ಸಿದ್ದಾರ್ಥ್​ ಶುಕ್ಲಾ ಸಾವಿನ ಬಗ್ಗೆ ನಗುತ್ತಾ ಮಾತನಾಡಿದ್ದ ಸಲ್ಮಾನ್​ ಖಾನ್​: ಶಾಕಿಂಗ್​ ವಿಡಿಯೋ ವೈರಲ್

Salman Khan | Sidharth Shukla: ಸಲ್ಮಾನ್​ ಖಾನ್​ ಆ ವಿಡಿಯೋದಲ್ಲಿ ಅಂದು ತಮಾಷೆಗೆ ಹೇಳಿದ ಮಾತುಗಳು ಇಂದು ಅಕ್ಷರಶಃ ನಿಜವಾಗಿರುವುದು ದುರಂತವೇ ಸರಿ. ಈ ವಿಡಿಯೋ ಬಗ್ಗೆ ಜನರು ಹಲವು ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ.

ಸಿದ್ದಾರ್ಥ್​ ಶುಕ್ಲಾ ಸಾವಿನ ಬಗ್ಗೆ ನಗುತ್ತಾ ಮಾತನಾಡಿದ್ದ ಸಲ್ಮಾನ್​ ಖಾನ್​: ಶಾಕಿಂಗ್​ ವಿಡಿಯೋ ವೈರಲ್
ಸಲ್ಮಾನ್​ ಖಾನ್ - ಸಿದ್ದಾರ್ಥ್​​ ಶುಕ್ಲಾ
Follow us
| Updated By: ಮದನ್​ ಕುಮಾರ್​

Updated on: Sep 04, 2021 | 8:15 AM

ಹಿಂದಿ ಕಿರುತೆರೆಯಲ್ಲಿ ಖ್ಯಾತಿ ಪಡೆದಿದ್ದ ನಟ ಸಿದ್ದಾರ್ಥ್​ ಶುಕ್ಲಾ ಅವರು ಬಿಗ್ ಬಾಸ್​ ಹಿಂದಿ 13ನೇ ಸೀಸನ್​ ವಿನ್ನರ್​ ಆದ ಬಳಿಕ ದೇಶಾದ್ಯಂತ ಜನಪ್ರಿಯತೆ ಪಡೆದುಕೊಂಡಿದ್ದರು. ಸೆ.2ರಂದು ಅವರ ನಿಧನದ ಸುದ್ದಿ ಕೇಳಿ ಎಲ್ಲರಿಗೂ ಶಾಕ್​ ಆಯಿತು. ಮನೆಯಲ್ಲೇ ಅವರಿಗೆ ಹೃದಯಾಘಾತ ಆಯಿತು ಎಂದು ಹೇಳಲಾಗುತ್ತಿದೆಯಾದರೂ ಕೆಲವು ಅನುಮಾನಗಳು ಕೂಡ ಹುಟ್ಟಿಕೊಂಡಿವೆ. ಅದಕ್ಕೆಲ್ಲ ಮರಣೋತ್ತರ ಪರೀಕ್ಷೆಯ ವರದಿಯಲ್ಲೇ ಉತ್ತರ ಸಿಗಬೇಕಿದೆ. ಈ ನಡುವೆ ಸಿದ್ದಾರ್ಥ್​ ಸಾವಿನ ಬಗ್ಗೆ ಸಲ್ಮಾನ್​ ಖಾನ್​ ಅವರು ವರ್ಷಗಳ ಹಿಂದೆಯೇ ನಗುನಗುತ್ತಾ ಮಾತನಾಡಿದ್ದ ವಿಡಿಯೋ ಈಗ ವೈರಲ್​ ಆಗುತ್ತಿದೆ!

ಬಿಗ್​ ಬಾಸ್​ ನಡೆಯುತ್ತಿದ್ದ ಸಂದರ್ಭದಲ್ಲಿ ಸಿದ್ದಾರ್ಥ್​ ಶುಕ್ಲಾ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕಾದ ಅನಿವಾರ್ಯತೆ ಬಂದಿತ್ತು. ಆಗ ಶೋ ನಿರೂಪಣೆ ಮಾಡುತ್ತಿದ್ದ ಸಲ್ಮಾನ್​ ಖಾನ್​ ಅವರು ವಿಡಿಯೋ ಕಾಲ್​ ಮೂಲಕ ಮಾತನಾಡಿದ್ದರು. ಆ ಸಂದರ್ಭದಲ್ಲಿ ಸಿದ್ದಾರ್ಥ್​ರ ಸಾವಿನ ಕುರಿತು ಸಲ್ಮಾನ್​ ತಮಾಷೆ ಮಾಡಿದ್ದರು. ಆದರೆ ಅಂದು ಮಾಡಿದ ತಮಾಷೆ ಇಂದು ನಿಜವಾಗಿದೆ! ಆ ಕಾರಣದಿಂದ ಸೋಶಿಯಲ್​ ಮೀಡಿಯಾದಲ್ಲಿ ಈ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ.

ಸಲ್ಮಾನ್​ ಖಾನ್​ ಆ ವಿಡಿಯೋದಲ್ಲಿ ಅಂದು ತಮಾಷೆಗೆ ಹೇಳಿದ ಮಾತುಗಳು ಇಂದು ಅಕ್ಷರಶಃ ನಿಜವಾಗಿರುವುದು ದುರಂತವೇ ಸರಿ. ‘ಅಭಿಮಾನಿಗಳು ನಿಮ್ಮನ್ನು ಕಾಪಾಡಿದ್ದಾರೆ. ಆದರೆ ಮೇಲಿರುವ ದೇವರು ಕಾಪಾಡದಿದ್ದರೆ ಎಲ್ಲರೂ ಅಳುತ್ತಾರೆ. ಏನೇ ಅಂದರೂ ಒಳ್ಳೆಯ ಮನುಷ್ಯ ಆಗಿದ್ದ ಎನ್ನುತ್ತಾರೆ. ಕೂಗಾಡುತ್ತಿದ್ದ, ನೇರವಾಗಿ ಮಾತನಾಡುತ್ತಿದ್ದ. ಆದರೂ ಒಳ್ಳೆಯ ಮನಸ್ಸಿನ ವ್ಯಕ್ತಿ ಆಗಿದ್ದ ಅಂತ ಜನರು ಕಣ್ಣೀರು ಹಾಕುತ್ತಾರೆ’ ಎಂದು ತಮಾಷೆಯಾಗಿ ಮಾತನಾಡುತ್ತ ಸಲ್ಮಾನ್​ ಖಾನ್​ ನಕ್ಕಿದ್ದರು.

ಸಲ್ಮಾನ್​ ಮಾಡಿದ ಈ ತಮಾಷೆಗೆ ಸಿದ್ದಾರ್ಥ್​ ಶುಕ್ಲಾ ಕೂಡ ಮನಸಾರೆ ನಕ್ಕಿದ್ದರು. ‘ಕೆಲವರಿಗೆ ಬಿಗ್​ ಬಾಸ್​ ಮನೆಯಲ್ಲಿ ಪ್ರೀತಿ ಆಯಿತು. ಕೆಲವರಿಗೆ ಮದುವೆ ಆಯಿತು. ಕೆಲವರು ಬಿಗ್​ ಬಾಸ್​ ಮನೆಯಲ್ಲೇ ಸತ್ತು ಹೋಗಿಬಿಟ್ಟರು ಎನ್ನುವಂತಾಗುತ್ತದೆ’ ಎಂದು ಸಲ್ಲು ತಮಾಷೆ ಮಾಡುತ್ತ ಬಿದ್ದುಬಿದ್ದು ನಕ್ಕಿದ್ದರು. ಈ ವಿಡಿಯೋ ಬಗ್ಗೆ ಜನರು ಹಲವು ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಿದ್ದಾರೆ. ತಮಾಷೆಗೂ ಯಾರ ಸಾವಿನ ಬಗ್ಗೆಯೂ ಮಾತನಾಡಬೇಡಿ. ಮುಂದೊಂದು ದಿನ ಅದು ನಿಜವಾಗಬಹುದು ಎಂಬ ಕಮೆಂಟ್​ಗಳು ಬರುತ್ತಿವೆ.

ಇದನ್ನೂ ಓದಿ:

ಸಿದ್ದಾರ್ಥ್​ ಶುಕ್ಲಾ ಅನುಮಾನಾಸ್ಪದ ಸಾವು: ಗೆಳತಿ ಫೋನ್​ ಆಫ್​; ಮರಣೋತ್ತರ ಪರೀಕ್ಷೆ ವರದಿ ಮೇಲೆ ಎಲ್ಲರ ಕಣ್ಣು

ಪ್ರೇಯಸಿ ಮಡಿಲಲ್ಲೇ ಪ್ರಾಣ ಬಿಟ್ರಾ ಸಿದ್ದಾರ್ಥ್​? ಹೃದಯಾಘಾತ ಆಗೋದಕ್ಕೂ ಮುನ್ನ ನಡೆದಿದ್ದೇನು? ಇಲ್ಲಿದೆ ವಿವರ

ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಬೇಲೂರಿನಲ್ಲಿ ಮಿತಿಮೀರಿದ ಬೀಟಮ್ಮ ಗ್ಯಾಂಗ್ ಹಾವಳಿ
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಮೈಸೂರಿನಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಬಾಂಧವರು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು
ಬಂಟ್ವಾಳದಲ್ಲಿ ಮುಸ್ಲಿಮರಿಗೆ ಸಿಹಿ ಹಂಚಿ ಭಾವೈಕ್ಯತೆ ಮೆರೆದ ಹಿಂದೂಗಳು