AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಳಿದವರೆಲ್ಲ ಒಂದು, ನಾವಿಬ್ಬರು ಒಂದು’; ಪ್ರತಾಪ್ ಎದುರು ಸಂಗೀತಾ ಬೇಸರ

ಕಾರ್ತಿಕ್ ಅವರು ವಿನಯ್ ಅವರತ್ತ ಹೆಚ್ಚು ವಾಲಿದ್ದಾರೆ. ಈ ಕಾರಣದಿಂದಲೇ ಸಂಗೀತಾಗೆ ಹಿನ್ನಡೆ ಆಗಿದೆ. ಅವರು ಮನೆಯಲ್ಲಿ ಏಕಾಂಗಿ ಆಗಿದ್ದಾರೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.

‘ಉಳಿದವರೆಲ್ಲ ಒಂದು, ನಾವಿಬ್ಬರು ಒಂದು’; ಪ್ರತಾಪ್ ಎದುರು ಸಂಗೀತಾ ಬೇಸರ
ಸಂಗೀತಾ
ರಾಜೇಶ್ ದುಗ್ಗುಮನೆ
|

Updated on:Dec 20, 2023 | 7:32 AM

Share

ಸಂಗೀತಾ ಶೃಂಗೇರಿಗೆ (Sangeetha Sringeri)  ಬಿಗ್ ಬಾಸ್ ಮನೆಯಲ್ಲಿ ಒಂಟಿತನ ಅತಿಯಾಗಿ ಕಾಡಿದೆ. ಇತ್ತೀಚೆಗೆ ನಡೆದ ಬೆಳವಣಿಗೆಗಳು ಇದಕ್ಕೆ ಕಾರಣ. ಈ ಬಗ್ಗೆ ಸಂಗೀತಾ ಸಾಕಷ್ಟು ಬೇಸರು ಮಾಡಿಕೊಂಡಿದ್ದಾರೆ. ‘ಈಗ ನನ್ನ ಸೈಡ್​ನಲ್ಲಿ ಇರೋದು ನೀನು ಮಾತ್ರ’ ಎಂದು ಪ್ರತಾಪ್​ಗೆ ಹೇಳಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಈ ಎಪಿಸೋಡ್ ಡಿಸೆಂಬರ್ 19ರಂದು ಪ್ರಸಾರ ಕಂಡಿದೆ. ‘ನಿಮ್ಮ ಕಡೆ ನಾವಿದ್ದೇವೆ’ ಎಂದು ಸಂಗೀತಾ ಶೃಂಗೇರಿ ಅಭಿಮಾನಿಗಳು ಹೇಳಿದ್ದಾರೆ.

ಬಿಗ್ ಬಾಸ್​ನಲ್ಲಿ ಸಂಗೀತಾ, ತನಿಷಾ, ಕಾರ್ತಿಕ್, ಪ್ರತಾಪ್ ಸಾಮಾನ್ಯವಾಗಿ ಒಟ್ಟಾಗಿ ಇರುತ್ತಿದ್ದರು. ವರ್ತೂರು ಸಂತೋಷ್ ಹಾಗೂ ತುಕಾಲಿ ಸಂತೋಷ್ ಅವರು ತಮ್ಮದೇ ಗ್ಯಾಂಗ್ ಮಾಡಿಕೊಂಡಿದ್ದಾರೆ. ಈಗ ಸಂಗೀತಾ ಹಾಗೂ ಕಾರ್ತಿಕ್ ಮಧ್ಯೆ ಜಗಳ ಆಗಿದೆ. ಕಾರ್ತಿಕ್ ಅವರು ವಿನಯ್ ಅವರತ್ತ ಹೆಚ್ಚು ವಾಲಿದ್ದಾರೆ. ಈ ಕಾರಣದಿಂದಲೇ ಸಂಗೀತಾಗೆ ಹಿನ್ನಡೆ ಆಗಿದೆ. ಅವರು ಮನೆಯಲ್ಲಿ ಏಕಾಂಗಿ ಆಗಿದ್ದಾರೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.

‘ವಿನಯ್​ಗೆ ಕಾರ್ತಿಕ್ ಬಕೆಟ್ ಹಿಡಿಯುತ್ತಿದ್ದಾನೆ’ ಎಂದು ಹೇಳಿದ್ದರು ಸಂಗೀತಾ. ಇದಾದ ಬಳಿಕ ಸಂಗೀತಾ ಹಾಗೂ ಕಾರ್ತಿಕ್ ಮಧ್ಯೆ ಕಿರಿಕ್ ಆಗಿದೆ. ವಿನಯ್​ನಿಂದ ಮೊದಲೇ ದ್ವೇಷ ಕಟ್ಟಿಕೊಂಡಿದ್ದ ಅವರು ಈಗ ಕಾರ್ತಿಕ್​ನಿಂದಲೂ ದೂರ ಆಗಿದ್ದಾರೆ. ತನಿಷಾ ಕೂಡ ಸಂಗೀತಾ ಅವರಿಂದ ಅಂತರ ಕಾಯ್ದುಕೊಂಡಿದ್ದಾರೆ. ಇದು ಸಂಗೀತಾ ಬೇಸರಕ್ಕೆ ಕಾರಣ ಆಗಿದೆ.

ಇದನ್ನೂ ಓದಿ: ‘ಮೂರೇ ದಿನದಲ್ಲಿ ಹಳೆಯ ಪಿಕ್ಚರ್ ಬರುತ್ತೆ’; ಕಾರ್ತಿಕ್-ಸಂಗೀತಾ ಜಗಳದ ಬಗ್ಗೆ ವರ್ತೂರು ಸಂತೋಷ್ ಮಾತು

ವಾಶ್​ರೂಂ ಏರಿಯಾದಲ್ಲಿ ಸಂಗೀತಾ ಕುಳಿತಿದ್ದರು. ಈ ವೇಳೆ ಅವರು ಪ್ರತಾಪ್ ಜೊತೆ ಮಾತನಾಡಿದ್ದಾರೆ. ‘ಬಿಗ್ ಬಾಸ್ ಮನೆಯಲ್ಲಿ ನಾವಿಬ್ಬರೇ ಒಂದು, ಉಳಿದವರೆಲ್ಲ ಒಂದು. ಇನ್ನು ಎಲ್ಲರೂ ನಮ್ಮನ್ನೇ ಟಾರ್ಗೆಟ್ ಮಾಡುತ್ತಾರೆ’ ಎಂದು ಬೇಸರ ಮಾಡಿಕೊಂಡರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:32 am, Wed, 20 December 23

ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಕನಸಿನಲ್ಲಿ ಬಂದ ದೇವರು ಹೇಳಿದ್ದಕ್ಕೆ ಮಣ್ಣು ಅಗೆದಾಗ ನಡೆಯಿತು ಅಚ್ಚರಿ!
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಈ ವರ್ಷದ ಮೊದಲ ಸೂಪರ್ ಮೂನ್ ಭಾರತದಲ್ಲಿ ಕಂಡಿದ್ದು ಹೀಗೆ; ವಿಡಿಯೋ ವೈರಲ್
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಕಾನೂನು ಸುವ್ಯವಸ್ಥೆ ಕಾಪಾಡೋದು ಬಿಟ್ಟು ಶಾಸಕನ ಕಾಪಾಡುತ್ತಿದ್ದಾರೆ: ಜೋಶಿ
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಮೃತ ರಾಜಶೇಖರ್​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ ಸಚಿವ ಜಮೀರ್
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಹಾರ್ದಿಕ್ ಸಿಡಿಲಬ್ಬರ; ಲಿಸ್ಟ್​ ಎ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕ
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ಸುಂಟರಗಾಳಿಗೆ ಕುಸಿದ ಪೆಂಡಾಲ್​​: ಸಚಿವ ಸತೀಶ್​ ಜಾರಕಿಹೊಳಿ ಪಾರು
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ