AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಫಿನಾಲೆಗೆ ವಿನಯ್​ ಬರಬಾರದು’: ಸುದೀಪ್​ ಮುಂದೆ ಪೂರ್ತಿ ಅಸಮಾಧಾನ ಹೊರಹಾಕಿದ ಸಂಗೀತಾ

‘ವಿನಯ್​ ಅವರಿಂದ ಆಟ ಹಾಳಾಗಿದೆ. ಇಂಥ ವ್ಯಕ್ತಿತ್ವದವರನ್ನು ಬಿಗ್​ ಬಾಸ್​ ವಿನ್ನರ್​ ಆಗಿ ನೋಡಲು ನಾನು ಇಷ್ಟಪಡುವುದಿಲ್ಲ. ಫೈನಲಿಸ್ಟ್​ಗಳಲ್ಲಿ ಅವರು ಒಬ್ಬರಾಗಿ ಇರುವುದು ನನಗೆ ಇಷ್ಟ ಇಲ್ಲ’ ಎಂದು ಸಂಗೀತಾ ಶೃಂಗೇರಿ ಅವರು ನೇರವಾಗಿ ಹೇಳಿದ್ದಾರೆ. ಫಿನಾಲೆ ವಾರಕ್ಕೆ ಸಂಗೀತಾ ಈಗಾಗಲೇ ಟಿಕೆಟ್​ ಪಡೆದಿದ್ದಾರೆ.

‘ಫಿನಾಲೆಗೆ ವಿನಯ್​ ಬರಬಾರದು’: ಸುದೀಪ್​ ಮುಂದೆ ಪೂರ್ತಿ ಅಸಮಾಧಾನ ಹೊರಹಾಕಿದ ಸಂಗೀತಾ
ಸಂಗೀತಾ ಶೃಂಗೇರಿ, ವಿನಯ್​ ಗೌಡ
Follow us
ಮದನ್​ ಕುಮಾರ್​
|

Updated on: Jan 14, 2024 | 8:39 AM

ಬಿಗ್ ಬಾಸ್​ ಮನೆಯಲ್ಲಿ ಸಂಗೀತಾ ಶೃಂಗೇರಿ ಮತ್ತು ವಿನಯ್​ ಗೌಡ (Vinay Gowda) ಅವರು ಹಲವು ಬಾರಿ ಜಗಳ ಮಾಡಿಕೊಂಡಿದ್ದಾರೆ. ನಡುವೆ ಒಂದಷ್ಟು ದಿನ ಸ್ನೇಹ ಬೆಳೆಸಿಕೊಂಡಿದ್ದ ಅವರು ನಂತರ ಮತ್ತೆ ಕಿತ್ತಾಡಲು ಆರಂಭಿಸಿದರು. ಈಗ ಫಿನಾಲೆ ವಾರ ಹತ್ತಿರ ಆಗಿದೆ. ಸಂಗೀತಾ ಶೃಂಗೇರಿ (Sangeetha Sringeri) ಅವರು ನೇರವಾಗಿ ಫಿನಾಲೆ ವಾರಕ್ಕೆ ಟಿಕೆಟ್​ ಪಡೆದಿದ್ದಾರೆ. ವೀಕೆಂಡ್​ ಪಂಚಾಯ್ತಿಯಲ್ಲಿ ಹೊಸ ವಿಚಾರ ಚರ್ಚೆಗೆ ಬಂದಿದೆ. ‘ಯಾವ ವ್ಯಕ್ತಿ ಫಿನಾಲೆ (Bigg Boss Finale) ತಲುವುದು ನಿಮಗೆ ಇಷ್ಟ ಇಲ್ಲ’ ಎಂದು ಕಿಚ್ಚ ಸುದೀಪ್​ ಎಲ್ಲರಿಗೂ ಕೇಳಿದ್ದಾರೆ. ಅದಕ್ಕೆ ಉತ್ತರಿಸಿದ ಸಂಗೀತಾ ಶೃಂಗೇರಿ ಅವರು ವಿನಯ್​ ಗೌಡ ಹೆಸರು ಹೇಳಿದ್ದಾರೆ. ತಮ್ಮ ಈ ಅಭಿಪ್ರಾಯಕ್ಕೆ ಕಾರಣ ಏನು ಎಂಬುದನ್ನು ಕೂಡ ಅವರು ವಿವರಿಸಿದ್ದಾರೆ.

‘ನನ್ನ ಪ್ರಕಾರ ಬಿಗ್​ ಬಾಸ್​ ಎಂಬುದು ಒಂದು ವ್ಯಕ್ತಿತ್ವದ ಸ್ಪರ್ಧೆ. ಖಂಡಿತವಾಗಿಯೂ ವಿನಯ್​ ಅವರು ಗೇಮ್​ನಲ್ಲಿ ತುಂಬ ಚೆನ್ನಾಗಿ ಆಡಿದ್ದಾರೆ. ಆದರೆ ಅವರು ತಮ್ಮ ಅಭಿಪ್ರಾಯವನ್ನು ಹೇರುತ್ತಾರೆ. ಇದನ್ನು ಮೋಸ ಅಥವಾ ಸ್ಮಾರ್ಟ್​ ಪ್ಲೇ ಅಂತ ಹೇಳಬಹುದು. ಹಲವು ಬಾರಿ ಅನೇಕರ ಮನಸ್ಸು ಬದಲಾಗಿದೆ. ನನಗೆ ಎಮೋಷನಲಿ ತುಂಬ ಪರಿಣಾಮ ಬೀರಿದೆ’ ಎಂದು ಸಂಗೀತಾ ಶೃಂಗೇರಿ ಹೇಳಿದ್ದಾರೆ.

ಇದನ್ನೂ ಓದಿ: ಅರ್ಹರಿಗೇ ಸಿಕ್ತು ಫೈನಲ್ ಟಿಕೆಟ್, ಫೈಟರ್ ಸಂಗೀತಾ ಫಿನಾಲೆಗೆ

‘ಬೇರೆ ಗೇಮ್ಸ್​ ಆಡುವಾಗ ವಿನಯ್​ ಅವರ ಅಗ್ರೆಷನ್​ ಕಾರಣದಿಂದ ಆಟ ಹಾಳಾಗಿದೆ. ಇಂಥ ವ್ಯಕ್ತಿತ್ವದವರನ್ನು ಬಿಗ್​ ಬಾಸ್​ ವಿನ್ನರ್​ ಆಗಿ ನೋಡಲು ನಾನು ಇಷ್ಟಪಡುವುದಿಲ್ಲ. ಫೈನಲಿಸ್ಟ್​ಗಳಲ್ಲಿ ಅವರು ಒಬ್ಬರಾಗಿ ಇರುವುದು ನನಗೆ ಇಷ್ಟ ಇಲ್ಲ’ ಎಂದು ಸಂಗೀತಾ ಶೃಂಗೇರಿ ಅವರು ನೇರವಾಗಿ ಹೇಳಿದ್ದಾರೆ. ಇನ್ನು, ‘ಡ್ರೋನ್​ ಪ್ರತಾಪ್​ ಅವರು ಒಂದು ವಾರ ಕಾದು ನೋಡಬೇಕು. ನಮ್ರತಾ ಗೌಡ ಅವರು ನೇರವಾಗಿ ಫಿನಾಲೆ ವಾರಕ್ಕೆ ಬರಬೇಕು’ ಎಂದು ಸಂಗೀತಾ ಹೇಳಿದ್ದಾರೆ.

ಇದನ್ನೂ ಓದಿ: ಸಂಗೀತಾಗೆ ಫಿನಾಲೆ ಟಿಕೆಟ್ ಜೊತೆ ಮತ್ತೊಂದು ದೊಡ್ಡ ಅಡ್ವಾಂಟೇಜ್ ಕೊಟ್ಟ ಬಿಗ್ ಬಾಸ್

‘ನಮ್ರತಾ ಗೌಡ ತುಂಬ ಸ್ಟ್ರಾಂಗ್ ಆಗಿದ್ದಾರೆ. ಮೊದಲಿನಿಂದ ನನಗೂ ನಮ್ರತಾಗೂ ಆಗಿಬರುತ್ತಿರಲಿಲ್ಲ. ಆದರೆ ಎಲ್ಲೇ ಇದ್ದರೂ ಅವರು ಪ್ರಾಮಾಣಿಕವಾಗಿ ಅಭಿಪ್ರಾಯ ತಿಳಿಸಿದ್ದಾರೆ. ಅವರು ಫೈನಲಿಸ್ಟ್​ ಆಗಲು ಸಾಮರ್ಥ್ಯ ಹೊಂದಿದ್ದಾರೆ’ ಎಂದು ನಮ್ರತಾ ಪರವಾಗಿ ಸಂಗೀತಾ ಮಾತನಾಡಿದ್ದಾರೆ. ಅಂತಿಮವಾಗಿ ಯಾರು ಫಿನಾಲೆಗೆ ತಲುಪುತ್ತಾರೆ? ಟ್ರೋಫಿ ಯಾರಿಗೆ ಸಿಗಲಿದೆ? ರನ್ನರ್​ಅಪ್​ ಯಾರು ಆಗಲಿದ್ದಾರೆ ಎಂಬುದನ್ನು ತಿಳಿಯಲು ಪ್ರೇಕ್ಷಕರು ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಯುದ್ಧದ ಬಗ್ಗೆ ಸಿಎಂ ಸಿದ್ದರಾಮಯ್ಯ ಏನು ಹೇಳಿದ್ದಾರೆ ಗೊತ್ತಿಲ್ಲ: ಲಕ್ಷ್ಮಿ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಕೋಲಾರದಲ್ಲಿ ಜನಪದ ಗಾಯಕನಿಂದ ನಿರ್ಮಾಣವಾದ ಹೈಟೆಕ್ ​ಬಸ್ ನಿಲ್ದಾಣ
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಪಾಕಿಸ್ತಾನಕ್ಕೆ ಉತ್ತರ ನೀಡುವ ಕೆಲಸ ವರಿಷ್ಠರು ಮಾಡುತ್ತಿದ್ದಾರೆ: ಯದುವೀರ್
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಟಿವಿಯಲ್ಲಿ ಬರತ್ತಿದ್ದ ಸುದ್ದಿ ಸುಳ್ಳಾಗಲಿ ಅಂತ ಪ್ರಾರ್ಥಿಸುತ್ತಿದ್ದೆ:ಸುಮತಿ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಕರ್ನಾಟಕದಲ್ಲಿರುವ ಪಾಕಿಸ್ತಾನೀಯರನ್ನು ವಾಪಸ್ಸು ಕಳಿಸ್ತೇವೆ: ಸಿದ್ದರಾಮಯ್ಯ
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ಪಹಲ್ಗಾಮ್ ಉಗ್ರರಿಗೆ ನೆರವಾದ ಇಬ್ಬರು ಸ್ಥಳೀಯ ಕಾಶ್ಮೀರಿಗಳ ಮನೆ ಧ್ವಂಸ!
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
ನನ್ನ ಹೆಗಲ ಮೇಲೆ ಕೂರಿಸಿಕೊಂಡು ಬೆಟ್ಟ ಇಳಿದವರು ಸ್ಥಳೀಯ ಕಾಶ್ಮೀರಿ: ಅಭಿಜಯ್
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
Dewald Brevis: ಚೊಚ್ಚಲ ಪಂದ್ಯದಲ್ಲೇ ಡೆವಾಲ್ಡ್ ಬ್ರೆವಿಸ್ ಆರ್ಭಟ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
ಸುಳಿವು ನೀಡಿದ ಕಳ್ಳರ ಕಾರು,  ಚೇಸ್ ಮಾಡಿದಾಗ ಪೊಲೀಸರ ಮೇಲೆ ಹಲ್ಲೆ
VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್
VIDEO: ಕಮಿಂದು ಕಮಾಲ್... ವಾಟ್ ಎ ಕ್ಯಾಚ್