AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಕನ್ನಡ: ಕಪ್ ಎತ್ತಬೇಕು ಎನ್ನುವ ಸಂಗೀತಾ ಶೃಂಗೇರಿ ಕನಸು ಭಗ್ನ; ಎರಡನೇ ರನ್ನರ್​ಅಪ್ ಆದ ನಟಿ

ಸಂಗೀತಾ ಅವರು ಇತ್ತೀಚಿನ ದಿನಗಳಲ್ಲಿಸಾಕಷ್ಟು ಟಾಸ್ಕ್​ಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ಬ್ಯಾಕ್ ಟು ಬ್ಯಾಕ್ 2 ಬಾರಿ ಕ್ಯಾಪ್ಟನ್ ಆದರು. ಅವರಿಗೆ ಫಿನಾಲೆ ಟಿಕೆಟ್ ಕೂಡ ಸಿಕ್ಕಿತ್ತು. ಆದಾಗ್ಯೂ ಅವರಿಗೆ ಕಪ್ ಗೆಲ್ಲೋಕೆ ಸಾಧ್ಯವಾಗೇ ಇಲ್ಲ.

ಬಿಗ್ ಬಾಸ್ ಕನ್ನಡ: ಕಪ್ ಎತ್ತಬೇಕು ಎನ್ನುವ ಸಂಗೀತಾ ಶೃಂಗೇರಿ ಕನಸು ಭಗ್ನ; ಎರಡನೇ ರನ್ನರ್​ಅಪ್ ಆದ ನಟಿ
ಸಂಗೀತಾ
ರಾಜೇಶ್ ದುಗ್ಗುಮನೆ
| Edited By: |

Updated on:Jan 29, 2024 | 9:45 AM

Share

ಸಂಗೀತಾ ಶೃಂಗೇರಿ (Sangeetha Sringeri) ಈ ಬಾರಿ ಸ್ಟ್ರಾಂಗ್ ಮಹಿಳಾ ಸ್ಪರ್ಧಿ ಆಗಿ ಕಾಣಿಸಿಕೊಂಡಿದ್ದರು. ಈ ಬಿಗ್ ಬಾಸ್ ಕನ್ನಡ ಸೀಸನ್​ನ ಗೆಲ್ಲಲೇಬೇಕು ಎಂದು ಅವರು ಕನಸು ಕಂಡಿದ್ದರು. ಆದರೆ, ಕನಸು ಭಗ್ನವಾಗಿದೆ. ಎರಡನೇ ರನ್ನರ್​ಅಪ್ ಸ್ಥಾನಕ್ಕೆ ಸಂಗೀತಾ ಶೃಂಗೇರಿ ಖುಷಿಪಟ್ಟಿದ್ದಾರೆ. ಈ ಮೂಲಕ ಸಾಲಿನಲ್ಲಿ ಕಾರ್ತಿಕ್ ಮಹೇಶ್ ಹಾಗೂ ಡ್ರೋನ್ ಪ್ರತಾಪ್ ಮಾತ್ರ ಉಳಿದುಕೊಂಡಿದ್ದಾರೆ. ಇವರ ಪೈಕಿ ಒಬ್ಬರ ಬಿಗ್ ಬಾಸ್ ಕನ್ನಡ ಮನೆಯ ಬಾಗಿಲನ್ನು ಅದೃಷ್ಟಲಕ್ಷ್ಮಿ ತಟ್ಟಲಿದ್ದಾಳೆ. ಸಂಗೀತಾ ಶೃಂಗೇರಿ ಕಪ್ ಗೆಲ್ಲದೆ ಇರುವುದು ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

ಸಂಗೀತಾ ಶೃಂಗೇರಿ ಅವರು ‘777 ಚಾರ್ಲಿ’ ಸಿನಿಮಾದಲ್ಲಿ ನಟಿಸಿ ಫೇಮಸ್ ಆದರು. ‘ಎಷ್ಟೇ ಕೋಟಿ ರೂಪಾಯಿ ಕೊಟ್ಟರೂ ನಾನು ದೊಡ್ಮನೆಗೆ ಬರಲ್ಲ’ ಎಂದು ಸಂಗೀತಾ ಶೃಂಗೇರಿ ಹೇಳಿದ್ದರು. ಆದಾಗ್ಯೂ ಅವರು ಬಿಗ್ ಬಾಸ್​ಗೆ ಬಂದರು. ಅವರು ಆರಂಭದಲ್ಲಿ ಅಸಮರ್ಥರಾಗಿ ಬಿಗ್ ಬಾಸ್ ಮನೆ ಸೇರಿದ್ದರು. ತಮ್ಮ ತನವನ್ನು ಪ್ರೂವ್ ಮಾಡಿಕೊಂಡು ಭೇಷ್ ಎನಿಸಿಕೊಂಡರು ಅವರು.

ಸಂಗೀತಾ ಶೃಂಗೇರಿ ಅವರು ತಮ್ಮ ಜರ್ನಿಯಲ್ಲಿ ಸಾಕಷ್ಟು ಏರುಪೇರುಗಳನ್ನು ಕಂಡಿದ್ದಾರೆ. ಆರಂಭದಲ್ಲಿ ಕಾರ್ತಿಕ್ ಮಹೇಶ್ ಜೊತೆ ಅವರಿಗೆ ಒಳ್ಳೆಯ ಫ್ರೆಂಡ್​ಶಿಪ್ ಇತ್ತು. ಆದರೆ, ವೈಮನಸ್ಸು ಮೂಡಿದ್ದರಿಂದ ಕಾರ್ತಿಕ್​ನಿಂದ ಸಂಗೀತಾ ದೂರ ಆದರು. ಆ ಬಳಿಕ ವಿನಯ್ ಜೊತೆ ಫ್ರೆಂಡ್​ಶಿಪ್ ಬೆಳೆಯಿತು. ಈ ಫ್ರೆಂಡ್​ಶಿಪ್ ಕೂಡ ಹೆಚ್ಚು ದಿನ ಬರಲೇ ಇಲ್ಲ. ನಂತರ ಸಂಗೀತಾ ಶೃಂಗೇರಿ ಒಂಟಿಯಾಗಿ ಗೇಮ್ ಆಡೋಕೆ ಶುರು ಮಾಡಿದರು.

ಇದನ್ನೂ ಓದಿ: ವಿನಯ್ ಎಲಿಮಿನೇಷನ್ ಫೇರ್​ ಅಲ್ಲ ಎಂದವರಿಗೆ ಕಿಚ್ಚ ಕೊಟ್ಟ ಉತ್ತರ ಏನು?

ಇತ್ತೀಚಿನ ದಿನಗಳಲ್ಲಿ ಸಂಗೀತಾ ಅವರು ಸಾಕಷ್ಟು ಟಾಸ್ಕ್​ಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ಬ್ಯಾಕ್ ಟು ಬ್ಯಾಕ್ ಎರಡು ಬಾರಿ ಕ್ಯಾಪ್ಟನ್ ಆದರು. ಅವರಿಗೆ ಫಿನಾಲೆ ಟಿಕೆಟ್ ಕೂಡ ಸಿಕ್ಕಿತ್ತು. ಆದಾಗ್ಯೂ ಅವರಿಗೆ ಕಪ್ ಗೆಲ್ಲೋಕೆ ಸಾಧ್ಯವಾಗೇ ಇಲ್ಲ. ಅವರು ಹೊರ ಬಂದಿದ್ದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ ಪ್ರಸಾರ ಕಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:37 pm, Sun, 28 January 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ