AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಕನ್ನಡ: ಕಪ್ ಎತ್ತಬೇಕು ಎನ್ನುವ ಸಂಗೀತಾ ಶೃಂಗೇರಿ ಕನಸು ಭಗ್ನ; ಎರಡನೇ ರನ್ನರ್​ಅಪ್ ಆದ ನಟಿ

ಸಂಗೀತಾ ಅವರು ಇತ್ತೀಚಿನ ದಿನಗಳಲ್ಲಿಸಾಕಷ್ಟು ಟಾಸ್ಕ್​ಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ಬ್ಯಾಕ್ ಟು ಬ್ಯಾಕ್ 2 ಬಾರಿ ಕ್ಯಾಪ್ಟನ್ ಆದರು. ಅವರಿಗೆ ಫಿನಾಲೆ ಟಿಕೆಟ್ ಕೂಡ ಸಿಕ್ಕಿತ್ತು. ಆದಾಗ್ಯೂ ಅವರಿಗೆ ಕಪ್ ಗೆಲ್ಲೋಕೆ ಸಾಧ್ಯವಾಗೇ ಇಲ್ಲ.

ಬಿಗ್ ಬಾಸ್ ಕನ್ನಡ: ಕಪ್ ಎತ್ತಬೇಕು ಎನ್ನುವ ಸಂಗೀತಾ ಶೃಂಗೇರಿ ಕನಸು ಭಗ್ನ; ಎರಡನೇ ರನ್ನರ್​ಅಪ್ ಆದ ನಟಿ
ಸಂಗೀತಾ
ರಾಜೇಶ್ ದುಗ್ಗುಮನೆ
| Edited By: |

Updated on:Jan 29, 2024 | 9:45 AM

Share

ಸಂಗೀತಾ ಶೃಂಗೇರಿ (Sangeetha Sringeri) ಈ ಬಾರಿ ಸ್ಟ್ರಾಂಗ್ ಮಹಿಳಾ ಸ್ಪರ್ಧಿ ಆಗಿ ಕಾಣಿಸಿಕೊಂಡಿದ್ದರು. ಈ ಬಿಗ್ ಬಾಸ್ ಕನ್ನಡ ಸೀಸನ್​ನ ಗೆಲ್ಲಲೇಬೇಕು ಎಂದು ಅವರು ಕನಸು ಕಂಡಿದ್ದರು. ಆದರೆ, ಕನಸು ಭಗ್ನವಾಗಿದೆ. ಎರಡನೇ ರನ್ನರ್​ಅಪ್ ಸ್ಥಾನಕ್ಕೆ ಸಂಗೀತಾ ಶೃಂಗೇರಿ ಖುಷಿಪಟ್ಟಿದ್ದಾರೆ. ಈ ಮೂಲಕ ಸಾಲಿನಲ್ಲಿ ಕಾರ್ತಿಕ್ ಮಹೇಶ್ ಹಾಗೂ ಡ್ರೋನ್ ಪ್ರತಾಪ್ ಮಾತ್ರ ಉಳಿದುಕೊಂಡಿದ್ದಾರೆ. ಇವರ ಪೈಕಿ ಒಬ್ಬರ ಬಿಗ್ ಬಾಸ್ ಕನ್ನಡ ಮನೆಯ ಬಾಗಿಲನ್ನು ಅದೃಷ್ಟಲಕ್ಷ್ಮಿ ತಟ್ಟಲಿದ್ದಾಳೆ. ಸಂಗೀತಾ ಶೃಂಗೇರಿ ಕಪ್ ಗೆಲ್ಲದೆ ಇರುವುದು ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

ಸಂಗೀತಾ ಶೃಂಗೇರಿ ಅವರು ‘777 ಚಾರ್ಲಿ’ ಸಿನಿಮಾದಲ್ಲಿ ನಟಿಸಿ ಫೇಮಸ್ ಆದರು. ‘ಎಷ್ಟೇ ಕೋಟಿ ರೂಪಾಯಿ ಕೊಟ್ಟರೂ ನಾನು ದೊಡ್ಮನೆಗೆ ಬರಲ್ಲ’ ಎಂದು ಸಂಗೀತಾ ಶೃಂಗೇರಿ ಹೇಳಿದ್ದರು. ಆದಾಗ್ಯೂ ಅವರು ಬಿಗ್ ಬಾಸ್​ಗೆ ಬಂದರು. ಅವರು ಆರಂಭದಲ್ಲಿ ಅಸಮರ್ಥರಾಗಿ ಬಿಗ್ ಬಾಸ್ ಮನೆ ಸೇರಿದ್ದರು. ತಮ್ಮ ತನವನ್ನು ಪ್ರೂವ್ ಮಾಡಿಕೊಂಡು ಭೇಷ್ ಎನಿಸಿಕೊಂಡರು ಅವರು.

ಸಂಗೀತಾ ಶೃಂಗೇರಿ ಅವರು ತಮ್ಮ ಜರ್ನಿಯಲ್ಲಿ ಸಾಕಷ್ಟು ಏರುಪೇರುಗಳನ್ನು ಕಂಡಿದ್ದಾರೆ. ಆರಂಭದಲ್ಲಿ ಕಾರ್ತಿಕ್ ಮಹೇಶ್ ಜೊತೆ ಅವರಿಗೆ ಒಳ್ಳೆಯ ಫ್ರೆಂಡ್​ಶಿಪ್ ಇತ್ತು. ಆದರೆ, ವೈಮನಸ್ಸು ಮೂಡಿದ್ದರಿಂದ ಕಾರ್ತಿಕ್​ನಿಂದ ಸಂಗೀತಾ ದೂರ ಆದರು. ಆ ಬಳಿಕ ವಿನಯ್ ಜೊತೆ ಫ್ರೆಂಡ್​ಶಿಪ್ ಬೆಳೆಯಿತು. ಈ ಫ್ರೆಂಡ್​ಶಿಪ್ ಕೂಡ ಹೆಚ್ಚು ದಿನ ಬರಲೇ ಇಲ್ಲ. ನಂತರ ಸಂಗೀತಾ ಶೃಂಗೇರಿ ಒಂಟಿಯಾಗಿ ಗೇಮ್ ಆಡೋಕೆ ಶುರು ಮಾಡಿದರು.

ಇದನ್ನೂ ಓದಿ: ವಿನಯ್ ಎಲಿಮಿನೇಷನ್ ಫೇರ್​ ಅಲ್ಲ ಎಂದವರಿಗೆ ಕಿಚ್ಚ ಕೊಟ್ಟ ಉತ್ತರ ಏನು?

ಇತ್ತೀಚಿನ ದಿನಗಳಲ್ಲಿ ಸಂಗೀತಾ ಅವರು ಸಾಕಷ್ಟು ಟಾಸ್ಕ್​ಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ಬ್ಯಾಕ್ ಟು ಬ್ಯಾಕ್ ಎರಡು ಬಾರಿ ಕ್ಯಾಪ್ಟನ್ ಆದರು. ಅವರಿಗೆ ಫಿನಾಲೆ ಟಿಕೆಟ್ ಕೂಡ ಸಿಕ್ಕಿತ್ತು. ಆದಾಗ್ಯೂ ಅವರಿಗೆ ಕಪ್ ಗೆಲ್ಲೋಕೆ ಸಾಧ್ಯವಾಗೇ ಇಲ್ಲ. ಅವರು ಹೊರ ಬಂದಿದ್ದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ ಪ್ರಸಾರ ಕಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:37 pm, Sun, 28 January 24

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ