AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಉಳಿದವರೆಲ್ಲ ಒಂದು, ನಾವಿಬ್ಬರು ಒಂದು’; ಪ್ರತಾಪ್ ಎದುರು ಸಂಗೀತಾ ಬೇಸರ

ಕಾರ್ತಿಕ್ ಅವರು ವಿನಯ್ ಅವರತ್ತ ಹೆಚ್ಚು ವಾಲಿದ್ದಾರೆ. ಈ ಕಾರಣದಿಂದಲೇ ಸಂಗೀತಾಗೆ ಹಿನ್ನಡೆ ಆಗಿದೆ. ಅವರು ಮನೆಯಲ್ಲಿ ಏಕಾಂಗಿ ಆಗಿದ್ದಾರೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.

‘ಉಳಿದವರೆಲ್ಲ ಒಂದು, ನಾವಿಬ್ಬರು ಒಂದು’; ಪ್ರತಾಪ್ ಎದುರು ಸಂಗೀತಾ ಬೇಸರ
ಸಂಗೀತಾ
ರಾಜೇಶ್ ದುಗ್ಗುಮನೆ
|

Updated on:Dec 20, 2023 | 7:32 AM

Share

ಸಂಗೀತಾ ಶೃಂಗೇರಿಗೆ (Sangeetha Sringeri)  ಬಿಗ್ ಬಾಸ್ ಮನೆಯಲ್ಲಿ ಒಂಟಿತನ ಅತಿಯಾಗಿ ಕಾಡಿದೆ. ಇತ್ತೀಚೆಗೆ ನಡೆದ ಬೆಳವಣಿಗೆಗಳು ಇದಕ್ಕೆ ಕಾರಣ. ಈ ಬಗ್ಗೆ ಸಂಗೀತಾ ಸಾಕಷ್ಟು ಬೇಸರು ಮಾಡಿಕೊಂಡಿದ್ದಾರೆ. ‘ಈಗ ನನ್ನ ಸೈಡ್​ನಲ್ಲಿ ಇರೋದು ನೀನು ಮಾತ್ರ’ ಎಂದು ಪ್ರತಾಪ್​ಗೆ ಹೇಳಿದ್ದಾರೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಈ ಎಪಿಸೋಡ್ ಡಿಸೆಂಬರ್ 19ರಂದು ಪ್ರಸಾರ ಕಂಡಿದೆ. ‘ನಿಮ್ಮ ಕಡೆ ನಾವಿದ್ದೇವೆ’ ಎಂದು ಸಂಗೀತಾ ಶೃಂಗೇರಿ ಅಭಿಮಾನಿಗಳು ಹೇಳಿದ್ದಾರೆ.

ಬಿಗ್ ಬಾಸ್​ನಲ್ಲಿ ಸಂಗೀತಾ, ತನಿಷಾ, ಕಾರ್ತಿಕ್, ಪ್ರತಾಪ್ ಸಾಮಾನ್ಯವಾಗಿ ಒಟ್ಟಾಗಿ ಇರುತ್ತಿದ್ದರು. ವರ್ತೂರು ಸಂತೋಷ್ ಹಾಗೂ ತುಕಾಲಿ ಸಂತೋಷ್ ಅವರು ತಮ್ಮದೇ ಗ್ಯಾಂಗ್ ಮಾಡಿಕೊಂಡಿದ್ದಾರೆ. ಈಗ ಸಂಗೀತಾ ಹಾಗೂ ಕಾರ್ತಿಕ್ ಮಧ್ಯೆ ಜಗಳ ಆಗಿದೆ. ಕಾರ್ತಿಕ್ ಅವರು ವಿನಯ್ ಅವರತ್ತ ಹೆಚ್ಚು ವಾಲಿದ್ದಾರೆ. ಈ ಕಾರಣದಿಂದಲೇ ಸಂಗೀತಾಗೆ ಹಿನ್ನಡೆ ಆಗಿದೆ. ಅವರು ಮನೆಯಲ್ಲಿ ಏಕಾಂಗಿ ಆಗಿದ್ದಾರೆ. ಈ ಬಗ್ಗೆ ಅವರು ಮಾತನಾಡಿದ್ದಾರೆ.

‘ವಿನಯ್​ಗೆ ಕಾರ್ತಿಕ್ ಬಕೆಟ್ ಹಿಡಿಯುತ್ತಿದ್ದಾನೆ’ ಎಂದು ಹೇಳಿದ್ದರು ಸಂಗೀತಾ. ಇದಾದ ಬಳಿಕ ಸಂಗೀತಾ ಹಾಗೂ ಕಾರ್ತಿಕ್ ಮಧ್ಯೆ ಕಿರಿಕ್ ಆಗಿದೆ. ವಿನಯ್​ನಿಂದ ಮೊದಲೇ ದ್ವೇಷ ಕಟ್ಟಿಕೊಂಡಿದ್ದ ಅವರು ಈಗ ಕಾರ್ತಿಕ್​ನಿಂದಲೂ ದೂರ ಆಗಿದ್ದಾರೆ. ತನಿಷಾ ಕೂಡ ಸಂಗೀತಾ ಅವರಿಂದ ಅಂತರ ಕಾಯ್ದುಕೊಂಡಿದ್ದಾರೆ. ಇದು ಸಂಗೀತಾ ಬೇಸರಕ್ಕೆ ಕಾರಣ ಆಗಿದೆ.

ಇದನ್ನೂ ಓದಿ: ‘ಮೂರೇ ದಿನದಲ್ಲಿ ಹಳೆಯ ಪಿಕ್ಚರ್ ಬರುತ್ತೆ’; ಕಾರ್ತಿಕ್-ಸಂಗೀತಾ ಜಗಳದ ಬಗ್ಗೆ ವರ್ತೂರು ಸಂತೋಷ್ ಮಾತು

ವಾಶ್​ರೂಂ ಏರಿಯಾದಲ್ಲಿ ಸಂಗೀತಾ ಕುಳಿತಿದ್ದರು. ಈ ವೇಳೆ ಅವರು ಪ್ರತಾಪ್ ಜೊತೆ ಮಾತನಾಡಿದ್ದಾರೆ. ‘ಬಿಗ್ ಬಾಸ್ ಮನೆಯಲ್ಲಿ ನಾವಿಬ್ಬರೇ ಒಂದು, ಉಳಿದವರೆಲ್ಲ ಒಂದು. ಇನ್ನು ಎಲ್ಲರೂ ನಮ್ಮನ್ನೇ ಟಾರ್ಗೆಟ್ ಮಾಡುತ್ತಾರೆ’ ಎಂದು ಬೇಸರ ಮಾಡಿಕೊಂಡರು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:32 am, Wed, 20 December 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ