AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಕನ್ನಡ: ಕಪ್ ಎತ್ತಬೇಕು ಎನ್ನುವ ಸಂಗೀತಾ ಶೃಂಗೇರಿ ಕನಸು ಭಗ್ನ; ಎರಡನೇ ರನ್ನರ್​ಅಪ್ ಆದ ನಟಿ

ಸಂಗೀತಾ ಅವರು ಇತ್ತೀಚಿನ ದಿನಗಳಲ್ಲಿಸಾಕಷ್ಟು ಟಾಸ್ಕ್​ಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ಬ್ಯಾಕ್ ಟು ಬ್ಯಾಕ್ 2 ಬಾರಿ ಕ್ಯಾಪ್ಟನ್ ಆದರು. ಅವರಿಗೆ ಫಿನಾಲೆ ಟಿಕೆಟ್ ಕೂಡ ಸಿಕ್ಕಿತ್ತು. ಆದಾಗ್ಯೂ ಅವರಿಗೆ ಕಪ್ ಗೆಲ್ಲೋಕೆ ಸಾಧ್ಯವಾಗೇ ಇಲ್ಲ.

ಬಿಗ್ ಬಾಸ್ ಕನ್ನಡ: ಕಪ್ ಎತ್ತಬೇಕು ಎನ್ನುವ ಸಂಗೀತಾ ಶೃಂಗೇರಿ ಕನಸು ಭಗ್ನ; ಎರಡನೇ ರನ್ನರ್​ಅಪ್ ಆದ ನಟಿ
ಸಂಗೀತಾ
ರಾಜೇಶ್ ದುಗ್ಗುಮನೆ
| Edited By: |

Updated on:Jan 29, 2024 | 9:45 AM

Share

ಸಂಗೀತಾ ಶೃಂಗೇರಿ (Sangeetha Sringeri) ಈ ಬಾರಿ ಸ್ಟ್ರಾಂಗ್ ಮಹಿಳಾ ಸ್ಪರ್ಧಿ ಆಗಿ ಕಾಣಿಸಿಕೊಂಡಿದ್ದರು. ಈ ಬಿಗ್ ಬಾಸ್ ಕನ್ನಡ ಸೀಸನ್​ನ ಗೆಲ್ಲಲೇಬೇಕು ಎಂದು ಅವರು ಕನಸು ಕಂಡಿದ್ದರು. ಆದರೆ, ಕನಸು ಭಗ್ನವಾಗಿದೆ. ಎರಡನೇ ರನ್ನರ್​ಅಪ್ ಸ್ಥಾನಕ್ಕೆ ಸಂಗೀತಾ ಶೃಂಗೇರಿ ಖುಷಿಪಟ್ಟಿದ್ದಾರೆ. ಈ ಮೂಲಕ ಸಾಲಿನಲ್ಲಿ ಕಾರ್ತಿಕ್ ಮಹೇಶ್ ಹಾಗೂ ಡ್ರೋನ್ ಪ್ರತಾಪ್ ಮಾತ್ರ ಉಳಿದುಕೊಂಡಿದ್ದಾರೆ. ಇವರ ಪೈಕಿ ಒಬ್ಬರ ಬಿಗ್ ಬಾಸ್ ಕನ್ನಡ ಮನೆಯ ಬಾಗಿಲನ್ನು ಅದೃಷ್ಟಲಕ್ಷ್ಮಿ ತಟ್ಟಲಿದ್ದಾಳೆ. ಸಂಗೀತಾ ಶೃಂಗೇರಿ ಕಪ್ ಗೆಲ್ಲದೆ ಇರುವುದು ಅವರ ಫ್ಯಾನ್ಸ್​ಗೆ ಬೇಸರ ಮೂಡಿಸಿದೆ.

ಸಂಗೀತಾ ಶೃಂಗೇರಿ ಅವರು ‘777 ಚಾರ್ಲಿ’ ಸಿನಿಮಾದಲ್ಲಿ ನಟಿಸಿ ಫೇಮಸ್ ಆದರು. ‘ಎಷ್ಟೇ ಕೋಟಿ ರೂಪಾಯಿ ಕೊಟ್ಟರೂ ನಾನು ದೊಡ್ಮನೆಗೆ ಬರಲ್ಲ’ ಎಂದು ಸಂಗೀತಾ ಶೃಂಗೇರಿ ಹೇಳಿದ್ದರು. ಆದಾಗ್ಯೂ ಅವರು ಬಿಗ್ ಬಾಸ್​ಗೆ ಬಂದರು. ಅವರು ಆರಂಭದಲ್ಲಿ ಅಸಮರ್ಥರಾಗಿ ಬಿಗ್ ಬಾಸ್ ಮನೆ ಸೇರಿದ್ದರು. ತಮ್ಮ ತನವನ್ನು ಪ್ರೂವ್ ಮಾಡಿಕೊಂಡು ಭೇಷ್ ಎನಿಸಿಕೊಂಡರು ಅವರು.

ಸಂಗೀತಾ ಶೃಂಗೇರಿ ಅವರು ತಮ್ಮ ಜರ್ನಿಯಲ್ಲಿ ಸಾಕಷ್ಟು ಏರುಪೇರುಗಳನ್ನು ಕಂಡಿದ್ದಾರೆ. ಆರಂಭದಲ್ಲಿ ಕಾರ್ತಿಕ್ ಮಹೇಶ್ ಜೊತೆ ಅವರಿಗೆ ಒಳ್ಳೆಯ ಫ್ರೆಂಡ್​ಶಿಪ್ ಇತ್ತು. ಆದರೆ, ವೈಮನಸ್ಸು ಮೂಡಿದ್ದರಿಂದ ಕಾರ್ತಿಕ್​ನಿಂದ ಸಂಗೀತಾ ದೂರ ಆದರು. ಆ ಬಳಿಕ ವಿನಯ್ ಜೊತೆ ಫ್ರೆಂಡ್​ಶಿಪ್ ಬೆಳೆಯಿತು. ಈ ಫ್ರೆಂಡ್​ಶಿಪ್ ಕೂಡ ಹೆಚ್ಚು ದಿನ ಬರಲೇ ಇಲ್ಲ. ನಂತರ ಸಂಗೀತಾ ಶೃಂಗೇರಿ ಒಂಟಿಯಾಗಿ ಗೇಮ್ ಆಡೋಕೆ ಶುರು ಮಾಡಿದರು.

ಇದನ್ನೂ ಓದಿ: ವಿನಯ್ ಎಲಿಮಿನೇಷನ್ ಫೇರ್​ ಅಲ್ಲ ಎಂದವರಿಗೆ ಕಿಚ್ಚ ಕೊಟ್ಟ ಉತ್ತರ ಏನು?

ಇತ್ತೀಚಿನ ದಿನಗಳಲ್ಲಿ ಸಂಗೀತಾ ಅವರು ಸಾಕಷ್ಟು ಟಾಸ್ಕ್​ಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದರು. ಬ್ಯಾಕ್ ಟು ಬ್ಯಾಕ್ ಎರಡು ಬಾರಿ ಕ್ಯಾಪ್ಟನ್ ಆದರು. ಅವರಿಗೆ ಫಿನಾಲೆ ಟಿಕೆಟ್ ಕೂಡ ಸಿಕ್ಕಿತ್ತು. ಆದಾಗ್ಯೂ ಅವರಿಗೆ ಕಪ್ ಗೆಲ್ಲೋಕೆ ಸಾಧ್ಯವಾಗೇ ಇಲ್ಲ. ಅವರು ಹೊರ ಬಂದಿದ್ದು ಅಭಿಮಾನಿಗಳಿಗೆ ಬೇಸರ ಮೂಡಿಸಿದೆ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ ಪ್ರಸಾರ ಕಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 11:37 pm, Sun, 28 January 24

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಗೆಳೆಯ ಹಸುವಿಗಾಗಿ ಬ್ರೆಡ್ ಕಚ್ಚಿಕೊಂಡು ಬಂದ ನಾಯಿ; ಈ ಸ್ನೇಹಕ್ಕೆ ಏನಂತೀರಿ!
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ವೃಂದಾವನದ ಯಮುನಾ ನದಿಯಲ್ಲಿ ಬೋಟ್ ಮುಳುಗಿ 10 ಜನ ಸಾವು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ