AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಳಿದವರೆಲ್ಲ ಒಂದು, ನಾವಿಬ್ಬರು ಒಂದು’; ಪ್ರತಾಪ್ ಎದುರು ಸಂಗೀತಾ ಬೇಸರ

ಕಾರ್ತಿಕ್ ಅವರು ವಿನಯ್ ಅವರತ್ತ ಹೆಚ್ಚು ವಾಲಿದ್ದಾರೆ. ಈ ಕಾರಣದಿಂದಲೇ ಸಂಗೀತಾಗೆ ಹಿನ್ನಡೆ ಆಗಿದೆ. ಅವರು ಮನೆಯಲ್ಲಿ ಏಕಾಂಗಿ ಆಗಿದ್ದಾರೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.

‘ಉಳಿದವರೆಲ್ಲ ಒಂದು, ನಾವಿಬ್ಬರು ಒಂದು’; ಪ್ರತಾಪ್ ಎದುರು ಸಂಗೀತಾ ಬೇಸರ
ಸಂಗೀತಾ
ರಾಜೇಶ್ ದುಗ್ಗುಮನೆ
|

Updated on:Dec 20, 2023 | 7:32 AM

Share

ಸಂಗೀತಾ ಶೃಂಗೇರಿಗೆ (Sangeetha Sringeri)  ಬಿಗ್ ಬಾಸ್ ಮನೆಯಲ್ಲಿ ಒಂಟಿತನ ಅತಿಯಾಗಿ ಕಾಡಿದೆ. ಇತ್ತೀಚೆಗೆ ನಡೆದ ಬೆಳವಣಿಗೆಗಳು ಇದಕ್ಕೆ ಕಾರಣ. ಈ ಬಗ್ಗೆ ಸಂಗೀತಾ ಸಾಕಷ್ಟು ಬೇಸರು ಮಾಡಿಕೊಂಡಿದ್ದಾರೆ. ‘ಈಗ ನನ್ನ ಸೈಡ್​ನಲ್ಲಿ ಇರೋದು ನೀನು ಮಾತ್ರ’ ಎಂದು ಪ್ರತಾಪ್​ಗೆ ಹೇಳಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಈ ಎಪಿಸೋಡ್ ಡಿಸೆಂಬರ್ 19ರಂದು ಪ್ರಸಾರ ಕಂಡಿದೆ. ‘ನಿಮ್ಮ ಕಡೆ ನಾವಿದ್ದೇವೆ’ ಎಂದು ಸಂಗೀತಾ ಶೃಂಗೇರಿ ಅಭಿಮಾನಿಗಳು ಹೇಳಿದ್ದಾರೆ.

ಬಿಗ್ ಬಾಸ್​ನಲ್ಲಿ ಸಂಗೀತಾ, ತನಿಷಾ, ಕಾರ್ತಿಕ್, ಪ್ರತಾಪ್ ಸಾಮಾನ್ಯವಾಗಿ ಒಟ್ಟಾಗಿ ಇರುತ್ತಿದ್ದರು. ವರ್ತೂರು ಸಂತೋಷ್ ಹಾಗೂ ತುಕಾಲಿ ಸಂತೋಷ್ ಅವರು ತಮ್ಮದೇ ಗ್ಯಾಂಗ್ ಮಾಡಿಕೊಂಡಿದ್ದಾರೆ. ಈಗ ಸಂಗೀತಾ ಹಾಗೂ ಕಾರ್ತಿಕ್ ಮಧ್ಯೆ ಜಗಳ ಆಗಿದೆ. ಕಾರ್ತಿಕ್ ಅವರು ವಿನಯ್ ಅವರತ್ತ ಹೆಚ್ಚು ವಾಲಿದ್ದಾರೆ. ಈ ಕಾರಣದಿಂದಲೇ ಸಂಗೀತಾಗೆ ಹಿನ್ನಡೆ ಆಗಿದೆ. ಅವರು ಮನೆಯಲ್ಲಿ ಏಕಾಂಗಿ ಆಗಿದ್ದಾರೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.

‘ವಿನಯ್​ಗೆ ಕಾರ್ತಿಕ್ ಬಕೆಟ್ ಹಿಡಿಯುತ್ತಿದ್ದಾನೆ’ ಎಂದು ಹೇಳಿದ್ದರು ಸಂಗೀತಾ. ಇದಾದ ಬಳಿಕ ಸಂಗೀತಾ ಹಾಗೂ ಕಾರ್ತಿಕ್ ಮಧ್ಯೆ ಕಿರಿಕ್ ಆಗಿದೆ. ವಿನಯ್​ನಿಂದ ಮೊದಲೇ ದ್ವೇಷ ಕಟ್ಟಿಕೊಂಡಿದ್ದ ಅವರು ಈಗ ಕಾರ್ತಿಕ್​ನಿಂದಲೂ ದೂರ ಆಗಿದ್ದಾರೆ. ತನಿಷಾ ಕೂಡ ಸಂಗೀತಾ ಅವರಿಂದ ಅಂತರ ಕಾಯ್ದುಕೊಂಡಿದ್ದಾರೆ. ಇದು ಸಂಗೀತಾ ಬೇಸರಕ್ಕೆ ಕಾರಣ ಆಗಿದೆ.

ಇದನ್ನೂ ಓದಿ: ‘ಮೂರೇ ದಿನದಲ್ಲಿ ಹಳೆಯ ಪಿಕ್ಚರ್ ಬರುತ್ತೆ’; ಕಾರ್ತಿಕ್-ಸಂಗೀತಾ ಜಗಳದ ಬಗ್ಗೆ ವರ್ತೂರು ಸಂತೋಷ್ ಮಾತು

ವಾಶ್​ರೂಂ ಏರಿಯಾದಲ್ಲಿ ಸಂಗೀತಾ ಕುಳಿತಿದ್ದರು. ಈ ವೇಳೆ ಅವರು ಪ್ರತಾಪ್ ಜೊತೆ ಮಾತನಾಡಿದ್ದಾರೆ. ‘ಬಿಗ್ ಬಾಸ್ ಮನೆಯಲ್ಲಿ ನಾವಿಬ್ಬರೇ ಒಂದು, ಉಳಿದವರೆಲ್ಲ ಒಂದು. ಇನ್ನು ಎಲ್ಲರೂ ನಮ್ಮನ್ನೇ ಟಾರ್ಗೆಟ್ ಮಾಡುತ್ತಾರೆ’ ಎಂದು ಬೇಸರ ಮಾಡಿಕೊಂಡರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:32 am, Wed, 20 December 23

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​