AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುತೆರೆ ನಟಿ ಸಂಚಿತಾ ಸಾವಿಗೆ ಕಾರಣವಾಗಿದ್ದು ಆ ಹುಡುಗ?

ಕಿರುತೆರೆ ನಟಿ ಸಂಚಿತಾ ಉಗಾಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ. 30ನೇ ವಯಸ್ಸಿನಲ್ಲಿಯೇ ಅವರು ಈ ಕಠಿಣ ನಿರ್ಧಾರ ಕೈಗೊಂಡಿರುವುದು ಚಿತ್ರರಂಗಕ್ಕೆ ಆಘಾತ ತಂದಿದೆ. ನಟ ಉಜ್ವಲ್ ಶರ್ಮಾ ಅವರು ಸಂಚಿತಾ ಅವರ ಸಾವಿನ ಬಗ್ಗೆ ಪ್ರಮುಖ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಸಂಚಿತಾ ಬೇರೊಬ್ಬರೊಂದಿಗೆ ಲಿವ್-ಇನ್ ಸಂಬಂಧದಲ್ಲಿದ್ದು, ಆ ಸಂಬಂಧದಿಂದ ಮಾನಸಿಕವಾಗಿ ತೀವ್ರ ಒತ್ತಡದಲ್ಲಿದ್ದರು ಎಂದು ಉಜ್ವಲ್ ತಿಳಿಸಿದ್ದಾರೆ. ಪೊಲೀಸರು ಇದೀಗ ನಟಿಯ ವೈಯಕ್ತಿಕ ಜೀವನ ಮತ್ತು ಮಾಜಿ ಗೆಳೆಯನ ಹಿನ್ನೆಲೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಕಿರುತೆರೆ ನಟಿ ಸಂಚಿತಾ ಸಾವಿಗೆ ಕಾರಣವಾಗಿದ್ದು ಆ ಹುಡುಗ?
ಸಂಚಿತಾ
 ಶ್ರೀಲಕ್ಷ್ಮೀ ಎಚ್
| Edited By: |

Updated on:Jun 16, 2026 | 8:10 AM

Share

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಾಲೆ ಅವರು (Sanchita Ugale) ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಕೇವಲ 22ನೇ ವಯಸ್ಸಿಗೆ ನಟಿ ಇಂತಹ ಕಠಿಣ ಹೆಜ್ಜೆ ಇಟ್ಟು ಕೊನೆಯುಸಿರೆಳೆದಿರುವುದು ಇಡೀ ಚಿತ್ರರಂಗ ಹಾಗೂ ಅವರ ಅಭಿಮಾನಿಗಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ. ಭಾನುವಾರ ಸಂಜೆ ಈ ದುರಂತ ಸಂಭವಿಸಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಸದ್ಯ ನಟಿಯ ಸಾವಿಗೆ ನಿಖರ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಸಂಚಿತಾ ಅವರ ಹಠಾತ್ ನಿಧನದ ಬೆನ್ನಲ್ಲೇ ಉದ್ಯಮದಲ್ಲಿ ಹಲವು ವದಂತಿಗಳು ಕೇಳಿಬರುತ್ತಿದ್ದು, ಅವರು ತಮ್ಮ ಸಹನಟ ಉಜ್ವಲ್ ಶರ್ಮಾ ಜೊತೆ ರಿಲೇಶನ್‌ಶಿಪ್‌ನಲ್ಲಿದ್ದರು ಎಂಬ ಚರ್ಚೆಗಳು ನಡಯುತ್ತಿದ್ದವು. ಆದರೆ, ಈ ಹಿಂದೆ ಸ್ವತಃ ಸಂಚಿತಾ ಅವರೇ ಇದೆಲ್ಲವೂ ಕೇವಲ ವದಂತಿಗಳಷ್ಟೇ ಎಂದು ಸ್ಪಷ್ಟಪಡಿಸಿದ್ದರು. ಇದೀಗ ಸಂಚಿತಾ ಸಾವಿನ ನಂತರ ಮಾಧ್ಯಮವೊಂದರ ಜೊತೆ ಮಾತನಾಡಿರುವ ನಟ ಉಜ್ವಲ್ ಶರ್ಮಾ, ಇಡೀ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಪ್ರಮುಖ ವಿಷಯಗಳನ್ನು ಬಹಿರಂಗಪಡಿಸಿದ್ದಾರೆ.

‘ನಮ್ಮ ನಡುವೆ ಯಾವುದೇ ಪ್ರೇಮ ಸಂಬಂಧ ಇರಲಿಲ್ಲ, ಅದೆಲ್ಲವೂ ಕೇವಲ ವದಂತಿಗಳಾಗಿದ್ದವು’ ಎಂದು ಉಜ್ವಲ್ ಸ್ಪಷ್ಟನೆ ನೀಡಿದ್ದಾರೆ. ‘ಸಂಚಿತಾ ಬೇರೊಬ್ಬ ವ್ಯಕ್ತಿಯನ್ನು ಪ್ರೀತಿಸುತ್ತಿದ್ದು, ಆತನ ಜೊತೆಯೇ ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಆತನ ನಡವಳಿಕೆಯಿಂದಾಗಿ ಸಂಚಿತಾ ಮಾನಸಿಕವಾಗಿ ತೀವ್ರ ಕಷ್ಟದ ಸಮಯವನ್ನು ಎದುರಿಸುತ್ತಿದ್ದರು. ನಾನು ನನ್ನ ಊರಿಗೆ ತೆರಳಿದ್ದರಿಂದ ಕಳೆದ ಕೆಲವು ದಿನಗಳಿಂದ ಅವರೊಂದಿಗೆ ಮಾತನಾಡಲು ಸಾಧ್ಯವಾಗಿರಲಿಲ್ಲ’ ಎಂದು ಉಜ್ವಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಆತ್ಮಹತ್ಯೆ ಮಾಡಿಕೊಂಡ ಸಂಚಿತಾ ಉಗಾಲೆ; ಸಾವಿಗೂ ಮುನ್ನ ರೀಲ್ಸ್ ಮಾಡಿದ್ದ ಕಿರುತೆರೆ ನಟಿ

ಕೊನೆಯ ದಿನಗಳಲ್ಲಿ ಸಂಚಿತಾ ಅನುಭವಿಸುತ್ತಿದ್ದ ಮಾನಸಿಕ ಒತ್ತಡವನ್ನು ಕಂಡು ಅನೇಕರು ಅವರಿಗೆ ನೆರವಾಗಿದ್ದರು. ಅವರ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಸಂಬಂಧಪಟ್ಟ ಪ್ರೊಡಕ್ಷನ್ ಹೌಸ್ ಕೂಡ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿತ್ತು. ಏನೇ ನಡೆದಿದ್ದರೂ ಇದು ಅತ್ಯಂತ ದುಃಖಕರ ಮತ್ತು ಆಘಾತಕಾರಿ ಸಂಗತಿಯಾಗಿದ್ದು, ಅವರ ಸಾವಿನ ಸುದ್ದಿ ಕೇಳಿ ತಮಗೆ ತೀವ್ರ ಆಘಾತವಾಗಿದೆ ಎಂದು ಉಜ್ವಲ್ ಶರ್ಮಾ ಹೇಳಿದ್ದಾರೆ. ಸದ್ಯ ಪೊಲೀಸರು ಸಂಚಿತಾ ಅವರ ವೈಯಕ್ತಿಕ ಜೀವನ ಹಾಗೂ ಅವರ ಮಾಜಿ ಗೆಳೆಯನ ಹಿನ್ನೆಲೆಯನ್ನು ಆಧರಿಸಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:07 am, Tue, 16 June 26

Follow Us
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ