ಕಿರುತೆರೆ ನಟಿ ಸಂಚಿತಾ ಸಾವಿಗೆ ಕಾರಣವಾಗಿದ್ದು ಆ ಹುಡುಗ?

ಕಿರುತೆರೆ ನಟಿ ಸಂಚಿತಾ ಉಗಾಲೆ ಆತ್ಮಹತ್ಯೆಗೆ ಶರಣಾಗಿದ್ದಾರೆ. 30ನೇ ವಯಸ್ಸಿನಲ್ಲಿಯೇ ಅವರು ಈ ಕಠಿಣ ನಿರ್ಧಾರ ಕೈಗೊಂಡಿರುವುದು ಚಿತ್ರರಂಗಕ್ಕೆ ಆಘಾತ ತಂದಿದೆ. ನಟ ಉಜ್ವಲ್ ಶರ್ಮಾ ಅವರು ಸಂಚಿತಾ ಅವರ ಸಾವಿನ ಬಗ್ಗೆ ಪ್ರಮುಖ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ. ಸಂಚಿತಾ ಬೇರೊಬ್ಬರೊಂದಿಗೆ ಲಿವ್-ಇನ್ ಸಂಬಂಧದಲ್ಲಿದ್ದು, ಆ ಸಂಬಂಧದಿಂದ ಮಾನಸಿಕವಾಗಿ ತೀವ್ರ ಒತ್ತಡದಲ್ಲಿದ್ದರು ಎಂದು ಉಜ್ವಲ್ ತಿಳಿಸಿದ್ದಾರೆ. ಪೊಲೀಸರು ಇದೀಗ ನಟಿಯ ವೈಯಕ್ತಿಕ ಜೀವನ ಮತ್ತು ಮಾಜಿ ಗೆಳೆಯನ ಹಿನ್ನೆಲೆಯ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.

ಕಿರುತೆರೆ ನಟಿ ಸಂಚಿತಾ ಸಾವಿಗೆ ಕಾರಣವಾಗಿದ್ದು ಆ ಹುಡುಗ?
ಸಂಚಿತಾ
Edited By:

Updated on: Jun 16, 2026 | 8:10 AM

ಹಿಂದಿ ಕಿರುತೆರೆಯ ಜನಪ್ರಿಯ ನಟಿ ಸಂಚಿತಾ ಉಗಾಲೆ ಅವರು (Sanchita Ugale) ತಮ್ಮ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆ ನಡೆದಿದೆ. ಕೇವಲ 22ನೇ ವಯಸ್ಸಿಗೆ ನಟಿ ಇಂತಹ ಕಠಿಣ ಹೆಜ್ಜೆ ಇಟ್ಟು ಕೊನೆಯುಸಿರೆಳೆದಿರುವುದು ಇಡೀ ಚಿತ್ರರಂಗ ಹಾಗೂ ಅವರ ಅಭಿಮಾನಿಗಳಿಗೆ ತೀವ್ರ ಆಘಾತವನ್ನುಂಟು ಮಾಡಿದೆ. ಭಾನುವಾರ ಸಂಜೆ ಈ ದುರಂತ ಸಂಭವಿಸಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು. ಸದ್ಯ ನಟಿಯ ಸಾವಿಗೆ ನಿಖರ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಸಂಚಿತಾ ಅವರ ಹಠಾತ್ ನಿಧನದ ಬೆನ್ನಲ್ಲೇ ಉದ್ಯಮದಲ್ಲಿ ಹಲವು ವದಂತಿಗಳು ಕೇಳಿಬರುತ್ತಿದ್ದು, ಅವರು ತಮ್ಮ ಸಹನಟ ಉಜ್ವಲ್ ಶರ್ಮಾ ಜೊತೆ ರಿಲೇಶನ್‌ಶಿಪ್‌ನಲ್ಲಿದ್ದರು ಎಂಬ ಚರ್ಚೆಗಳು ನಡಯುತ್ತಿದ್ದವು. ಆದರೆ, ಈ ಹಿಂದೆ ಸ್ವತಃ ಸಂಚಿತಾ ಅವರೇ ಇದೆಲ್ಲವೂ ಕೇವಲ ವದಂತಿಗಳಷ್ಟೇ ಎಂದು ಸ್ಪಷ್ಟಪಡಿಸಿದ್ದರು. ಇದೀಗ ಸಂಚಿತಾ ಸಾವಿನ ನಂತರ ಮಾಧ್ಯಮವೊಂದರ ಜೊತೆ ಮಾತನಾಡಿರುವ ನಟ ಉಜ್ವಲ್ ಶರ್ಮಾ, ಇಡೀ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವು ಪ್ರಮುಖ ವಿಷಯಗಳನ್ನು ಬಹಿರಂಗಪಡಿಸಿದ್ದಾರೆ.

‘ನಮ್ಮ ನಡುವೆ ಯಾವುದೇ ಪ್ರೇಮ ಸಂಬಂಧ ಇರಲಿಲ್ಲ, ಅದೆಲ್ಲವೂ ಕೇವಲ ವದಂತಿಗಳಾಗಿದ್ದವು’ ಎಂದು ಉಜ್ವಲ್ ಸ್ಪಷ್ಟನೆ ನೀಡಿದ್ದಾರೆ. ‘ಸಂಚಿತಾ ಬೇರೊಬ್ಬ ವ್ಯಕ್ತಿಯನ್ನು ಪ್ರೀತಿಸುತ್ತಿದ್ದು, ಆತನ ಜೊತೆಯೇ ಲಿವ್-ಇನ್ ರಿಲೇಶನ್‌ಶಿಪ್‌ನಲ್ಲಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಆತನ ನಡವಳಿಕೆಯಿಂದಾಗಿ ಸಂಚಿತಾ ಮಾನಸಿಕವಾಗಿ ತೀವ್ರ ಕಷ್ಟದ ಸಮಯವನ್ನು ಎದುರಿಸುತ್ತಿದ್ದರು. ನಾನು ನನ್ನ ಊರಿಗೆ ತೆರಳಿದ್ದರಿಂದ ಕಳೆದ ಕೆಲವು ದಿನಗಳಿಂದ ಅವರೊಂದಿಗೆ ಮಾತನಾಡಲು ಸಾಧ್ಯವಾಗಿರಲಿಲ್ಲ’ ಎಂದು ಉಜ್ವಲ್ ತಿಳಿಸಿದ್ದಾರೆ.

ಇದನ್ನೂ ಓದಿ: ಆತ್ಮಹತ್ಯೆ ಮಾಡಿಕೊಂಡ ಸಂಚಿತಾ ಉಗಾಲೆ; ಸಾವಿಗೂ ಮುನ್ನ ರೀಲ್ಸ್ ಮಾಡಿದ್ದ ಕಿರುತೆರೆ ನಟಿ

ಕೊನೆಯ ದಿನಗಳಲ್ಲಿ ಸಂಚಿತಾ ಅನುಭವಿಸುತ್ತಿದ್ದ ಮಾನಸಿಕ ಒತ್ತಡವನ್ನು ಕಂಡು ಅನೇಕರು ಅವರಿಗೆ ನೆರವಾಗಿದ್ದರು. ಅವರ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು ಸಂಬಂಧಪಟ್ಟ ಪ್ರೊಡಕ್ಷನ್ ಹೌಸ್ ಕೂಡ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿತ್ತು. ಏನೇ ನಡೆದಿದ್ದರೂ ಇದು ಅತ್ಯಂತ ದುಃಖಕರ ಮತ್ತು ಆಘಾತಕಾರಿ ಸಂಗತಿಯಾಗಿದ್ದು, ಅವರ ಸಾವಿನ ಸುದ್ದಿ ಕೇಳಿ ತಮಗೆ ತೀವ್ರ ಆಘಾತವಾಗಿದೆ ಎಂದು ಉಜ್ವಲ್ ಶರ್ಮಾ ಹೇಳಿದ್ದಾರೆ. ಸದ್ಯ ಪೊಲೀಸರು ಸಂಚಿತಾ ಅವರ ವೈಯಕ್ತಿಕ ಜೀವನ ಹಾಗೂ ಅವರ ಮಾಜಿ ಗೆಳೆಯನ ಹಿನ್ನೆಲೆಯನ್ನು ಆಧರಿಸಿ ತನಿಖೆಯನ್ನು ತೀವ್ರಗೊಳಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:07 am, Tue, 16 June 26

ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
Follow Us