AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ತಾನ್ಯಾ ಮಿತ್ತಲ್ ಬಾಯಿಂದ ಕೆಟ್ಟ ಶಬ್ದ ಬಂದಿಲ್ಲ, ರಾಮ, ರಾಮ ಮಾತ್ರ ಹೇಳ್ತಾರೆ’; ಸಲ್ಲು ಪ್ರಶಂಸೆ

ಸಲ್ಮಾನ್ ಖಾನ್ ‘ಬಿಗ್ ಬಾಸ್ ಹಿಂದಿ 19’ರಲ್ಲಿ ತಾನ್ಯಾ ಮಿತ್ತಲ್ ನಡೆಗೆ ಮೆಚ್ಚುಗೆ ಸೂಚಿಸಿದ್ದಾರೆ. ತಾನ್ಯಾ ಎಂದಿಗೂ ಕೆಟ್ಟ ಪದ ಬಳಸದಿರುವುದಕ್ಕೆ ಶ್ಲಾಘಿಸಿದ್ದಾರೆ. ಆದರೆ, ತಾನ್ಯಾ ವಿರುದ್ಧ ವಂಚನೆ ಆರೋಪವಿದ್ದು, ಕೇಸ್ ದಾಖಲಾಗಿದೆ. ಬಿಗ್ ಬಾಸ್ ಮನೆಯಲ್ಲೇ ಅವರನ್ನು ಬಂಧಿಸುವ ಸಾಧ್ಯತೆ ಕುರಿತು ಚರ್ಚೆ ನಡೆದಿದೆ.

‘ತಾನ್ಯಾ ಮಿತ್ತಲ್ ಬಾಯಿಂದ ಕೆಟ್ಟ ಶಬ್ದ ಬಂದಿಲ್ಲ, ರಾಮ, ರಾಮ ಮಾತ್ರ ಹೇಳ್ತಾರೆ’; ಸಲ್ಲು ಪ್ರಶಂಸೆ
ತಾನ್ಯಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 18, 2025 | 7:48 AM

Share

ಸಲ್ಮಾನ್ ಖಾನ್ ಅವರು ‘ಬಿಗ್ ಬಾಸ್ ಹಿಂದಿ ಸೀಸನ್ 19’ ನಡೆಸಿಕೊಡುತ್ತಾ ಇದ್ದಾರೆ. ಅವರಿಂದ ಶೋಗೆ ಹೊಸ ಕಳೆ ಬಂದಿದೆ ಎಂದರೂ ತಪ್ಪಾಗಲಾರದು. ಅವರು ಸ್ಪರ್ಧಿಗಳನ್ನು ಹೊಗಳೋದಾಗಲಿ, ಅವರ ಬಗ್ಗೆ ಕೂಲ್ ಆಗಿ ಮಾತನಾಡೋದಾಗಲಿ ಕಡಿಮೆ. ಈಗ ತಾನ್ಯಾ ಮಿತ್ತಲ್ ಬಗ್ಗೆ ಸಲ್ಮಾನ್ ಖಾನ್ ಅವರು ಪ್ರಶಂಸೆ ಹೊರಹಾಕಿದ್ದಾರೆ. ಅವರ ಬಾಯಿಂದ ಯಾವುದೇ ಕೆಟ್ಟ ಪದ ಬಳಕೆ ಆಗಿಲ್ಲ ಎಂದು ಹೆಮ್ಮೆ ಹೊರಹಾಕಿದ್ದಾರೆ. ಈ ಹೊಗಳಿಕೆಯಿಂದ ತಾನ್ಯ ಕೂಡ ಖುಷಿ ಆದರು.

ತಾನ್ಯಾ ಮಿತ್ತಲ್ ಅವರು ಬಿಗ್ ಬಾಸ್​ಗೆ ಬಂದಾಗಿನಿಂದಲೂ ಗಮನ ಸೆಳೆಯುತ್ತಿದ್ದಾರೆ. ಅವರು ತಮ್ಮ ಹೆಸರಲ್ಲಿ ಸಾಕಷ್ಟು ಕಂಪನಿ ಇದೆ, ಕೋಟ್ಯಾಂತರ ರೂಪಾಯಿ ಆಸ್ತಿ ಇದೆ ಎಂದೆಲ್ಲ ಹೇಳಿಕೊಂಡಿದ್ದಾರೆ. ಇದನ್ನು ಕೆಲವರು ನಂಬಿದ್ದಾರೆ. ಬಿಗ್ ಬಾಸ್ ಮನೆಯಲ್ಲೇ ಕೆಲವರು ಇದರ ಬಗ್ಗೆ ಅನುಮಾನ ಹೊರಹಾಕಿದ್ದಾರೆ. ಈಗ ತಾನ್ಯಾ ಬಗ್ಗೆ ಸಲ್ಮಾನ್ ಖಾನ್ ಮೆಚ್ಚುಗೆಯ ಮಾತುಗಳನ್ನು ಆಡಿದರು.

ಇದನ್ನೂ ಓದಿ
Image
ಒಂದೇ ದಿನ ಒಟಿಟಿಗೆ ಕಾಲಿಟ್ಟ ಕನ್ನಡದ ಎರಡು ಹಿಟ್ ಚಿತ್ರಗಳು; ಮಿಸ್ ಮಾಡಬೇಡಿ
Image
ಅಶ್ವಿನಿಯ ಚಮಚ ಆದ ಜಾನ್ವಿ; ಹೇಳಿದಂತೆ ಕುಣೀತಾರೆ ತಕತೈ, ತಕತೈ
Image
ರಕ್ಷಿತಾ ಗುಂಡಿಗೆ ಮೆಚ್ಚಲೇಬೇಕು; ಅಶ್ವಿನಿ-ಜಾನ್ವಿ ಕೂಗಾಡಿದರೂ ಜಗಲ್ಲೂ ಇಲ್ಲ
Image
ಆಲಿಯಾ ಹೊಸ ಮನೆಯಲ್ಲಿ ಮೈಸೂರಿನ ಅರುಣ್ ಯೋಗಿರಾಜ್ ಕೆತ್ತಿದ ಗಣಪತಿ ಮೂರ್ತಿ

‘ನೀಲಂ ಹಾಗೂ ತಾನ್ಯಾ ಕೆಟ್ಟ ಶಬ್ದ ಬಂದಿಲ್ಲ. ತಾನ್ಯಾ ವಿರುದ್ಧ ಯಾರಾದರೂ ಜಗಳ ಮಾಡಿದರೆ ಅವರು ರಾಮ್​, ರಾಮ್​ ರಾಮ್ ಎನ್ನುತ್ತಾರೆ. ಶಕ್ತಿ ಸಿಗಲಿ ಎಂದು ಅವರು ಆ ರೀತಿ ಮಾಡುತ್ತಾರೆ’ ಎಂದು ಸಲ್ಮಾನ್ ಖಾನ್ ಅವರು ಮೆಚ್ಚುಗೆ ಸೂಚಿಸಿದರು.  ಸಲ್ಮಾನ್ ಖಾನ್ ಅವರ ಮಾತನ್ನು ಅನೇಕರು ಒಪ್ಪಿಕೊಂಡಿದ್ದಾರೆ. ತಾನ್ಯಾ ಅವರು ಬ್ಯೂಟಿ ಹಾಗೂ ಬ್ರಿಲಿಯನ್ಸಿ ಒಟ್ಟಿಗೆ ಇದೆ ಎಂದು ಅನೇಕರು ಹೇಳಿದ್ದು ಇದೆ.

ಇದನ್ನೂ ಓದಿ: ಬಿಗ್ ಬಾಸ್​ ಮನೆಯಲ್ಲಿದ್ದ ತಾನ್ಯಾ ಮಿತ್ತಲ್ ಶೀಘ್ರವೇ ಅರೆಸ್ಟ್?

ತಾನ್ಯಾ ಅವರು ವಿವಾದಗಳ ಮೂಲಕವೂ ಸುದ್ದಿಯಲ್ಲಿದ್ದಾರೆ. ಅವರು ಅನೇಕ ಸುಳ್ಳುಗಳನ್ನು ಹೇಳಿದ್ದಾರೆ ಮತ್ತು ತಮಗೆ ಮೋಸ ಮಾಡಿದ್ದಾರೆ ಎಂದು ವ್ಯಕ್ತಿಯೋರ್ವ ದೂರು ನೀಡಿದ್ದಾನೆ. ಹೀಗಾಗಿ, ಅವರ ವಿರುದ್ಧ ಕೇಸ್ ದಾಖಲಾಗಿದೆ. ಬಿಗ್ ಬಾಸ್ ಮನೆಯಲ್ಲಿ ಇರುವಾಗಲೇ ಅವರನ್ನು ಬಂಧಿಸಿ ಕರೆದುಕೊಂಡು ಹೋಗಲಾಗುತ್ತದೆಯೇ ಎಂಬ ಪ್ರಶ್ನೆಯೂ ಮೂಡಿದೆ. ಅವರು ಫಿನಾಲೆವರೆಗೂ ಇರುತ್ತಾರೆ ಎಂಬುದು ಅನೇಕರ ಅಭಿಪ್ರಾಯ. ಈ ವಿಚಾರ ವೀಕೆಂಡ್​ನಲ್ಲಿ ಚರ್ಚೆ ಆಗುತ್ತದೆಯಾ ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ