾ ಎಂದು ಕರೆದಿದ್ದನ್ನು ಕೇಳಿ ನಕ್ಕರು. ಈ ವೇಳೆ ಶಮಿತಾಗೂ ನಗೋದು ಅನಿವಾರ್ಯವಾಯಿತು.

ಅನೇಕರು ಕರಣ್​ ಕುಂದ್ರಾ ಹೆಸರನ್ನು ರಾಜ್ ಕುಂದ್ರಾ ಎಂದು ಕನ್​ಫ್ಯೂಸ್​ ಮಾಡಿಕೊಂಡ ಉದಾಹರಣೆ ಇದೆಯಂತೆ. ಈ ವಿಚಾರವನ್ನು ಕರಣ್​ ಅವರೇ ಅನೇಕ ಬಾರಿ ಹೇಳಿಕೊಂಡಿದ್ದಾರೆ. ಈ ಕಾರಣಕ್ಕೆ ಸಲ್ಮಾನ್​ ಖಾನ್​ ಅವರು ಕರಣ್​ಗೆ ರಾಜ್​ ಕುಂದ್ರಾ ಎಂದು ಕರೆದಿದ್ದಾರೆ.

ರಾಜ್​ ಕುಂದ್ರಾ ಅವರು ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಸಿಲುಕಿದ ನಂತರ ಅವರ ಕುಟುಂಬ ಮುಜುಗರಕ್ಕೆ ಒಳಗಾಯಿತು. ಶಿಲ್ಪಾ ಅಭಿಮಾನಿಗಳೇ ರಾಜ್​ ಕುಂದ್ರಾ ವಿರುದ್ಧ ಸಾಕಷ್ಟು ಟ್ರೋಲ್​ಗಳನ್ನು ಮಾಡಿದ್ದರು.

ಇದನ್ನೂ ಓದಿ: ‘ಕುಟುಂಬಕ್ಕೆ ಸಮಸ್ಯೆ ಆದಾಗ ಮೊದಲು ಬರೋದು ಸಲ್ಮಾನ್’​​; ಶಾರುಖ್​ ಮಾತನಾಡಿದ್ದ ಹಳೆಯ ವಿಡಿಯೋ ವೈರಲ್​

Published On - 2:55 pm, Sun, 10 October 21

ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಬರೋಬ್ಬರಿ 124 ಮೀಟರ್ ಸಿಕ್ಸ್ ಸಿಡಿಸಿದ ಶಕ್ಕೆರೆ ಪ್ಯಾರಿಸ್
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಪ್ರಧಾನಿ ಮೋದಿ ಬಗ್ಗೆ ಅಪಾರ ಗೌರವ ಇದೆ ಎಂದ ಡಿಕೆ ಸುರೇಶ್
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಹೀಗೂ ಉಂಟು! ಸಾರಿಗೆ ಬಸ್ಸಿಗೂ ಗ್ರಾಮಸ್ಥರಿಂದ ಭಾವನಾತ್ಮಕ ಬೀಳ್ಕೊಡುಗೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಗದಗ: ಲಂಚದ ಆರೋಪ, ಅಧಿಕಾರಿಗೆ ಸಚಿವ ಎಚ್​ಕೆ ಪಾಟೀಲ್​ ಹಿಗ್ಗಾಮುಗ್ಗಾ ತರಾಟೆ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಪ್ರವಾಹ ಸ್ಥಳದಲ್ಲಿ ಟಿಎಂಸಿ ಶಾಸಕರು, ಸಂಸದರಿದ್ದ ದೋಣಿ ಪಲ್ಟಿ
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ಹೇಳಿದ ದುನಿಯಾ ವಿಜಯ್; ಕಾರಣವೇನು?
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಈ ರಾಶಿಯವರು ಗೊತ್ತಾಗದೇ ಕೆಟ್ಟವರ ಸಹವಾಸವನ್ನು ಮಾಡುವಿರಿ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ
ಚಲಿಸುವಾಗಲೇ ನೀರಿನಲ್ಲಿ ತೇಲಿದ ಕಾರು; ಪ್ರಾಣದ ಹಂಗು ತೊರೆದು ಜನರ ರಕ್ಷಣೆ