AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಬಿಗ್​ ಬಾಸ್​ ತೆಲುಗು ಸೀಸನ್​ 6’ ರಿಯಾಲಿಟಿ ಶೋಗೆ ನಿರೂಪಕಿ ಆಗ್ತಾರಾ ಸಮಂತಾ ರುತ್​ ಪ್ರಭು?

Bigg Boss Telugu 6: ಅಕ್ಕಿನೇನಿ ನಾಗಾರ್ಜುನ ಅವರ ಪ್ರೋಮೋ ಈಗಾಗಲೇ ರಿಲೀಸ್​ ಆಗಿದೆ. ಅದರ ನಡುವೆಯೂ ಸಮಂತಾ ಕುರಿತು ಈ ರೀತಿ ಗಾಸಿಪ್​ ಹಬ್ಬಿರುವುದು ಅಚ್ಚರಿ ಮೂಡಿಸಿದೆ.

‘ಬಿಗ್​ ಬಾಸ್​ ತೆಲುಗು ಸೀಸನ್​ 6’ ರಿಯಾಲಿಟಿ ಶೋಗೆ ನಿರೂಪಕಿ ಆಗ್ತಾರಾ ಸಮಂತಾ ರುತ್​ ಪ್ರಭು?
ಸಮಂತಾ
TV9 Web
| Edited By: |

Updated on:Jun 03, 2022 | 2:33 PM

Share

ಕಿರುತೆರೆಯ ರಿಯಾಲಿಟಿ ಶೋಗಳಲ್ಲಿ ಬಿಗ್​ ಬಾಸ್​ ಕಾರ್ಯಕ್ರಮಕ್ಕೆ ಹೆಚ್ಚು ಫ್ಯಾನ್​ ಫಾಲೋಯಿಂಗ್​ ಇದೆ. ವಿವಾದಗಳ ಜೊತೆಜೊತೆಯಲ್ಲೇ ಪ್ರೇಕ್ಷಕರಿಗೆ ಭರ್ಜರಿ ಮನರಂಜನೆ ನೀಡುವುದು ಈ ರಿಯಾಲಿಟಿ ಶೋನ ಸ್ಪೆಷಾಲಿಟಿ. ಪ್ರತಿ ಬಾರಿ ಯಾವೆಲ್ಲ ಸ್ಪರ್ಧಿಗಳು ಈ ಕಾರ್ಯಕ್ರಮದಲ್ಲಿ ಸ್ಪರ್ಧಿಗಳಾಗಿ ಭಾಗವಹಿಸುತ್ತಾರೆ ಎಂಬ ಕುತೂಹಲ ಇದ್ದೇ ಇರುತ್ತದೆ. ಅದೇ ರೀತಿ ಯಾರು ನಿರೂಪಣೆ ಮಾಡುತ್ತಾರೆ ಎಂಬ ಪ್ರಶ್ನೆ ಕೂಡ ಎದ್ದಿರುತ್ತದೆ. ಅದರಲ್ಲೂ ತೆಲುಗಿನಲ್ಲಿ ಆಗಾಗ ನಿರೂಪಕರು ಬದಲಾದ ಉದಾಹರಣೆ ಇದೆ. ಈವರೆಗೂ ತೆಲುಗಿನಲ್ಲಿ 5 ಸೀಸನ್​ಗಳನ್ನು ಪೂರೈಸಿರುವ ಬಿಗ್​ ಬಾಸ್​ ಕಾರ್ಯಕ್ರಮ ಈಗ 6ನೇ ಸೀಸನ್​ಗೆ (Bigg Boss Telugu 6) ಸಜ್ಜಾಗುತ್ತಿದೆ. ಈ ಬಾರಿ ನಟಿ ಸಮಂತಾ ರುತ್​ ಪ್ರಭು (Samantha Ruth Prabhu) ಅವರು ನಿರೂಪಣೆ ಮಾಡುತ್ತಾರೆ ಎಂಬ ಗುಸುಗುಸು ಹಬ್ಬಿದೆ. ಆದರೆ ಈಗಾಗಲೇ ಅಕ್ಕಿನೇನಿ ನಾಗಾರ್ಜುನ (Akkineni Nagarjuna) ಅವರ ಪ್ರೋಮೋ ರಿಲೀಸ್​ ಆಗಿರುವುದರಿಂದ ಅವರೇ ನಿರೂಪಕರಾಗಿ ಮುಂದುವರಿಯುತ್ತಾರೆ ಎಂಬುದು ಕೂಡ ಖಚಿತವಾಗಿದೆ. ಅದರ ನಡುವೆಯೂ ಸಮಂತಾ ಕುರಿತು ಈ ರೀತಿ ಗಾಸಿಪ್​ ಹಬ್ಬಿರುವುದರಿಂದ ಫ್ಯಾನ್ಸ್​ ಗೊಂದಲಕ್ಕೆ ಒಳಗಾಗಿದ್ದಾರೆ.

ಸಮಂತಾ ಅವರಿಗೆ ಇತ್ತೀಚಿನ ದಿನಗಳಲ್ಲಿ ವೃತ್ತಿಜೀವನದಲ್ಲಿ ಹೊಸ ಹೊಸ ಅವಕಾಶಗಳು ಬರುತ್ತಿವೆ. ನಾಗ ಚೈತನ್ಯ ಅವರಿಗೆ ವಿಚ್ಛೇದನ ನೀಡಿದ ಬಳಿಕ ಅವರು ಹೆಚ್ಚು ಆ್ಯಕ್ಟೀವ್​ ಆಗಿದ್ದಾರೆ. ಐಟಂ ಸಾಂಗ್​ನಲ್ಲಿ ಡ್ಯಾನ್ಸ್​ ಮಾಡುವುದರಿಂದ ಹಿಡಿದು, ಬೋಲ್ಡ್​ ಪಾತ್ರಗಳವರೆಗೆ ಅನೇಕ ಅವಕಾಶಗಳನ್ನು ಒಪ್ಪಿಕೊಳ್ಳುತ್ತಿದ್ದಾರೆ. ಈಗ ಬಿಗ್​ ಬಾಸ್​ ರಿಯಾಲಿಟಿ ಶೋ ಸಾರಥ್ಯವನ್ನೂ ವಹಿಸುತ್ತಾರೆ ಎಂಬ ಗುಮಾನಿ ಮೂಡಿದೆ.

ಇದನ್ನೂ ಓದಿ: ‘ನೀವು ನಾಯಿ-ಬೆಕ್ಕುಗಳ ಜತೆ ಒಂಟಿಯಾಗಿ ಸಾಯುತ್ತೀರಿ’ ಎಂದ ಅಭಿಮಾನಿಗೆ ಸಮಂತಾ ಹೇಳಿದ್ದೇನು ನೋಡಿ

ಇದನ್ನೂ ಓದಿ
Image
‘ಬಿಗ್​ ಬಾಸ್​’ನಲ್ಲಿ ಮದುವೆ ಆದ ಜೋಡಿಗೆ ಚಾನೆಲ್​ನವರಿಂದ ಸಿಕ್ಕಿತ್ತು 50 ಲಕ್ಷ ರೂ.; ಎರಡೇ ತಿಂಗಳಿಗೆ ಡಿವೋರ್ಸ್​
Image
ಪ್ರೀತಿ ತೊರೆದು ಒಂಟಿಯಾಗಿ ಬದುಕಲು ನಿರ್ಧರಿಸಿದ ದಿವ್ಯಾ; ಬಿಗ್​ ಬಾಸ್​ ಸ್ಪರ್ಧಿಯ ಬಾಳಲ್ಲಿ ಕಹಿ ಘಟನೆ  
Image
ಬಿಗ್​ ಬಾಸ್​ ಶೋಗೆ ಹೊಸ ನಿರೂಪಕನಾಗಿ ಬಂದ ನಟ ಸಿಂಬು; ಇನ್ಮುಂದೆ ಇವರೇ ಮುಂದುವರಿಯುತ್ತಾರಾ?
Image
ಬಿಗ್​ ಬಾಸ್​ ನಿರೂಪಕರು ಚೇಂಜ್​; ಅಧಿಕೃತ ಘೋಷಣೆ ಮಾಡಿದ ಸ್ಟಾರ್​ ನಟ; ವೀಕ್ಷಕರಿಗೆ ಬೇಸರ

ಈ ಹಿಂದಿನ ಸೀಸನ್​ಗಳಲ್ಲಿ ಅಕ್ಕಿನೇನಿ ನಾಗಾರ್ಜುನ ಅವರು ಸಿನಿಮಾ ಕೆಲಸಗಳ ಕಾರಣದಿಂದ ಬಿಗ್​ ಬಾಸ್​ ನಿರೂಪಣೆಗೆ ಚಕ್ಕರ್​ ಹಾಕಿದ್ದಾಗ ಬೇರೆ ಕಲಾವಿದರು ಬಂದು ಶೋ ನಡೆಸಿಕೊಟ್ಟಿದ್ದರು. ಈ ಬಾರಿ ಕೂಡ ಅವರೇನಾದರೂ ಸಿನಿಮಾ ಕೆಲಸಗಳ ಸಲುವಾಗಿ ಬಿಗ್​ ಬಾಸ್​ನ ಕೆಲವು ಎಪಿಸೋಡ್​ಗಳನ್ನು ಸ್ಕಿಪ್​ ಮಾಡುತ್ತಾರಾ? ಸದ್ಯಕ್ಕೆ ಈ ಪ್ರಶ್ನೆಗೆ ಉತ್ತರ ಇಲ್ಲ. ಒಟ್ಟಿನಲ್ಲಿ ಈ ಬಾರಿ ಸಮಂತಾ ನಿರೂಪಣೆ ಮಾಡುವ ಬಗ್ಗೆ ಯಾರೂ ಅಧಿಕೃತ ಹೇಳಿಕೆ ನೀಡಿಲ್ಲ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 2:33 pm, Fri, 3 June 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್