AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಾಪ್ ಬಗ್ಗೆಯೇ ಚುಚ್ಚು ಮಾತು; ವಿನಯ್ ಚಮಚ ಆಗಿ ಬದಲಾಗೋದ್ರಾ ಸಂಗೀತಾ?

ಸಂಗೀತಾ ಶೃಂಗೇರಿ ಅವರು ವಿನಯ್ ವಿರುದ್ಧ ತೊಡೆತಟ್ಟಿದ್ದರು. ಅವರು ಅನ್ಯಾಯ ಎದುರಿಸುತ್ತಿದ್ದಾರೆ, ಅನ್ಯಾಯ ಮೆಟ್ಟಿ ನಿಲ್ಲುತ್ತಿದ್ದಾರೆ ಎಂದು ಅನೇಕರು ಮಾತನಾಡಿಕೊಂಡಿದ್ದರು. ಆದರೆ, ಈಗ ಅವರು ವಿನಯ್ ಜೊತೆಯೇ ಕೈ ಜೋಡಿಸಿದ್ದಾರೆ. ಅಷ್ಟೇ ಅಲ್ಲ, ವಿನಯ್ ಅವರ ಚಮಚ ಆಗಿ ಬದಲಾಗುತ್ತಿದ್ದಾರಾ ಎನ್ನುವ ಪ್ರಶ್ನೆ ಮೂಡಿದೆ.

ಪ್ರತಾಪ್ ಬಗ್ಗೆಯೇ ಚುಚ್ಚು ಮಾತು; ವಿನಯ್ ಚಮಚ ಆಗಿ ಬದಲಾಗೋದ್ರಾ ಸಂಗೀತಾ?
ಪ್ರತಾಪ್-ಸಂಗೀತಾ
Follow us
ರಾಜೇಶ್ ದುಗ್ಗುಮನೆ
|

Updated on: Nov 24, 2023 | 9:05 AM

ಕಾರ್ತಿಕ್ (Karthik Mahesh) ಅವರ ಗ್ಯಾಂಗ್​ನ ತೊರೆದ ಕಾರಣ ಸಂಗೀತಾ ಅವರು ವಿನಯ್ ಗುಂಪಿನ ಜೊತೆ ಸೇರಿಕೊಂಡಿದ್ದಾರೆ. ಆದರೆ, ಇದು ಅವರ ಆಟದ ಮೇಲೆ ನೇರ ಪರಿಣಾಮ ಬೀರುತ್ತಿದೆ ಎಂಬುದು ಗೊತ್ತಾಗುತ್ತಿಲ್ಲ. ಮೊದಲಿನಿಂದಲೂ ದೀದಿ ದೀದಿ ಎಂದು ಸಂಗೀತಾನ ಬೆಂಬಲಿಸುತ್ತಲೇ ಬರುತ್ತಿದ್ದಾರೆ ಪ್ರತಾಪ್. ಅವರ ವಿರುದ್ಧವೇ ಸಂಗೀತಾ (Sanageetha Sringeri) ಚುಚ್ಚು ಮಾತುಗಳನ್ನು ಆಡಿದ್ದಾರೆ. ಸದ್ಯ ಈ ಪ್ರೋಮೋ ವೈರಲ್ ಆಗಿದೆ. ಸಂಗೀತಾ ವಿರುದ್ಧ ಎಲ್ಲರೂ ಅಪಸ್ವರ ತೆಗೆದಿದ್ದಾರೆ.

ಸಂಗೀತಾ ಶೃಂಗೇರಿ ಅವರು ವಿನಯ್ ವಿರುದ್ಧ ತೊಡೆತಟ್ಟಿದ್ದರು. ಅವರು ಅನ್ಯಾಯ ಎದುರಿಸುತ್ತಿದ್ದಾರೆ, ಅನ್ಯಾಯ ಮೆಟ್ಟಿ ನಿಲ್ಲುತ್ತಿದ್ದಾರೆ ಎಂದು ಅನೇಕರು ಮಾತನಾಡಿಕೊಂಡಿದ್ದರು. ಆದರೆ, ಈಗ ಅವರು ವಿನಯ್ ಜೊತೆಯೇ ಕೈ ಜೋಡಿಸಿದ್ದಾರೆ. ಅಷ್ಟೇ ಅಲ್ಲ, ವಿನಯ್ ಅವರ ಚಮಚ ಆಗಿ ಬದಲಾಗುತ್ತಿದ್ದಾರಾ ಎನ್ನುವ ಪ್ರಶ್ನೆ ಮೂಡಿದೆ.

ಬಾತ್​ರೂಂ ವಿಚಾರಕ್ಕೆ ವಿನಯ್ ಹಾಗೂ ಸ್ನೇಹಿತ್ ಅಡ್ಜಸ್ಟ್​ಮೆಂಟ್ ಮಾಡಿಕೊಂಡಿದ್ದರು. ಇದನ್ನು ಪ್ರತಾಪ್ ಅವರು ಪ್ರಶ್ನೆ ಮಾಡಿದ್ದಾರೆ. ಇದಕ್ಕೆ ಸ್ನೇಹಿತ್ ಏರು ಧ್ವನಿಯಲ್ಲಿ ಮಾತನಾಡಿದ್ದಾರೆ. ಇದನ್ನು ತಮ್ಮ ಗುಂಪಿನಲ್ಲಿ ಹೇಳಿಕೊಂಡು ನಕ್ಕಿದ್ದಾರೆ ವಿನಯ್. ‘ಇದೊಂದು ವಿಚಾರ ಇಟ್ಟುಕೊಂಡ್ರೆ ಕೊನೆಯವರೆಗೂ ಇದನ್ನೇ ಹೇಳ್ತಾ ಇರ್ತಾನೆ’ ಎಂದು ನಮ್ರತಾ ಹೇಳಿದ್ದಾರೆ. ‘ಒಂದು ವಿಚಾರ ಕಚ್ಕೊಂಡ್ರೆ ಮುಗ್ದೋಯ್ತು’ ಎಂದು ಸಂಗೀತಾ ನಗುತ್ತಾ ಹೇಳಿದ ಮಾತು ಅನೇಕರ ಕೋಪಕ್ಕೆ ಕಾರಣ ಆಗಿದೆ.

ಸಂಗೀತಾ ಶೃಂಗೇರಿ ಅವರು ತುಂಬಾನೇ ಬದಲಾಗಿದ್ದಾರೆ. ವಿನಯ್ ಅವರ ಗುಂಪಿನ ಜೊತೆ ಸೇರಿದಾಗಿನಿಂದಲೂ ಅವರನ್ನು ವೀಕ್ಷಕರು ನೋಡುತ್ತಿರುವ ರೀತಿ ಬದಲಾಗಿದೆ. ಅವರು ಇನ್​ಸ್ಟಾಗ್ರಾಮ್​ನಲ್ಲಿ ಈಗಾಗಲೇ 11 ಸಾವಿರ ಹಿಂಬಾಲಕರನ್ನು ಕಳೆದುಕೊಂಡಿದ್ದಾರೆ. ದಿನ ಕಳೆದಂತೆ ಅವರ ಹಿಂಬಾಲಕರ ಸಂಖ್ಯೆ ಕಡಿಮೆ ಆಗುತ್ತಲೇ ಇದೆ. ಇದೇ ರೀತಿ ಆದರೆ, ಅವರು ಶೀಘ್ರದಲ್ಲೇ ಮನೆಯಿಂದ ಎಲಿಮಿನೇಟ್ ಆದರೂ ಅಚ್ಚರಿ ಏನಿಲ್ಲ.

ಇದನ್ನೂ ಓದಿ: ‘ಪ್ರತೀ ಬಾರಿ ಇದೇ ಡ್ರಾಮಾ’; ಹೊಡೆದಾಟದ ಹಂತಕ್ಕೆ ಹೋಯ್ತು ಬಿಗ್ ಬಾಸ್ ಟಾಸ್ಕ್​

ಕಲರ್ಸ್ ಕನ್ನಡ ವಾಹಿನಿ ಹಂಚಿಕೊಂಡಿರುವ ಪ್ರೋಮೋ ಗಮನ ಸೆಳೆಯುತ್ತಿದೆ. ಇಂದು (ನವೆಂಬರ್ 24) ರಾತ್ರಿ ಎಪಿಸೋಡ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಬಾಗಲಕೋಟೆ ಸೇರಿ ರಾಜ್ಯದ 5 ರೈಲು ನಿಲ್ದಾಣಗಳನ್ನು ಉದ್ಘಾಟಿಸಲಿರುವ ಮೋದಿ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಅಧಿಕಾರ ಸ್ವೀಕರಿಸಿದ ನೂತನ ಡಿಜಿಪಿ ಡಾ. ಎಂ. ಎ ಸಲೀಂ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ಸಿಂಧ್​ನಲ್ಲಿ ನೀರಿಗಾಗಿ ಹಿಂಸಾಚಾರ; ಇಬ್ಬರು ಸಾವು, ಸಚಿವರ ಮನೆಗೆ ಬೆಂಕಿ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ನಾನು ರೆಡ್ ಕಾರ್ಪೆಟ್ ಮೇಲೆ ನಿಂತಿದ್ದರೆ ಪ್ರಶ್ನೆ ಉದ್ಭವಿಸುತ್ತದೆ: ಸಿಎಂ
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಬೇರೆ ಬೇರೆ ಸ್ಥಳಗಳಿಗೆ ಹೋಗುತ್ತೇವೆಂದಿದ್ದ ಸಿಎಂ, ಡಿಸಿಎಂ ಜೊತೆಗಿದ್ದರು
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ಮೊನ್ನೆ ಬಿಡದಿ ಭದ್ರಾಪುರ ಬಳಿ ಇವತ್ತು ಅತ್ತಿಬೆಲೆ ಮಾರ್ಗ ರೇಲ್ವೇ ಬ್ರಿಜ್
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ತೋರಿಕೆಯ ಸಿಟಿ ರೌಂಡ್ಸ್ ಸಿದ್ದರಾಮಯ್ಯಗೆ ಬೇಕಿತ್ತೇ? ಜನರ ಪ್ರಶ್ನೆ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ಟಿವಿ9 ವರದಿಗಾರ ಪ್ರಶ್ನಿಸುತ್ತಿದ್ದಂತೆಯೇ ರೆಡ್ ಕಾರ್ಪೆಟ್ ಮಂಗಮಾಯ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ವಕ್ಫ್​ ಆಸ್ತಿ ಕಬಳಿಕೆ ತೆರವು: ವಕ್ಫ್ ನಮ್ಮ ದುಷ್ಮನ್ ಎಂದ ಮುಸ್ಲಿಂ ಮಹಿಳೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ
ಜನಸಾಮಾನ್ಯರಿಗೆ ಕಷ್ಟ ತಪ್ಪಿದ್ದಲ್ಲ ಅಂತ ಉಡಾಫೆ ಮಾತಾಡಿದ ಕಾರ್ಯಕರ್ತೆ