AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್ ಬಿಗ್ ಬಾಸ್ ಸಂಭಾವನೆಗೆ ಕತ್ತರಿ; ಕಿಚ್ಚನ ವಿಚಾರದಲ್ಲಿ ವಾಹಿನಿ ನಿಲುವೇನು?

ಬಿಗ್ ಬಾಸ್ ಹಿಂದಿ ಸೀಸನ್ 19ರಲ್ಲಿ ಸಲ್ಮಾನ್ ಖಾನ್ ಅವರ ಸಂಭಾವನೆಯಲ್ಲಿ 150 ಕೋಟಿ ರೂಪಾಯಿಗಳಿಗೆ ಇಳಿಕೆಯಾಗಿದೆ. ಈ ಬಾರಿ 5 ತಿಂಗಳ ಕಾಲ ಚಾಲ್ತಿಯಲ್ಲಿರುವ ಈ ಶೋವನ್ನು ಮೊದಲು ಒಟಿಟಿಯಲ್ಲಿ ಮತ್ತು ನಂತರ ಟಿವಿಯಲ್ಲಿ ಪ್ರಸಾರ ಮಾಡಲಾಗುವುದು.ಸಲ್ಮಾನ್ ಖಾನ್ ಮೊದಲ ಮೂರು ತಿಂಗಳು ಮಾತ್ರ ಹೋಸ್ಟ್ ಆಗಿರುತ್ತಾರೆ.

ಸಲ್ಮಾನ್ ಖಾನ್ ಬಿಗ್ ಬಾಸ್ ಸಂಭಾವನೆಗೆ ಕತ್ತರಿ; ಕಿಚ್ಚನ ವಿಚಾರದಲ್ಲಿ ವಾಹಿನಿ ನಿಲುವೇನು?
ಸಲ್ಲು-ಸುದೀಪ್
ರಾಜೇಶ್ ದುಗ್ಗುಮನೆ
|

Updated on: Aug 20, 2025 | 7:28 AM

Share

ಸಲ್ಮಾನ್ ಖಾನ್ ಅವರು ‘ಬಿಗ್ ಬಾಸ್ ಹಿಂದಿ ಸೀಸನ್ 19’ ಅನ್ನು ಹೋಸ್ಟ್ ಮಾಡಲು ರೆಡಿ ಆಗಿದ್ದಾರೆ. ಆಗಸ್ಟ್ 30ರಂದು ಶೋ ಪ್ರಸಾರ ಆರಂಭಿಸಲಿದೆ. ಈ ಬಾರಿ ಒಟಿಟಿಯಲ್ಲಿ ಮೊದಲು ಶೋ ಪ್ರಸಾರ ಆಗಲಿದ್ದು, ಆ ಬಳಿಕ ಟಿವಿಯಲ್ಲಿ ಪ್ರಸಾರ ಆಗಲಿದೆ ಎನ್ನಲಾಗುತ್ತಿದೆ. ಹೀಗಿರುವಾಗಲೇ ಸಲ್ಮಾನ್ ಖಾನ್ ಸಂಭಾವನೆಗೆ ವಾಹಿನಿಯವರು ಕತ್ತರಿ ಹಾಕಲು ನಿರ್ಧರಿಸಿದ್ದಾರೆ. ಹಾಗಂತ ಕಾಸ್ಟ್ ಕಟಿಂಗ್ ವಿಚಾರಕ್ಕಾಗಿ ಅಲ್ಲ. ಇದಕ್ಕೆ ವಿವಿಧ ಕಾರಣಗಳು ಇವೆ. ಹಾಗಾದರೆ ಸುದೀಪ್ (Sudeep) ಸಂಭಾವನೆಯ ಕಥೆ ಏನು? ಆ ಬಗ್ಗೆ ಇಲ್ಲಿದೆ ವಿವರ.

ಬಿಗ್ ಬಾಸ್ ನಡೆಸಿಕೊಡಲು ಪ್ರತಿ ಸೀಸನ್​ಗೆ ಸಲ್ಮಾನ್ ಖಾನ್ ದೊಡ್ಡ ಸಂಭಾವನೆ ಪಡೆಯುತ್ತಾರೆ. 17ನೇ ಸೀಸನ್​ಗಾಗಿ 200 ಕೋಟಿ ರೂಪಾಯಿ ಹಾಗೂ ಸೀಸನ್ 18ಕ್ಕಾಗಿ 250 ಕೋಟಿ ರೂಪಾಯಿ ಸಂಭಾವನೆಯನ್ನು ಅವರು ಪಡೆದಿದ್ದರು. ಆದರೆ, ಈ ಬಾರಿ ಅವರ ಸಂಭಾವನೆ 150 ಕೋಟಿ ರೂಪಾಯಿಗೆ ಇಳಿಸಲಾಗಿದೆ ಎಂದು ವರದಿ ಆಗಿದೆ. ಅಲ್ಲದೆ, ಈ ಬಾರಿಯ ಶೋನ ಬಜೆಟ್ ಕೂಡ ಕಡಿಮೆ ಇದೆ.

‘ಬಿಗ್ ಬಾಸ್ ಹಿಂದಿ ಸೀಸನ್ 19’ ಬರೋಬ್ಬರಿ 5 ತಿಂಗಳುಗಳ ಕಾಲ ಇರಲಿದೆ ಎನ್ನಲಾಗುತ್ತಿದೆ. ಈಗಾಗಲೇ ಸಲ್ಮಾನ್ ಖಾನ್ ಅವರು ವಿವಿಧ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಇದ್ದಾರೆ. ಹೀಗಾಗಿ. ಈ ಶೋಗಾಗಿ 5 ತಿಂಗಳು ಸಮಯ ಮುಡಿಪಿಡೋದು ಎಂದರೆ ಅವರಿಗೆ ಚಾಲೆಂಜಿಂಗ್ ಆಗಿ ಇರಲಿದೆ. ಈ ಕಾರಣದಿಂದ ವಿವಿಧ ಹೋಸ್ಟ್​ಗಳನ್ನು ಕರೆಸಲಾಗುತ್ತಿದೆ.

ಇದನ್ನೂ ಓದಿ
Image
ವಿಮರ್ಶೆಯಲ್ಲಿ ಸೋತ ‘ಕೂಲಿ’ಗೆ ಮೊದಲ ಆಘಾತ ಕೊಟ್ಟ ಪ್ರೇಕ್ಷಕ
Image
ಅಂದು ಹೇಳಿದ್ದು ನಿಜವಾಯ್ತು; ಮಹೇಶ್ ಬಾಬು ಹಳೆಯ ಹೇಳಿಕೆ ವೈರಲ್
Image
ಬಿಗ್ ಬಾಸ್​ಗೆ ಎಂಟ್ರಿ ಕೊಡಲಿದೆ ಸೆನ್ಸೇಷನ್ ಸೃಷ್ಟಿಸಿದ ಜೋಡಿ
Image
ಬಸ್ ಓಡಿಸಿದ ಬಾಲಯ್ಯ; ಮುಖದಲ್ಲಿರೋ ಭಯ ನೋಡಿದ್ರೆ ಯಾರೂ ಕೂರೋ ಧೈರ್ಯ ಮಾಡಲ್ಲ

ಮೊದಲ ಮೂರು ತಿಂಗಳು ಸಲ್ಮಾನ್ ಖಾನ್ ಅವರೇ ಬಿಗ್ ಬಾಸ್ ನಡೆಸುಕೊಡಲಿದ್ದಾರೆ. ಆ ಬಳಿಕ ಫರಾ ಖಾನ್, ಕರಣ್ ಜೋಹರ್, ಅನಿಲ್ ಕಪೂರ್ ಮೊದಲಾದವರು ಶೋನ ಹೋಸ್ಟ್ ಮಾಡಲಿದ್ದಾರೆ. ಫಿನಾಲೆಗೆ ಸಲ್ಮಾನ್ ಖಾನ್ ನೇತೃತ್ವ ಇರಲಿದೆ. ಮೊದಲು ಶೋ ಜಿಯೋ ಹಾಟ್​ಸ್ಟಾರ್​ನಲ್ಲಿ ಪ್ರಸಾರ ಕಾಣಲಿದೆ. ಆ ಬಳಿಕ ಶೋ ಕಲರ್ಸ್​ ಟಿವಿಯಲ್ಲಿ ಪ್ರಸಾರ ಆಗಲಿದೆ.

ಇದನ್ನೂ ಓದಿ: ವಿಷ್ಣು ಸ್ಮಾರಕ ನಿರ್ಮಾಣಕ್ಕೆ ಜಾಗ ಖರೀದಿ: ಸುದೀಪ್​ರ ಕೊಂಡಾಡಿದ ಅಭಿಮಾನಿಗಳು

ಇನ್ನು, ಸುದೀಪ್ ಸಂಭಾವನೆಗೆ ಯಾವುದೇ ಕತ್ತರಿ ಬೀಳುವ ಸಾಧ್ಯತೆ ಇಲ್ಲ. ಏಕೆಂದರೆ, ಆರಂಭದಿಂದ ಕೊನೆಯವರೆಗೆ ಅವರೇ ಶೋ ನಡೆಸಿಕೊಡಲಿದ್ದಾರೆ. ಹೀಗಾಗಿ, ವರ್ಷದಿಂದ ವರ್ಷಕ್ಕೆ ಅವರ ಸಂಭಾವನೆ ಹೆಚ್ಚುತ್ತಿದೆ. ಕಳೆದ ಸೀಸನ್​ಗಿಂತ ಈ ಸೀಸನ್​ನಲ್ಲಿ ಅವರ ಸಂಭಾವನೆ ಹೆಚ್ಚುವ ಸಾಧ್ಯತೆ ಇದೆ ಎಂದು ವರದಿ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ಮೈಲಾರಲಿಂಗ ಕಾರ್ಣಿಕ: ಸಂಪಾಯಿತಲೇ ಪರಾಕ್
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ರೋಹಿತ್, ಕೊಹ್ಲಿ ಏಕದಿನ ವಿಶ್ವಕಪ್ ಆಡುವ ಬಗ್ಗೆ ಮೌನ ಮುರಿದ ಧೋನಿ
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಬೆಂಗಳೂರಿನಲ್ಲಿ ದಿಢೀರ್ ಕುಸಿದು ಬಿದ್ದ ರಸ್ತೆ; ಫುಲ್ ಟ್ರಾಫಿಕ್ ಜಾಮ್!
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಮುಳುಗುತ್ತಿದ್ದ ಇಬ್ಬರು ಯುವಕರನ್ನು ಕಾಪಾಡಿದ ಮಹಿಳಾ ಟ್ರಾಫಿಕ್ ಪೊಲೀಸ್
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ