AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡದ ಬಿಗ್ ಬಾಸ್​ನಲ್ಲಿ ಸ್ವರ್ಗ-ನರಕ; ಹಿಂದಿಯಲ್ಲಿ ಏನು ಥೀಮ್? ಸುಳಿವು ಕೊಟ್ಟ ಸಲ್ಲು

‘ಬಿಗ್​ ಬಾಸ್ 18’ ಕಾರ್ಯಕ್ರಮ ಅಕ್ಟೋಬರ್ 6ರಂದು ಶುರುವಾಗಲಿದೆ. ಅದರ ಥೀಮ್​ ಬಗ್ಗೆ ಸುಳಿವು ನೀಡಲು ಹೊಸ ಪ್ರೋಮೋ ರಿಲೀಸ್ ಮಾಡಲಾಗಿದೆ. ಸಲ್ಮಾನ್​ ಖಾನ್​ ಅವರು ಸಮಯದ ಬಗ್ಗೆ ಮಾತನಾಡಿದ್ದಾರೆ. ಇತ್ತ, ಕನ್ನಡದಲ್ಲಿ ಕಿಚ್ಚ ಸುದೀಪ್​ ಅವರು ಸ್ವರ್ಗ ಮತ್ತು ನರಕದ ಕಾನ್ಸೆಪ್ಟ್​ ಬಗ್ಗೆ ಕಿರು ಪರಿಚಯ ಮಾಡಿಕೊಟ್ಟಿದ್ದಾರೆ. ವೀಕ್ಷಕರಲ್ಲಿ ಕ್ರೇಜ್​ ಹೆಚ್ಚಿದೆ.

ಕನ್ನಡದ ಬಿಗ್ ಬಾಸ್​ನಲ್ಲಿ ಸ್ವರ್ಗ-ನರಕ; ಹಿಂದಿಯಲ್ಲಿ ಏನು ಥೀಮ್? ಸುಳಿವು ಕೊಟ್ಟ ಸಲ್ಲು
ಸಲ್ಮಾನ್​ ಖಾನ್​
ಮದನ್​ ಕುಮಾರ್​
|

Updated on: Sep 25, 2024 | 10:26 PM

Share

ಇನ್ನು ಕೆಲವೇ ದಿನಗಳಲ್ಲಿ ‘ಬಿಗ್ ಬಾಸ್​ ಕನ್ನಡ ಸೀಸನ್​ 11’ ಆರಂಭ ಆಗಲಿದೆ. ಅದಕ್ಕಾಗಿ ಸಕಲ ತಯಾರಿ ನಡೆದಿದೆ. ಕಿಚ್ಚ ಸುದೀಪ್​ ಅವರು ಎಂದಿನ ಉತ್ಸಾಹದಲ್ಲಿ ನಿರೂಪಣೆ ಮಾಡಲು ಬರುತ್ತಿದ್ದಾರೆ. ಇತ್ತೀಚೆಗಷ್ಟೇ ಹೊಸ ಪ್ರೋಮೋ ಬಿಡುಗಡೆ ಮಾಡಲಾಯಿತು. ಅದರಲ್ಲಿ ಈ ಬಾರಿಯ ಥೀಮ್​ ಏನು ಎಂಬುದನ್ನು ತಿಳಿಸಲಾಯಿತು. ಸ್ವರ್ಗ ಮತ್ತು ನರಕ ಎಂಬ ಥೀಮ್​ನೊಂದಿಗೆ ‘ಬಿಗ್​ ಬಾಸ್​ ಕನ್ನಡ ಸೀಸನ್​ 11’ ಶೋ ಶುರುವಾಗಲಿದೆ. ಹಾಗಾಗಿ ಆರಂಭದಿಂದಲೇ ಫೈಟ್​ ಇರಲಿದೆ ಎಂಬುದು ಖಚಿತ. ಅದೇ ರೀತಿ ಹಿಂದಿ ಬಿಗ್​ ಬಾಸ್​ನಲ್ಲಿ ಈ ವರ್ಷದ ಥೀಮ್​ ಏನು ಎಂಬ ಬಗ್ಗೆ ಸಲ್ಮಾನ್​ ಖಾನ್​ ಸುಳಿವು ನೀಡಿದ್ದಾರೆ.

ಹಿಂದಿಯಲ್ಲಿ ಈವರೆಗೂ 17 ಸೀಸನ್​ಗಳು ಯಶಸ್ವಿಯಾಗಿ ನಡೆದಿವೆ. 18ನೇ ಸೀಸನ್​ ರಂಗೇರಲಿದೆ. ಬೇರೆ ಭಾಷೆಯ ಬಿಗ್​ ಬಾಸ್​ ಕಾರ್ಯಕ್ರಮಕ್ಕೆ ಹೋಲಿಸಿದರೆ ಹಿಂದಿ ಬಿಗ್​ ಬಾಸ್​ ಯಾವಾಗಲೂ ಕೊಂಚ ಜಾಸ್ತಿ ಖಡಕ್​ ಆಗಿರುತ್ತದೆ. ಅಲ್ಲಿ ಕಾಂಟ್ರವರ್ಸಿಗಳು ಹೆಚ್ಚಾಗಿ ಇರುತ್ತದೆ. ಅದರ ಬಜೆಟ್​ ಕೂಡ ಭರ್ಜರಿಯಾಗಿರುತ್ತದೆ. ಈ ಬಾರಿ ಟೈಮ್​ ಎಂಬ ಕಾನ್ಸೆಪ್ಟ್​ನೊಂದಿಗೆ ಶೋ ಆರಂಭ ಆಗಲಿದೆ.

ಇದನ್ನೂ ಓದಿ: ‘ಬಿಗ್​ ಬಾಸ್​ 11’ ಸಂಭಾವನೆ ವಿಚಾರ ಕೇಳಿದ್ದಕ್ಕೆ ಕಿಚ್ಚ ಸುದೀಪ್​ ಉತ್ತರ ಏನು?

ಹೊಸ ಪ್ರೋಮೋದಲ್ಲಿ ಸಲ್ಮಾನ್​ ಖಾನ್​ ಅವರು ಸಮಯದ ತಾಂಡವದ ಬಗ್ಗೆ ಮಾತನಾಡಿದ್ದಾರೆ. ಭೂತ, ವರ್ತಮಾನ ಮತ್ತು ಭವಿಷ್ಯವನ್ನು ಬಿಗ್​ ಬಾಸ್​ ಕಣ್ಣಿನಲ್ಲಿ ಕಾಣುತ್ತದೆ ಎನ್ನಲಾಗಿದೆ. ಈ ವರ್ಷ ಸ್ಪರ್ಧಿಗಳ ಭವಿಷ್ಯವನ್ನು ಬಿಗ್​ ಬಾಸ್​ ಬಹಿರಂಗಪಡಿಸುತ್ತದೆ. ಯಾರ ಭವಿಷ್ಯವನ್ನು ಯಾರು ಬದಲಿಸಲಿದ್ದಾರೆ ಎಂಬ ಪ್ರಶ್ನೆಯನ್ನು ಕೂಡ ಹೊಸ ಪ್ರೋಮೋದಲ್ಲಿ ಕೇಳಲಾಗಿದೆ. ಈ ಎಲ್ಲ ಕಾರಣದಿಂದ ‘ಬಿಗ್​ ಬಾಸ್​ 18’ ಶೋ ಬಗ್ಗೆ ಕೌತುಕ ಹೆಚ್ಚಾಗಿದೆ.

View this post on Instagram

A post shared by ColorsTV (@colorstv)

ಹಲವು ವರ್ಷಗಳಿಂದ ಸಲ್ಮಾನ್​ ಖಾನ್​ ಅವರು ಬಿಗ್​ ಬಾಸ್​ ಕಾರ್ಯಕ್ರಮವನ್ನು ನಡೆಸಿಕೊಡುತ್ತಿದ್ದಾರೆ. ಸ್ಪರ್ಧಿಗಳು ತಪ್ಪು ಮಾಡಿದರೆ ಅವರು ಖಡಕ್​ ಆಗಿ ಎಚ್ಚರಿಕೆ ನೀಡುತ್ತಾರೆ. ಯಾರಾದರೂ ಮಿತಿ ಮೀರಿ ನಡೆದುಕೊಂಡರೆ ಅವರನ್ನು ಮನೆಯಿಂದ ಹೊರಗೆ ಕಳಿಸುತ್ತಾರೆ. ಈ ಬಾರಿ ಅವರು ಇನ್ನಷ್ಟು ಖಡಕ್​ ಆಗಿ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಸಲ್ಮಾನ್​ ಖಾನ್​ ಅವರು ಈ ಶೋ ನಿರೂಪಣೆಗೆ ನೂರಾರು ಕೋಟಿ ರೂಪಾಯಿ ಸಂಭಾವನೆ ಪಡೆಯುತ್ತಾರೆ. ಈ ಬಾರಿ ಕನ್ನಡ, ತೆಲುಗು ಮುಂತಾದ ಭಾಷೆಗಳಲ್ಲಿ ಕೂಡ ಬಿಗ್​ ಬಾಸ್​ ಏಕಕಾಲಕ್ಕೆ ಪ್ರಸಾರ ಆಗಲಿದೆ. ಹಾಗಾಗಿ ಕ್ರೇಜ್​ ಜಾಸ್ತಿ ಇರುತ್ತದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!