AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಿಣಿ ಅವತಾರದಲ್ಲಿ ಸಂಗೀತಾ ಭಟ್​; ಕಿರುತೆರೆಯಲ್ಲಿ ಅತಿಥಿಯಾಗಿ ಕಮಾಲ್​ ಮಾಡಲು ಬಂದ ನಟಿ

‘ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ’ ಧಾರಾವಾಹಿಯಲ್ಲಿ ಸಂಗೀತಾ ಭಟ್​ ಅವರು ನಾಗಿಣಿ ಪಾತ್ರ ಮಾಡಿದ್ದಾರೆ. ನಾಗರ ಪಂಚಮಿ ಪ್ರಯುಕ್ತ ಈ ವಿಶೇಷ ಎಪಿಸೋಡ್​ ಪ್ರಸಾರ ಆಗಲಿದೆ.

ನಾಗಿಣಿ ಅವತಾರದಲ್ಲಿ ಸಂಗೀತಾ ಭಟ್​; ಕಿರುತೆರೆಯಲ್ಲಿ ಅತಿಥಿಯಾಗಿ ಕಮಾಲ್​ ಮಾಡಲು ಬಂದ ನಟಿ
ಸಂಗೀತಾ ಭಟ್
TV9 Web
| Edited By: |

Updated on:Jul 29, 2022 | 8:31 AM

Share

ನಟಿ ಸಂಗೀತ ಭಟ್​ (Sangeetha Bhat) ಅವರು ಅನೇಕ ಸಿನಿಮಾಗಳಲ್ಲಿ ಅಭಿನಯಿಸಿ ಗಮನ ಸೆಳೆದಿದ್ದಾರೆ. 2011ರಲ್ಲಿ ಬಣ್ಣದ ಲೋಕಕ್ಕೆ ಕಾಲಿಟ್ಟ ಅವರು ಇತ್ತೀಚಿನ ವರ್ಷಗಳಲ್ಲಿ ಚ್ಯೂಸಿ ಆಗಿದ್ದಾರೆ ಎನ್ನಬಹುದು. ‘ಪ್ರೀತಿ ಗೀತಿ ಇತ್ಯಾದಿ’, ‘ಮಾಮೂ ಟೀ ಅಂಗಡಿ’, ‘ದಯವಿಟ್ಟ ಗಮನಿಸಿ’, ‘ಎರಡನೇ ಸಲ’ ಮುಂತಾದ ಸಿನಿಮಾಗಳಲ್ಲಿ ಸಂಗೀತಾ ಭಟ್​ ನಟಿಸಿದರು. ಈಗ ಅವರು ಕಿರುತೆಯಲ್ಲಿ ಬಣ್ಣ ಹಚ್ಚಿದ್ದಾರೆ. ಹಾಗಂತ ಮಾತ್ರಕ್ಕೆ ಫುಲ್​ ಟೈಮ್ ಕನ್ನಡ​ ಧಾರಾವಾಹಿಯಲ್ಲಿ (Kannada Serial) ಬ್ಯುಸಿ ಆಗಿಲ್ಲ. ಬದಲಿಗೆ ಒಂದು ಅತಿಥಿ ಪಾತ್ರ ಮಾಡುವ ಮೂಲಕ ಪ್ರೇಕ್ಷಕರನ್ನು ರಂಜಿಸಲು ಬರುತ್ತಿದ್ದಾರೆ. ಈ ಮೊದಲು ಕೆಲವು ಧಾರಾವಾಹಿಗಳಲ್ಲಿ ನಟಿಸಿದ್ದ ಅವರು ಈಗ ಸ್ಟಾರ್​ ಸುವರ್ಣ (Star Suvarna) ವಾಹಿನಿಯ ‘ಎಡೆಯೂರು ಶ್ರೀ ಸಿದ್ದಲಿಂಗೇಶ್ವರ’ ಸೀರಿಯಲ್​ನಲ್ಲಿ ಚಿಕ್ಕದೊಂದು ಪಾತ್ರ ನಿಭಾಯಿಸಿದ್ದಾರೆ. ಅವರ ಪಾಲಿಗೆ ಈ ಪಾತ್ರ ತುಂಬ ವಿಶೇಷವಾಗಿದೆ.

ನಾಗರ ಪಂಚಮಿ ಹಬ್ಬದ ಪ್ರಯುಕ್ತ ಪ್ರಸಾರ ಆಗಲಿರುವ ‘ನಾಗಮಣಿ ರಹಸ್ಯ’ ಎಂಬ ವಿಶೇಷ ಎಪಿಸೋಡ್​ಗಾಗಿ ಸಂಗೀತಾ ಭಟ್​ ಅವರು ಈ ಪಾತ್ರ ಮಾಡಿದ್ದಾರೆ. ಅವರ ಗೆಟಪ್​ ಗಮನ ಸೆಳೆಯುವಂತಿದೆ. ಇದು ಅವರಿಗೆ ಹೊಸ ಅನುಭವ. 3 ಗಂಟೆಗಳ ಮಹಾ ಸಂಚಿಕೆ ಇದಾಗಿದ್ದು ನಾಗಿಣಿಯಾಗಿ ಸಂಗೀತಾ ಭಟ್​ ಕಾಣಿಸಿಕೊಳ್ಳಲಿದ್ದಾರೆ. ಇದರ ಪ್ರೋಮೋ ಬಿತ್ತರವಾಗುತ್ತಿದ್ದು, ಈಗಾಗಲೇ ಹೈಪ್​ ಸೃಷ್ಟಿ ಮಾಡಿದೆ.

‘ಸ್ಟಾರ್​ ಸುವರ್ಣ’ ವಾಹಿನಿಯಲ್ಲಿ ಜುಲೈ 31ರ ಭಾನುವಾರ ಸಂಜೆ 6 ಗಂಟೆಗೆ ಈ ಸಂಚಿಕೆ ಪ್ರಸಾರ ಆಗಲಿದೆ. ಬಳಿಕ ‘ಡಿಸ್ನಿ ಪ್ಲಸ್​ ಹಾಟ್​ ಸ್ಟಾರ್​’ ಮೂಲಕವೂ ವೀಕ್ಷಕರು ಈ ಸ್ಪೆಷಲ್​ ಸಂಚಿಕೆಯನ್ನು ನೋಡಬಹುದು. ನವೀನ್​ ಕೃಷ್ಣ ಅವರು ‘ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ’ ಧಾರಾವಾಹಿಗೆ ನಿರ್ದೇಶನ ಮಾಡುತ್ತಿದ್ದಾರೆ. ಹಲವು ಕಾರಣಗಳಿಂದ ಈ ಧಾರಾವಾಹಿ ಗಮನ ಸೆಳೆಯುತ್ತಿದೆ. ಭಕ್ತಿ ಪ್ರಧಾನ ಕಥಾಹಂದರದ ಈ ಸೀರಿಯಲ್​​ಗೆ ವೀಕ್ಷಕರು ಮನಸೋತಿದ್ದಾರೆ.

ಇದನ್ನೂ ಓದಿ
Image
ಮತ್ತೆ ಕಿರುತೆರೆ ಕದ ತಟ್ಟಿದ ನಟ ಗಣೇಶ್; ‘ಇಸ್ಮಾರ್ಟ್​’ ಜೋಡಿಗಳ ಜತೆ ಬರಲಿದ್ದಾರೆ ‘ಗೋಲ್ಡನ್​ ಸ್ಟಾರ್​’
Image
ಕಿರುತೆರೆ ನಟಿ ಪೂರ್ಣಿಮಾಗೆ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ; ಖಾಸಗಿ ಹಾಸ್ಪಿಟಲ್​ ಬೇಡ ಅಂದಿದ್ದಕ್ಕೆ ಕಾರಣ ಏನು?
Image
ಕಿರುತೆರೆ ಜಗತ್ತಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ ಇವರೇ ನೋಡಿ; ಒಂದು ದಿನಕ್ಕೆ ಎಷ್ಟು ಲಕ್ಷ?
Image
ಲವ್​ ಕಹಾನಿ ಹೇಳುವಂತೆ ಬೇಡಿಕೆ ಇಟ್ಟ ಅಭಿಮಾನಿ; ಕಿರುತೆರೆ ನಟಿ ಕೊಟ್ರು ಖಡಕ್ ಉತ್ತರ

‘ಇದೇ ಮೊದಲ ಬಾರಿಗೆ ನಾನು ಗ್ರೀನ್​ ಮ್ಯಾಟ್​ನಲ್ಲಿ ಚಿತ್ರೀಕರಣ ಮಾಡಿದ್ದೇನೆ. ನಾಗಿಣಿ ಪಾತ್ರ ಮಾಡಬೇಕು ಎಂಬ ಆಸೆ ತುಂಬ ದಿನಗಳಿಂದ ನನಗೆ ಇತ್ತು. ಅದು ಎಡೆಯೂರು ಶ್ರೀ ಸಿದ್ದಲಿಂಗೇಶ್ವರ ಧಾರಾವಾಹಿಯಲ್ಲಿ ಈಡೇರಿತು. ಅದಕ್ಕಾಗಿ ತುಂಬ ಖುಷಿ ಇದೆ. ಇದರಲ್ಲಿ ಮಾಮೂಲಿ ಕನ್ನಡ ಇಲ್ಲ. ಸಂಭಾಷಣೆಗಳು ಕಾವ್ಯಾತ್ಮಕವಾಗಿವೆ. ಇಂಥ ಪಾತ್ರ ಮಾಡಿದ್ದಕ್ಕೆ ಹೆಮ್ಮೆ ಎನಿಸುತ್ತಿದೆ’ ಎಂದು ಸಂಗೀತಾ ಭಟ್​ ಹೇಳಿದ್ದಾರೆ.

ಈ ಹಿಂದೆ ಸಿನಿಮಾಗಳ ಜೊತೆ ಜೊತೆಯಲ್ಲೇ ಸಂಗೀತಾ ಭಟ್​ ಅವರು ಒಂದಷ್ಟು ಧಾರಾವಾಹಿಗಳಲ್ಲಿ ನಟಿಸಿದ್ದರು. ‘ನೀಲಿ’, ‘ಭಾಗ್ಯವಂತರು’, ‘ಚಂದ್ರ ಚಕೋರಿ’, ‘ಚಂದ್ರಮುಖಿ’, ‘ಪಂಜರದ ಗಿಣಿ’ ಸೀರಿಯಲ್​ಗಳಲ್ಲಿ ನಟಿಸಿದ ಅನುಭವ ಅವರಿಗೆ ಇದೆ. ಪರಭಾಷೆ ಕೆಲವು ಚಿತ್ರಗಳಲ್ಲೂ ಅವರು ಅಭಿನಯಿಸಿದ್ದಾರೆ.

Published On - 7:15 am, Fri, 29 July 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ