AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನನ್ನನ್ನು ಕ್ಷಮಿಸಿ’; ಮಾಡಿದ ತಪ್ಪಿಗೆ ಕಾರ್ತಿಕ್ ತಾಯಿ ಬಳಿ ಸಾರಿ ಕೇಳಿದ ಸಂಗೀತಾ

ಕಾರ್ತಿಕ್ ತಾಯಿ ಎಲ್ಲರ ಜೊತೆ ಬೆರೆತರು. ಸಮಯ ನೋಡಿ ಸಂಗೀತಾ ಅವರು ಕ್ಷಮೆ ಕೇಳಿದ್ದಾರೆ. ಇದಕ್ಕೆ ಒಂದು ಮಹತ್ವದ ಕಾರಣ ಇದೆ.

‘ನನ್ನನ್ನು ಕ್ಷಮಿಸಿ’; ಮಾಡಿದ ತಪ್ಪಿಗೆ ಕಾರ್ತಿಕ್ ತಾಯಿ ಬಳಿ ಸಾರಿ ಕೇಳಿದ ಸಂಗೀತಾ
ಕಾರ್ತಿಕ್-ಸಂಗೀತಾ
ರಾಜೇಶ್ ದುಗ್ಗುಮನೆ
|

Updated on:Dec 28, 2023 | 8:08 AM

Share

ಬಿಗ್ ಬಾಸ್ (Bigg Boss) ಮನೆಯಲ್ಲಿ ಯಾರು ಯಾವ ರೀತಿಯಲ್ಲಿ ಆಡುತ್ತಿದ್ದಾರೆ ಅನ್ನೋದು ಹೊರಗಿನಿಂದ ನೋಡಿದವರಿಗೆ ಸ್ಪಷ್ಟವಾಗಿ ತಿಳಿಯುತ್ತಿದೆ. ಯಾರ ಆಟದಲ್ಲಿ ಯಾವ ರೀತಿಯ ಬದಲಾವಣೆ ಆಗಬೇಕು ಅನ್ನೋದು ಕೂಡ ಅನೇಕರಿಗೆ ಗೊತ್ತಾಗಿರುತ್ತದೆ. ಈ ವಾರ ಫ್ಯಾಮಿಲಿ ವೀಕ್. ಕುಟುಂಬದವರು ದೊಡ್ಮನೆಗೆ ತೆರಳಿ ತಮ್ಮವರನ್ನು ಮಾತನಾಡಿಸುತ್ತಿದ್ದಾರೆ. ಆಟದಲ್ಲಿ ಯಾವ ರೀತಿಯ ಬದಲಾವಣೆ ಆಗಬೇಕು ಎಂಬುದನ್ನು ಹೇಳುತ್ತಿದ್ದಾರೆ. ಕಾರ್ತಿಕ್ (Karthik) ಅವರ ತಾಯಿ ಬಿಗ್ ಬಾಸ್​ಗೆ ಬಂದಿದ್ದರು. ಈ ವೇಳೆ ಅವರ ಬಳಿ ಸಂಗೀತಾ ಕ್ಷಮೆ ಕೇಳಿದ್ದಾರೆ.

ಕಾರ್ತಿಕ್ ಅವರ ತಾಯಿ ದೊಡ್ಮನೆಗೆ ಬಂದರು. ಮೊದಲು ಹೀಗೆ ಬಂದು ಹಾಗೆ ಹೋದರು. ಆ ಬಳಿಕ ಅವರನ್ನು ಮತ್ತೆ ದೊಡ್ಮನೆಗೆ ಕಳುಹಿಸಲಾಯಿತು. ಈ ವೇಳೆ ಕಾರ್ತಿಕ್ ಖುಷಿಯಿಂದ ತಾಯಿಯನ್ನು ಮಾತನಾಡಿಸಿದರು. ಕಾರ್ತಿಕ್ ತಾಯಿ ಕೂಡ ಎಲ್ಲರ ಜೊತೆ ಬೆರೆತರು. ಸಮಯ ನೋಡಿ ಸಂಗೀತಾ ಅವರು ಕ್ಷಮೆ ಕೇಳಿದ್ದಾರೆ. ಇದಕ್ಕೆ ಒಂದು ಮಹತ್ವದ ಕಾರಣ ಇದೆ.

ಬಿಗ್ ಬಾಸ್ ಒಂದು ಟಾಸ್ಕ್ ನೀಡಿದ್ದರು. ಈ ಟಾಸ್ಕ್​ನಲ್ಲಿ ಸಂಗೀತಾ ಹಾಗೂ ಕಾರ್ತಿಕ್ ಬೇರೆ ಬೇರೆ ಟೀಂನಲ್ಲಿ ಇದ್ದರು. ಸಂಗೀತಾ ಅವರು ಕಾರ್ತಿಕ್​ಗೆ ತಲೆ ಬೋಳಿಸೋ ಟಾಸ್ಕ್ ನೀಡಿದರು. ಇದನ್ನು ಸ್ವೀಕರಿಸಿದರು ಕಾರ್ತಿಕ್. ಈ ಮೂಲಕ ಅವರು ತಲೆ ಬೋಳಿಸಿಕೊಂಡರು. ಈ ಘಟನೆ ಬಗ್ಗೆ ಸಂಗೀತಾಗೆ ಇನ್ನೂ ಬೇಸರ ಇದ್ದಂತೆ ಇದೆ. ಈ ವಿಚಾರದಲ್ಲಿ ಅವರು ಕ್ಷಮೆ ಕೇಳಿದ್ದಾರೆ.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಈಗ ಉಳಿದಿದ್ದು 10 ಮಂದಿ; ಸ್ಪರ್ಧಿಗಳ ಬಲಾಬಲದ ಬಗ್ಗೆ ಇಲ್ಲಿದೆ ವಿವರ..

‘ಅಮ್ಮ ನನ್ನನ್ನು ಕ್ಷಮಿಸಿ’ ಎಂದರು ಸಂಗೀತಾ. ಇದಕ್ಕೆ ಕಾರ್ತಿಕ್ ತಾಯಿ ‘ಏಕೆ’ ಎಂದು ಪ್ರಶ್ನಿಸಿದರು. ‘ನಿಮ್ಮ ಮಗನ ತಲೆ ಕೂದಲು ಹೋಗುವಂತೆ ಮಾಡಿದೆ. ಅದೆಲ್ಲ ಗೇಮ್​ಗೋಸ್ಕರ ಮಾತ್ರ ಆಗಿತ್ತು. ನಮ್ಮಿಬ್ಬರ ಮಧ್ಯೆ ಯಾವುದೇ ವೈಯಕ್ತಿಕ ದ್ವೇಷ ಇಲ್ಲ’ ಎಂದು ಹೇಳಿದರು. ಇದಕ್ಕೆ ಉತ್ತರಿಸಿದ ಕಾರ್ತಿಕ್ ತಾಯಿ, ‘ಕ್ಷಮೆ ಕೇಳುವ ಅಗತ್ಯ ಇಲ್ಲ’ ಎಂದರು. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಬಿಗ್ ಬಾಸ್ ನೋಡೋ ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:04 am, Thu, 28 December 23

ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ