AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಳಿದವರೆಲ್ಲ ಒಂದು, ನಾವಿಬ್ಬರು ಒಂದು’; ಪ್ರತಾಪ್ ಎದುರು ಸಂಗೀತಾ ಬೇಸರ

ಕಾರ್ತಿಕ್ ಅವರು ವಿನಯ್ ಅವರತ್ತ ಹೆಚ್ಚು ವಾಲಿದ್ದಾರೆ. ಈ ಕಾರಣದಿಂದಲೇ ಸಂಗೀತಾಗೆ ಹಿನ್ನಡೆ ಆಗಿದೆ. ಅವರು ಮನೆಯಲ್ಲಿ ಏಕಾಂಗಿ ಆಗಿದ್ದಾರೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.

‘ಉಳಿದವರೆಲ್ಲ ಒಂದು, ನಾವಿಬ್ಬರು ಒಂದು’; ಪ್ರತಾಪ್ ಎದುರು ಸಂಗೀತಾ ಬೇಸರ
ಸಂಗೀತಾ
ರಾಜೇಶ್ ದುಗ್ಗುಮನೆ
|

Updated on:Dec 20, 2023 | 7:32 AM

Share

ಸಂಗೀತಾ ಶೃಂಗೇರಿಗೆ (Sangeetha Sringeri)  ಬಿಗ್ ಬಾಸ್ ಮನೆಯಲ್ಲಿ ಒಂಟಿತನ ಅತಿಯಾಗಿ ಕಾಡಿದೆ. ಇತ್ತೀಚೆಗೆ ನಡೆದ ಬೆಳವಣಿಗೆಗಳು ಇದಕ್ಕೆ ಕಾರಣ. ಈ ಬಗ್ಗೆ ಸಂಗೀತಾ ಸಾಕಷ್ಟು ಬೇಸರು ಮಾಡಿಕೊಂಡಿದ್ದಾರೆ. ‘ಈಗ ನನ್ನ ಸೈಡ್​ನಲ್ಲಿ ಇರೋದು ನೀನು ಮಾತ್ರ’ ಎಂದು ಪ್ರತಾಪ್​ಗೆ ಹೇಳಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಈ ಎಪಿಸೋಡ್ ಡಿಸೆಂಬರ್ 19ರಂದು ಪ್ರಸಾರ ಕಂಡಿದೆ. ‘ನಿಮ್ಮ ಕಡೆ ನಾವಿದ್ದೇವೆ’ ಎಂದು ಸಂಗೀತಾ ಶೃಂಗೇರಿ ಅಭಿಮಾನಿಗಳು ಹೇಳಿದ್ದಾರೆ.

ಬಿಗ್ ಬಾಸ್​ನಲ್ಲಿ ಸಂಗೀತಾ, ತನಿಷಾ, ಕಾರ್ತಿಕ್, ಪ್ರತಾಪ್ ಸಾಮಾನ್ಯವಾಗಿ ಒಟ್ಟಾಗಿ ಇರುತ್ತಿದ್ದರು. ವರ್ತೂರು ಸಂತೋಷ್ ಹಾಗೂ ತುಕಾಲಿ ಸಂತೋಷ್ ಅವರು ತಮ್ಮದೇ ಗ್ಯಾಂಗ್ ಮಾಡಿಕೊಂಡಿದ್ದಾರೆ. ಈಗ ಸಂಗೀತಾ ಹಾಗೂ ಕಾರ್ತಿಕ್ ಮಧ್ಯೆ ಜಗಳ ಆಗಿದೆ. ಕಾರ್ತಿಕ್ ಅವರು ವಿನಯ್ ಅವರತ್ತ ಹೆಚ್ಚು ವಾಲಿದ್ದಾರೆ. ಈ ಕಾರಣದಿಂದಲೇ ಸಂಗೀತಾಗೆ ಹಿನ್ನಡೆ ಆಗಿದೆ. ಅವರು ಮನೆಯಲ್ಲಿ ಏಕಾಂಗಿ ಆಗಿದ್ದಾರೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.

‘ವಿನಯ್​ಗೆ ಕಾರ್ತಿಕ್ ಬಕೆಟ್ ಹಿಡಿಯುತ್ತಿದ್ದಾನೆ’ ಎಂದು ಹೇಳಿದ್ದರು ಸಂಗೀತಾ. ಇದಾದ ಬಳಿಕ ಸಂಗೀತಾ ಹಾಗೂ ಕಾರ್ತಿಕ್ ಮಧ್ಯೆ ಕಿರಿಕ್ ಆಗಿದೆ. ವಿನಯ್​ನಿಂದ ಮೊದಲೇ ದ್ವೇಷ ಕಟ್ಟಿಕೊಂಡಿದ್ದ ಅವರು ಈಗ ಕಾರ್ತಿಕ್​ನಿಂದಲೂ ದೂರ ಆಗಿದ್ದಾರೆ. ತನಿಷಾ ಕೂಡ ಸಂಗೀತಾ ಅವರಿಂದ ಅಂತರ ಕಾಯ್ದುಕೊಂಡಿದ್ದಾರೆ. ಇದು ಸಂಗೀತಾ ಬೇಸರಕ್ಕೆ ಕಾರಣ ಆಗಿದೆ.

ಇದನ್ನೂ ಓದಿ: ‘ಮೂರೇ ದಿನದಲ್ಲಿ ಹಳೆಯ ಪಿಕ್ಚರ್ ಬರುತ್ತೆ’; ಕಾರ್ತಿಕ್-ಸಂಗೀತಾ ಜಗಳದ ಬಗ್ಗೆ ವರ್ತೂರು ಸಂತೋಷ್ ಮಾತು

ವಾಶ್​ರೂಂ ಏರಿಯಾದಲ್ಲಿ ಸಂಗೀತಾ ಕುಳಿತಿದ್ದರು. ಈ ವೇಳೆ ಅವರು ಪ್ರತಾಪ್ ಜೊತೆ ಮಾತನಾಡಿದ್ದಾರೆ. ‘ಬಿಗ್ ಬಾಸ್ ಮನೆಯಲ್ಲಿ ನಾವಿಬ್ಬರೇ ಒಂದು, ಉಳಿದವರೆಲ್ಲ ಒಂದು. ಇನ್ನು ಎಲ್ಲರೂ ನಮ್ಮನ್ನೇ ಟಾರ್ಗೆಟ್ ಮಾಡುತ್ತಾರೆ’ ಎಂದು ಬೇಸರ ಮಾಡಿಕೊಂಡರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:32 am, Wed, 20 December 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು