AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್ ಬಿಗ್ ಬಾಸ್ ಸಂಭಾವನೆಗೆ ಕತ್ತರಿ; ಕಿಚ್ಚನ ವಿಚಾರದಲ್ಲಿ ವಾಹಿನಿ ನಿಲುವೇನು?

ಬಿಗ್ ಬಾಸ್ ಹಿಂದಿ ಸೀಸನ್ 19ರಲ್ಲಿ ಸಲ್ಮಾನ್ ಖಾನ್ ಅವರ ಸಂಭಾವನೆಯಲ್ಲಿ 150 ಕೋಟಿ ರೂಪಾಯಿಗಳಿಗೆ ಇಳಿಕೆಯಾಗಿದೆ. ಈ ಬಾರಿ 5 ತಿಂಗಳ ಕಾಲ ಚಾಲ್ತಿಯಲ್ಲಿರುವ ಈ ಶೋವನ್ನು ಮೊದಲು ಒಟಿಟಿಯಲ್ಲಿ ಮತ್ತು ನಂತರ ಟಿವಿಯಲ್ಲಿ ಪ್ರಸಾರ ಮಾಡಲಾಗುವುದು.ಸಲ್ಮಾನ್ ಖಾನ್ ಮೊದಲ ಮೂರು ತಿಂಗಳು ಮಾತ್ರ ಹೋಸ್ಟ್ ಆಗಿರುತ್ತಾರೆ.

ಸಲ್ಮಾನ್ ಖಾನ್ ಬಿಗ್ ಬಾಸ್ ಸಂಭಾವನೆಗೆ ಕತ್ತರಿ; ಕಿಚ್ಚನ ವಿಚಾರದಲ್ಲಿ ವಾಹಿನಿ ನಿಲುವೇನು?
ಸಲ್ಲು-ಸುದೀಪ್
ರಾಜೇಶ್ ದುಗ್ಗುಮನೆ
|

Updated on: Aug 20, 2025 | 7:28 AM

Share

ಸಲ್ಮಾನ್ ಖಾನ್ ಅವರು ‘ಬಿಗ್ ಬಾಸ್ ಹಿಂದಿ ಸೀಸನ್ 19’ ಅನ್ನು ಹೋಸ್ಟ್ ಮಾಡಲು ರೆಡಿ ಆಗಿದ್ದಾರೆ. ಆಗಸ್ಟ್ 30ರಂದು ಶೋ ಪ್ರಸಾರ ಆರಂಭಿಸಲಿದೆ. ಈ ಬಾರಿ ಒಟಿಟಿಯಲ್ಲಿ ಮೊದಲು ಶೋ ಪ್ರಸಾರ ಆಗಲಿದ್ದು, ಆ ಬಳಿಕ ಟಿವಿಯಲ್ಲಿ ಪ್ರಸಾರ ಆಗಲಿದೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ಸಲ್ಮಾನ್ ಖಾನ್ ಸಂಭಾವನೆಗೆ ವಾಹಿನಿಯವರು ಕತ್ತರಿ ಹಾಕಲು ನಿರ್ಧರಿಸಿದ್ದಾರೆ. ಹಾಗಂತ ಕಾಸ್ಟ್ ಕಟಿಂಗ್ ವಿಚಾರಕ್ಕಾಗಿ ಅಲ್ಲ. ಇದಕ್ಕೆ ವಿವಿಧ ಕಾರಣಗಳು ಇವೆ. ಹಾಗಾದರೆ ಸುದೀಪ್ (Sudeep) ಸಂಭಾವನೆಯ ಕಥೆ ಏನು? ಆ ಬಗ್ಗೆ ಇಲ್ಲಿದೆ ವಿವರ.

ಬಿಗ್ ಬಾಸ್ ನಡೆಸಿಕೊಡಲು ಪ್ರತಿ ಸೀಸನ್​ಗೆ ಸಲ್ಮಾನ್ ಖಾನ್ ದೊಡ್ಡ ಸಂಭಾವನೆ ಪಡೆಯುತ್ತಾರೆ. 17ನೇ ಸೀಸನ್​ಗಾಗಿ 200 ಕೋಟಿ ರೂಪಾಯಿ ಹಾಗೂ ಸೀಸನ್ 18ಕ್ಕಾಗಿ 250 ಕೋಟಿ ರೂಪಾಯಿ ಸಂಭಾವನೆಯನ್ನು ಅವರು ಪಡೆದಿದ್ದರು. ಆದರೆ, ಈ ಬಾರಿ ಅವರ ಸಂಭಾವನೆ 150 ಕೋಟಿ ರೂಪಾಯಿಗೆ ಇಳಿಸಲಾಗಿದೆ ಎಂದು ವರದಿ ಆಗಿದೆ. ಅಲ್ಲದೆ, ಈ ಬಾರಿಯ ಶೋನ ಬಜೆಟ್ ಕೂಡ ಕಡಿಮೆ ಇದೆ.

‘ಬಿಗ್ ಬಾಸ್ ಹಿಂದಿ ಸೀಸನ್ 19’ ಬರೋಬ್ಬರಿ 5 ತಿಂಗಳುಗಳ ಕಾಲ ಇರಲಿದೆ ಎನ್ನಲಾಗುತ್ತಿದೆ. ಈಗಾಗಲೇ ಸಲ್ಮಾನ್ ಖಾನ್ ಅವರು ವಿವಿಧ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಹೀಗಾಗಿ. ಈ ಶೋಗಾಗಿ 5 ತಿಂಗಳು ಸಮಯ ಮುಡಿಪಿಡೋದು ಎಂದರೆ ಅವರಿಗೆ ಚಾಲೆಂಜಿಂಗ್ ಆಗಿ ಇರಲಿದೆ. ಈ ಕಾರಣದಿಂದ ವಿವಿಧ ಹೋಸ್ಟ್​ಗಳನ್ನು ಕರೆಸಲಾಗುತ್ತಿದೆ.

ಇದನ್ನೂ ಓದಿ
Image
ವಿಮರ್ಶೆಯಲ್ಲಿ ಸೋತ ‘ಕೂಲಿ’ಗೆ ಮೊದಲ ಆಘಾತ ಕೊಟ್ಟ ಪ್ರೇಕ್ಷಕ
Image
ಅಂದು ಹೇಳಿದ್ದು ನಿಜವಾಯ್ತು; ಮಹೇಶ್ ಬಾಬು ಹಳೆಯ ಹೇಳಿಕೆ ವೈರಲ್
Image
ಬಿಗ್ ಬಾಸ್​ಗೆ ಎಂಟ್ರಿ ಕೊಡಲಿದೆ ಸೆನ್ಸೇಷನ್ ಸೃಷ್ಟಿಸಿದ ಜೋಡಿ
Image
ಬಸ್ ಓಡಿಸಿದ ಬಾಲಯ್ಯ; ಮುಖದಲ್ಲಿರೋ ಭಯ ನೋಡಿದ್ರೆ ಯಾರೂ ಕೂರೋ ಧೈರ್ಯ ಮಾಡಲ್ಲ

ಮೊದಲ ಮೂರು ತಿಂಗಳು ಸಲ್ಮಾನ್ ಖಾನ್ ಅವರೇ ಬಿಗ್ ಬಾಸ್ ನಡೆಸುಕೊಡಲಿದ್ದಾರೆ. ಆ ಬಳಿಕ ಫರಾ ಖಾನ್, ಕರಣ್ ಜೋಹರ್, ಅನಿಲ್ ಕಪೂರ್ ಮೊದಲಾದವರು ಶೋನ ಹೋಸ್ಟ್ ಮಾಡಲಿದ್ದಾರೆ. ಫಿನಾಲೆಗೆ ಸಲ್ಮಾನ್ ಖಾನ್ ನೇತೃತ್ವ ಇರಲಿದೆ. ಮೊದಲು ಶೋ ಜಿಯೋ ಹಾಟ್​ಸ್ಟಾರ್​ನಲ್ಲಿ ಪ್ರಸಾರ ಕಾಣಲಿದೆ. ಆ ಬಳಿಕ ಶೋ ಕಲರ್ಸ್​ ಟಿವಿಯಲ್ಲಿ ಪ್ರಸಾರ ಆಗಲಿದೆ.

ಇದನ್ನೂ ಓದಿ: ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಜಾಗ ಖರೀದಿ: ಸುದೀಪ್​ರ ಕೊಂಡಾಡಿದ ಅಭಿಮಾನಿಗಳು

ಇನ್ನು, ಸುದೀಪ್ ಸಂಭಾವನೆಗೆ ಯಾವುದೇ ಕತ್ತರಿ ಬೀಳುವ ಸಾಧ್ಯತೆ ಇಲ್ಲ. ಏಕೆಂದರೆ, ಆರಂಭದಿಂದ ಕೊನೆಯವರೆಗೆ ಅವರೇ ಶೋ ನಡೆಸಿಕೊಡಲಿದ್ದಾರೆ. ಹೀಗಾಗಿ, ವರ್ಷದಿಂದ ವರ್ಷಕ್ಕೆ ಅವರ ಸಂಭಾವನೆ ಹೆಚ್ಚುತ್ತಿದೆ. ಕಳೆದ ಸೀಸನ್​ಗಿಂತ ಈ ಸೀಸನ್​ನಲ್ಲಿ ಅವರ ಸಂಭಾವನೆ ಹೆಚ್ಚುವ ಸಾಧ್ಯತೆ ಇದೆ ಎಂದು ವರದಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಮೊದಲ ಪಂದ್ಯದಲ್ಲೇ 5 ವಿಕೆಟ್ ಉರುಳಿಸಿದ ಹೆನಿಲ್ ಪಟೇಲ್
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಶ್ರೀರಾಮನಿಗೆ ಮುಸ್ಲಿಂ ಶಾಸಕ ಪೂಜೆ , ಹಿಂದೂ ಧರ್ಮದ ಬಗ್ಗೆ ಹೇಳಿದ್ದಿಷ್ಟು
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಬೆಂಗಳೂರಿನ ಗವಿ ಗಂಗಾಧರೇಶ್ವರನಿಗೆ ಸೂರ್ಯದೇವನ ನಮನ, ಇಲ್ಲಿದೆ ನೇರಪ್ರಸಾರ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಪ್ರಯಾಗರಾಜ್​ನ ಮಾಘ ಮೇಳದಲ್ಲಿ ಭಕ್ತಸಾಗರ; ಡ್ರೋನ್ ವಿಡಿಯೋ ಇಲ್ಲಿದೆ
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ಸೀನಿಯರ್​​ನನ್ನೇ ಕೊಂದ ಜೂನಿಯರ್: SSLC ವಿದ್ಯಾರ್ಥಿ ಹತ್ಯೆಗೆ ಕಾರಣವೇನು?
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ನನಗೂ ಮುಖ್ಯಮಂತ್ರಿಯಾಗಬೇಕು ಎಂಬ ಆಸೆ ಇದೆ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ಅಪಘಾತವಾಗುವುದ ತಡೆದು ಒಂದು ಕುಟುಂಬವನ್ನು ರಕ್ಷಿಸಿದ ಯುವತಿ
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ನಮ್ಮ ಮೆಟ್ರೋ ಯೆಲ್ಲೋ ಲೈನ್‌ನಲ್ಲಿ 7ನೇ ರೈಲಿನ ಸಂಚಾರ ಶುರು
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ಲೈಟ್​ನಲ್ಲಿ ಕಾಣಿಸಿಕೊಂಡ ಹೊಗೆ, ಪತ್ರಿಕಾಗೋಷ್ಠಿ ಮೊಟಕುಗೊಳಿಸಿದ ಮಾಯಾವತಿ
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​
ನಗರಸಭೆ ಪೌರಾಯುಕ್ತೆಗೆ ನಿಂದನೆ​​: ರಾಜೀವ್​ ಗೌಡ ಪರ ಮುನಿಯಪ್ಪ ಬ್ಯಾಟಿಂಗ್​​