AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಿಲ್ಲಿ ಏಕೆ ಅಷ್ಟು ಇಷ್ಟ? ವಿವರಿಸಿದ ಸಂಗೀತಾ ಶೃಂಗೇರಿ

ಬಿಗ್ ಬಾಸ್ ಕನ್ನಡ 12ರ ಸ್ಪರ್ಧಿ ಗಿಲ್ಲಿಗೆ ನಟಿ ಸಂಗೀತಾ ಶೃಂಗೇರಿ ಸಂಪೂರ್ಣ ಬೆಂಬಲ ನೀಡಿದ್ದಾರೆ. ಗಿಲ್ಲಿ ಅವರ ಪ್ರಾಮಾಣಿಕತೆ, ಹಾಸ್ಯಪ್ರಜ್ಞೆ ಮತ್ತು ನೇರ ಮಾತುಗಾರಿಕೆಯೇ ಅವರಿಗೆ ಇಷ್ಟವಾಗಲು ಮುಖ್ಯ ಕಾರಣ ಎಂದು ಸಂಗೀತಾ ಹೇಳಿದ್ದಾರೆ. ಗಿಲ್ಲಿ ಇದ್ದ ಕಾರಣಕ್ಕೇ ಬಿಗ್ ಬಾಸ್ 12 ನೋಡಿದೆ ಎಂದು ಸಂಗೀತಾ ತಿಳಿಸಿದ್ದಾರೆ. ಅವರ ಈ ಅಭಿಪ್ರಾಯಕ್ಕೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಗಿಲ್ಲಿ ಏಕೆ ಅಷ್ಟು ಇಷ್ಟ? ವಿವರಿಸಿದ ಸಂಗೀತಾ ಶೃಂಗೇರಿ
ಸಂಗೀತಾ-ಗಿಲ್ಲಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 30, 2025 | 7:55 AM

Share

ಬಿಗ್ ಬಾಸ್ (Bigg Boss) ಮನೆಯಲ್ಲಿರೋ ಗಿಲ್ಲಿ ನಟ ಅವರು ಎಲ್ಲರಿಗೂ ಇಷ್ಟ ಆಗುತ್ತಿದ್ದಾರೆ. ಜನಸಾಮಾನ್ಯರಿಂದ ಹಿಡಿದು, ಅನೇಕ ಸೆಲೆಬ್ರಿಟಿಗಳು ಗಿಲ್ಲಿಯನ್ನು ಬೆಂಬಲಿಸುತ್ತಾ ಬರುತ್ತಿದ್ದಾರೆ. ಬಿಗ್ ಬಾಸ್ ಕನ್ನಡ ಸೀಸನ್ 10ರ ಸ್ಪರ್ಧಿ ಸಂಗೀತಾ ಶೃಂಗೇರಿ ಕೂಡ ಗಿಲ್ಲಿಯನ್ನು ಬೆಂಬಲಿಸಿದ್ದಾರೆ ಎಂದರೆ ನಂಬಲೇಬೇಕು. ಇದಕ್ಕೆ ಕಾರಣವನ್ನೂ ಅವರು ನೀಡಿದ್ದಾರೆ. ಗಿಲ್ಲಿ ಏಕೆ ಇಷ್ಟ ಎಂಬುದನ್ನು ಅವರು ವಿವರಿಸಿದರು.

ಇತ್ತೀಚೆಗೆ ತಮ್ಮ ಹಾಡಿನ ಬಿಡುಗಡೆ ಸಮಾರಂಭವನ್ನು ಸಂಗೀತಾ ಮಾಡಿದರು. ಈ ವೇಳೆ ಕಾರ್ತಿಕ್ ಮಹೇಶ್, ನಮ್ರತಾ ಗೌಡ ಅತಿಥಿಯಾಗಿ ಆಗಮಿಸಿದ್ದರು. ಕಾರ್ಯಕ್ರಮ ಮುಗಿದ ಬಳಿಕ ಸಂಗೀತಾ ಮಾತನಾಡಿದ್ದಾರೆ. ಗಿಲ್ಲಿ ಅವರನ್ನು ಹಾಡಿ ಹೊಗಳಿದ್ದಾರೆ. ಈ ಮೊದಲು ಗಿಲ್ಲಿಯನ್ನು ಬೆಂಬಲಿಸಿ ಅವರು ಪೋಸ್ಟ್ ಒಂದನ್ನು ಹಾಕಿದ್ದರು. ಈಗ ತಮ್ಮ ಮಾತುಗಳ ಮೂಲಕ ಗಿಲ್ಲಿ ಬಗ್ಗೆ ವಿವರಿಸಿದರು.

ಫಸ್ಟ್ ಡೇ ಫಸ್ಟ್ ಶೋ ಯೂಟ್ಯೂಬ್ ಚಾನೆಲ್​​ಗೆ ನೀಡಿದ ಸಂದರ್ಶನದಲ್ಲಿ ಸಂಗೀತಾ ಮಾತನಾಡಿದ್ದಾರೆ. ‘ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ನಾನು ಕೆಲವು ಎಪಿಸೋಡ್​​ಗಳನ್ನು ನೋಡಿದ್ದೇನೆ. ಇದಕ್ಕೆ ಮೂಲ ಕಾರಣ ಗಿಲ್ಲಿ’ ಎಂದರು ಸಂಗೀತಾ.

ಇದನ್ನೂ ಓದಿ: ಎಲಿಮಿನೇಷನ್​ನಿಂದ ಉ.ಕರ್ನಾಟಕ ಅಳ್ತಿದೆ ಎಂದ ಮಾಳುಗೆ ಅವರದ್ದೇ ಭಾಷೆಯಲ್ಲಿ ಬಂತು ಖಡಕ್ ಉತ್ತರ ‘ನನ್ನ ಅಣ್ಣ-ಅತ್ತಿಗೆ ಬಿಗ್ ಬಾಸ್ ನೋಡುತ್ತಾ ಇರುತ್ತಾರೆ. ಅವರು ತುಂಬಾ ನಗುತ್ತಿರುತ್ತಾರೆ. ನಾನು ಕೂಡ ನೋಡಿದೆ. ನಾನು ನಕ್ಕಿದ್ದೇನೆ. ಹೆಚ್ಚು ನಕ್ಕಿದ ದಿನ ನಾನು ರಾತ್ರಿ 12 ಗಂಟೆಗೆ ಸ್ಟೇಟಸ್ ಹಾಕಿದೆ. ಗಿಲ್ಲಿ ಕೌಂಟರ್ ನೋಡಿದಾಗ ಸಖತ್ ಆಗಿ ಹೇಳಿದ, ಸಖತ್ ಆಗಿ ಹೇಳಿದ ಅನಿಸುತ್ತದೆ. ಮನಸ್ಸಲ್ಲಿ ಇರೋದನ್ನು ಅವನು ನೇರವಾಗಿ ಹೇಳುತ್ತಾನೆ’ ಎಂದು ಸಂಗೀತಾ ವಿವರಿಸಿದರು. ಸಂಗೀತಾ ಮಾತಿಗೆ ಅನೇಕರು ಬೆಂಬಲ ಸೂಚಿಸಿದ್ದಾರೆ. ಅವರನ್ನು ಎಲ್ಲರೂ ಹಾಡಿ ಹೊಗಳಿದ್ದಾರೆ. ಗಿಲ್ಲಿಗೆ ಬೆಂಬಲ ಸೂಚಿಸಿದ್ದಕ್ಕೆ ಧನ್ಯವಾದ ತಿಳಿಸಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಸದ್ಯ 9 ಮಂದಿ ಉಳಿದುಕೊಂಡಿದ್ದಾರೆ. ಜನವರಿಯಲ್ಲಿ ಫಿನಾಲೆ ನಡೆಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
 ಶ್ರೀಲಕ್ಷ್ಮೀ ಎಚ್
ಶ್ರೀಲಕ್ಷ್ಮೀ ಎಚ್

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಮಂಗಳೂರಿನಲ್ಲಿ ಬಂದಿಳಿದ ತಮಿಳುನಾಡು ಸಿಎಂ ಜೋಸೆಫ್ ವಿಜಯ್​ಗೆ ಅದ್ದೂರಿ ಸ್ವಾಗ
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ಖಾಸಗಿ ಜೆಟ್​​ನಲ್ಲಿ ಕುಟುಂಬದ ಜೊತೆ ಕ್ರಿಕೆಟ್ ಆಡಿದ ಸಚಿನ್ ತೆಂಡೂಲ್ಕರ್
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ರಾಷ್ಟ್ರಪತಿ, ಉಪರಾಷ್ಟ್ರಪತಿಗಳನ್ನು ಭೇಟಿಯಾದ ಸಿಎಂ ಡಿಕೆಶಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಪ್ರಕಾಶ್ ರಾಜ್ ವಿರುದ್ಧ ಚಿನ್ನಯ್ಯ ಆರೋಪಕ್ಕೆ ಗೃಹ ಸಚಿವರು ಹೇಳಿದ್ದೇನು ನೋಡಿ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಊಟದಲ್ಲಿ ಹುಳ ಕಂಡು ಹೌಹಾರಿದ ಯುವತಿಯರು: ಪಿಜಿ ವಿರುದ್ಧ ಪ್ರತಿಭಟನೆ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು