AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bigg Boss 16: ಬಿಗ್​ ಬಾಸ್​ ನಿರೂಪಣೆಗೆ ಸಲ್ಮಾನ್​ ಖಾನ್​ ಕೇಳಿದ್ದು 1000 ಕೋಟಿ ರೂ. ಸಂಬಳ? ಆದರೆ ಆಗಿದ್ದೇ ಬೇರೆ

Salman Khan Remuneration: ಸದ್ಯದ ಮಾರುಕಟ್ಟೆಯ ಸ್ಥಿತಿಗತಿ ಆಧರಿಸಿ ಸಂಭಾವನೆ ಮೊತ್ತವನ್ನು ವಾಹಿನಿಯವರು ನಿರ್ಧರಿಸಿದ್ದಾರೆ. ಆ ಮೊತ್ತವನ್ನು ಒಪ್ಪಿಕೊಂಡು ‘ಬಿಗ್​ ಬಾಸ್​’ ಶೋ ನಡೆಸಿಕೊಡಲು ಸಲ್ಮಾನ್​ ಖಾನ್​ ಒಪ್ಪಿಕೊಂಡಿದ್ದಾರೆ ಎಂದು ವರದಿ ಆಗಿದೆ.

Bigg Boss 16: ಬಿಗ್​ ಬಾಸ್​ ನಿರೂಪಣೆಗೆ ಸಲ್ಮಾನ್​ ಖಾನ್​ ಕೇಳಿದ್ದು 1000 ಕೋಟಿ ರೂ. ಸಂಬಳ? ಆದರೆ ಆಗಿದ್ದೇ ಬೇರೆ
ಸಲ್ಮಾನ್ ಖಾನ್
TV9 Web
| Edited By: |

Updated on: Sep 20, 2022 | 3:07 PM

Share

ನಟ ಸಲ್ಮಾನ್​ ಖಾನ್​ (Salman Khan) ಅವರು ಸಿನಿಮಾಗಳಲ್ಲಿ ಅಭಿನಯಿಸುವುದರ ಜೊತೆಗೆ ನಿರೂಪಕನಾಗಿಯೂ ಡಿಮ್ಯಾಂಡ್​ ಸೃಷ್ಟಿಸಿಕೊಂಡಿದ್ದಾರೆ. ಅವರು ಬಿಗ್​ ಬಾಸ್​ ನಿರೂಪಣೆ ಮಾಡುವ ಶೈಲಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಅನೇಕ ಸೀಸನ್​ಗಳಿಂದ ಅವರೇ ನಿರೂಪಣೆಯ ಜವಾಬ್ದಾರಿ ವಹಿಸಿಕೊಂಡು ಬಂದಿದ್ದಾರೆ. ಇನ್ನೇನು ಕೆಲವೇ ದಿನಗಳಲ್ಲಿ ಹಿಂದಿ ಬಿಗ್​ ಬಾಸ್​ ಹೊಸ ಸೀಸನ್​ (Bigg Boss 16) ಆರಂಭ ಆಗಲಿದೆ. ಈ ಹೊಸ ಆವೃತ್ತಿಗಾಗಿ ಸಲ್ಮಾನ್​ ಖಾನ್​ ಅವರು ಬರೋಬ್ಬರಿ 1000 ಕೋಟಿ ರೂಪಾಯಿ ಸಂಭಾವನೆ (Salman Khan Remuneration) ಕೇಳಿದ್ದಾರೆ ಎಂಬ ಸುದ್ದಿ ಹರಡಿದೆ. ಆದರೆ ವಾಹಿನಿಯವರು ಅಷ್ಟೆಲ್ಲ ಕೊಡಲು ಸಾಧ್ಯವಿಲ್ಲ ಅಂತ ಹೇಳಿದ್ದಾರೆ ಎನ್ನಲಾಗಿದೆ. ಈ ಕುರಿತು ‘ಡಿಎನ್​ಎ’ ವರದಿ ಮಾಡಿದೆ.

ಮೂಲಗಳ ಪ್ರಕಾರ, ಕಳೆದ ಸೀಸನ್​ನಲ್ಲಿ ಸಲ್ಮಾನ್​ ಖಾನ್​ ಅವರು ಬಿಗ್​ ಬಾಸ್​ ನಿರೂಪಣೆಗೆ 350 ಕೋಟಿ ರೂಪಾಯಿ ಚಾರ್ಜ್​ ಮಾಡಿದ್ದರು. ಈ ವರ್ಷ ಅದನ್ನು ಮೂರು ಪಟ್ಟು ಹೆಚ್ಚು ಮಾಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂಬುದು ಗಾಸಿಪ್​ ಮಂದಿಯ ಮಾತು. ಆದರೆ ‘ಕಲರ್ಸ್​’ ವಾಹಿನಿಯವರು ಸಾವಿರ ಕೋಟಿ ರೂಪಾಯಿ ಸಂಭಾವನೆ ನೀಡಿದರೆ ನಷ್ಟ ಅನುಭವಿಸಬೇಕಾಗುತ್ತದೆ ಎಂಬ ಕಾರಣದಿಂದ ಅಷ್ಟು ಸಂಬಳ ನೀಡಲು ಸಾಧ್ಯವಿಲ್ಲ ಎಂದಿದ್ದಾರಂತೆ.

ವಾಹಿನಿಯವರು ನೋ ಎಂದಮೇಲೆ ಸಲ್ಮಾನ್​ ಖಾನ್​ ಅವರ ಮುಂದಿನ ನಿರ್ಧಾರ ಏನು? ಆ ಬಗ್ಗೆಯೂ ಗುಸುಗುಸು ಕೇಳಿಬಂದಿದೆ. ಸದ್ಯದ ಮಾರುಕಟ್ಟೆಯ ಸ್ಥಿತಿಗತಿ ಆಧರಿಸಿ ಸಂಭಾವನೆಯಲ್ಲಿ ಇನ್ನಷ್ಟು ಕಡಿತಗೊಳಿಸಲು ವಾಹಿನಿಯವರು ನಿರ್ಧರಿಸಿದ್ದಾರೆ. ಹಾಗಾಗಿ ಈ ಹಿಂದಿನ ಸೀಸನ್​ಗಿಂತಲೂ ಕಡಿಮೆ ಸಂಭಾವನೆ ಪಡೆದುಕೊಂಡು ಶೋ ನಡೆಸಿಕೊಡಲು ಸಲ್ಲು ಒಪ್ಪಿಕೊಂಡಿದ್ದಾರೆ ಎಂದು ವರದಿ ಆಗಿದೆ.

ಇದನ್ನೂ ಓದಿ
Image
Yash: ಯಶ್​ ಗೆಟಪ್​ ಕಾಪಿ ಮಾಡಿದ್ರಾ ಸಲ್ಮಾನ್​ ಖಾನ್​; ಬಿ-ಟೌನ್​ ತುಂಬ ಹಬ್ಬಿದೆ ಈ ಮಾತು
Image
Salman Khan: ಗನ್​ ಇಟ್ಟುಕೊಳ್ಳಲು ಸಲ್ಮಾನ್​ ಖಾನ್​ಗೆ ಸಿಕ್ತು ಲೈಸೆನ್ಸ್​; ಕೊಲೆ ಬೆದರಿಕೆ ಬೆನ್ನಲ್ಲೇ ವಿಶೇಷ ಅನುಮತಿ
Image
Swara Bhaskar: ಸಲ್ಮಾನ್​ ಖಾನ್​ ಬಳಿಕ ನಟಿ ಸ್ವರಾ ಭಾಸ್ಕರ್​ಗೆ ಕೊಲೆ ಬೆದರಿಕೆ; ಸಾವರ್ಕರ್​ ಬಗ್ಗೆ ಮಾತಾಡಿದ್ದಕ್ಕೆ ಆಕ್ರೋಶ
Image
ಅವಕಾಶ ಇಲ್ಲದಾಗ 2 ಸಾವಿರ ರೂ. ಕೊಟ್ಟು ಸುಳ್ಳು ಸುದ್ದಿ ಮಾಡಿಸಿದ್ದ ಸಲ್ಮಾನ್​ ಖಾನ್​; ಒಪ್ಪಿಕೊಂಡು ಕಣ್ಣೀರಿಟ್ಟ ನಟ

ಈ ಸಂಖ್ಯೆಗಳ ಬಗ್ಗೆ ಎಲ್ಲಿಯೂ ಅಧಿಕೃತ ಹೇಳಿಕೆ ಪ್ರಕಟ ಆಗಿಲ್ಲ. ಹೊಸ ಸೀಸನ್​ ಯಾವಾಗ ಆರಂಭ ಆಗಲಿದೆ ಎಂಬುದು ಕೂಡ ತಿಳಿದುಬಂದಿಲ್ಲ. ಪ್ರೇಕ್ಷಕರ ಊಹೆಯ ಪ್ರಕಾರ, ಅಕ್ಟೋಬರ್​ 1ರಂದು ‘ಬಿಗ್​ ಬಾಸ್​ ಹಿಂದಿ ಸೀಸನ್​ 16’ ಪ್ರಾರಂಭ ಆಗಲಿದೆ. ಪ್ರಸ್ತುತ ‘ಕಲರ್ಸ್​’ ವಾಹಿನಿಯಲ್ಲಿ ‘ಖತ್ರೋಂಕಿ ಕಿಲಾಡಿ 12’ ಶೋ ಪ್ರಸಾರ ಆಗುತ್ತಿದೆ. ಆ ಕಾರ್ಯಕ್ರಮ ಸೆಪ್ಟೆಂಬರ್​ 25ಕ್ಕೆ ಅಂತ್ಯವಾಗಲಿದೆ. ಆ ನಂತರವೇ ಬಿಗ್​ ಬಾಸ್​ ಹೊಸ ಸೀಸನ್​ ಶುರುವಾಲಿದೆ.

ಕಳೆದ ವರ್ಷ ಹಿಂದಿಯಲ್ಲಿ ‘ಬಿಗ್​ ಬಾಸ್​ ಒಟಿಟಿ’ ಮೊದಲ ಸೀಸನ್​ ಪ್ರಸಾರ ಆಯಿತು. ಅದನ್ನು ಕರಣ್​ ಜೋಹರ್ ನಿರೂಪಣೆ ಮಾಡಿದ್ದರು. ಆ ಕಾರ್ಯಕ್ರಮದಿಂದ ನಿರೀಕ್ಷಿತ ಮಟ್ಟದಲ್ಲಿ ಆದಾಯ ಬಂದಿಲ್ಲ ಎಂಬ ಮಾತಿದೆ. ಆ ಬಗ್ಗೆ ನಿರೀಕ್ಷೆ ಇಟ್ಟುಕೊಂಡಿದ್ದ ಪ್ರೇಕ್ಷಕರಿಗೆ ನಿರಾಸೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?